ಜೆಡಿಎಸ್‌ನಿಂದ ಗುರುರಾಜಗೌಡ ಸ್ಪರ್ಧೆ?


Team Udayavani, Mar 14, 2021, 5:24 PM IST

Sindagi byelection

ಸಿಂದಗಿ: ಮಾಜಿ ಪ್ರಧಾನಿ ದೇವೇಗೌಡರ ಕಟ್ಟಾ ಆಭಿಮಾನಿಯಾಗಿದ್ದ ದಿ| ಶಾಸಕ ಎಂ.ಸಿ. ಮನಗೂಳಿ ಅವರ ನಿಧನದ ನಂತರ ಅವರ ಪುತ್ರ ಅಶೋಕ ಮನಗೂಳಿ ಜೆಡಿಎಸ್‌ ಪಕ್ಷ ತೊರೆದು ಕಾಂಗ್ರೆಸ್‌ ಪಕ್ಷ ಸೇರ್ಪಡೆಯಾದರು. ಈ ರಾಜಕೀಯ ಬೆಳವಣಿಗೆಯಿಂದ ಕ್ಷೇತ್ರದಲ್ಲಿ ಪ್ರಾದೇಶಿಕ ಪಕ್ಷ ಜೆಡಿಎಸ್‌ ಪಕ್ಷ ಎಲ್ಲಿ ಮರೆಯಾಯಿತು ಎಂದು ಕಾರ್ಯಕರ್ತರಲ್ಲಿ ದುಗುಡು ತುಂಬಿಕೊಂಡಿತ್ತು.

ಸಿಂದಗಿ ಉಪ ಚುನಾವಣೆಯಲ್ಲಿ ಜೆಡಿಎಸ್‌ ಪಕ್ಷದಿಂದ ಅಭ್ಯರ್ಥಿಯನ್ನು ಕಣದಲ್ಲಿ ಇಳಿಸಬೇಕು ಎಂದು ನಿರ್ಧರಿಸಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಜಿಲ್ಲಾ ಜೆಡಿಎಸ್‌ ಮುಖಂಡರೊಂದಿಗೆ ಚರ್ಚಿಸಿ ಯೋಗ್ಯ ಅಭ್ಯರ್ಥಿಯನ್ನು ಹುಡುಕಾಟ ಮಾಡುವ ಸಂದರ್ಭದಲ್ಲಿ ಅವರಿಗೆ ಕಂಡದ್ದು ತಾಲೂಕಿನ ಚಾಂದಕವಠೆ ಜಿಪಂ ಸದಸ್ಯ ಗುರುರಾಜಗೌಡ ದೇವಪ್ಪಗೌಡ ಪಾಟೀಲ. ಗುರುರಾಜಗೌಡ ಪಾಟೀಲ ಅವರು ಜೆಡಿಎಸ್‌ ಪಕ್ಷದಿಂದ ಸ್ಪ ರ್ಧಿಸಿದಲ್ಲಿ ಉಪ ಚುನಾವಣೆಯಲ್ಲಿ ತ್ರಿಕೋನ ಸ್ಪಧೆ ನಡೆಯುತ್ತದೆ. ಜೆಡಿಎಸ್‌ ಕಾರ್ಯಕರ್ತರು ಉತ್ಸುಕರಾಗಿದ್ದಾರೆ.

ಜಿಪಂ ಅಭ್ಯರ್ಥಿ ಗುರುರಾಜಗೌಡ ದೇವಪ್ಪಗೌಡ ಪಾಟೀಲ ಅವರನ್ನು ಮಾ. 11ರಂದು ಮಾಜಿ  ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಕರೆಸಿಕೊಂಡು ಸಿಂದಗಿ ಉಪ ಚುನಾವಣೆಯಲ್ಲಿ ಜೆಡಿಎಸ್‌ ಪಕ್ಷದಿಂದ ಸ್ಪ ರ್ಧಿಸಲು ಆಹ್ವಾನ ನೀಡಿದ್ದಾರೆ. ಗುರುರಾಜಗೌಡರು ಎರಡು ದಿನ ಕಾಲಾವಕಾಶ ಕೇಳಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

2016ರಲ್ಲಿ ಚಾಂದಕವಠೆ ಜಿಪಂ ಕ್ಷೇತ್ರದಲ್ಲಿ ರಾಷ್ಟ್ರೀಯ ಪಕ್ಷಗಳ ಪೈಪೋಟಿ ಮಧ್ಯದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು ಸಾಧಿ ಸಿದ ಕಂಪ್ಯೂಟರ್‌ ವಿಷಯದಲ್ಲಿ ಬಿಇ ಪದವಿ ಪಡೆದ ಗುರುರಾಜಗೌಡ ದೇವಪ್ಪಗೌಡ ಪಾಟೀಲ ಇತಿಹಾಸ ಸೃಷ್ಟಿಸಿದ್ದಾರೆ. ಗುರುರಾಜಗೌಡ ಅವರ ಅಜ್ಜ ಗುರುಲಿಂಗಪ್ಪಗೌಡ ಪಾಟೀಲ ಅವರು 1962ರಲ್ಲಿ ಇಂಡಿ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರರಾಗಿ ಸ್ಪರ್ಧಿಸಿ ಗೆಲುವು ಸಾಧಿಸಿ ಶಾಸಕರಾಗಿ, 1967ರಲ್ಲಿ ಸ್ವತಂತ್ರ ಪಕ್ಷದಿಂದ ಸಂಸದರಾಗಿ ಆಯ್ಕೆಯಾಗಿದ್ದರು.

ಗುರುರಾಜಗೌಡರ ತಂದೆ ದೇವಪ್ಪಗೌಡ ಅವರು 1987ರಲ್ಲಿ ದೇವಪ್ಪಗೌಡ ಅವರು ಜಿಪಂ ಸದಸ್ಯರಾಗಿ ಆಯ್ಕೆಯಾಗಿದ್ದರು. ಅವರು ಸದಾ ಸಾಮಾಜಿಕ ಸೇವೆಯಲ್ಲಿರುವುದರಿಂದ 2013ರ ವಿಧಾನಸಭಾ ಚುನಾವಣೆಯಲ್ಲಿ ಸಂಯುಕ್ತ ಜನತಾದಳದಿಂದ ಸ್ಪ ರ್ಧಿಸಲು ಬಯಸಿದರು. ಆದರೆ ಟಿಕೆಟ್‌ ಸಿಗಲಿಲ್ಲ. ಆದರೂ ಅಭಿಮಾನಿಗಳ ಒತ್ತಾಯದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆಗಿಳಿದರು. ಚುನಾವಣೆ  ಹತ್ತಿರವಾದಾಗ ಅವರು ಹೃದಯಾಘಾತದಿಂದ ನಿಧನರಾದರು. ನಂತರ ಅವರ ಮಗ ಗುರುರಾಜಗೌಡ ಪಾಟೀಲ 2016ರಲ್ಲಿ ಚಾಂದಕವಠೆ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು ಸಾಧಿ ಸಿದರು. 2021ರ  ಸಿಂದಗಿ ಉಪ ಚುನಾವಣೆಯಲ್ಲಿ ಜೆಡಿಎಸ್‌ ಪಕ್ಷದಿಂದ ಚುನಾವಣೆಗೆ ಸ್ಪ ರ್ಧಿಸಿ ಗೆಲುವು ಸಾಧಿ ಸುವ ಮೂಲಕ ತಂದೆಯ ಕನಸು ನನಸು ಮಾಡಲು ಜೆಡಿಎಸ್‌ ಪಕ್ಷದ ನಾಯಕ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವಕಾಶ ನೀಡಿದ್ದಾರೆ.

ಜಿಪಂ ಅಭ್ಯರ್ಥಿ ಗುರುರಾಜಗೌಡ ಪಾಟೀಲ ಅವರು ಜೆಡಿಎಸ್‌ ಪಕ್ಷದಿಂದ ಸ್ಪ ರ್ಧಿಸಿದಲ್ಲಿ ಸಿಂದಗಿ ಕ್ಷೇತ್ರದ ಜೆಡಿಎಸ್‌ ಕಾರ್ಯಕರ್ತರಿಗೆ ಮರು ಜೀವ ಬಂದಂತಾಗುತ್ತದೆ ಎಂದು ಹಳೆ ಜೆಡಿಎಸ್‌ ಕಾರ್ಯಕರ್ತರು ಅಭಿಪ್ರಾಯ ಹಂಚಿಕೊಂಡರು.

ರಮೇಶ ಪೂಜಾರ

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.