ಸಂತ್ರಸ್ತರ ನೆರವಿಗೆ ಸರ್ಕಾರ ಬದ್ಧ

•ಬಿಜೆಪಿ ಎಲ್ಲಾ ವರ್ಗದವರನ್ನೊಳಗೊಂಡ ಪಕ್ಷ: ಸಚಿವ ಈಶ್ವರಪ್ಪ ಅಭಿಮತ

Team Udayavani, Aug 26, 2019, 12:08 PM IST

26-Agust-16

ಶಿವಮೊಗ್ಗ: ಸಚಿವರಾಗಿ ಮೊದಲ ಬಾರಿಗೆ ಶಿವಮೊಗ್ಗಕ್ಕೆ ಆಗಮಿಸಿದ ಕೆ.ಎಸ್‌. ಈಶ್ವರಪ್ಪ ಅವರು ಸಂತ್ರಸ್ತರಿಗೆ ಟವೆಲ್ ವಿತರಿಸಿದರು

ಶಿವಮೊಗ್ಗ: ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಪ್ರವಾಹದಿಂದ ಸಾಕಷ್ಟು ಹಾನಿಯಾಗಿದೆ. ಸಾಕಷ್ಟು ಕುಟುಂಬಗಳು ಸೂರು ಕಳೆದುಕೊಂಡಿವೆ. ಅವರ ಜತೆ ಕೇಂದ್ರ ಮತ್ತು ರಾಜ್ಯ ಸರಕಾರದ ಸದಾ ಇದೆ ಎಂದು ಸಚಿವ ಕೆ.ಎಸ್‌. ಈಶ್ವರಪ್ಪ ತಿಳಿಸಿದರು.

ನಗರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಭಾನುವಾರ ಆಯೋಜಿಸಿದ್ದ ಸಂಪುಟ ಸೇರಿದ ಬಳಿಕ ಮೊದಲ ಸಲ ಜಿಲ್ಲೆಗೆ ಆಗಮಿಸಿದ್ದ ಕೆ.ಎಸ್‌.ಈಶ್ವರಪ್ಪ ಅವರಿಗೆ ಸ್ವಾಗತ, ನೆರೆ ಸಂತ್ರಸ್ತರಿಗೆ ನೆರವು ಕಾರ್ಯಕ್ರಮ ಹಾಗೂ ಅರುಣ್‌ ಜೇಟ್ಲಿ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಅವರು ಮಾತನಾಡಿದರು.

ಪ್ರತಿಯೊಂದು ಕುಟುಂಬಕ್ಕೆ ಕಾಯಕಲ್ಪ ಕಲ್ಪಿಸುವವರೆಗೆ ಸುಮ್ಮನಿರುವುದಿಲ್ಲ. ಸಮರೋಪಾದಿಯಲ್ಲಿ ಕೆಲಸ ಮಾಡಲಾಗುವುದು. ಈಗಾಗಲೇ ಸಂತ್ರಸ್ತರ ಖಾತೆಗೆ 10 ಸಾವಿರ ರೂ. ಜಮಾ ಮಾಡಲಾಗಿದೆ ಎಂದರು.

ವ್ಯಕ್ತಿಯ ಸಾವಿನೊಂದಿಗೆ ಪಕ್ಷಗಳೂ ಅಸ್ತಿತ್ವ ಕಳೆದುಕೊಂಡ ಸಾಕಷ್ಟು ಉದಾಹರಣೆಗಳು ದೇಶದಲ್ಲಿವೆ. ಆದರೆ, ಬಿಜೆಪಿ ವರ್ಷದಲ್ಲಿಯೇ ಸಾಕಷ್ಟು ಧುರೀಣರನ್ನು ಕಳೆದುಕೊಂಡಿದೆ. ಈಗವರ ಕನಸು ನನಸಾಗಿಸುವ ಹಾಗೂ ಬಿಟ್ಟು ಹೋದ ಕೆಲಸಗಳನ್ನು ಪೂರ್ಣಗೊಳಿಸುವ ಜವಾಬ್ದಾರಿ ನಮ್ಮ ಮೇಲಿದೆ. ಇದಕ್ಕಾಗಿ, ನಿರಂತರ ಕೆಲಸ ಮಾಡಬೇಕಿದೆ. ಕಾರ್ಯಕರ್ತರು, ಮುಖಂಡರು ಒಂದಾಗಬೇಕು ಎಂದು ಆಶಯ ವ್ಯಕ್ತಪಡಿಸಿದರು.

ಬಿಜೆಪಿ ಬ್ರಾಹ್ಮಣರ ಪಕ್ಷವೆಂದೇ ಹೇಳುತ್ತಾ ಬರಲಾಗುತ್ತಿದೆ. ಅದು ನಿಜ ಕೂಡ. ಆದರೆ, ಪರಿಶಿಷ್ಟರು ಹಾಗೂ ಹಿಂದುಳಿದವರ ಬಗ್ಗೆ ಕಾಳಜಿ ಇಲ್ಲವೆಂಬ ಆರೋಪವನ್ನು ಒಪ್ಪಲಾಗದು. ಅದಕ್ಕೆ ನನ್ನ ಜೀವನವೇ ಸಾಕ್ಷಿಯಾಗಿದೆ. ನನ್ನಣ್ಣ ಆರ್‌ಎಸ್‌ಎಸ್‌ ಶಾಖೆಯಲ್ಲಿ ಕೆಲಸ ಮಾಡುವಾಗ ತಂದೆಯವರು ಅವರನ್ನು ಮನೆಯಿಂದ ಹೊರಹಾಕಿದ್ದರು. ಆದರೆ, ಅವರಿಗೆ ಇದೇ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಬ್ರಾಹ್ಮಣರೊಬ್ಬರು ಆಶ್ರಯ ನೀಡಿದ್ದರು. ಆ ಘಟನೆಯ ಬಳಿಕ ನಮ್ಮ ತಂದೆಯವರಲ್ಲೂ ಪರಿವರ್ತನೆಯಾಯಿತು. ಜತೆಗೆ, ಬಡ ಕುಟುಂಬದಿಂದ ಸಚಿವನಾಗಿ ಬೆಳೆಯಲೂ ಇದೇ ಬಿಜೆಪಿ ಕಾರಣ ಎಂದು ಸ್ಮರಿಸಿದರು.

ಸಂಸದ ಬಿ.ವೈ. ರಾಘವೇಂದ್ರ ಮಾತನಾಡಿ, ರಾಜ್ಯದಲ್ಲಿ ನೆರೆಯಿಂದ ಸಾಕಷ್ಟು ಜನ ಸಂಕಷ್ಟದಲ್ಲಿದ್ದಾರೆ. ಅವರಿಗೆ ಸಹಾಯ ಮಾಡುವುದೇ ಮಾನವ ಧರ್ಮವಾಗಿದೆ. ಕೆ.ಎಸ್‌. ಈಶ್ವರಪ್ಪ ಅವರು ಗೆದ್ದಾಗ ಹಿಗ್ಗದೇ, ಸೋತಾಗ ಕುಗ್ಗದೇ ನಿರಂತರ ಶಿವಮೊಗ್ಗದ ಅಭಿವೃದ್ಧಿಗಾಗಿ ಕೆಲಸ ಮಾಡಿದ್ದಾರೆ. ಮುಂದೆಯೂ ಅಭಿವೃದ್ಧಿಯ ಪರ್ವ ಮುಂದುವರಿಯಲಿದ್ದು, ಶಿವಮೊಗ್ಗವನ್ನು ರಾಜ್ಯದಲ್ಲೇ ಮಾದರಿಯಾಗಿಸುವ ನಿಟ್ಟಿನಲ್ಲಿ ಶ್ರಮ ವಹಿಸಲಾಗುವುದು ಎಂದರು. ವಿಧಾನ ಪರಿಷತ್‌ ಸದಸ್ಯ ಆಯನೂರು ಮಂಜುನಾಥ್‌ ಮಾತನಾಡಿ, ಸಂಪುಟ ರಚನೆಯಾಗಿದೆ. ಮುಖ್ಯಮಂತ್ರಿಗಳು ನಮ್ಮ ಜಿಲ್ಲೆಯವರೇ ಆಗಿದ್ದು, ಡಿಸಿಎಂ ಕೂಡ ಈಶ್ವರಪ್ಪನವರಿಗೆ ಸಿಗುತ್ತದೆಂಬ ಚರ್ಚೆ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ. ಒಂದು ವೇಳೆ, ಇದು ನಿಜವಾದರೆ ಈ ಹಿಂದಿನ ಸರಕಾರದ ಅವಧಿಯಲ್ಲಿ ಪಾಚಿಗಟ್ಟಿದ್ದ ಅಭಿವೃದ್ಧಿ, ಇನ್ಮುಂದೆ ಶರವೇಗದಲ್ಲಿ ಸಾಗಲಿದೆ ಎಂದು ತಿಳಿಸಿದರು.

ಮೇಯರ್‌ ಲತಾ ಗಣೇಶ್‌, ಪಕ್ಷದ ಮುಖಂಡರಾದ ಎಸ್‌. ರುದ್ರೇಗೌಡ, ಡಿ.ಎಸ್‌. ಅರುಣ್‌, ಜ್ಞಾನೇಶ್ವರ ಇತರರು ಇದ್ದರು.

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.