ಸಾಹಿತ್ಯ ಸಮ್ಮೇಳನ ಸಿದ್ಧತೆ ಪೂರ್ಣ

ನಾಳೆಯಿಂದ ಸಿಂಧನೂರು ಕಮ್ಮವಾರಿ ಕಲ್ಯಾಣ ಮಂಟಪದಲ್ಲಿ ನುಡಿ ಹಬ್ಬ

Team Udayavani, Oct 21, 2019, 2:26 PM IST

Udayavani Kannada Newspaper

ಸಿಂಧನೂರು: ನಗರದ ಯಲಿಮಂಚಾಲಿ ವಾಸುದೇವರಾವ್‌ ಕಮ್ಮವಾರಿ ಕಲ್ಯಾಣ ಮಂಟಪದಲ್ಲಿ ಆ.22, 23ರಂದು ನಡೆಯಲಿರುವ ರಾಯಚೂರು ಜಿಲ್ಲಾ 10ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಿದ್ಧತಾ ಕಾರ್ಯಗಳು ಪೂರ್ಣಗೊಂಡಿವೆ ಎಂದು ಸ್ವಾಗತ ಸಮಿತಿ ಅಧ್ಯಕ್ಷ, ಶಾಸಕ ವೆಂಕಟರಾವ್‌ ನಾಡಗೌಡ ಹೇಳಿದರು.

ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ನಡೆದ ವಿವಿಧ ಉಪ ಸಮಿತಿಗಳ ಕಾರ್ಯ ಪ್ರಗತಿ ಪರಿಶೀಲನೆ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಮ್ಮೇಳನ ವೇದಿಕೆ, ಆಹಾರ, ಸಾಂಸ್ಕೃತಿಕ, ಮೆರವಣಿಗೆ, ವಸತಿ, ಪ್ರಚಾರ, ಶಿಸ್ತು, ಸಂಪರ್ಕ ಮತ್ತಿತರ ಸಮಿತಿಗಳ ಅಧ್ಯಕ್ಷರು ತಮ್ಮ ತಮ್ಮ ಕಾರ್ಯದ ಪ್ರಗತಿಯನ್ನು ಸಭೆಗೆ ವಿವರಿಸಿದರು.

ತಾಲೂಕು ಕಸಾಪ ಅಧ್ಯಕ್ಷೆ ಸರಸ್ವತಿ ಪಾಟೀಲ ಮಾತನಾಡಿ, ಈಗಾಗಲೇ ಜಿಲ್ಲಾದ್ಯಂತ ಸಮ್ಮೇಳನದ ಕುರಿತು ಪ್ರಚಾರ ಮಾಡಲಾಗಿದೆ. ಹಾಗೆಯೇ ಸಿಂಧನೂರು ತಾಲೂಕಿನ ಹಲವಾರು ಹಳ್ಳಿಗಳಿಗೆ ಸಮ್ಮೇಳನಕ್ಕೆ ಸಿದ್ಧಪಡಿಸಲಾದ ಪ್ರಚಾರ ರಥದ ಮೂಲಕ ಸಾರ್ವಜನಿಕರಿಗೆ ಮಾಹಿತಿ ನೀಡಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸಾಹಿತ್ಯ ಪರಿಷತ್ತಿನ ಜಿಲ್ಲಾ ಮತ್ತು ತಾಲೂಕು ಘಟಕಗಳ ಅಧ್ಯಕ್ಷರಿಂದ ಸಮ್ಮೇಳನಕ್ಕೆ ಆಗಮಿಸುವಂತೆ ಸಾಹಿತ್ಯಾಸಕ್ತರಲ್ಲಿ ಮನವಿ ಮಾಡಿಕೊಳ್ಳಲಾಗಿದೆ ಎಂದು ವಿವರಿಸಿದರು.

ಕಸಾಪ ಜಿಲ್ಲಾಧ್ಯಕ್ಷ ಬಸವಪ್ರಭು ಪಾಟೀಲ ಬೆಟ್ಟದೂರು ಮಾತನಾಡಿ, ಬೆಳಗ್ಗೆ 11 ಗಂಟೆಯೊಳಗೆ ಮೆರವಣಿಗೆ ಮುಗಿಸಿದರೆ, ಸಮ್ಮೇಳನ ಗೋಷ್ಠಿಗಳಿಗೆ ಸಮಯಾವಕಾಶ ಸಿಗುತ್ತದೆ. ಆದ್ದರಿಂದ ಮೆರವಣಿಗೆ ಸಮಿತಿ ಪದಾ ಧಿಕಾರಿಗಳು ಮುಂಜಾಗ್ರತೆ ವಹಿಸಬೇಕು ಎಂದು ಹೇಳಿದರು.

ಸ್ವಾಗತ ಸಮಿತಿ ಸಂಚಾಲಕ ದೇವೇಂದ್ರಗೌಡ ಮಾತನಾಡಿ, ಜಿಲ್ಲೆಯ ಭಾಷೆ, ಸಂಸ್ಕೃತಿ ಮತ್ತು ಸಮಾಜ ಸೇವೆ ಸಲ್ಲಿಸಿ ಮಡಿದ ಮಹನೀಯರ ಹೆಸರಿನಲ್ಲಿ ವೇದಿಕೆ ಬಳಿ ಸುಮಾರು 23 ದ್ವಾರಗಳನ್ನು ನಿರ್ಮಿಸಲಾಗಿದೆ ಎಂದು ವಿವರಿಸಿದರು. ವೇದಿಕೆ ಸಿದ್ಧತೆ ಕುರಿತು ಶಿವಕುಮಾರ ಜವಳಿ ಸಭೆ ಗಮನ ಸೆಳೆದರು. ಆಹಾರ ಸಮಿತಿ ಸತ್ಯಪ್ಪಗೌಡ ವಳಬಳ್ಳಾರಿ ಮಾತನಾಡಿ, ಊಟಕ್ಕೆ ರೊಟ್ಟಿ, ಚಪಾತಿ, ಗೋ ದಿ ಹುಗ್ಗಿ, ಪಾಯಸ, ಹೆಸರು ಬೇಳೆ ಪಾಯಸ, ಮುಳ್ಳಗಾಯಿ ಪಲ್ಯ, ಹೆಸರು ಕಾಳು, ಗುರೆಳ್ಳು ಚಟ್ನಿ, ಕೆಂಪು ಮೆಣಸಿನಕಾಯಿ ಚೆಟ್ನಿ, ಚಿತ್ರಾನ್ನ, ಮಜ್ಜಿಗೆ ವ್ಯವಸ್ಥೆ ಮಾಡಲಾಗಿದೆ. 22, 23ರಂದು ಬೆಳಗ್ಗೆ ಉಪಹಾರ ನೀಡಲಾಗುತ್ತಿದೆ ಎಂದು ಸಭೆ ಗಮನಕ್ಕೆ ತಂದರು.

ಊಟ, ಉಪಹಾರ ನೀಡಲು ಕೌಂಟರ್‌ ತೆರೆಯಲಾಗಿದ್ದು, ಎನ್‌ಎಸ್‌ಎಸ್‌ ವಿದ್ಯಾರ್ಥಿಗಳಿಗೆ ಜವಾಬ್ದಾರಿ ನೀಡಲಾಗಿದೆ. ಸರ್ಕಾರಿ ಪದವಿ ಪೂರ್ವ ಕಾಲೇಜ್‌ ಪ್ರಾಚಾರ್ಯ ಶಿವರಾಜ, ವನಸಿರಿ ಪೌಂಢೇಶನ್‌ ಅಧ್ಯಕ್ಷ ಅಮರೇಗೌಡ ಅವರಿಗೆ ಮೇಲ್ವಿಚಾರಣೆ ಮಾಡುವಂತೆ ತಿಳಿಸಲಾಯಿತು.

ಮಹಿಳೆಯರಿಗೆ ಊಟ, ಉಪಹಾರ ನೀಡಲು ಅಕ್ಕಮಹಾದೇವಿ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಮತ್ತು ದುದ್ದುಪುಡಿ ಕಾಲೇಜ್‌ ವಿದ್ಯಾರ್ಥಿನಿಯರಿಗೆ ಜವಾಬ್ದಾರಿ ವಹಿಸಿದ್ದು, ಆರ್‌.ಸಿ. ಪಾಟೀಲ ಅವರಿಗೆ ಮೇಲ್ವಿಚಾರಣೆ ಮಾಡುವಂತೆ ತಿಳಿಸಲಾಯಿತು. ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಒಕ್ಕೂಟ ಅಧ್ಯಕ್ಷ ನರೇಂದ್ರನಾಥ ಅವರು ಪ್ರವಾಸಿ ಮಂದಿರದಿಂದ ಕಲ್ಯಾಣ ಮಂಟಪಕ್ಕೆ ಸಾರ್ವಜನಿಕರನ್ನು ಕರೆದೊಯ್ಯಲು 20 ಬಸ್‌ಗಳನ್ನು ಬಿಡುವುದಾಗಿ ಭರವಸೆ ನೀಡಿದರು. ಆಟೋ, ಟ್ಯಾಕ್ಸಿ ಸಂಘದವರು ಸಾರ್ವಜನಿಕರನ್ನು ಉಚಿತವಾಗಿ ಸಮ್ಮೇಳನದ ಸಭಾಂಗಣಕ್ಕೆ ಕರೆತರಲು ಒಪ್ಪಿಕೊಂಡರು.

ಮಾಜಿ ಶಾಸಕ ಹಂಪನಗೌಡ ಬಾದರ್ಲಿ, ಕೃಷಿ ಬೆಲೆ ಆಯೋಗ ರಾಜ್ಯ ಅಧ್ಯಕ್ಷ ಹನುಮನಗೌಡ ಬೆಳಗುರ್ಕಿ, ಸಂಚಾಲಕ ಎಂ.ಲಿಂಗಪ್ಪ, ಕಾರ್ಯದರ್ಶಿ ಭೀಮನಗೌಡ ಇಟಗಿ, ಜೆ.ಎಲ್‌. ಈರಣ್ಣ, ಸೌಹಾರ್ದ ಸಹಕಾರಿಗಳ ಒಕ್ಕೂಟ ಅಧ್ಯಕ್ಷ ಲೋಕನಗೌಡ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಚಂದ್ರಶೇಖರ ಹಿರೇಮಠ, ಉಪಾಧ್ಯಕ್ಷ ಜಗದೀಶ ಓತೂರು, ಪ್ರಾಚಾರ್ಯ ವಿರುಪನಗೌಡ, ಬಸವರಾಜ ನಾಡಗೌಡ, ಹುಸೇನಪ್ಪ ಅಮರಾಪುರ, ಅರುಣಕುಮಾರ ಬೇರಿY,
ಗಿರಿಜಮ್ಮ ದಢೇಸುಗೂರು, ಬಸವರಾಜ ಯಲಬುರ್ಗಿ, ವೆಂಕನಗೌಡ ವಟಗಲ್‌, ಯಮನಪ್ಪ ಮಲ್ಲಾಪುರ ಇತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.