ಜಮೀನಿನ ಪಹಣಿ ಪತ್ರದಲ್ಲಿ ಬೆಳೆ ನಮೂದಿಸಲು ರೈತರ ಪರದಾಟ!

ಬೆಳೆ ಸಾಲ ಪಡೆಯಲು ಪಹಣಿಯಲ್ಲಿ ಬೆಳೆ ದಾಖಲೆ ಕಡ್ಡಾಯ

Team Udayavani, May 15, 2019, 5:46 PM IST

15-May-35

ಶೃಂಗೇರಿ: ತಾಲೂಕು ಕಚೇರಿಯಲ್ಲಿ ಪಹಣಿಯಲ್ಲಿ ಬೆಳೆ ದೃಢೀಕರಣಕ್ಕಾಗಿ ರೈತರು ಸಾಲುಗಟ್ಟಿ ನಿಂತಿರುವುದು.

ಶೃಂಗೇರಿ: ಜಮೀನಿನ ಪಹಣಿಯ ಬೆಳೆ ಕಾಲಂನಲ್ಲಿ ಬೆಳೆಯ ಬಗ್ಗೆ ಮಾಹಿತಿ ಇಲ್ಲದೆ, ಬೆಳೆ ದೃಢೀಕರಣಕ್ಕಾಗಿ ತಾಲೂಕಿನ ರೈತರು ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಪಹಣಿಯಲ್ಲಿ ಬೆಳೆ ಮಾಹಿತಿ ದಾಖಲಿಸುವ ಸಮಸ್ಯೆ ನಿನ್ನೆ-ಮೊನ್ನೆಯದಲ್ಲ, ಕಳೆದ 2 ರಿಂದ 3 ವರ್ಷಗಳಿಂದಲೂ ಇದೆ. ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ರೈತರು ಸಹಕಾರ ಸಂಸ್ಥೆ, ವಾಣಿಜ್ಯ ಬ್ಯಾಂಕ್‌ಗಳಲ್ಲಿ ಬೆಳೆ ಸಾಲ ಪಡೆಯುವ ಉದ್ದೇಶಕ್ಕಾಗಿ ಜಮೀನಿನ ಪ‌ಹಣಿ ಮತ್ತು ಪಹಣಿಯಲ್ಲಿ ಬೆಳೆ ಮಾಹಿತಿ ಕಡ್ಡಾಯವಾಗಿದೆ. ಆದರೆ ಪ‌ಹಣಿಗಾಗಿ ರೈತರು ತಾಲೂಕು ಕಚೇರಿಯಲ್ಲಿ ಸಾಲುಗಟ್ಟಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ. ಅಲ್ಲದೆ, ಪಹಣಿಯ ಬೆಳೆ ಕಾಲಂನಲ್ಲಿ ಬೆಳೆ ಬಗ್ಗೆ ಮಾಹಿತಿ ಇಲ್ಲದಿರ‌ುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಬಯಲುಸೀಮೆ ಪ್ರದೇಶದಲ್ಲಿ ಬೆಳೆಯುವ ಭತ್ತ, ಶುಂಠಿ ಇವುಗಳೆಲ್ಲ ವಾರ್ಷಿಕ ಬೆಳೆಗಳು. ಪ್ರತಿವರ್ಷವೂ ಪಹಣಿಯಲ್ಲಿ ಬದಲಾವಣೆಯಾಗುವುದು ಸಹಜ. ಆದರೆ ಮಲೆನಾಡಿನ ಪ್ರಮುಖ ಬೆಳೆಯಾದ ಅಡಕೆ ತೋಟ, ತೆಂಗು ಇತ್ಯಾದಿ ಬೆಳೆಗಳು ಪ‌ಹಣಿಯ ಬೆಳೆಯ ಕಾಲಂ ಇರಬೇಕು. ಆದರೆ ಬೆಳೆ ಕಾಲಂನಲ್ಲಿ ಶೂನ್ಯವಾಗಿ ಬರೀ ಬಿಳಿ ಹಾಳೆ ಬರುತ್ತದೆ. ಬೆಳೆ ಮಾಹಿತಿ ಇಲ್ಲದ ಪ‌ಹಣಿಯನ್ನು ಯಾವುದಾದರೂ ಸಹಕಾರ ಸಂಘ ಅಥವಾ ವಾಣಿಜ್ಯ ಬ್ಯಾಂಕ್‌ಗಳಿಗೆ ನೀಡಿದರೆ ಕವಡೆ ಕಾಸಿನ ಬೆಲೆ ಇಲ್ಲದಾಗಿದೆ. ಬೆಳೆಯಿಲ್ಲದ ಪ‌ಹಣಿ ಮೇಲೆ ಸಾಲ ನೀಡಲಾಗದು ಎಂಬ ಸಿದ್ಧ ಉತ್ತರ ಬ್ಯಾಂಕ್‌ನಿಂದ ಬರುತ್ತದೆ. ಕಡ್ಡಾಯ ಬೆಳೆಯ ದೃಢೀಕರಣಕ್ಕಾಗಿ ಮತ್ತೆ ಗ್ರಾಮ ಲೆಕ್ಕಿಗರನ್ನು ಹುಡುಕಿಕೊಂಡು ಹೊರಡಬೇಕಿದೆ.

ಪ‌ಹಣಿಯಲ್ಲಿ ಬೆಳೆಯಿಲ್ಲದೆ ಪರದಾಡುವಂತಾಗಿದ್ದು, ದೃಢೀಕರಣ ಇಲ್ಲದ ಪಹಣಿ ಸರಿಪಡಿಸುವುದಕ್ಕೆ ನೂರಾರು ರೂ. ಖರ್ಚು ಮತ್ತು ಸಮಯ ವ್ಯರ್ಥವಾಗುತ್ತಿದೆ. ಇದರೊಂದಿಗೆ ಮತ್ತೂಂದು ಸಮಸ್ಯೆ ಇದೆ. 20 ಗುಂಟೆ ಬೆಳೆಯುವ ಅಡಕೆ ತೋಟದ ಪ್ರದೇಶದಲ್ಲಿ ಕಾಳು ಮೆಣಸು, ಕಾಫಿ ಬೆಳೆಯುತ್ತಿದ್ದರೂ ಬೆಳೆ ಕಾಲಂನಲ್ಲಿ 3 ಗುಂಟೆ ಎಂದು ನಮೂದಾಗಿದೆ. ಇದು ಪ್ರತಿವರ್ಷವೂ ರೈತರಿಗೆ ಗೋಳು ತಪ್ಪಿದ್ದಲ್ಲ. ಈ ರೀತಿ ಪಡೆದ ದೃಢೀಕರಣದ ಪಹಣಿಯ ಆಯಸ್ಸು ಕೂಡ ಕೇವಲ ಆರು ತಿಂಗಳು ಮಾತ್ರ. ಇದಕ್ಕೆಲ್ಲ ಸರ್ಕಾರ ಶಾಶ್ವತ ಪರಿಹಾರ ಕಂಡು ಹಿಡಿಯಬೇಕು.
•ಯಡದಳ್ಳಿ ಪ್ರಕಾಶ್‌ ಹೆಗ್ಡೆ, ಮಸಿಗೆ ಸುರೇಶ್‌, ಹಂಚಲಿ ಕೃಷ್ಣಮೂರ್ತಿರಾವ್‌, ಬೆಳಂದೂರು ದೇವೆಂದ್ರಗೌಡರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.