ದಸರಾ ನಿಮಿತ್ತ ದಾವಣಗೆರೆಯಲ್ಲಿ ಶೋಭಾಯಾತ್ರೆ


Team Udayavani, Oct 15, 2021, 3:21 PM IST

ghfghtyt

ದಾವಣಗೆರೆ: ನಾಡಹಬ್ಬ ದಸರಾ ಅಂಗವಾಗಿ ವಿಶ್ವ ಹಿಂದು ಪರಿಷದ್, ಸಾರ್ವಜನಿಕ ವಿಜಯದಶಮಿ ಮಹೋತ್ಸವ ಸಮಿತಿ ಆಶ್ರಯದಲ್ಲಿ ಬೇತೂರು ರಸ್ತೆಯ ವೆಂಕಟೇಶ್ವರ ವೃತ್ತದಿಂದ ಬೃಹತ್ ಶೋಭಾಯಾತ್ರೆ ಪ್ರಾರಂಭವಾಯಿತು.

ರಾಣೆಬೆನ್ನೂರು ತಾಲೂಕಿನ ತಪೋಕ್ಷೇತ್ರ ಪುಣ್ಯಕೋಟಿ ಮಠದ ಶ್ರೀ ಬಾಲಯೋಗಿ ಶ್ರೀ ಜಗದೀಶ್ವರ ಸ್ವಾಮೀಜಿ, ಹಿರೇಹಡಗಲಿಯ ಹಾಲಸ್ವಾಮಿಮಠದ ಶ್ರೀ ಅಭಿನವ ಹಾಲಶ್ರೀಗಳು, ದಾವಣಗೆರೆಯ ವಿನೋಬ ನಗರದ ಶ್ರೀ ಜಡೇಸಿದ್ದ ಶಿವಯೋಗೀಶ್ವರ ಮಠದ ಶ್ರೀ ಶಿವಾನಂದ ಸ್ವಾಮೀಜಿ, ಸಂಸದ ಡಾ.ಜಿ.ಎಂ. ಸಿದ್ದೇಶ್ವರ, ಶಾಸಕ ಎಸ್.ಎ.‌ರವೀಂದ್ರನಾಥ್, ಮೇಯರ್ ಎಸ್.ಟಿ. ವೀರೇಶ್, ದಾವಣಗೆರೆ ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದೇವರಮನೆ ಶಿವಕುಮಾರ್, ನಗರಪಾಲಿಕೆ ಸದಸ್ಯರಾದ ಕೆ.ಪ್ರಸನ್ನ ಕುಮಾರ್, ಆರ್.ಎಲ್.ಶಿವಪ್ರಕಾಶ್,‌ಸೋಗಿ ಶಾಂತಕುಮಾರ್, ಆರ್. ಶಿವಾನಂದ್, ಎಸ್. ಮಂಜುನಾಥ್, ಕೆ.ಎಂ. ವೀರೇಶ್, ಮಾಜಿ ಸದಸ್ಯ ಸಂಕೋಳ್ ಚಂದ್ರಶೇಖರ, ಬಿಜೆಪಿ ಜಿಲ್ಲಾ ಅಧ್ಯಕ್ಷ ವೀರೇಶ್ ಹನಗವಾಡಿ, ಮಾಜಿ ಅಧ್ಯಕ್ಷ ಯಶವಂತ ರಾವ್ ಜಾಧವ್ ಇತರರು ಭಾಗವಹಿಸಿದ್ದರು.

ಮುಸ್ಲಿಂ ಸಮಾಜದ ಮುಖಂಡ ಜೆ. ಅಮಾನುಲ್ಲಾ ಖಾನ್ ಇತರರು ಶೋಭಾಯಾತ್ರೆ ಚಾಲನಾ ಸಂದರ್ಭದಲ್ಲಿ ಹಾಜರಿದ್ದರು‌. ಮುಸ್ಲಿಂ ಮುಖಂಡರು ನಾಡಹಬ್ಬ ದಸರಾ ಶುಭಾಶಯ ಕೋರುವ ಜೊತೆಗೆ ಸಿಹಿ ಹಂಚುವ ಮೂಲಕ ಭಾವೈಕ್ಯ ತೆಗೆ ಸಾಕ್ಷಿಯಾದರು. ಮುಸ್ಲಿಂ ಸಮಾಜದ ಮುಖಂಡರನ್ನು ಸನ್ಮಾನಿಸಲಾಯಿತು.

ವೆಂಕಟೇಶ್ವರ ವೃತ್ತದಿಂದ ಪ್ರಾರಂಭದ ಬೃಹತ್ ಶೋಭಾಯಾತ್ರೆ ಚೌಕಿಪೇಟೆ, ಹೊಂಡದ ವೃತ್ತ, ಅರುಣಾ ಚಿತ್ರಮಂದಿರ ವೃತ್ತದ ಮೂಲಕ ಶ್ರೀ ಬೀರಲಿಂಗೇಶ್ವರ ದೇವಸ್ಥಾನದ ಮೈದಾನ ತಲುಪಲಿದೆ. ವಿಶೇಷವಾಗಿ ಸಮಾಳ, ನಂದಿಕೋಲು, ಡೊಳ್ಳು, ಗೊರವರ ಕುಣಿತ, ಕೊಂಬು, ಕಹಳೆ, ಡೊಳ್ಳು ಇತ್ಯಾದಿ ಸಾಂಪ್ರದಾಯಿಕ ವಾದ್ಯಗಳು, ಸ್ತಬ್ದಚಿತ್ರಗಳೊಂದಿಗೆ ಶೋಭಾಯಾತ್ರೆ ಸಾಗಿತು. ಕೊರೊನಾ ಮಾರ್ಗಸೂಚಿ ಅನ್ವಯ ಅಗತ್ಯ ಮುಂಜಾಗ್ರತಾ ಕ್ರಮ ಕಂಡು ಬರಲಿಲ್ಲ. ಯುವಕರು, ‌ಕಿರಿಯರು, ಹಿರಿಯರಾದಿಯಾಗಿ ಹೆಜ್ಜೆ ಹಾಕುವ ಮೂಲಕ ಸಂಭ್ರಮಿಸಿದರು.

ದಾವಣಗೆರೆ ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಹಿಂದೂ ಸಮಾಜದ ಹಿರಿಯ ಮುಖಂಡ ಕೆ.ಬಿ. ಶಂಕರನಾರಾಯಣ, ಸತೀಶ್ ಪೂಜಾರಿ, ಡಿ. ಬಸವರಾಜ್ ಗುಬ್ಬಿ, ಜೊಳ್ಳಿ ಗುರು ಇತರರು ನೃತ್ಯ ಮಾಡುವ ಮೂಲಕ ಗಮನ ಸೆಳದರು.

ಶೋಭಾಯಾತ್ರೆ ನೋಡಲು ರಸ್ತೆಯ ಇಕ್ಕೆಲಗಳಲ್ಲಿ ಸಾವಿರಾರು ಜನರು ನೆರೆದಿದ್ದರು.‌ ಶೋಭಾಯಾತ್ರೆ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.