ಗುರುಸಾರ್ವಭೌಮರ 348ನೇ ಆರಾಧನಾ ಮಹೋತ್ಸವ
Team Udayavani, Aug 18, 2019, 1:18 PM IST
ಶೃಂಗೇರಿ: ಶ್ರೀ ರಾಘವೇಂದ್ರ ಸ್ವಾಮಿಗಳ ಬೃಂದಾವನದಲ್ಲಿ ಶ್ರೀ ಗುರುರಾಯರ 348ನೇ ಆರಾಧನಾ ಮಹೋತ್ಸವದ ಪ್ರಯುಕ್ತ ಗುರುಸಾರ್ವಭೌಮರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು.
ಶೃಂಗೇರಿ: ಮೆಣಸೆ ಗ್ರಾಪಂ ವ್ಯಾಪ್ತಿಯ ಕಲ್ಕಟ್ಟೆಯ ತುಂಗಾ ನದಿ ದಡದಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಬೃಂದಾವನದಲ್ಲಿ ಶ್ರೀ ಗುರುರಾಯರ 348ನೇ ಆರಾಧನಾ ಮಹೋತ್ಸವ ಶನಿವಾರ ಶ್ರದ್ಧಾ-ಭಕ್ತಿಯಿಂದ ನಡೆಯಿತು.
ಶುಕ್ರವಾರದಿಂದ ಆರಂಭವಾಗಿರುವ ಆರಾಧನಾ ಮಹೋತ್ಸವದ ಹಿನ್ನೆಲೆಯಲ್ಲಿ ರಾಯರ ಮಠವನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು. ತಾಲೂಕಿನ ವಿವಿಧ ಭಾಗಗಳಿಂದ ಭಕ್ತರು ಆರಾಧನಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದರು.
ಶುಕ್ರವಾರ ಸಂಜೆ ಸ್ವಾಮಿ ಸನ್ನಿಧಿಯಲ್ಲಿ ಹಾಗೂ ಶ್ರೀ ವೀರಾಂಜನೇಯ ಸ್ವಾಮಿ ಸನ್ನಿಧಿಯಲ್ಲಿ ಅಷ್ಟಾವಧಾನ ಸೇವೆ ಹಾಗೂ ಪ್ರಸಾದ ವಿನಿಯೋಗ ನಡೆಯಿತು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಬೆಂಗಳೂರಿನ ಗೀತಾ ರಮಾನಂದ್ರಿಂದ ವೀಣಾವಾದನ ನಡೆಯಿತು.
ಶನಿವಾರ ಬೆಳಗ್ಗೆಯಿಂದ ಆರಾಧನಾ ಕಾರ್ಯಕ್ರಮ ಹಾಗೂ ಶ್ರೀ ಆಂಜನೇಯ ಮೂಲಮಂತ್ರ ಹೋಮ ನಡೆಯಿತು. ನಂತರ ಪಂಚಾಮೃತಾಭಿಷೇಕ, ಮಹಾಮಂಗಳಾರತಿ ನಡೆಯಿತು. ಇದೇ ಸಂದರ್ಭದಲ್ಲಿ ಶ್ರೀ ಭಾರತೀ ಸಂಗೀತ ಶಾಲೆಯ ಸಾವಿತ್ರಿ ಪ್ರಭಾಕರ್ ಮತ್ತು ಶಿಷ್ಯಂದಿರಿಂದ ಭಕ್ತಿ ಸಂಗೀತ ಕಾರ್ಯಕ್ರಮ ನಡೆಯಿತು. ಮಧ್ಯಾಹ್ನ ಅನ್ನಸಂತರ್ಪಣೆ ನೆರವೇರಿತು.
ದೇವಸ್ಥಾನ ಸಮಿತಿ ಅಧ್ಯಕ್ಷ ರಮೇಶ್ ಹೆಗ್ಡೆ ಮಾತನಾಡಿ, ಭಕ್ತರ ಸಹಕಾರದಿಂದ ರಾಯರ ಬೃಂದಾವನ ಅಭಿವೃದ್ಧಿ ಹೊಂದುತ್ತಿದ್ದು, ಪ್ರತಿ ವರ್ಷ ರಾಯರ ಆರಾಧನೆಯನ್ನು ಅತ್ಯಂತ ವಿಜೃಂಭಣೆಯಿಂದ ನಡೆಸಲಾಗುತ್ತಿದೆ. ಮುಂಬರುವ ದಿನಗಳಲ್ಲಿ ಶ್ರೀ ಶಾರದಾ ಪೀಠಕ್ಕೆ ಬರುವ ಭಕ್ತಾದಿಗಳು ಶ್ರೀ ರಾಘವೇಂದ್ರ ಸ್ವಾಮಿ ಬೃಂದಾವನಕ್ಕೂ ಭೇಟಿ ನೀಡಬಹುದಾಗಿದೆ. ಈಗಾಗಲೇ ದೇವಸ್ಥಾನದ ಆವರಣದಲ್ಲಿ ನಿರ್ಮಿಸಿರುವ ವ್ಯಾಸ ಕಲಾ ಮಂದಿರವನ್ನು ಸಮಾರಂಭಗಳಿಗೆ ನೀಡಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ