ಶ್ರೀ ಶಾರದಾ ಪೀಠದಲ್ಲಿ ಲಕ್ಷ್ಯ ದೀಪೋತ್ಸವಕ್ಕೆ ಭರದ ಸಿದ್ಧತೆ

12 ರಂದು ದೀಪೋತ್ಸವ -ವಿವಿಧ ಧಾರ್ಮಿಕ ಕಾರ್ಯಕ್ರಮ ದೀಪೋತ್ಸವದ ಬಳಿಕ ತುಂಗಾ ನದಿಯಲ್ಲಿ ವೈಭವದ ತೆಪ್ಪೋತ್ಸವ

Team Udayavani, Nov 8, 2019, 3:52 PM IST

8-November-14

ಶೃಂಗೇರಿ: ಕಾರ್ತಿಕ ಮಾಸ ದೀಪಗಳ ಮಾಸ. ಜ್ಞಾನದ ಬೆಳಕು ಬೆಳಗಿ ಅಜ್ಞಾನದ ಕತ್ತಲು ಕಳೆಯುವ ಸಂಕೇತವಾಗಿ ಭಕ್ತರು ಪ್ರತಿ ದೇವಾಲಯದಲ್ಲೂ ಸಾವಿರಾರು ದೀಪಗಳನ್ನು ಬೆಳಗಿ ಭಗವಂತನನ್ನು ಆರಾಧಿ ಸುವ ಮಾಸ. ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠದಲ್ಲಿ ಕಾರ್ತಿಕ ಹುಣ್ಣಿಮೆ (ನ.12)ಯಂದು ಲಕ್ಷ ದೀಪೋತ್ಸವ ವಿಜೃಂಭಣೆಯಿಂದ ನಡೆಯುತ್ತದೆ. ಈಗಾಗಲೇ ಶ್ರೀ ಮಠದಲ್ಲಿ ಲಕ್ಷ ದೀಪೋತ್ಸವಕ್ಕಾಗಿ ಭರದ ಸಿದ್ಧತೆ ನಡೆಯುತ್ತಿದೆ.

ಶ್ರೀ ಶಾರದಾ ಪೀಠದ ಎಲ್ಲಾ ದೇವಾಲಯಗಳು ಸೇರಿದಂತೆ ಪಟ್ಟಣದ ಹೃದಯ ಭಾಗದಲ್ಲಿರುವ ಶ್ರೀ ಮಲಹಾನಿಕರೇಶ್ವರ ಸ್ವಾಮಿ ದೇವಾಲಯ ಹಾಗೂ ಶ್ರೀ ಮಠದ ವರೆಗಿನ ರಾಜ ಬೀದಿಯ ಇಕ್ಕೆಲಗಳಲ್ಲಿ ಭಕ್ತರು ದೀಪಗಳನ್ನು ಬೆಳಗಿ ಸಂಭ್ರಮಿಸುತ್ತಾರೆ. ಲಕ್ಷ ದೀಪೋತ್ಸವದ ಅಂಗವಾಗಿ ಶ್ರೀ ಮಠದಲ್ಲಿ ಸಾಂಪ್ರದಾಯಿಕ ಪೂಜಾರಾಧನೆಗಳು, ಶ್ರೀ ಮಹಾರುದ್ರಯಾಗ ಹಾಗೂ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ರಾತ್ರಿ 10 ಗಂಟೆಗೆ ಉಭಯ ಜಗದ್ಗುರುಗಳಾದ ಶ್ರೀ ಭಾರತೀತೀರ್ಥ ಮಹಾಸ್ವಾಮೀಜಿ ಹಾಗೂ ಶ್ರೀ ವಿಧುಶೇಖರ ಭಾರತಿ ಸ್ವಾಮೀಜಿಗಳು ಬೆಟ್ಟದ ಶ್ರೀ ಮಲಹಾನಿಕರೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಲಕ್ಷ ದೀಪೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಇದಕ್ಕೂ ಮುಂಚೆ ಬೆಟ್ಟದಲ್ಲಿ ಶ್ರೀ ಸ್ತಂಭ ಗಣಪತಿ, ಶ್ರೀ ಮಲಹಾನಿಕರೇಶ್ವರ ಸ್ವಾಮಿ, ಶ್ರೀ ಭವಾನಿ ಅಮ್ಮನವರ ಸನ್ನಿಧಿಯಲ್ಲಿ ರಂಗಪೂಜೆ, ಮಹಾಮಂಗಳಾರತಿ ಅಷ್ಟಾವಧಾನ ಸೇವೆಗಳ ನಂತರ ಧ್ವಜಸ್ತಂಭದ ಮುಂಭಾಗದಲ್ಲಿ ಪರಕಾಳಿಯನ್ನು ಸುಡಲಾಗುತ್ತದೆ. ಜಗದ್ಗುರುಗಳು ದೀಪೋತ್ಸವಕ್ಕೆ ಚಾಲನೆ ನೀಡಿದ ನಂತರ ಎಲ್ಲೆಡೆ ದೀಪಗಳು ಕಂಗೊಳಿಸುತ್ತವೆ. ಶ್ರೀ ಭವಾನಿ ಮಲಹಾನಿಕರೇಶ್ವರ ಸ್ವಾಮಿ ಉತ್ಸವ ವಿಗ್ರಹವನ್ನು ಮೆರವಣಿಗೆಯಲ್ಲಿ ಶ್ರೀಮಠಕ್ಕೆ ತರಲಾಗುತ್ತದೆ. ಈ ಸಂದರ್ಭದಲ್ಲಿ ಜಗದ್ಗುರುಗಳು ಕಾಲ್ನಡಿಗೆಯಲ್ಲಿ ಮೆರವಣಿಗೆಯಲ್ಲಿ ಸಾಗೋದು ವಿಶೇಷವಾಗಿದೆ. ಬಳಿಕ ಶ್ರೀ ಶಾರದಾಂಬಾ ದೇವಾಲಯದಲ್ಲಿ ಬಂಗಾರದ ರಥೋತ್ಸವ, ಮಹಾಮಂಗಳಾರತಿ, ಅಷ್ಟಾವಧಾನ ಸೇವೆಗಳ ನಂತರ ಶ್ರೀ ಶಾರದಾಂಬೆ, ಶ್ರೀ ಮಲಹಾನಿಕರೇಶ್ವರ ಸ್ವಾಮಿ ಮತ್ತು ಶ್ರೀ ವಿದ್ಯಾಶಂಕರ ದೇವರಿಗೆ ತುಂಗಾ ನದಿಯಲ್ಲಿ ತೆಪ್ಪೋತ್ಸವ ನಡೆಯುತ್ತದೆ. ಈ ಸಂದರ್ಭದಲ್ಲಿ ಮುತ್ತೆ„ದೆಯರಿಂದ ತುಂಗೆಗೆ ಲಕ್ಷ ದೀಪಗಳ ಬಾಗಿನ ಸಮರ್ಪಣೆ ನಡೆಯಲಿದೆ. ನಂತರ ಶ್ರೀ ಮಠದ ಅರ್ಚಕರಿಂದ ತುಂಗಾರತಿ ನಡೆಯುತ್ತದೆ. ನಂತರ ದೀಪೋತ್ಸವಕ್ಕೆ ತೆರೆ ಬೀಳಲಿದೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.