ಹಬ್ಬಕ್ಕೆ ಸಿದ್ಧವಾಗುತ್ತಿದೆ ಗಣೇಶ ಮೂರ್ತಿ


Team Udayavani, Aug 25, 2019, 12:05 PM IST

25-Agust-16

ಶೃಂಗೇರಿ: ಪಪಂ ಗೌರಿಶಂಕರ ಸಭಾಂಗಣದಲ್ಲಿ ಗಣೇಶ ಮೂರ್ತಿ ತಯಾರಿಕೆಯಲ್ಲಿ ತೊಡಗಿರುವ ಯುವ ಕಲಾವಿದ ಹರೀಶ್‌ ವಿ. ಡೋಂಗ್ರೆ.

ಶೃಂಗೇರಿ: ಭಾದ್ರಪದ ಮಾಸದ ಸ್ವರ್ಣಗೌರಿ ಹಾಗೂ ಗಣಪತಿ ಹಬ್ಬಗಳಿಗೆ ಸಂಬಂಧಿಸಿ ತದಿಗೆ ಮತ್ತು ಚೌತಿ ಈ ಬಾರಿ ಒಂದೇ ದಿನ ಬರುವುದರಿಂದ ಎರಡೂ ಹಬ್ಬಗಳನ್ನು ಒಂದೇ ದಿನ ಆಚರಿಸಲಾಗುತ್ತದೆ.

ಹಿಂದುಗಳ ಪವಿತ್ರ ಹಬ್ಬವಾದ ಗೌರಿ ಮತ್ತು ಗಣಪತಿ ಹಬ್ಬಕ್ಕೆ ತಾಲೂಕಿನೆಲ್ಲೆಡೆ ಸಿದ್ಧತೆ ಆರಂಭಗೊಳ್ಳುತ್ತಿದ್ದು, ಗೌರಿಹಬ್ಬ ಹೆಣ್ಣುಮಕ್ಕಳ ಸಡಗರದ ಹಬ್ಬವಾಗಿದೆ. ಈಗಾಗಲೇ ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಸ್ವರ್ಣಗೌರಿ ಹಬ್ಬದ ತಯಾರಿಗೆ ಮಹಿಳೆಯರು ಹತ್ತಿಯಿಂದ ಗೆಜ್ಜೆ ವಸ್ತ್ರಗಳ ತಯಾರಿಕೆಗೆ ಮುಂದಾಗಿದ್ದಾರೆ. ಇದರೊಂದಿಗೆ ಬಳೆ ಭಾಗಿನ ಸಾಮಗ್ರಿಗಳನ್ನು ಸಂಗ್ರಹಿಸುತ್ತಿದ್ದಾರೆ. ಅಲ್ಲದೇ, ಹಬ್ಬದ ಪೂಜೆಗೆ ಕಾತರದಿಂದ ಎದುರು ನೋಡುತ್ತಿದ್ದಾರೆ.

ಇಷ್ಟಕಾರ್ಯ ಸಿದ್ಧಿಗಾಗಿ ವಿಘ್ನ ನಿವಾರಕ ಗಣಪತಿ ಹಬ್ಬದ ಸಿದ್ಧತೆಗಳು ಬರದಿಂದ ಸಾಗುತ್ತಿವೆ. ವಿವಿಧ ಸಂಘ-ಸಂಸ್ಥೆಗಳು, ಸಾರ್ವಜನಿಕರು ಗಣಪತಿ ಹಬ್ಬದ ಆಚರಣೆಗೆ ಸಿದ್ಧಗೊಳ್ಳುತ್ತಿದ್ದಾರೆ. ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ, ಗಣಪತಿ ಪೆಂಡಾಲ್ ಮುಂತಾದ ಕಾರ್ಯದಲ್ಲಿ ಸ್ವಯಂಸೇವಕರು ತಲ್ಲೀನರಾಗಿದ್ದಾರೆ.

ತಾಲೂಕಿನ ಗ್ರಾಮೀಣ ಭಾಗದ ಯುವ ಕಲಾವಿದ ಹರೀಶ್‌ ವಿ. ಡೋಂಗ್ರೆ ತಮ್ಮ ವಿಶಿಷ್ಟ ಕಲಾ ಸಾಧನೆ ಮೂಲಕ ಗೌರಿ ಮತ್ತು ಗಣಪತಿ ಮೂರ್ತಿ ಸಿದ್ಧಪಡಿಸುತ್ತಿದ್ದಾರೆ. ಸ್ಥಳೀಯ ಕಲಾವಿದರಾದ ನಾಗೇಂದ್ರ ಪ್ರಸಾದ್‌, ಗೋಪಾಲಕೃಷ್ಣ ಅವರಿಗೆ ಸಾಥ್‌ ನೀಡುತ್ತಿದ್ದಾರೆ. ನಾಗರ ಪಂಚಮಿ ಹಬ್ಬದಿಂದ ಮೂರ್ತಿಗಳ ತಯಾರಿಕೆಯಲ್ಲಿ ತೊಡಗಿರುವ ಕಲಾವಿದರು ದ.ಕ. ಜಿಲ್ಲೆಯ ಹೆಂಚಿನ ಕಾರ್ಖಾನೆಯಿಂದ ಮಣ್ಣನ್ನು ತಂದು ಮೂರ್ತಿ ಕೆಲಸದಲ್ಲಿ ತೊಡಗಿದ್ದಾರೆ. ಕೆರೆ ಹಾಗೂ ಗದ್ದೆಗಳಿಂದಲೂ ಜೇಡಿ ಮಣ್ಣನ್ನು ತಂದು ಹತ್ತಿ ಮತ್ತು ತೆಂಗಿನ ನಾರುಗಳ ಮಿಶ್ರಣ ಮಾಡಿ ಗಣೇಶ ಮೂರ್ತಿ ತಯಾರಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಈಗಾಗಲೇ ಪರಿಸರ ಗಣಪ, ತಾಂಡವ ನೃತ್ಯ ಗಣಪ ಹೀಗೆ ಹಲವು ಬಗೆಯ ಮೂರ್ತಿಗಳಿಗೆ ಜೀವ ತುಂಬಿದ್ದಾರೆ.

ಪಟ್ಟಣದ ಗೌರಿಶಂಕರ್‌ ಸಭಾಂಗಣದಲ್ಲಿ ಸಾರ್ವಜನಿಕ ಗಣೇಶೋತ್ಸವಕ್ಕಾಗಿ ಈಗಾಗಲೇ ಗಣಪತಿ ಮೂರ್ತಿಯನ್ನು ಸಿದ್ಧ ಪಡಿಸಿದ್ದು, ಬಹುತೇಕ ಮೂರ್ತಿ ತಯಾರಿಕಾ ಕಾರ್ಯ ಮುಗಿದಿದೆ. ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿದ ಹರೀಶ್‌ ವಿ. ಡೋಂಗ್ರೆ ಅವರು, ಕಳೆದ 20ವರ್ಷಗಳಿಂದ ಗೌರಿ ಹಾಗೂ ಗಣಪತಿ ಮೂರ್ತಿಗಳ ತಯಾರಿಕೆಯಲ್ಲಿ ತೊಡಗಿದ್ದೇವೆ. ತಾಲೂಕು ಮಾತ್ರವಲ್ಲದೆ ಪಕ್ಕದ ಜಿಲ್ಲೆಗಳಿಂದಲೂ ನಮ್ಮ ಗಣೇಶ ಮೂರ್ತಿಗಳಿಗೆ ಬೇಡಿಕೆ ಇಡುತ್ತಾರೆ. ಸುಮಾರು 100ಕ್ಕೂ ಹೆಚ್ಚು ಮೂರ್ತಿಗಳನ್ನು ತಯಾರಿಸುತ್ತೇವೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.