ಕಪ್ಪು ಪಟ್ಟಿ ಧರಿಸಿ ಕಾರ್ಯನಿರ್ವಹಣೆ

ಭೂ ಮಾಪಕರಿಗೆ ಮಾಸಿಕ 30 ಕಡತ ಗುರಿ ನಿಗದಿ ಸುತ್ತೋಲೆ ಹಿಂಪಡೆಯಿರಿ

Team Udayavani, Aug 24, 2019, 11:00 AM IST

24-April-11

ಸಿಂದಗಿ: ಭೂ ದಾಖಲೆಗಳ ಕಾರ್ಯ ನಿರ್ವಾಹಕ ನೌಕರರ ಸಂಘದ ತಾಲೂಕು ಘಟಕ ಪದಾಧಿಕಾರಿಗಳು ಶುಕ್ರವಾರ ಕಾರ್ಯಾಲಯದಲ್ಲಿ ಕಪ್ಪು ಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸಿದರು.

ಸಿಂದಗಿ: ಸರ್ಕಾರ ಭೂ ಮಾಪಕರಿಗೆ ಮಾಸಿಕ 30 ಕಡತಗಳ ಗುರಿ ನಿಗದಿಪಡಿಸಿ ಹೊರಡಿಸಿರುವ ಸುತ್ತೋಲೆ ಹಿಂಪಡೆದು ಮೊದಲಿದ್ದ 23 ಕಡತಗಳ ಗುರಿ ಮುಂದುವರಿಸಬೇಕು ಎಂದು ಒತ್ತಾಯಿಸಿ ರಾಜ್ಯ ಭೂಮಾಪನ, ಕಂದಾಯ ಮತ್ತು ಭೂ ದಾಖಲೆಗಳ ಕಾರ್ಯ ನಿರ್ವಾಹಕ ನೌಕರರ ಸಂಘದ ತಾಲೂಕು ಘಟಕ ಪದಾಧಿಕಾರಿಗಳು ಶುಕ್ರವಾರ ಕಾರ್ಯಾಲಯದಲ್ಲಿ ಕಪ್ಪ್ಪು ಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸಿದರು.

ಭೂ ಮಾಪಕ ನೌಕರರ ಸಂಘದ ತಾಲೂಕಾಧ್ಯಕ್ಷ ವೆಂಕಟೇಶ ಕಣಜೀಕರ ಮಾತನಾಡಿ, ಹೊರಗುತ್ತಿಗೆ ಆಧಾರದ ಬಾಂದು ಸಹಾಯಕರ ನೇಮಕಾತಿ ಕೈ ಬಿಟ್ಟು, ಭೂ ಮಾಪಕರ ಹುದ್ದೆಗಳ ಸಂಖ್ಯೆಗೆ ಅನುಗುಣವಾಗಿ ಬಾಂದು ಜವಾನರ ಕಾಯಂ ಹುದ್ದೆಗಳನ್ನು ಸೃಷ್ಟಿಸಿ ಕೂಡಲೇ ನೇಮಕ ಮಾಡಬೇಕು. ಸಮಾನ ವಿದ್ಯಾರ್ಹತೆ ಹೊಂದಿರುವ ಇತರೆ ಇಲಾಖೆ ಸರ್ಕಾರಿ ನೌಕರರಿಗೆ ನೀಡುತ್ತಿರುವ ವೇತನ ಶ್ರೇಣಿಯನ್ನು ಕಂದಾಯ ಮತ್ತು ಭೂ ಮಾಪನಾ ಇಲಾಖೆ ನೌಕರರಿಗೆ ನೀಡಬೇಕು.

ಖಾಲಿಯಿರುವ ಎಲ್ಲ ಕಾರ್ಯ ನಿರ್ವಾಹಕ ಹುದ್ದೆಗಳಿಗೆ ಮುಂಬಡ್ತಿ ನೀಡಿ ಕೂಡಲೇ ಭರ್ತಿ ಮಾಡಬೇಕು ಎಂಬುದು ಸೇರಿದಂತೆ ಒಟ್ಟು 11 ಬೇಡಿಕೆ ಈಡೇರಿಕೆಗಳಿಗೆ ಆಗ್ರಹಿಸಿದರು. ಆಗಸ್ಟ್‌ 19ರಿಂದ 31ರವರೆಗೆ ಕಪ್ಪ್ಪು ಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸುವ ಮೂಲಕ ಪ್ರತಿಭಟನೆ ಮಾಡಲಾಗುತ್ತದೆ ಎಂದು ತಿಳಿಸಿದರು.

ಇಲಾಖೆಯಲ್ಲಿ ಕಾರ್ಯ ನಿರ್ವಾಹಕ ನೌಕರರಿಗೆ ಕಡ್ಡಾಯವಾಗಿ ತಿಂಗಳಿಗೆ 30 ಪ್ರಕರಣ ವಿಲೇವಾರಿ ಮಾಡಬೇಕು ಎಂಬ ನಿಯಮ ಕೈ ಬಿಡಬೇಕು. 600 ರೂ. ಮಾಸಿಕ ನಿಗದಿತ ಪ್ರಯಾಣ ಭತ್ಯೆ ನೀಡುತ್ತಿದ್ದು, ಇದರ ಬದಲಾಗಿ 2,000 ರೂ. ನೀಡಬೇಕು. ಪ್ರತಿ ತಿಂಗಳು ನೀಡುವ ಸಾದಿಲ್ವಾರು ವೆಚ್ಚವನ್ನು 300 ರೂ. ಹೆಚ್ಚುವರಿಯಾಗಿ ನೀಡಬೇಕು. ಇತರ ಇಲಾಖೆಯಲ್ಲಿರುವಂತೆ ಸಮಾನ ವಿದ್ಯಾರ್ಹತೆ ಹೊಂದಿರುವ ಇಲಾಖೆ ನೌಕರರಿಗೆ ವೇತನ ಶ್ರೇಣಿ ನೀಡಬೇಕು ಎಂದು ಒತ್ತಾಯಿಸಿದರು.

ಮಾರ್ಗದರ್ಶಕ ಜಿ.ಎನ್‌. ಪಾಟೀಲ ಮಾತನಾಡಿ, ಇಲಾಖೆಯಲ್ಲಿ ಖಾಲಿಯಿರುವ ಕಾರ್ಯ ನಿರ್ವಾಹಕ ಹುದ್ದೆಗಳಿಗೆ ಕೂಡಲೇ ಮುಂಬಡ್ತಿ ನೀಡಿ ಭರ್ತಿ ಮಾಡಬೇಕು. ರ್‍ಯಾಂಕಿಂಗ್‌ ಆಧಾರದ ಮೇಲೆ ನೌಕರರ ವರ್ಗಾವಣೆ ಮಾಡುತ್ತಿರುವುದನ್ನು ಕೈ ಬಿಡಬೇಕು. ಪರ್ಯಾಯ ವೇತನ ಹಾಗೂ ಅಧೀಕ್ಷಕ ಹುದ್ದೆಗಳಿಗೆ ಶೇ. 100 ಮುಂಬಡ್ತಿ ನೀಡಿ ಭರ್ತಿ ಮಾಡಬೇಕು ಎಂದು ಆಗ್ರಹಿಸಿದರು.

ಆ. 31ರವರೆಗೆ ಕಪ್ಪು ಬ್ಯಾಡ್ಜ್ ಧರಿಸಿ ಸಾಂಕೇತಿಕವಾಗಿ ಪ್ರತಿಭಟನೆ ಮಾಡುತ್ತ ಕರ್ತವ್ಯ ನಿರ್ವಹಿಸಲಾಗುವುದು. ಸರ್ವೇ ಸೆಟಲ್ಮೆಂಟ್ ಆಯುಕ್ತರು ಮತ್ತು ಸರ್ಕಾರದ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಈ ಮೂಲಕ ಮನವಿ ಮಾಡಲಾಗುತ್ತಿದ್ದು, ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು. ಒಂದು ವೇಳೆ ಮನವಿಗೆ ಸ್ಪಂದಿಸದಿದ್ದರೆ ಸೆ. 4ರಂದು ಬೆಂಗಳೂರು ಚಲೋ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ಭೂ ಮಾಪಕ ನೌಕರರ ಸಂಘದ ತಾಲೂಕು ಗೌರವಾಧ್ಯಕ್ಷ ಎಸ್‌.ಎಂ. ಬಳುಂಡಗಿ, ಪ್ರಧಾನ ಕಾರ್ಯದರ್ಶಿ ಎಸ್‌.ಆರ್‌. ಕೋಟೂರ, ಉಪಾಧ್ಯಕ್ಷೆ ಅಪರ್ಣಾ ಹಜೇರಿ, ಖಜಾಂಚಿ ಪ್ರಶಾಂತ ಘನಾತೆ, ತಪಾಸಕ ವಿ.ವೈ. ಹಳ್ಳಿ ಸೇರಿದಂತೆ ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.