ಹಾಳಾದ ಪಾದಚಾರಿ ಮಾರ್ಗ: ನಾಗರಿಕರಿಗೆ ಸಂಕಷ್ಟ
ಅನಾಹುತಕ್ಕೆ ಆಹ್ವಾನ ನೀಡುವ ಜಖಂಗೊಂಡ ಫುಟ್ಪಾತ್ ಕಾಂಕ್ರೀಟ್ ಸ್ಲ್ಯಾಬ್
Team Udayavani, Aug 2, 2019, 1:02 PM IST
ಶೃಂಗೇರಿ: ಪಟ್ಟಣದ ಮುಖ್ಯ ರಸ್ತೆಯ ಪಾದಚಾರಿ ಮಾರ್ಗ ಹಾಳಾಗಿರುವುದು.
ಶೃಂಗೇರಿ: ಪಟ್ಟಣದ ಮುಖ್ಯ ರಸ್ತೆ ಭಾರತೀ ಬೀದಿಯ ಪಾದಚಾರಿ ಮಾರ್ಗ ಸಂಪೂರ್ಣ ಹಾಳಾಗಿರುವುದರಿಂದ ನಾಗರಿಕರು ಓಡಾಡುವುದೇ ಕಷ್ಟವಾಗಿದೆ.
ರಸ್ತೆ ಇಕ್ಕೆಲಗಳಲ್ಲಿ ನಿರ್ಮಿಸಿರುವ ಫುಟ್ಪಾತ್ಗೆ ಹೊಂದಿಸಿರುವ ಕಾಂಕ್ರೀಟ್ ಸ್ಲ್ಯಾಬ್ಗಳು ಜಖಂಗೊಂಡಿವೆ. ಒಂದೆಡೆ ಈ ಫುಟ್ಪಾತ್ ಅತ್ಯಂತ ಕಿರಿದಾಗಿದ್ದು, ಜೊತೆಗೆ ಹೊಂಡಗಳಿಂದ ತುಂಬಿ ಹೋಗಿ ಪಾದಚಾರಿಗಳ ಓಡಾಟ ದುಸ್ತರವಾಗಿದೆ.
ಪಟ್ಟಣದ ಪ್ರವೇಶ ದ್ವಾರದಿಂದ ಹಿಡಿದು ಶ್ರೀ ಮಠದ ರಾಜಗೋಪುರದ ವರೆಗೆ ಹಾಕಲಾಗಿದ್ದ ಪಾದಚಾರಿ ರಸ್ತೆಯ ಕಾಂಕ್ರೀಟ್ ಸ್ಲ್ಯಾಬ್ ಹತ್ತಾರು ಕಡೆ ಜಖಂಗೊಂಡಿದೆ. ಈ ಸ್ಲ್ಯಾಬ್ಗಳನ್ನು ಅಧಿಕಾರಿಗಳು, ಜನಪ್ರತಿನಿಧಿಗಳು ನೋಡಿದರೂ ಕ್ರಮ ಕೈಗೊಂಡಿಲ್ಲ. ಕಾಂಕ್ರೀಟ್ ಸ್ಲ್ಯಾಬ್ಗಳ ಮೇಲೆ ಕೆಲವರು ದೊಡ್ಡ ವಾಹನಗಳನ್ನು ಓಡಿಸುವುದರ ಫಲವೇ ಜಖಂಗೊಳ್ಳಲು ಕಾರಣವಾಗಿದೆ. ಅಲ್ಲದೇ, ವಾಹನಗಳನ್ನು ನಿಲ್ಲಿಸುವುದರಿಂದ ಪಾದಚಾರಿಗಳಿಗೆ ಸಂಚರಿಸುವುದು ಕಷ್ಟಕರವಾಗಿದೆ.
ಪಟ್ಟಣದ ಚಪ್ಪರದ ಆಂಜನೇಯ ಸ್ವಾಮಿ ದೇವಸ್ಥಾನದ ಸಮೀಪದ ಪಾದಚಾರಿ ರಸ್ತೆ ಮೂಲಕ ತಾಲೂಕು ಕಚೇರಿಗೆ ಇದೇ ಬೈಪಾಸ್ ರಸ್ತೆ ಮೂಲಕ ಹೋಗಬೇಕಾಗಿದೆ. ಆದರೆ ಪಾದಚಾರಿ ರಸ್ತೆಯಿಂದ ಬೈಪಾಸ್ ರಸ್ತೆಗೆ ಹೋಗುವ ಸಂಪರ್ಕ ಕಾಂಕ್ರೀಟ್ ಸ್ಲ್ಯಾಬ್ ಜಖಂಗೊಂಡು ಅದಕ್ಕೆ ಅಳವಡಿಸಿದ ಕಬ್ಬಿಣದ ರಾಡುಗಳು ಹೊರಬಂದಿವೆ. ಮುಳ್ಳಿನ ಹಾರೆಯಂತಾಗಿದೆ. ಎಲ್ಲಿಯಾದರೂ ಆಪ್ಪಿ ತಪ್ಪಿ ನೋಡದೇ ಆ ಸ್ಲ್ಯಾಬ್ ಮೇಲೆ ನಡೆದಾಡಿದರೆ ಚರಂಡಿಯೊಳಗೆ ಬಿದ್ದು ಕೈ-ಕಾಲು ಮುರಿದುಕೊಳ್ಳುವುದು ನಿಶ್ಚಿತವಾಗಿದೆ.
ರಸ್ತೆಯಿಂದ ಅರ್ಧ ಅಡಿ ಮೆಲ್ಭಾಗ ಎರಡೂ ಕಡೆಗಳಲ್ಲಿ ಚರಂಡಿ ಮೇಲ್ಭಾಗ ಕಾಂಕ್ರೀಟ್ ಸ್ಲ್ಯಾಬ್ ಹಾಕಿ ಪಾದಚಾರಿ ಮಾರ್ಗ ನಿರ್ಮಿಸಲಾಗಿತ್ತು. ಇದರಿಂದ ರಸ್ತೆ ಮತ್ತಷ್ಟು ಕಿರಿದಾಗಿದ್ದರೂ ಇಲ್ಲಿ ಓಡಾಡುವ ಪಾದಚಾರಿಗಳಿಗೆ ಅನುಕೂಲಕರವಾಗಿತ್ತು. ಆದರೆ, ಈಗ ಪಾದಚಾರಿಗಳ ಆತಂಕ ಹೆಚ್ಚಿಸಿದೆ. ಪಟ್ಟಣದ ಭಾರತೀ ಚೌಕದ ಬಳಿ, ಪಶು ವೈದ್ಯ ಆಸ್ಪತ್ರೆ ಬಳಿ ಸೇರಿದಂತೆ ಅನೇಕ ಕಡೆ ಪಾದಚಾರಿ ರಸ್ತೆ ಜಖಂಗೊಂಡಿದೆ.
ಭಾರತೀ ಬೀದಿಯ ಕೆಲವು ವ್ಯಾಪಾರಿಗಳಂತು ಫುಟ್ಪಾತ್ನಲ್ಲೇ ಅಂಗಡಿ ಸಾಮಾನುಗಳನ್ನಿಟ್ಟು ವ್ಯಾಪಾರ ನಡೆಸುವುದು ಮಾಮೂಲಿಯಾಗಿದೆ. ಸೋಮವಾರ ಸಂತೆ ದಿನವಂತೂ ಹಣ್ಣಿನ ಅಂಗಡಿಗಳ ವ್ಯಾಪಾರವನ್ನು ಫುಟ್ಪಾತ್ನಲ್ಲೇ ನಡೆಸಲಾಗುತ್ತದೆ. ಕೆಲವು ಅಂಗಡಿ-ಮಳಿಗೆಯವರು ಫುಟ್ಪಾತ್ ಸ್ಲ್ಯಾಬ್ ಮೇಲೆ ಜೆಸಿಬಿ ಹತ್ತಿಸಿ ಫುಟ್ಪಾತ್ ಸ್ಲ್ಯಾಬ್ಗಳನ್ನು ಒಡೆದು ಹಾಕಿರುವುದನ್ನು ಕಾಣಬಹುದು.
ಪಾದಾಚಾರಿಗಳಿಗೆ ಅತ್ತ ಪಾದಚಾರಿ ಮಾರ್ಗ ಕೂಡ ಸುಗಮ ಸಂಚಾರಕ್ಕೆ ಯೋಗ್ಯವಾಗಿಲ್ಲ. ಇತ್ತ ರಸ್ತೆಗಿಳಿಯಲು ಅವಕಾಶವಿಲ್ಲದೇ ಕಿರಿಕಿರಿ ಅನುಭವಿಸುವಂತಾಗಿದೆ. ನಿತ್ಯ ಶ್ರೀ ಶಾರದಾಂಬೆ ದರ್ಶನಕ್ಕೆ ತೆರಳುವ ಹಿರಿಯರು ಹಾಗೂ ಭಕ್ತರು, ಶಾಲಾ ಮಕ್ಕಳ ಪಾಡಂತೂ ಹೇಳತೀರದಾಗಿದೆ.
•ಬಿ.ಎನ್.ಕೃಷ್ಣ,
ಪಪಂ ಮಾಜಿ ಸದಸ್ಯ
• ಕೆ.ಎಂ.ರಾಮಣ್ಣ,
ದಸ್ತಾವೇಜು ಬರಹಗಾರ, ಶೃಂಗೇರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ