ಮಳೆ ಕೊರತೆ; ಕೃಷಿ ಕಾರ್ಯಕ್ಕೆ ಹಿನ್ನಡೆ

ಕಳೆದ ವಾರದಲ್ಲಿ ಸುರಿದ ಮಳೆಯಿಂದ ಭತ್ತ ಬಿತ್ತನೆಗೆ ಅನುಕೂಲ

Team Udayavani, Jul 13, 2019, 11:39 AM IST

13-July-14

ಶೃಂಗೇರಿ: ತಾಲೂಕಿನ ಭತ್ತದ ಗದ್ದೆಯಲ್ಲಿ ಬಿತ್ತನೆ ಕಾರ್ಯ ನಡೆದಿದೆ.

ಶೃಂಗೇರಿ: ಮಲೆನಾಡಿನಲ್ಲಿ ಕಳೆದ ವರ್ಷ ದಾಖಲೆ ಪ್ರಮಾಣದಲ್ಲಿ ಮಳೆಯಾಗಿತ್ತು. ಆದರೆ, ಈ ವರ್ಷ ಮಳೆಯ ಕೊರತೆಯಿಂದ ಕೃಷಿ ಕಾರ್ಯಕ್ಕೆ ಹಿನ್ನಡೆಯಾಗಿದೆ.

ಕಳೆದ ವರ್ಷ ಅತಿವೃಷ್ಟಿ, ಈ ಸಾಲಿನ ಅನಾವೃಷ್ಟಿಯಿಂದಾಗಿ ಮಲೆನಾಡಿನ ವಾಣಿಜ್ಯ ಬೆಳೆಗಳು ಸೇರಿದಂತೆ ರೈತರ ಮೇಲೂ ತೀವ್ರ ಪರಿಣಾಮ ಬೀರಿದೆ.

ಜೂನ್‌ ಮೂರನೇ ವಾರದವರೆಗೂ ಕೈಕೊಟ್ಟ ಮಳೆ, ಕೊನೆ ವಾರದಲ್ಲಿ ಅಲ್ಪ ಪ್ರಮಾಣದಲ್ಲಿ ಸುರಿದಿದ್ದರಿಂದ ಭತ್ತದ ಬಿತ್ತನೆ ಕಾರ್ಯಕ್ಕೆ ಅನುಕೂಲಕರವಾಗಿದೆ.

ಬಿತ್ತನೆ ಮಾಡುವಷ್ಟು ಮಳೆ ಬಂದಿದ್ದರೂ ನಾಟಿಗೆ ಅಗತ್ಯವಿರುವಷ್ಟು ಮಳೆ ಇನ್ನೂ ಆಗಿಲ್ಲ. ಜು.20ರ ನಂತರವಷ್ಟೇ ತಾಲೂಕಿನಲ್ಲಿ ನಾಟಿ ಆರಂಭಗೊಳ್ಳಲಿದ್ದು, ಮಳೆಯ ನಿರೀಕ್ಷೆಯಲ್ಲಿ ರೈತರಿದ್ದಾರೆ.

ಮಲೆನಾಡಿನಲ್ಲಿ ಸದ್ಯಕ್ಕೆ ಕುಡಿಯುವ ನೀರಿನ ಸಮಸ್ಯೆ ಮಾತ್ರ ಬಗೆಹರಿದಿದ್ದು, ತುಂಬಿ ಹರಿಯಬೇಕಾಗಿದ್ದ ತುಂಗಾ ನದಿ ಸಾಮಾನ್ಯ ಮಟ್ಟದಲ್ಲಿ ಹರಿಯುತ್ತಿದೆ. ಗ್ರಾಮೀಣ ಪ್ರದೇಶದ ಹಳ್ಳ, ಕೆರೆಗಳು ಮಳೆಗಾಲದ ಸೊಬಗನ್ನು ಕಂಡಿಲ್ಲ. ಸರಾಸರಿ ಮಳೆ ಜೂನ್‌ ಕೊನೆಯವರೆಗೆ 30-40 ಇಂಚು ಆಗಬೇಕಿತ್ತು. ಈ ವರ್ಷ ಕೇವಲ 10-15 ಇಂಚು ಮಳೆ ಆಗಿದೆ.

ಕಳೆದ ವರ್ಷ ಬೇಸಿಗೆಯ ಮಳೆಯೂ ಸಮೃದ್ಧಿಯಾಗಿದ್ದು, ಮೇ 29ರಿಂದಲೇ ಮಳೆಗಾಲ ಆರಂಭಗೊಂಡಿತ್ತು. ಜೂನ್‌ ಕೊನೆಯೊಳಗೆ ಎರಡು ಪ್ರವಾಹ ಕಂಡಿದ್ದ ತುಂಗಾ ನದಿ, ಈ ವರ್ಷ ಪ್ರವಾಹ ಉಂಟಾಗಲೇ ಇಲ್ಲ. ಕಳೆದ ವರ್ಷ ಅತಿವೃಷ್ಟಿ ಪರಿಣಾಮ ಬಹುತೇಕ ರೈತರು ಅಡಕೆ, ಕಾಳು ಮೆಣಸು, ಕಾಫಿಯನ್ನು ಕೊಳೆ ರೋಗದಿಂದ ಕಳೆದುಕೊಂಡಿದ್ದರು.

ಭಾರಿ ಪ್ರಮಾಣದ ಮಳೆಗೆ ಭೂ ಕುಸಿತ, ಹಳ್ಳ ಉಕ್ಕಿ ಹರಿದು ಸಾಕಷ್ಟು ಜಮೀನು ಹಾಳಾಗಿತ್ತು. ಈ ವರ್ಷ ಅದಕ್ಕೆ ವ್ಯತಿರಿಕ್ತ ಎಂಬಂತೆ ಬೇಸಿಗೆ ಮಳೆ ತೀರಾ ಕಡಿಮೆಯಾಗಿದೆ. ಮೇ ತಿಂಗಳಿನಲ್ಲಿ ತಾಲೂಕಿನ ಬಹುತೇಕ ಭಾಗದಲ್ಲಿ ಮಳೆ ಇಲ್ಲದೇ ಎಲ್ಲಾ ಬೆಳೆಗಳೂ ಒಣಗುವಂತಾಗಿತ್ತು.

ಬಿತ್ತನೆಗೆ ಆರಂಭ: ತಾಲೂಕಿನಲ್ಲಿ ಮಳೆಯಾಶ್ರಿತ ಭತ್ತದ ಗದ್ದೆಗಳು ಹೆಚ್ಚಾಗಿದ್ದು, ಬಿತ್ತನೆಗೆ ಅಗತ್ಯವಿರುವಷ್ಟು ವಾಡಿಕೆ ಮಳೆ ಆಗಿದೆ. ಕೃಷಿ ಇಲಾಖೆ ಪೂರೈಸುವ ಭತ್ತದ ಬೀಜಕ್ಕಿಂತಲೂ ರೈತರೇ ಉತ್ಪಾದಿಸುವ ಭತ್ತದಿಂದ ಆಯ್ದ ಬೀಜವನ್ನು ಬಳಸುವ ರೈತರ ಸಂಖ್ಯೆ ಹೆಚ್ಚಾಗಿದೆ. ಕೃಷಿ ಇಲಾಖೆ ಎರಡು ತಳಿಯ ಬೀಜ ಪೂರೈಸುತ್ತಿದ್ದು, ಸ್ಥಳೀಯವಾಗಿ ಬೆಳೆಯುವ ಭತ್ತದ ಬಿತ್ತನೆ ಬೀಜ ಲಭ್ಯವಿಲ್ಲ. ಭತ್ತದ ಬಿತ್ತನೆ ಬೀಜ ಕೃಷಿ ಇಲಾಖೆ ಪೂರೈಸುತ್ತಿದ್ದರೂ, ಇಲ್ಲಿ ಬಹುತೇಕ ಸಹಾಯಧನ ನೀಡಿದ್ದರೂ ಬಿತ್ತನೆ ಬೀಜದ ದರ ಅಧಿಕವಾಗಿದೆ. ತಾಲೂಕಿನಲ್ಲಿ ರಸಗೊಬ್ಬರದ ಕೊರತೆ ಇಲ್ಲ.

ತೋಟಗಾರಿಕಾ ಬೆಳೆ: ತಾಲೂಕಿನ ಪ್ರಮುಖ ವಾಣಿಜ್ಯ ಬೆಳೆ ಮೇಲೆ ಮಳೆ ಕೊರತೆ ಪರಿಣಾಮ ಬೀರಿದ್ದು, ಬೇಸಿಗೆಯಲ್ಲಿ ಮಳೆ ಇಲ್ಲದೇ ಫಸಲು ಕಡಿಮೆಯಾಗಿದೆ. ಕೆಲ ತೋಟದಲ್ಲಿ ನೀರಿನ ಕೊರತೆಯಿಂದ ಅಡಕೆ ಮರವೇ ನಾಶವಾಗಿದೆ. ಕಾಳು ಮೆಣಸಿನ ಕಾಯಿ ಕಟ್ಟಲು ಬೇಸಿಗೆಯಲ್ಲಿ ಉತ್ತಮ ಮಳೆಯಾಗಬೇಕು. ನೀರಿಲ್ಲದೇ ಬಳ್ಳಿಗಳು ಸತ್ತಿದ್ದು, ಮೆಣಸಿನ ಫಸಲೂ ತೀವ್ರ ಕಡಿಮೆಯಾಗಿದೆ. ಕಾಫಿ ಬೇಸಿಗೆಯಲ್ಲಿ ಮಾರ್ಚ್‌ ಅಥವಾ ಏಪ್ರಿಲ್ನಲ್ಲಿ ಉತ್ತಮ ಮಳೆಯಾಗಬೇಕು. ನಂತರ 8-10ದಿನದಲ್ಲಿ ಪೂರಕ ಮಳೆಯೂ ಅಗತ್ಯ. ಸಕಾಲದಲ್ಲಿ ಮಳೆಯಾಗದಿದ್ದರೆ, ಆ ವರ್ಷದ ಕಾಫಿ ಫಸಲಿಗೆ ಹಾನಿಯಾಗಲಿದೆ. ಅದೇ ಪರಿಸ್ಥಿತಿ ಈ ವರ್ಷ ಉಂಟಾಗಿದ್ದು, ಸಕಾಲದಲ್ಲಿ ಮಳೆಯಾಗದೇ ಕಾಫಿ ಫಸಲು ಕುಸಿತವಾಗಲಿದೆ.

ಟಾಪ್ ನ್ಯೂಸ್

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.