ವರ್ಷಧಾರೆಗೆ ಅಡಕೆ ಬೆಳೆಗಾರ ಅತಂತ್ರ!

ಅಡಕೆ ತೋಟದಲ್ಲಿ ನಾನಾ ರೋಗಗಳು ತಾಂಡವ-ಮಳೆ ಕಾಟಕ್ಕೆಹೈರಾಣಾದ ರೈತರು

Team Udayavani, Oct 30, 2019, 3:08 PM IST

30-October-14

ರಮೇಶ್‌ ಕರುವಾನೆ
ಶೃಂಗೇರಿ: ಅಕ್ಟೋಬರ್‌ ತಿಂಗಳಾಂತ್ಯದಲ್ಲೂ ಸುರಿಯುತ್ತಿರುವ ಮಳೆಯ ಹೊಡೆತಕ್ಕೆ ನಲುಗಿರುವ ಅಡಕೆ ಬೆಳೆಗಾರರು, ಇರುವಷ್ಟು ಅಡಕೆಯನ್ನು ಸಂಸ್ಕರಣೆ ಮಾಡಲು ಹೋರಾಟ ನಡೆಸಬೇಕಾಗಿದೆ. ಅಡಕೆಗೆ ತಗುಲಿರುವ ನಾನಾ ರೋಗಗಳು ಹಾಗೂ ಮಳೆಯ ಕಾಟದಿಂದ ರೈತರು ಹೈರಾಣಾಗಿದ್ದಾರೆ. ತಾಲೂಕಿನ ಪ್ರಮುಖ ವಾಣಿಜ್ಯ ಬೆಳೆ ಕಳೆದ ಆರೇಳು ದಶಕದಿಂದ ಹಳದಿ ಎಲೆ ರೋಗ ಮತ್ತಿತರ ರೋಗದಿಂದ ಬೆಳೆ ಅವನತಿ ಹಾದಿ ಹಿಡಿಯುತ್ತಿದ್ದು, ರೈತರು ಬದಲಿ ಬೆಳೆಯ ಹುಡಕಾಟದಲ್ಲಿದ್ದಾರೆ.

ತಾಲೂಕಿನಲ್ಲಿ 2600 ಹೆಕ್ಟೇರ್‌ಗೂ ಅಧಿಕ ಪ್ರದೇಶದಲ್ಲಿ ಅಡಕೆ ಬೆಳೆಯುತ್ತಿದ್ದರೂ, ಶೇ.60 ರಷ್ಟು ಭಾಗ ರೋಗ ಪೀಡಿತವಾಗಿ, ಅನೇಕ ತೋಟದಲ್ಲಿ ಅಡಕೆ ಮರವೇ ಇಲ್ಲವಾಗಿದೆ. ದೀರ್ಘಾವಧಿ  ಬೆಳೆಯಾದ ಅಡಕೆ ಮಲೆನಾಡಿನಲ್ಲಿ ಪರಂಪರಾಗತವಾಗಿ ಬೆಳೆದುಕೊಂಡು ಬಂದಿದೆ. ಅಧಿಕ ಮಳೆಯಾಗುವ ಪ್ರದೇಶವಾಗಿರುವುದರಿಂದ ಕೊಳೆ ರೋಗವೂ ಅಧಿಕ ಮಳೆಯಾದ ವರ್ಷ ತೋಟಗಳಿಗೆ ತೊಂದರೆ ಉಂಟು ಮಾಡುತ್ತಿದೆ. ಹಳದಿ ಎಲೆ ರೋಗ ಅಡಕೆ ಮರವನ್ನೇ ಕ್ಯಾನ್ಸರ್‌ ರೀತಿಯಲ್ಲಿ ಭಾದಿಸುತ್ತಿದ್ದು, ನಿಧಾನವಾಗಿ ಮರವನ್ನೇ ಸಾಯಿಸುತ್ತದೆ. ಇದರಿಂದ ತಾಲೂಕಿನಲ್ಲಿ ಹೆಚ್ಚಾಗಿರುವ ಮಧ್ಯಮ ವರ್ಗದ ರೈತರ ಬದುಕು ಸಂಕಷ್ಟಕ್ಕೆ ಸಿಲುಕಿದೆ.

ಅಡಕೆ ಬೆಳೆಯ ಪ್ರಮುಖ ಸಮಸ್ಯೆ: ಗುಣಪಡಿಸಲಾಗದ ಹಳದಿ ಎಲೆ ರೋಗ, ಕೊಳೆ ರೋಗ, ಸುಳಿ ಕೊಳೆಯುವುದು ಸೇರಿದಂತೆ ವಿವಿಧ ರೋಗದಿಂದ ಅಡಕೆ ಬೆಳೆ ನಷ್ಟವಾಗುತ್ತಿದೆ. ಒಂದು ಎಕರೆ ಅಡಕೆ ಬೆಳೆಯುವ ರೈತರು ನೆಮ್ಮದಿಯ ಬದುಕು ನಡೆಸುತ್ತಿದ್ದರು. ರೋಗ ಕಾಣಿಸಿಕೊಂಡ ನಂತರ ಇಳುವರಿ ಕುಸಿತದಿಂದ ತೋಟವನ್ನು ನಿರ್ವಹಣೆ ಮಾಡಲಾಗದೇ, ಹಳ್ಳಿ ಬಿಟ್ಟು ನಗರವನ್ನು ಸೇರುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ರೋಗಪೀಡಿತ ತೋಟದಲ್ಲಿ ಕಾರ್ಮಿಕರು ಕೆಲಸ ಮಾಡುವುದಕ್ಕೂ ಹಿಂದೇಟು ಹಾಕುತ್ತಿದ್ದು, ನಿರ್ವಹಣೆ ಖರ್ಚು ಹೆಚ್ಚಾಗುತ್ತಿದೆ. ಬದಲಿ ಬೆಳೆಗಳ ಪರಿಚಯವಾದರೂ ಮಲೆನಾಡಿಗೆ ಕಾಫಿ, ಕಾಳು ಮೆಣಸು ಹೊರತುಪಡಿಸಿ ಉಳಿದ ಬೆಳೆ ಬೆಳೆಯಲಾಗುತ್ತಿಲ್ಲ.

ಕಾಫಿ, ಕಾಳುಮೆಣಸು ಬೆಲೆ ಕುಸಿತದಿಂದ ರೈತರಿಗೆ ಆದಾಯಕ್ಕಿಂತ ಖರ್ಚು ಹೆಚ್ಚಾಗುತ್ತಿದೆ. ಅಡಕೆಗೆ ರೋಗ ಬಂದ ನಂತರ ಕೊಳೆ ರೋಗ ಔಷಧಿ ಸಿಂಪಡಣೆಯಿಂದ ಎಲ್ಲಾ ಕೆಲಸಕ್ಕೂ ಕೂಲಿಯಾಳುಗಳು ಕೆಲಸ ಮಾಡಲು
ಅಧಿಕ ಕೂಲಿ ಕೇಳುತ್ತಾರೆ. ಇದರಿಂದ ಕ್ರಮೇಣ ಕೊಳೆ ಔಷಧಿ ಸಿಂಪಡಣೆ ಮಾಡಲಾಗದೇ ಇದ್ದ ಬೆಳೆಯನ್ನು ಕಳೆದುಕೊಳ್ಳುವಂತಾಗುತ್ತದೆ.

ಜಮೀನು ತೊರೆದ ರೈತರು: ಅಡಕೆ ರೋಗ ವ್ಯಾಪಕವಾಗಿ ಹರಡುತ್ತಿದ್ದಂತೆ ಸಣ್ಣ ಮತ್ತು ಮಧ್ಯಮ ರೈತರ ಮಕ್ಕಳು ಬದಲಿ ಉದ್ಯೋಗ ಹುಡುಕಾಟದಲ್ಲಿ ಬಹುತೇಕ ಯುವ ಜನಾಂಗ ನಗರ ಸೇರಿದರು. ಮನೆಯಲ್ಲಿದ್ದ ಪೋಷಕರು ತೋಟವನ್ನು ನಿರ್ವಹಣೆ ಮಾಡಲಾಗದೇ, ಮಾರಲೂ ಆಗದೇ ಮನೆ, ಜಮೀನು ಬಿಟ್ಟು ನಗರ ಸೇರಿರುವ ಹತ್ತಾರು ಉದಾಹರಣೆಗಳು ತಾಲೂಕಿನಲ್ಲಿವೆ.

ಶಾಶ್ವತ ಪರಿಹಾರ ಅಗತ್ಯ: ರೋಗಪೀಡಿತ ಅಡಕೆ ತೋಟಕ್ಕೆ ಶಾಶ್ವತ ಪರಿಹಾರ ಅಗತ್ಯವಿದ್ದು, ಸಂಶೋಧನೆಗಳು ಇನ್ನೂ ಪರಿಣಾಮಕಾರಿಯಾಗಿ ನಡೆಯಬೇಕಿದೆ. ರೋಗವಿರುವ ಸ್ಥಳದಲ್ಲಿ ಸಂಶೋಧನಾ ಕೇಂದ್ರ ಆಗಬೇಕೆಂಬ ಒತ್ತಾಯದಿಂದ ಶೃಂಗೇರಿಯಲ್ಲೂ ಅಡಕೆ ಸಂಶೋಧನಾ ಕೇಂದ್ರವನ್ನು ಆರಂಭಿಸಲಾಯಿತು. ಅಂದಾಜು 3 ಕೋಟಿ ರೂ. ವೆಚ್ಚದ ಸಂಶೋಧನಾ ಕೇಂದ್ರ ಆರಂಭವಾದರೂ, ವಿಜ್ಞಾನಿಗಳ ಕೊರತೆ, ಅನುದಾನದ ಕೊರತೆಯಿಂದ ಸಂಶೋಧನಾ ಕೇಂದ್ರದಿಂದ ರೈತರಿಗೆ ಪರಿಹಾರ ಮಾತ್ರ ದೊರೆತಿಲ್ಲ.

ಟಾಪ್ ನ್ಯೂಸ್

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.