ಪುರಸಭೆ ವಿರುದ್ಧ ಜನರ ಆಕ್ರೋಶ

ಸಾರ್ವಜನಿಕ ಸಮಸ್ಯೆಗೆ ಸ್ಪಂದಿಸದ ಅಧಿಕಾರಿಗಳ ಕಾರ್ಯವೈಖರಿಗೆ ಅಸಮಾಧಾನ

Team Udayavani, Jun 24, 2019, 4:01 PM IST

24-June-34

ಸಿಂದಗಿ: ನಗರ ಸುಧಾರಣಾ ಸಮಿತಿ ಮತ್ತು ವಿವಿಧ ಸಂಘಟನೆಗಳ ಕಾರ್ಯಕರ್ತರು ತಹಶೀಲ್ದಾರ್‌ ಬಸವರಾಜ ಕಡಕಭಾವಿ ಅವರಿಗೆ ಮನವಿ ಸಲ್ಲಿಸಿದರು

ಸಿಂದಗಿ: ಪಟ್ಟಣದ ಅಭಿವೃದ್ಧಿ ವಿಷಯದಲ್ಲಿ ವಿವಿಧ ಯೋಜನೆಗಳು ಹಳ್ಳ ಹಿಡಿದಿವೆ. ಹೀಗಾಗಿ ಪಟ್ಟಣ ಅಭಿವೃದ್ಧಿಯಿಂದ ಹಿಂದೆ ಸರಿಯುತ್ತಿದೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಕ್ಷೇತ್ರವಾದರೂ ಅಧಿಕಾರಿಗಳು ನಿರಾಸಕ್ತರಾಗಿದ್ದಾರೆ ಎಂದು ಆರೋಪಿಸಿ ಪಟ್ಟಣದ ನಗರ ಸುಧಾರಣಾ ಸಮಿತಿ ಮತ್ತು ವಿವಿಧ ಸಂಘಟನೆಗಳ ಸಹಯೋಗದಲ್ಲಿ ತಹಶೀಲ್ದಾರ್‌ ಬಸವರಾಜ ಕಡಕಭಾವಿ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ನಗರ ಸುಧಾರಣಾ ಸಮಿತಿ ಮುಖ್ಯಸ್ಥ ಅಶೋಕ ಅಲ್ಲಾಪುರ ಮಾತನಾಡಿ, ಪಟ್ಟಣದ ಪುರಸಭೆ ಕರ ವಸೂಲಾತಿಯಲ್ಲಿ ಪ್ರತಿಶತ 98ರಷ್ಟಾಗಿದ್ದರು ಸಹ ಸೌಲಭ್ಯಗಳಲ್ಲಿ ಸಂಪೂರ್ಣ ಹದಗೆಟ್ಟಿದೆ. ಮುಖ್ಯಾಧಿಕಾರಿ ಮತ್ತು ಅಧಿಕಾರಿ ವರ್ಗ ಸಾರ್ವಜನಿಕರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದಾರೆ. ಪಟ್ಟಣದಲ್ಲಿ ನೀರಿನ ಹಾಹಾಕಾರ ಎದ್ದರು ಕೂಡಾ ಪುರಸಭೆ ಸಂಪೂರ್ಣ ಮೌನವಾಗಿದೆ ಎಂದು ಆರೋಪಿಸಿದರು.

ಪಟ್ಟಣದ 23 ವಾರ್ಡ್‌ಗಳಲ್ಲಿ ನೀರು, ರಸ್ತೆ, ವಿದ್ಯುತ್‌ ದೀಪ, ಚರಂಡಿ ವ್ಯವಸ್ಥೆ ಸೇರಿದಂತೆ ಅನೇಕ ಸಮಸ್ಯೆಗಳು ಉಲ್ಬಣವಾಗಿದ್ದರೂ ಸಹ ಸಮಸ್ಯೆಗಳಾಗಿಯೆ ಉಳಿದಿವೆ. ಇದೊಂದು ಕನಿಷ್ಠ ಪುರಸಭೆಯಾಗಿದೆ. ಪ್ರಸ್ತುತ ಪುರಸಭೆ ಉಪ ವಿಭಾಗಾಧಿಕಾರಿ ಆಡಳಿತದಲ್ಲಿದೆ. ಅಧಿಕಾರಿ ವರ್ಗ ಪುರಸಭೆಯ ಸಿಬ್ಬಂದಿಯವರ ಸಭೆ ಕರೆದು ಸೂಕ್ತ ಮಾರ್ಗದರ್ಶನ ನೀಡಿ ಸಮಸ್ಯೆಗೆ ಪರಿಹಾರವನ್ನು ಕಂಡುಕೊಳ್ಳಬೇಕು. ಇಲ್ಲದಿದ್ದಲ್ಲಿ ಪುರಸಭೆಗೆ ಬೀಗ ಜಡಿದು ಪ್ರತಿಭಟಿಸುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಸಿದರು.

ಚೇತನ ಗುತ್ತೇದಾರ ಮಾತನಾಡಿ, ಪುರಸಭೆಯಲ್ಲಿ ಆಸ್ತಿದಾರರು ಮರೆತು ಕುಳಿತರೆ 2 ತಿಂಗಳಲ್ಲಿ ಅಸ್ತಿಯೇ ಬೇರೆಯವರ ಹೆಸರಿನಲ್ಲಿ ಬದಲಾವಣೆಯಾಗುವುದು ಅಚ್ಚರಿಯಿಲ್ಲ. ಇದು ಪುರಸಭೆ ಸಿಬ್ಬಂದಿಯ ಕಾರ್ಯ ವೈಖರಿಯಾಗಿದೆ. ಪ್ರತಿಯೊಂದಕ್ಕೂ ಲಂಚ ನೀಡಿದರೆ ಮಾತ್ರ ನಮ್ಮ ದಾಖಲೆಗಳು ದೊರೆಯುತ್ತವೆ ಇಲ್ಲದಿದ್ದರೆ ಅಲೆದಾಡುವುದು ಸಹಜವಾಗಿದೆ. ಇದಕ್ಕೆ ಹೇಳುವವರು ಕೇಳುವವರು ಇಲ್ಲದಂತಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರ ಕ್ಷೇತ್ರದಲ್ಲೇ ಈ ರೀತಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಇದಕ್ಕೆ ಸಂಬಂಧಿಸಿದ ಅಧಿಕಾರಿಗಳು ಎಚ್ಚೆತ್ತುಕೊಂಡು ಕಾರ್ಯಪ್ರವೃತ್ತರಾಗಬೇಕಾಗಿದೆ ಎಂದರು.

ಬಿ.ಎಸ್‌. ಹಣಮಶೆಟ್ಟಿ, ಶಿವಶರಣ ಹೆಗ್ಗಣದೊಡ್ಡಿ, ಎ.ಸಿ. ಜೋಷಿ, ಜೆ.ಬಿ. ಕುಲಕರ್ಣಿ, ಬಿ.ಟಿ. ಕುಲಕರ್ಣಿ, ಎಸ್‌.ಎಂ. ರಾಮಾಗೋಳ, ಎ.ಎಸ್‌. ಉಪ್ಪಾರ, ವಿ.ಜಿ. ಪೋತದಾರ, ಬಿ.ಎಸ್‌. ಗಾಳಿ, ಎಸ್‌.ಎಂ. ಯಳಮೇಲಿ, ಎಸ್‌.ಬಿ. ಕೋಟಿಕಾನೆ, ಶಿವಾನಂದ ತಾವರಖೇಡ, ನಾಗರಾಜ ಬಿರಾದಾರ, ಅಮೋಘಿ ಪೂಜಾರಿ, ಯಲ್ಲು ಪುರದಾಳ ಇದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.