ಕೆಬಿಜೆಎನ್ನೆಲ್ ಕಚೇರಿಗೆ ಬೀಗ ಜಡಿದು ರೈತರ ಪ್ರತಿಭಟನೆ

ಗುತ್ತಿ ಬಸವಣ್ಣ ಏತ ನೀರಾವರಿ ಕಾಲುವೆ ಕೊನೆವರೆಗೂ ನೀರು ಹರಿಸಿ

Team Udayavani, Aug 3, 2019, 3:03 PM IST

3-Agust-33

ಸಿಂದಗಿ: ರೈತರು ಹಮ್ಮಿಕೊಂಡಿದ್ದ ಪ್ರತಿಭಟನಾ ಸ್ಥಳಕ್ಕೆ ಮಾಜಿ ಸಚಿವ, ಹಾಲಿ ಶಾಸಕ ಎಂ.ಸಿ. ಮನಗೂಳಿ ಭೇಟಿ ನೀಡಿ ಅಧಿಕಾರಿ ಮತ್ತು ರೈತರೊಂದಿಗೆ ಚರ್ಚಿಸಿದರು.

ಸಿಂದಗಿ: ಕೆಂಭಾವಿಯಿಂದ ಗುತ್ತಿ ಬಸವಣ್ಣ ಏತ ನೀರಾವರಿ ಕಾಲುವೆಯಿಂದ 4 ಮೋಟಾರ್‌ ಪಂಪ್‌ಗ್ಳು ಪ್ರಾರಂಭಿಸಿ ಕಾಲುವೆಗೆ ನೀರು ಬಿಡಲಾಗಿದೆ. ಆದರೆ ನೀರು ಕೊನೆವರೆಗೂ ಬಂದು ತಲುಪಿಲ್ಲ ಎಂದು ರೈತರು ಶುಕ್ರವಾರ ತಾಲೂಕಿನ ರಾಂಪುರ ಪಿಎ ಗ್ರಾಮದಲ್ಲಿರುವ ಕೆಬಿಜೆಎನ್ನೆಲ್ ಮುಖ್ಯ ಎಂಜಿನಿಯರ್‌ ಕಾರ್ಯಾಲಯಕ್ಕೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.

ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಮಾಜಿ ಸಚಿವ, ಹಾಲಿ ಶಾಸಕ ಎಂ.ಸಿ. ಮನಗೂಳಿ ಮಾತನಾಡಿ, ದೇವೇಗೌಡರು ಪ್ರಧಾನಿಯಿದ್ದ ಸಂದರ್ಭದಲ್ಲಿ ನಾನು ರಾಜ್ಯ ಸರಕಾರದಲ್ಲಿ ಮಂತ್ರಿಯಿದ್ದೆ. ಆ ಸಂದರ್ಭದಲ್ಲಿ ಕ್ಷೇತ್ರವನ್ನು ನೀರಾವರಿ ಕ್ಷೇತ್ರವನ್ನಾಗಿ ಮಾಡಲು ಕ್ಷೇತ್ರ ನೀರಾವರಿಯಾಗುವವರೆಗೂ ಬರಿಗಾಲಲ್ಲೆ ತಿರುಗಾಲು ಶಪಥ ಮಾಡಿದೇನು. ಅದರಂತೆ ಹೋರಾಡಿ ಕ್ಷೇತ್ರಕ್ಕೆ ಗುತ್ತಿಬಸವಣ್ಣ ಏತ ನೀರಾವರಿ ಯೋಜನೆ ಅನುಷ್ಠಾನಗೊಳಿಸಿದೆ. ಅಂದಿನಿಂದ ಕ್ಷೇತ್ರದ ಬಹು ಭಾಗ ನೀರಾವರಿ ಕ್ಷೇತ್ರವಾಗಿದೆ. ಈಗ ಕಾಲುವೆಗಳು ದುರಸ್ತಿ ಮಾಡುವ ಕಾರ್ಯ, ಕೊನೆವರೆಗೂ ನೀರು ಹರಿಬಿಡುವ ಕಾರ್ಯ ಶೀಘ್ರದಲ್ಲಿ ನಡೆಯಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಪ್ರತಿಭಟನೆ ನೇತೃತ್ವ ವಹಿಸಿದ್ದ‌ ಜಿಲ್ಲಾ ರೈತ ಮುಖಂಡ ಚಂದ್ರಶೇಖರ ದೇವರೆಡ್ಡಿ ಮಾತನಾಡಿ, ತಾಲೂಕಿನ ಗೋಲಗೇರಿ ಮತ್ತು ಹೊನ್ನಳ್ಳಿ ಮಧ್ಯ ಭಾಗದಲ್ಲಿ ಬರುವ ವಿತರಣಾ ಕಾಲುವೆ ಡಿಸ್ಟ್ರಿಬ್ಯೂಟರ್‌ ನಂ. 19ರಲ್ಲಿ ಮುಂದೆ ಕಾಲುವೆ ಒಡೆದಿದೆ ಎಂದು ಹೇಳಿ ಕಾಲುವೆ ಮಧ್ಯದಲ್ಲಿ ಕಲ್ಲು ಅಡ್ಡಗಟ್ಟಿ ನೀರು ತಡೆಗಟ್ಟಿದ್ದಾರೆ. ಹೀಗಾಗಿ ಕಾಲುವೆಗೆ ಬಂದ ನೀರು ನಿಂತು ಹೆಚ್ಚಾಗಿ ಪಕ್ಕದಲ್ಲಿನ ಜಮೀನುಗಳಿಗೆ ನೀರು ಹರಿದು ಹೋಗಿ ಜಲಾವೃತವಾಗಿ ಅಲ್ಲಿ ಬೆಳದ ಬೆಳೆ ಹಾನಿಯಾಗಿದೆ ಎಂದು ಹೇಳಿದರು.

ಗುತ್ತಿ ಬಸವಣ್ಣ ಏತ ನೀರಾವರಿ ಕಾಲುವೆ ಯಾವ ಭಾಗದಲ್ಲಿಯೂ ಕಾಲುವೆ ಒಡೆದಿಲ್ಲ. ಹೀಗಾಗಿ ಕಾಲುವೆ ಕೊನೆವರೆಗೂ ನೀರು ಹರಿದು ಬರಲು ಅಡ್ಡವಾಗಿರುವ ಕಲ್ಲುಗಳನ್ನು ತೆರವುಗೊಳಿಸಬೇಕು. ಕೊನೆವರೆಗೂ ನೀರು ಬರುವಂತೆ ಮಾಡಬೇಕು ಎಂದು ಜು. 23 ಮತ್ತು 29ರಂದು ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದರು.

ದೇವೇಗೌಡರು ಪ್ರಧಾನಿಯಿದ್ದ ಸಂದರ್ಭದಲ್ಲಿ ಎಂ.ಸಿ. ಮನಗೂಳಿ ಅವರು ಕ್ಷೇತ್ರದ ಶಾಸಕರಾಗಿದ್ದರು. ಅವರ ಹೋರಾಟದ ಶ್ರಮದಿಂದ ಈ ಭಾಗದಲ್ಲಿ ಗುತ್ತಿ ಬಸವಣ್ಣ ಏತ ನೀರಾವರಿ ಪ್ರಾರಂಭವಾಗಿದೆ. ಈ ನೀರಾವರಿ ಯೋಜನೆಯಿಂದ ನಾವು ಬದುಕು ಸಾಗಿಸುತ್ತಿದ್ದೇವೆ. ಈಗ ಈ ಕಾಲುವೆಗಳು ಶಿಥಿಲಾವಸ್ಥೆಯಲ್ಲಿವೆ. ಕೂಡಲೆ ಶಿಥಿಲಗೊಂಡ ಕಾಲುವೆಗಳನ್ನು ದುರಸ್ತಿ ಮಾಡಬೇಕು. ನೀರು ಹರಿದು ಬರಲು ಅಡ್ಡವಾಗಿರುವ ಕಲ್ಲುಗಳನ್ನು ತೆರವುಗೊಳಿಸಬೇಕು. ಆಗ ನೀರು ಕೊನೆವರೆಗೆ ಹೋಗುತ್ತದೆ ಎಂದರು. ತಾಪಂ ಮಾಜಿ ಸದಸ್ಯ ಅರ್ಜುನ ಮಾಲಗಾರ ಮಾತನಾಡಿ, ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯದಿಂದ ಕಾಲುವೆಗೆ ನೀರುವ ಹರಿಬಿಡುವ ಕಾರ್ಯ ಸಮರ್ಪಕವಾಗಿ ನಡೆಯುತ್ತಿಲ್ಲ. ಸೆಕ್ಷೇನ್‌ ಆಫೀಸರ್‌ಗಳ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಆರೋಪಿಸಿದರು.

ರೈತ ಮುಖಂಡ ಸದಾಶಿವ ಕರ್ಜಗಿ ಮಾತನಾಡಿ, ಕಳೆದ ಮೂರು ವರ್ಷಗಳಿಂದ ಈ ತೆರನಾಗಿ ನಡೆಯುತ್ತಿದೆ. ಸರಿಯಾಗಿ ಕಾಲುವೆಗೆ ನೀರು ಹರಿದು ಬರುತ್ತಿಲ್ಲ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಗುತ್ತಿ ಬಸವಣ್ಣ ಏತ ನೀರಾವರಿ ಯೋಜನೆಯ ಲಾಭ ರೈತರಿಗೆ ತಲುಪುತ್ತಿಲ್ಲ. ಇನ್ನಾದರು ಅಧಿಕಾರಿಗಳು ಎಚ್ಚೆತ್ತು ಕಾಲುವೆ ಕೊನೆವೆರೆಗ ನೀರು ಹರಿದು ಬರುವ ಹಾಗೆ ಮಾಡಬೇಕು ಎಂದು ಅಧಿಕಾರಿಗಳಿಗೆ ಒತ್ತಾಯಿಸಿದರು.

ಕೆಬಿಜೆಎನ್ನೆಲ್ ಮುಖ್ಯ ಎಂಜಿನಿಯರ್‌ ಕಾರ್ಯಾಲಯದ ಅಧೀಕ್ಷಕ ಅಭಿಯಂತ ಮಾತನಾಡಿ, ರೈತರ ಸಂಕಟ ನನಗೆ ಅರ್ಥವಾಗುತ್ತದೆ. ಕಾಲುವೆ ಮಧ್ಯದಲ್ಲಿ ಕಲ್ಲು ಅಡ್ಡಗಟ್ಟಿ ನೀರು ತಡೆಗಟ್ಟಿದ ಕಲ್ಲುಗಳನ್ನು ತೆರವು ಗೊಳಿಸಲಾಗುವುದು. ಗಿಡ-ಕಂಟಿಗಳನ್ನು ಕಟಾವು ಮಾಡಲಾಗುವದು. ನೀರಿಗೆ ಕಲ್ಲುಗಳಿಂದ ಅಡ್ಡಗಟ್ಟಿದವರ ಮೇಲೆ ಪೊಲೀಸರಿಗೆ ದೂರು ನೀಡಲಾಗುವುದು. ಅಂಥವರ ಪರವಾಗಿ ಜನ ಪ್ರತಿನಿಧಿಗಳು ಬರಬಾರದು. 5 ಮೋಟಾರ್‌ಗಳನ್ನು ಪ್ರಾರಂಭಿಸಿ ಕಾಲುವೆಗೆ ನೀರು ಹರಿಬಿಟ್ಟು ಕೊನೆವರೆಗೆ ತಲುಪಿಸುವ ಕಾರ್ಯ ಮಾಡಲಾಗುವುದು ಎಂದು ಭರವಸೆ ನೀಡಿದರು.

ರೈತರಾದ ಸಿದ್ದನಗೌಡ ದೇವರೆಡ್ಡಿ, ಕೂಡ್ಲಪ್ಪ ಚೂರಿ, ಶಾಂತಪ್ಪ ಚೂರಿ, ಶಾಂತಪ್ಪ ಶಂಬೇವಾಡಿ, ಬಸವರಾಜ ದೇವರೆಡ್ಡಿ, ಬಸವರಾಜ ಬಡಿಗೇರ, ಚೆನ್ನಪ್ಪ ಹೂಗಾರ, ಮಲ್ಲನಗೌಡ ವಡ್ಡೋಡಗಿ, ಸಂತೋಷ ಮಾಲಗಾರ, ಶಿವಶಂಕರ ಸಿನ್ನೂರ, ಹಣಮಂತ ಮಸರಕಲ್ಲ, ಭೀಮಪ್ಪ ಮಣೂರ, ಕಾಂತು ಕಡಗಂಚಿ ಸೇರಿದಂತೆ ತಾಲೂಕಿನ ನೂರಾರು ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.