ಸಿಂದಗಿ ಮಾರ್ಕೆಟ್ ಸಂಪೂರ್ಣ ಬಂದ್‌

•ಸುಸಜ್ಜಿತ ಮಾರುಕಟ್ಟೆ ನಿರ್ಮಾಣಕ್ಕೆ ಆಗ್ರಹಿಸಿ ವ್ಯಾಪಾರಸ್ಥರಿಂದ ಅನಿರ್ದಿಷ್ಟಾವಧಿ ಧರಣಿ

Team Udayavani, Jul 21, 2019, 10:23 AM IST

21-July-8

ಸಿಂದಗಿ: ಸುಸಜ್ಜಿತ ಮಾರುಕಟ್ಟೆ ನಿರ್ಮಾಣಕ್ಕೆ ಆಗ್ರಹಿಸಿ ಕಾಯಿಪಲ್ಲೆ-ಹಣ್ಣು ಮಾರಾಟಗಾರರು ಅನಿರ್ದಿಷ್ಟ ಅವಧಿವರೆಗೆ ಧರಣಿ ಕುಳಿತಿದ್ದಾರೆ.

ಸಿಂದಗಿ: ಪಟ್ಟಣದಲ್ಲಿ ಕಾಯಿಪಲ್ಲೆ, ಹಣ್ಣು ಮಾರಾಟ ಮಾಡಲು ಸೂಕ್ತ ಮಾರುಕಟ್ಟೆ ಒದಗಿಸಬೇಕು ಎಂದು ಸ್ಥಳೀಯ ಡಾ| ಎ.ಪಿ.ಜೆ. ಅಬ್ದುಲ್ ಕಲಾಂ ತರಕಾರಿ ಮತ್ತು ಹಣ್ಣು ಹಂಪಲು ವ್ಯಾಪಾರಸ್ಥರ ಕ್ಷೇಮಾಭಿವೃದ್ಧಿ ಸಂಘದಿಂದ ಭಾಗವಾನರು ಹಾಗೂ ಮಾರಾಟಗಾರರು ಶನಿವಾರ ಪಟ್ಟಣದ ತಹಶೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರರು ತಮ್ಮ ಕಾಯಿಪಲ್ಲೆ, ಹಣ್ಣು ಮಾರಾಟ ಸಂಪೂರ್ಣ ಬಂದ್‌ ಮಾಡಿ ಪಟ್ಟಣದ ಟಿಪ್ಪು ಸುಲ್ತಾನ್‌ ವೃತ್ತದಿಂದ ಸ್ವಾಮಿ ವಿವೇಕಾನಂದ ವೃತ್ತದ ಮಾರ್ಗವಾಗಿ ತಹಶೀಲ್ದಾರ್‌ ಕಚೇರಿವರೆಗೆ ಪ್ರತಿಭಟನಾ ರ್ಯಾಲಿ ನಡೆಸಿದರು.

ಪ್ರತಿಭಟನಾಕಾರರು ತಹಶೀಲ್ದಾರ್‌ ಬಸವರಾಜ ಕಡಕಬಾವಿ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿ ಶೀಘ್ರದಲ್ಲಿ ಸುಸಜ್ಜಿತ ಕಾಯಿಪಲ್ಲೆ, ಹಣ್ಣು ಮಾರಾಟ ಮಾರುಕಟ್ಟೆ ನಿರ್ಮಾಣ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

ಪುರಸಭೆ ಮಾಜಿ ಸದಸ್ಯ ಇಕ್ಬಾಲ್ ತಲಕಾರಿ ಮಾತನಾಡಿ, ಪಟ್ಟಣದಲ್ಲಿ ಕಾಯಿಪಲ್ಲೆ ಮತ್ತು ಹಣ್ಣು ಮಾರಾಟ ಮಾಡುವವರಿಗೆ ಪಟ್ಟಣದ ಬಸ್‌ ನಿಲ್ದಾಣದ ಎದುರಿನಲ್ಲಿನ ಹಳೆ ಪ್ರವಾಸಿ ಮಂದಿರದದ ಸ್ಥಳದಲ್ಲಿ ಅಥವಾ ಈಗ ಖಾಲಿ ಇರುವ ಹಳೆ ತಹಶೀಲ್ದಾರ್‌ ಕಚೇರಿ ಆವರಣದಲ್ಲಿ ಸುಸಜ್ಜಿತ ಮತ್ತು ಸೂಕ್ತ ಮಾರುಕಟ್ಟೆ ನಿರ್ಮಾಣ ಮಾಡಿ ಕೊಡಿ ಎಂದು ಬಹು ದಿನಗಳಿಂದ ಹಿಂದಿನ ಶಾಸಕರಿಗೆ, ಸಚಿವ ಎಂ.ಸಿ. ಮನಗೂಳಿ ಅವರಿಗೆ, ಜಿಲ್ಲಾಧಿಕಾರಿ, ತಹಶೀಲ್ದಾರ್‌ ಹಾಗೂ ಪುರಸಭೆ ಮುಖ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿತ್ತು. ಆದರೆ ಯಾವುದೇ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದರು.

ಪಟ್ಟಣದ ಬಸ್‌ ನಿಲ್ದಾಣದ ಹತ್ತಿರ ಹಣ್ಣು ಮಾರಾಟ ಮತ್ತು ಟಿಪ್ಪು ಸುಲ್ತಾನ್‌ ವೃತ್ತದಿಂದ ಪುರಸಭೆ ಹತ್ತಿರದ ಭೀಮಾಶಂಕರ ಮಠದವರೆಗಿನ ರಸ್ತೆ ಬದಿಗಳಲ್ಲಿ ಕಾಯಿಪಲ್ಲೆ ಮಾರಾಟ ಮಾಡಲಾಗುತ್ತಿದೆ. ಅಲ್ಲದೇ ಈ ರಸ್ತೆ ಮಾರ್ಗದಲ್ಲಿ ಮಟನ್‌ ಮಾರುಕಟ್ಟೆ ಇದೆ. ಇದರಿಂದ ಮತ್ತು ಪುರಸಭೆ ಎದುರಿನಲ್ಲಿನ ದೊಡ್ಡ ಗಟಾರ್‌ ನೀರಿನಿಂದ ಕಾಯಿಪಲ್ಲೆ ಮಾರಾಟ ಮಾಡಲು ತೊಂದರೆಯಾಗುತ್ತಿದೆ ಎಂದು ಸಮಸ್ಯೆ ತೋಡಿಕೊಂಡರು.

ಪ್ರತಿವರ್ಷ ಮಾರಾಟಗಾರರಿಂದ 8ರಿಂದ 10 ಲಕ್ಷ ರೂ. ಪುರಸಭೆಗೆ ಆದಾಯವಿದೆ. ಆದರೆ ಮಾರುಕಟ್ಟೆ ನಿರ್ಮಾಣಕ್ಕಾಗಿ ಪುರಸಭೆ ಆಡಳಿತ ಮತ್ತು ಅಧಿಕಾರಿಗಳು ಸಹಕಾರ ನೀಡುತ್ತಿಲ್ಲ. ಜು. 21ರಂದು ರವಿವಾರ ಸಂತೆ ಕೂಡಾ ಬಂದ್‌ ಇರುತ್ತದೆ. ರೈತರು, ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿಕೊಂಡರು.

ಹೋರಾಟಕ್ಕೆ ಬೆಂಬಲಿಸಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕಿರಾಣಿ ವರ್ತಕರ ಸಂಘದ ಅಧ್ಯಕ್ಷ ಅಶೋಕ ವಾರದ, ಪಿಕೆಪಿಎಸ್‌ ಅಧ್ಯಕ್ಷ ಶಾಂತು ಬಿರಾದಾರ ಮಾತನಾಡಿದರು. ಅಧ್ಯಕ್ಷ ಸೈಫನ್‌ ನಾಟೀಕಾರ, ಉಪಾಧ್ಯಕ್ಷ ಹಾಜಿಗುಲಾಬಸಾಬ ಮರ್ತೂರ, ಬಸೀರಸಾಬ ಮರ್ತೂರ, ಬಂದೇನವಾಜ ಶಾಪುರ, ರಾಜು ಖೇಡ, ಮಹೀಬುಬಸಾಬ ಅಳ್ಳೋಳ್ಳಿ ಹಮಿದಾ ಅಳ್ಳೊಳ್ಳಿ, ಜೈಪುನ್‌ ಬಮ್ಮನಜೋಗಿ, ಖಾಜಾಮಾ ಮರ್ತೂರ, ಮಹಾದೇವಿ ಮನ್ನಾಪುರ, ಗುರುತಾಯಿ ಹಿರೇಮಠ ಸೇರಿದಂತೆ ಕಾಯಿಪಲ್ಲೆ ಮತ್ತು ಹಣ್ಣು ಮಾರಾಟಗಾರರು, ಬಾಗವಾನರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

Online Bitcoin Gambling Enterprises: An Overview to Betting with Cryptocurrency

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.