ಯಜ್ಞದಿಂದ ಲೋಕ ಕಲ್ಯಾಣ

ಶ್ರೀ ಸೋಮನಾಥ ಶಿವಾಚಾರ್ಯರ ದ್ವಾದಶ ಗುರು ಪಟ್ಟಾಧಿಕಾರ ಮಹೋತ್ಸವ

Team Udayavani, Jul 19, 2019, 3:13 PM IST

19-July-25

ಸಿಂಧನೂರು: ಕರಿಬಸವ ನಗರದ ಬಾಳೆಹೊನ್ನೂರು ರಂಭಾಪುರಿ ಶಾಖಾ ಮಠದಲ್ಲಿ ಶ್ರೀ ಸೋಮನಾಥ ಶಿವಾಚಾರ್ಯರ ದ್ವಾದಶ ಗುರು ಪಟ್ಟಾಧಿಕಾರ ಮಹೋತ್ಸವ ನಿಮಿತ್ತ ದಂಪತಿಗಳಿಂದ ಕೋಟಿ ಜಪಯಜ್ಞ ಕಾರ್ಯಕ್ರಮ ನಡೆಯಿತು.

ಸಿಂಧನೂರು: ಕೋಟಿ ಜಪ ಯಜ್ಞ, ಯಾಗಾದಿಗಳಂತಹ ಧಾರ್ಮಿಕ ಕಾರ್ಯಕ್ರಮಗಳಿಂದ ಲೋಕ ಕಲ್ಯಾಣವಾಗುತ್ತದೆ ಎಂದು ಇಲ್ಲಿನ ಬಾಳೆಹೊನ್ನೂರು ರಂಭಾಪುರಿ ಖಾಸಾ ಶಾಖಾ ಮಠದ ಶ್ರೀ ಸೋಮನಾಥ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಸ್ಥಳೀಯ ಕರಿಬಸವ ನಗರದ ಶ್ರೀಮಠದಲ್ಲಿ ದ್ವಾದಶ ಗುರು ಪಟ್ಟಾಧಿಕಾರ ಮಹೋತ್ಸವ ಅಂಗವಾಗಿ ಗುರುವಾರ ವಿಶ್ವಶಾಂತಿ, ಲೋಕ ಕಲ್ಯಾಣಾರ್ಥ ಮತ್ತು ಮಳೆ ಬೆಳೆ ಸಮೃದ್ಧಿಗಾಗಿ ಹಮ್ಮಿಕೊಂಡ ದಂಪತಿಗಳಿಂದ ಪಂಚಾಕ್ಷರಿ ಮಂತ್ರ, ಕೋಟಿ ಜಪಯಜ್ಞ ಕಾರ್ಯಕ್ರಮದ ಸಾನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.

ವಿವಿಧ ರೀತಿಯ ಯಜ್ಞಗಳನ್ನು ಮಾಡುವುದರಿಂದ ಮನುಷ್ಯನ ಮನಸ್ಸು ಸರಳತೆ ಕಡೆಗೆ ಹೋಗುತ್ತದೆ. ಮಳೆ, ಬೆಳೆ ಸಮೃದ್ಧಿ ಆಗುತ್ತದೆ. ದಂಪತಿಗಳು ಸುಖಕರ ಜೀವನ ಸಾಗಿಸಲು, ಯುವಕರಲ್ಲಿ ಬುದ್ಧಿಶಕ್ತಿ ಹೆಚ್ಚಿಸುವ ಕೆಲಸ ಆಗುತ್ತದೆ. ಸಮಾಜದಲ್ಲಿ ಶಾಂತಿ, ಸೌಹಾರ್ದ ನೆಲೆಸುತ್ತದೆ ಎಂದರು.

ರೌಡಕುಂದದ ಶ್ರೀ ಮರಿ ಸಿದ್ಧಲಿಂಗ ಶಿವಾಚಾರ್ಯರು ಮಾತನಾಡಿ, ದೇಶದ ಸಂಸ್ಕೃತಿ ಉಳಿಸಿ ಬೆಳೆಸುವ ಕೆಲಸ ಪ್ರತಿಯೊಬ್ಬರಿಂದ ಆಗಬೇಕು. ಆಗ ಮಾತ್ರ ಸುಂದರ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗುತ್ತದೆ. ಆ ನಿಟ್ಟಿನಲ್ಲಿ ಸೋಮನಾಥ ಶಿವಾಚಾರ್ಯರು ಸಾಗುತ್ತಿದ್ದಾರೆ. ಅವರ ದ್ವಾದಶ ಗುರು ಪಟ್ಟಾಧಿಕಾರ ಮಹೋತ್ಸವ ಭಕ್ತರಿಂದ ಅದ್ಧೂರಿಯಾಗಿ ನಡೆಯುತ್ತಿದೆ. ಪ್ರತಿಯೊಬ್ಬರು ಗುರುಗಳನ್ನು ಗೌರವದಿಂದ ಕಾಣಬೇಕು. ಆಗ ಮಾತ್ರ ಜೀವನದಲ್ಲಿ ಬೆಳವಣಿಗೆ ಹಂತ ಮುಟ್ಟಲು ಸಾಧ್ಯವಾಗುತ್ತದೆ ಎಂದರು.

ಜೆಡಿಎಸ್‌ ವಕ್ತಾರ ಬಸವರಾಜ ನಾಡಗೌಡ ಮಾತನಾಡಿ, ಈ ಭಾಗದ ಎಲ್ಲ ಮಠಾಧಿಧೀಶರು ಭಾರತೀಯ ಸಂಸ್ಕೃತಿಯನ್ನು ಉಳಿಸುವ ಕೆಲಸ ಮಾಡುತ್ತಿದ್ದಾರೆ. ಇಂದಿನ ದಿನಗಳಲ್ಲಿ ಹಣವಿದ್ದೆಡೆಗೆ ಮಠಗಳು, ಮಠಾಧೀಶರು ಹೋಗುವವರೇ ಹೆಚ್ಚಾಗಿದ್ದಾರೆ. ಯಾವುದೇ ಆಸ್ತಿ ಆಕಾಂಕ್ಷೆ ಇಲ್ಲದ ಕಡೆಗೆ ಬರುವವರ ಸಂಖ್ಯೆ ಇಳಿಮುಖವಾಗಿದೆ. ಆದರೆ ಶ್ರೀ ಸೋಮನಾಥ ಶಿವಾಚಾರ್ಯರು ಸಮಾಜಮುಖೀ ಕಾರ್ಯ ಮಾಡುತ್ತ ಸಮಾಜದ ಆಸ್ತಿಯಾಗಿದ್ದಾರೆ ಎಂದು ಹೇಳಿದರು.

ನಂದಿಹಳ್ಳಿ ಶ್ರೀ ರೇವಣಸಿದ್ದೇಶ್ವರ ಶಿವಾಚಾರ್ಯರು, ಮಸ್ಕಿ ಗಚ್ಚಿನಮಠದ ಶ್ರೀ ವರರುದ್ರಮುನಿ ಸ್ವಾಮೀಜಿ, ತುರ್ವಿಹಾಳ ಅಮರಗುಂಡಯ್ಯ, ಕೆಂಬಾವಿಯ ಚನ್ನಬಸವ ಶಿವಾಚಾರ್ಯರು, ಕೊಪ್ಪಳ ಗವಿಮಠದ ಶ್ರೀ ಸಿದ್ಧಲಿಂಗ ದೇವರು, ಅನ್ನದಾನೇಶ್ವರ ಶಾಸ್ತ್ರಿಗಳು, ಜಮಖಂಡಿಯ ಶಿವಲಿಂಗ ಶಿವಾಚಾರ್ಯರು, ಮಂಜುನಾಥ ಸ್ವಾಮಿ, ಶಿವಮಣಿ ಶಿವಯೋಗಿ ಶಿವಾಚಾರ್ಯ, ಸಂಗಯ್ಯಸ್ವಾಮಿ, ಹಂಪಯ್ಯಸ್ವಾಮಿ ರಾವಿಹಾಳ ಇತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.