ಕಾಲುವೆಗಳಿಗೆ ನೀರು ಹರಿಸಿ

ಬೆಂಗಳೂರಿನಲ್ಲಿ ಯುಕೆಪಿ ಸಲಹಾ ಸಮಿತಿ ಸಭೆಗೆ ಅನ್ನದಾತರ ತೀವ್ರ ಆಕ್ರೋಶ

Team Udayavani, Jul 20, 2019, 3:01 PM IST

20-July-30

ಸಿಂದಗಿ: ಕಾಲುವೆಗಳಿಗೆ ನೀರು ಬಿಡಬೇಕು ಎಂದು ಆಗ್ರಹಿಸಿ ರೈತರು ತಹಶೀಲ್ದಾರ್‌ ಬಸವರಾಜ ಕಡಕಬಾವಿ ಅವರಿಗೆ ಮನವಿ ಸಲ್ಲಿಸಿದರು.

ಸಿಂದಗಿ: ಕಾಲುವೆಗಳಿಗೆ ನೀರು ಬಿಡಬೇಕು ಎಂದು ಆಗ್ರಹಿಸಿ ರೈತರು ಶುಕ್ರವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ ಬಸವರಾಜ ಕಡಕಬಾವಿ ಮೂಲಕ ರಾಜ್ಯಪಾಲರಿಗೆ, ಮುಖ್ಯಮಂತ್ರಿಗಳಿಗೆ, ನೀರಾವರಿ ಸಚಿವರಿಗೆ ಮನವಿ ಸಲ್ಲಿಸಿದರು.

ಪ್ರತಿಭಟನಾ ನೇತೃತ್ವ ವಹಿಸಿದ್ದ ರೈತ ಮುಖಂಡ ಚಂದ್ರಶೇಖರ ದೇವರಡ್ಡಿ ಮಾತನಾಡಿ, ಪ್ರತಿ ಸಲ ಯುಕೆಪಿ ಸಲಹಾ ಸಮಿತಿ ಸಭೆ ಆಲಮಟ್ಟಿಯಲ್ಲಿ ಜರುಗುತ್ತಿತ್ತು. ಆದರೆ ಈ ಸಲ ಸಭೆಯನ್ನು ಜು. 20ರಂದು ಬೆಂಗಳೂರಿನಲ್ಲಿ ನಡೆಸುತ್ತಿರುವದು ಸೂಕ್ತವಲ್ಲ. ಸಕಾಲಕ್ಕೆ ಮಳೆ ಬರದೆ ಇರುವುದರಿಂದ ಕೃಷಿ ಚಟುವಟಿಕೆಗಳು ಸ್ಥಗಿತಗೊಂಡಿವೆ. ಆಲಮಟ್ಟಿ ಜಲಾಶಯದಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೀರು ಸಂಗ್ರಹವಾಗಿದೆ. ಹೊಸ ನೀರು ಕೂಡಾ ಹರಿದು ಬರುತ್ತಿದೆ.

ನಾರಾಯಣಪುರ ಜಲಾಶಯದಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೀರು ಸಂಗ್ರಹವಾಗಿದೆ. ಆದ್ದರಿಂದ ಸಿಂದಗಿ, ಇಂಡಿ, ಸುರಪುರ ತಾಲೂಕುಗಳಿಗೆ ಜಾಕ್‌ವೆಲ್ ಹಾಗೂ ಕಾಲುವೆಗಳ ಮೂಲಕ ನೀರು ಹರಿಸಲು ಸರಕಾರಕ್ಕೆ ಅವರು ಕ್ರಮ ಕೈಗೊಳ್ಳಬೇಕು. ಇಲ್ಲದ ಪಕ್ಷದಲ್ಲಿ ಜು. 23ರಂದು ತಾಲೂಕಿನ ರಾಂಪುರ ಗ್ರಾಮದಲ್ಲಿನ ಯುಕೆಪಿ ವಿಭಾಗೀಯ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ರೈತ ಸಂಘದ ಜಿಲ್ಲಾಧ್ಯಕ್ಷ ಚಂದ್ರಗೌಡ ಪಾಟೀಲ ಮಾತನಾಡಿ, ಜಲಾಶಯಗಳಲ್ಲಿ ಸಂಗ್ರಹವಾದ ನೀರನ್ನು ರೈತರ ಅನಕೂಲಕ್ಕೆ ಆದ್ಯತೆ ನೀಡಬೇಕು. ಕೆಂಭಾವಿಯಿಂದ ಗುತ್ತಿ ಬಸವಣ್ಣ ಏತ ನೀರಾವರಿ ಕಾಲುವೆಗೆ ನೀರು ಬಿಡಲು 4 ಮೋಟಾರ್‌ ಪಂಪ್‌ಗ್ಳಿವೆ. ಕಾಲುವೆಯಿಂದ ಸಿಂದಗಿ ತಾಲೂಕಿನಲ್ಲಿನ ಕಾಲುವೆಗಳಿಗೆ ನೀರು ಬರಬೇಕಾದರೆ ಕನಿಷ್ಠ 3 ಮೋಟಾರ್‌ ಪಂಪ್‌ಗ್ಳು ಪ್ರಾರಂಭಿಸಬೇಕು. ಆದರೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಒಂದೇ ಮೋಟರ್‌ ಪ್ರಾರಂಭಿಸಿದ್ದಾರೆ. ಇದರಿಂದ ನೀರು ಲಿಫ್ಟ್‌ ಪ್ರಮಾಣ ಕಡಿಮೆಯಾಗುತ್ತದೆ. ಹೀಗಾಗಿ ತಾಲೂಕಿನಲ್ಲಿನ ಗುತ್ತಿ ಬಸವಣ್ಣ ಏತ ನೀರಾವರಿ ಕಾಲುವೆಗೆ ನೀರು ಹರಿದು ಬರುವುದಿಲ್ಲ. ಆದ್ದರಿಂದ ಕೆಬಿಜೆಎನ್‌ಎಲ್ ಅಧಿಕಾರಿಗಳಿಗೆ ಕನಿಷ್ಠ 3 ಮೋಟಾರ್‌ ಪಂಪ್‌ಗ್ಳು ಪ್ರಾರಂಭಿಸಿ ನೀರು ಬಿಡಬೇಕು ಎಂದು ಸೂಚನೆ ನೀಡಬೇಕು ಎಂದು ಸರಕಾರಕ್ಕೆ ಒತ್ತಾಯಿಸಿದ್ದಾರೆ.

ರೈತರಾದ ಸಿದ್ದನಗೌಡ ದೇವರೆಡ್ಡಿ, ಶ್ರೀಶೈಲ ಯಳಮೇಲಿ, ಅಶೋಕ ಹಣಮಶೆಟ್ಟಿ, ಶಾಂತು ರಾಣಾಗೋಳ, ಶಂಕರಲಿಂಗ ಚಿನಮಳಿ, ಬಿ.ಎಸ್‌. ಬೂದಿಹಾಳ, ಸಂಗಾರೆಡ್ಡಿ ಬೋರಗಿ, ಬಿ.ಕೆ. ಪೂಜಾರಿ, ಪ್ರಭು ಬೋರಗಿ, ಎಸ್‌.ಬಿ. ಪೂಜಾರಿ, ಬೀರಪ್ಪ ಹಚ್ಯಾಳ, ಲಕ್ಷ್ಮಣ ಹಚ್ಯಾಳ, ಜಿ.ಬಿ. ಮಣೂರ, ಕೇಶವರಾಯ ಕಡಣಿ, ಬಿ.ಬಿ. ಬಡಿಗೇರ, ಎಸ್‌.ಎಸ್‌. ಬಡಿಗೇರ, ಮಲ್ಲಪ್ಪ ಬಾಸಗಿ, ಕಾಶೀನಾಥ ಬಮ್ಮನಹಳ್ಳಿ, ಯಲ್ಲಪ್ಪ ಭಾಸಗಿ, ಮಲಕಣ್ಣ ಬಿರಾದಾರ ಸೇರಿದಂತೆ ಸಿಂದಗಿ, ಇಂಡಿ ತಾಲೂಕಿನ ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.