ಆನೆಶಂಕರ ದೇಗುಲಕ್ಕೆ ಬೇಕಿದೆ ಕಾಯಕಲ್ಪ

ಕ್ರಿ.ಶ. 1528ರಲ್ಲಿ ನಿರ್ಮಿಸಿದ ದೇವಸ್ಥಾನ • ಪುರಾತನ ಬಾವಿಗೆ ಬೇಕು ಪುನರುಜ್ಜೀವನ

Team Udayavani, Aug 12, 2019, 10:47 AM IST

12-Agust-7

ಸಿಂಧನೂರು: ಸಾಲಗುಂದಾದಲ್ಲಿ ಐತಿಹಾಸಿಕ ಪ್ರಸಿದ್ಧಿ ಹೊಂದಿದ ಆನೆಶಂಕರ ದೇವಸ್ಥಾನ.

ಚಂದ್ರಶೇಖರ ಯರದಿಹಾಳ
ಸಿಂಧನೂರು:
ತಾಲೂಕಿನ ಸಾಲಗುಂದಾ ಗ್ರಾಮದ ಚಿಕ್ಕಗುಡ್ಡದಲ್ಲಿರುವ ಐತಿಹಾಸಿಕ ಆನೆಶಂಕರ ದೇವಸ್ಥಾನಕ್ಕೆ ಪಾಳು ಬಿದ್ದಿದ್ದು ಕಾಯಕಲ್ಪ ನೀಡುವ ಕೆಲಸವಾಗಬೇಕಿದೆ.

ಆನೆಶಂಕರ ದೇವಸ್ಥಾನ ಐತಿಹಾಸಿಕ ಪ್ರಸಿದ್ಧಿ ಹೊಂದಿದೆ. ಇದನ್ನು ಕ್ರಿ.ಶ.1528ರಲ್ಲಿ ಇಟ್ಟಂಗಿ, ಗಚ್ಚು, ಬೆಣಚು ಕಲ್ಲುಗಳಿಂದ ನಿರ್ಮಿಸಲಾಗಿದೆ. ದಶಕಗಳ ಹಿಂದೆ ಉತ್ತಮ ಸ್ಥಿತಿಯಲ್ಲಿದ್ದ ಕಟ್ಟಡವು ಕಳೆದ ಕೆಲವು ವರ್ಷಗಳಿಂದ ಪಾಳು ಬಿದ್ದಿದೆ. ಬಾವಿ ಕುಸಿಯತೊಡಗಿದೆ. ಪ್ರಾಚ್ಯವಸ್ತು ಇಲಾಖೆಯವರೂ ಸಹ ಇದರಕಡೆಗೆ ಗಮನ ಹರಿಸುತ್ತಿಲ್ಲ. ಗ್ರಾಮದ ಜನರು ಹಾಗೂ ತಾಲೂಕಿನ ಜನಪ್ರತಿನಿಧಿಗಳು ಈ ಬಗ್ಗೆ ಕಾಳಜಿ ವಹಿಸುತ್ತಿಲ್ಲ.

ಕಡಿದಾದ ಹೆಬ್ಬಂಡೆಯ ಮೇಲೆ ದೇವಸ್ಥಾನ ನಿರ್ಮಿಸಲಾಗಿದೆ. ವಿಜಯನಗರದ ಕೃಷ್ಣದೇವರಾಯ ಆಡಳಿತದಲ್ಲಿ ಅಬ್ಬರಾವು ಎನ್ನುವವರು ಮಾವನವರಾದ ಅಯ್ಯನಿಗೆ ಪುಣ್ಯ ಸಂಚಯವಾಗಲಿ ಎಂದು ಪ್ರಾರ್ಥಿಸಿ ನಿರ್ಮಿಸಿದ ದೇವಸ್ಥಾನ ಇದಾಗಿದೆ ಎಂದು ಗ್ರಾಮದ ಹಿರಿಯರು ಹೇಳುತ್ತಾರೆ. ಯಾವುದೇ ವ್ಯವಸ್ಥೆಗೆ ಒಳಪಡದ ದೇವಸ್ಥಾನವು ತಿರುಮಲ ವೆಂಕಟೇಶ್ವರ ದೇವಾಲಯವಾಗಿತ್ತು. ನಂತರದಲ್ಲಿ ಆನೆಶಂಕರ ದೇವಾಲಯವಾಗಿದ್ದು ಲಿಂಗ ಪ್ರತಿಷ್ಠಾಪಿಸಲಾಗಿದೆ.

ಮುಕ್ಕುಂದ ನದಿ ತೀರದ ಪಾಪನಾಶೇಶ್ವರ ದೇವಾಲಯದಂತೆ ಇದು ಕೂಡ ಸಣ್ಣಪೆಟ್ಟಿಗೆಯಂತೆ ಇದೆ. ಸರಳವಾಗಿ ನಿರ್ಮಿಸಿದ ದೇವಾಲಯಕ್ಕೆ ಗರ್ಭಗೃಹ ತೊರೆದ ಸುಕನಾಶಿ, ನವರಂಗಗಳಿಗೆ ನಾಲ್ಕು ಚಪ್ಪಟೆಯಾದ ಕಂಬಗಳನ್ನು ಬಳಸಲಾಗಿದೆ. ಇದರ ಸುತ್ತಲೂ ಸುಂದರವಾದ ಗೋಡೆ, ಕಂಬಗಳಿವೆ. ಗೋಪುರವಿಲ್ಲದ ದೇವಾಲಯ ಚೌಕಾಕಾರದ ಕಂಬಗಳ ರಚನೆ ಇದೆ.

ಪುರಾತನ ಬಾವಿ: ನೀಲಕಂಠೇಶ್ವರ ದೇವಸ್ಥಾನ ಮುಂಭಾಗದಲ್ಲಿರುವ ಬಹಳ ವರ್ಷದ ಹಿಂದಿನ ಕಾಲದಿಂದಿರುವ ಜಕ್ಕಮ್ಮನ ಬಾವಿ ಕೂಡ ಐತಿಹಾಸಿಕ ಪ್ರಸಿದ್ದಿ ಹೊಂದಿದೆ. ಎಂತಹ ಬರಗಾಲ ಬಂದರೂ ಬಾವಿಯಲ್ಲಿ ಸದಾ ನೀರು ಬರುತ್ತಿತ್ತು. ಇತ್ತೀಚಿನ ದಿನಗಳಲ್ಲಿ ಬಾವಿ ಜೀರ್ಣೋದ್ಧಾರ ಕಾರ್ಯವಾಗಿದ್ದು, ಕಾಂಪೌಂಡ್‌ ಕಾಮಗಾರಿ ಅರ್ಧಕ್ಕೆ ನಿಂತಿದೆ. ಬಾವಿಯ ನೀರಿನಿಂದಲೇ ದೇವಸ್ಥಾನದಲ್ಲಿ ಪೂಜಾ ಕಾರ್ಯಗಳು ನಡೆಯುತ್ತಿದ್ದವು. ಇಂತಹ ಇತಿಹಾಸ ಹೊಂದಿದ ದೇವಸ್ಥಾನದ ಬಗ್ಗೆ ಸಂಬಂಧಪಟ್ಟ ಇಲಾಖೆಯವರು ಮತ್ತು ಜನಪ್ರತಿನಿಧಿಗಳು ಗಮನಹರಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.