ವಿದ್ಯಾರ್ಥಿನಿ ಸಾವು-ನಿಷ್ಪಕ್ಷಪಾತ ತನಿಖೆಗೆ ಆಗ್ರಹ
ವಿವಿಧ ಸಂಘಟನೆಗಳಿಂದ ಪ್ರತಿಭಟನೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ-ಸಾಂತ್ವನ
Team Udayavani, Apr 20, 2019, 2:52 PM IST
ಸಿಂಧನೂರು: ನಗರದಲ್ಲಿ ದಲಿತ ಪ್ರಗತಿಪರ ಸಂಘಟನೆ ಒಕ್ಕೂಟದಿಂದ ಮಿನಿ ವಿಧಾನಸೌಧದಎದುರು ಪ್ರತಿಭಟನೆ ನಡೆಸಿ ತಹಶೀಲ್ದಾರ್ಗೆ ಮನವಿ ಸಲ್ಲಿಸಲಾಯಿತು.
ಸಿಂಧನೂರು: ರಾಯಚೂರಿನ ನವೋದಯ ಕಾಲೇಜಿನ ಎಂಜಿನಿಯರಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವಿನ ಪ್ರಕರಣ ನ್ಯಾಯಾಂಗ ತನಿಖೆಗೊಳಪಡಿಸಬೇಕು ಹಾಗೂ ಸಾವಿಗೆ ಕಾರಣರಾದ ದುಷ್ಕರ್ಮಿಗಳನ್ನು ಬಂಧಿಸುವಂತೆ ಆಗ್ರಹಿಸಿ ದಲಿತ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಶುಕ್ರವಾರ ಪ್ರತಿಭಟನೆ ನಡೆಸಿ ತಹಶೀಲ್ದಾರ್ಗೆ ಮನವಿ ಸಲ್ಲಿಸಲಾಯಿತು.
ಕರ್ನಾಟಕ ಕೋಮುಸೌಹಾರ್ದ ವೇದಿಕೆ ಸಂಚಾಲಕ ಸಮ್ಮದ್ ಚೌದ್ರಿ ಮಾತನಾಡಿ, ವಿದ್ಯಾರ್ಥಿನಿ ಅನುಮಾಸ್ಪದ ಸಾವಿನ ಪ್ರಕರಣ ಇಡೀ ರಾಜ್ಯಾದ್ಯಂತ ತಲ್ಲಣ ಮೂಡಿಸಿದೆ.
ಕಾಲೇಜಿನ ಹಿಂಭಾಗದ ಪ್ರದೇಶದಲ್ಲಿಯೇ ವಿದ್ಯಾರ್ಥಿನಿ ಮೃತದೇಹ ಸುಟ್ಟು ನೇಣಿಗೇರಿಸಿದ ಸ್ಥಿತಿಯಲ್ಲಿ ದೊರಕಿದ್ದು, ವಿದ್ಯಾರ್ಥಿನಿಯರು ಹಾಗೂ ಪಾಲಕರಲ್ಲಿ ಆತಂಕ ಹೆಚ್ಚಿಸಿದೆ. ದುಷ್ಕರ್ಮಿಗಳು ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದ್ದು ಈ ಘಟನೆ ನಾಗರಿಕ ಸಮಾಜ ತಲೆ ತಗ್ಗಿಸುವಂತೆ ಮಾಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸಿಐಟಿಯು ಜಿಲ್ಲಾ ಘಟಕದ ಕಾರ್ಯದರ್ಶಿ ಶೇಕ್ಷಾಖಾದ್ರಿ ಮಾತನಾಡಿ, ಈ ಹಿಂದೆ ಇಂತಹ ಹಲವಾರು ಘಟನೆಗಳು ನಡೆದಿದ್ದು, ಅವು ಮಾಸುವ ಮುನ್ನವೇ ಮತ್ತೊಂದು ಅಮಾನವೀಯ ಘಟನೆ ನಡೆದಿರುವುದು ವಿಷಾದನೀಯ ಎಂದರು.
ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವಿನ ಪ್ರಕರಣವನ್ನು ಪಾರದರ್ಶಕ ತನಿಖೆ ನಡೆಸಲು ಮುಂದಾಗಬೇಕಾದ ಪೊಲೀಸ್ ಇಲಾಖೆ ಅಧಿಕಾರಿಗಳು ನಾನಾ ಸಬೂಬು ಹೇಳುತ್ತಿರುವುದು ಸರಿಯಲ್ಲ. ಆರೋಪಿಗಳು ಎಷ್ಟೇ ಪ್ರಭಾವಿಗಳಾಗಿದ್ದರೂ ಶೀಘ್ರ ತನಿಖೆ ನಡೆಸಿ ಪತ್ತೆ ಹಚ್ಚಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು.
ನಿರ್ಲಕ್ಷ್ಯ ವಹಿಸಿದರೆ ಜಿಲ್ಲಾದ್ಯಂತ ಹೋರಾಟ ತೀವ್ರಗೊಳಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಎಸ್ಐಒ ತಾಲೂಕು ಘಟಕದ ಅಧ್ಯಕ್ಷ ಇಮ್ತಿಯಾಜ್,
ದಲಿತ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಮುಖಂಡರಾದ ಬಸವರಾಜ ಹಸಮಕಲ್, ಶಂಕರ ಗುರಿಕಾರ, ದುರುಗೇಶ, ಯಾಖೂಕ್ಅಲಿ, ರಶೀದ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ
Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!
MUST WATCH
ಹೊಸ ಸೇರ್ಪಡೆ
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ
CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು