ಕುವೆಂಪು ವಿವಿ ಕುಲಪತಿ ಅಧಿಕಾರ ಸ್ವೀಕಾರ


Team Udayavani, Aug 3, 2019, 5:20 PM IST

3-Agust-46

ಶಿವಮೊಗ್ಗ: ಪ್ರಭಾರ ಕುಲಪತಿ ಎಸ್‌.ಎಸ್‌. ಪಾಟೀಲ್ ಅವರಿಂದ ನೂತನ ಕುಲಪತಿ ಪ್ರೊ| ಬಿ.ಪಿ. ವೀರಭದ್ರಪ್ಪ ಅಧಿಕಾರ ಸ್ವೀಕರಿಸಿದರು

ಶಿವಮೊಗ್ಗ: ರಾಷ್ಟ್ರಕವಿ ಕುವೆಂಪು ಅವರ ಮನುಜಮತ, ವಿಶ್ವಪಥ, ಸಮನ್ವಯ ಸೇರಿದಂತೆ ಪಂಚಶೀಲ ತತ್ವಗಳನ್ನು ಆಧರಿಸಿ ಕಾರ್ಯ ನಿರ್ವಹಿಸುವ ಮೂಲಕ ವಿಶ್ವವಿದ್ಯಾಲಯವನ್ನು ದೇಶದ ಟಾಪ್‌ 50 ವಿವಿಗಳ ಸಾಲಿಗೆ ತರುವ ನಿಟ್ಟಿನಲ್ಲಿ ಶ್ರಮ ವಹಿಸುವುದಾಗಿ ನೂತನ ಕುಲಪತಿ ಪ್ರೊ| ಬಿ.ಪಿ. ವೀರಭದ್ರಪ್ಪ ತಿಳಿಸಿದರು.

ಕುವೆಂಪು ವಿಶ್ವವಿದ್ಯಾಲಯದ ನೂತನ ಕುಲಪತಿಗಳಾಗಿ ಶುಕ್ರವಾರ ಅಧಿಕಾರ ಸ್ವೀಕರಿಸಿದ ನಂತರ ಪ್ರೊ| ಎಸ್‌.ಪಿ. ಹಿರೇಮಠ ಸಭಾಂಗಣದಲ್ಲಿ ಆಯೋಜಿಸಿದ್ದ ಸ್ವಾಗತ ಸಮಾರಂಭದಲ್ಲಿ ಅವರು ಮಾತನಾಡಿದರು.

ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಸೇರಿದಂತೆ ವಿವಿಧ ರೀತಿಯ ಕೌಶಲ್ಯಾಭಿವೃದ್ಧಿ ತರಬೇತಿ ನೀಡುವ ಗುರಿ ಹೊಂದಲಾಗಿದೆ. ಗ್ರಾಮೀಣ ಭಾಗದ ಪ್ರತೀ ಪದವಿ ವಿದ್ಯಾರ್ಥಿಗೂ ಉನ್ನತ ಶಿಕ್ಷಣವನ್ನು ನೀಡುವ ಮುಖ್ಯ ಗುರಿಯನ್ನು ವಿವಿಯು ಹೊಂದಲು ಬಯಸುತ್ತದೆ ಎಂದರು. ವಿಶ್ವವಿದ್ಯಾಲಯದಲ್ಲಿ ಸಮರ್ಥ ಸಿಬ್ಬಂದಿ ವರ್ಗವಿದ್ದು ಸುಲಲಿತ ಆಡಳಿತ ಸಾಧ್ಯವಿದೆ. ವಿಶ್ವವಿದ್ಯಾಲಯದ ಈ ಹಿಂದಿನ ಕಾರ್ಯಸಾಧನೆಗಳು ಬಹಳ ಎತ್ತರದಲ್ಲಿದ್ದು, ಆ ಗುಣಮಟ್ಟವನ್ನು ಮುಂದುವರಿಸುವ ಮತ್ತು ಇನ್ನಷ್ಟು ಉತ್ಕೃಷ್ಟಗೊಳಿಸುವ ಸವಾಲು ನಮ್ಮ ಮೇಲಿದೆ. ಇದಕ್ಕಾಗಿ ಎಲ್ಲರ ಸಹಕಾರವನ್ನು ಕೋರುತ್ತೇನೆ ಹಾಗೂ ಈ ಹುದ್ದೆಯನ್ನು ಜವಾಬ್ದಾರಿಯುತವಾಗಿ ನಿರ್ವಹಿಸುವ ಮೂಲಕ ವಿವಿಯ ಘನತೆಯನ್ನು ಎತ್ತಿ ಹಿಡಿಯುತ್ತೇನೆಂದು ತಿಳಿಸಿದರು.

ಪ್ರಭಾರ ಕುಲಪತಿಗಳಾಗಿ ಕಾರ್ಯ ನಿರ್ವಹಿಸಿದ್ದ ಡಾ| ಎಸ್‌. ಎಸ್‌. ಪಾಟೀಲ್ ಮಾತನಾಡಿ, ವಿವಿಯು ಈ ಹಿಂದೆ ಅನೇಕ ವಿದ್ವಾಂಸ ಕುಲಪತಿಗಳನ್ನು ಕಂಡಿದೆ. ಈ ಬಾರಿಯೂ ದಕ್ಷ, ದೂರದೃಷ್ಟಿಯುಳ್ಳ ಶಿಕ್ಷಕರನ್ನು ಆಡಳಿತಗಾರರನ್ನಾಗಿ ಪಡೆದಿದೆ. ಇವರ ಮಾರ್ಗದರ್ಶನದಲ್ಲಿ ವಿವಿಯು ಉನ್ನತ ಸಾಧನೆ ಮಾಡುತ್ತದೆ ಎಂದು ಆಶಿಸಿದರು.

ವಿಶ್ವವಿದ್ಯಾಲಯದ ಕುಲಸಚಿವ ಪ್ರೊ| ಭೋಜ್ಯಾನಾಯ್ಕ ಸ್ವಾಗತಿಸಿದರು. ಪ್ರೊ| ಹಿರೇಮಣಿನಾಯ್ಕ ಕುಲಪತಿಗಳನ್ನು ಪರಿಚಯಿಸಿದರು. ಪರೀಕ್ಷಾಂಗ ಕುಲಸಚಿವ ಪ್ರೊ|ರಾಜಾ ನಾಯಕ ವಂದಿಸಿದರು. ಡಾ| ಹಸೀನಾ ವಂದಿಸಿದರು. ಕುಲಪತಿಗಳ ದಾವಣಗೆರೆ ವಿವಿಯ ಸಹೋದ್ಯೋಗಿಗಳು, ಕುಟುಂಬ ವರ್ಗ, ವಿವಿಯ ವಿವಿಧ ವಿಭಾಗಗಳ ಮತ್ತು ಘಟಕಗಳ ಬೋಧಕ ಸಿಬ್ಬಂದಿ ಮತ್ತು ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

14-fusion

Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.