ಶರಣರ ವಚನಗಳ ಧ್ವನಿಗೆ ರಾಜ್ಯೋತ್ಸವದ ಗರಿ

ಅಲಬನೂರು ಗ್ರಾಮದ ಜನಪದ-ತತ್ವಪದ ಗಾಯಕ ಉಸ್ಮಾನಸಾಬ್‌ „ ಜನಪದ ಹಾಡು ರಚಿಸಿ ಹಾಡುವ ಕಲಾವಿದ

Team Udayavani, Oct 30, 2019, 10:45 AM IST

27-October-38

ಚಂದ್ರಶೇಖರ ಯರದಿಹಾಳ
ಸಿಂಧನೂರು:
ಪ್ರಸಕ್ತ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ತಾಲೂಕಿನ ಅಲಬನೂರು ಗ್ರಾಮದ ಜನಪದ ಹಾಡುಗಾರ ಉಸ್ಮಾನಸಾಬ್‌ ಖಾದರಸಾಬ್‌ ಅಲಬನೂರು ಭಾಜನರಾಗಿದ್ದಾರೆ. ಉಸ್ಮಾನಸಾಬ್‌ ಮೂಲತಃ ಭಾವೈಕ್ಯ ಸಾರುವ ಜನಪದ ಗೀತೆಗಳನ್ನು ಹಾಡುತ್ತ ಜನಪದ ಲೋಕಕ್ಕೆ ಕಾಲಿರಿಸಿದವರು. ಡೊಳ್ಳಿನ ಹಾಡು, ಭಜನಾ ಪದ, ಶರಣರ ವಚನ, ದಾಸರ ಪದ, ತತ್ವಪದಗಳನ್ನು ಹಾಡುವ ಮೂಲಕ ರಾಜ್ಯದ ಗಮನ ಸೆಳೆದಿದ್ದಾರೆ.

ತಂದೆ ಖಾದರಸಾಬ್‌ ಹಾಗೂ ದೊಡ್ಡಪ್ಪ ಹುಸೇನಸಾಬ್‌ ಮೂಲತಃ ರಂಗಭೂಮಿ ಕಲಾವಿದರು. ಅವರು ನಾಟಕಗಳಿಗೆ ತಮ್ಮದೇ ಆದ ಶೈಲಿಯಲ್ಲಿ ಹಾಡು ರಚಿಸಿ ಹಾಡುವ ಜತೆಗೆ ಅಭಿನಯಿಸುತ್ತಿದ್ದರು.

ಪಾಂಡುವಿಜಯ, ಕೀಚಕನ ವಧೆ, ಕೌರವರ ದರ್ಬಾರ, ಶ್ರೀಕೃಷ್ಣ ಸಂಧಾನ, ಸತ್ಯಭಾಮ ನಾಟಕಗಳಲ್ಲಿ ಪಾತ್ರ ನಿರ್ವಹಿಸಿ ರಾಯಚೂರು ಜಿಲ್ಲೆಯಲ್ಲಿ ಹೆಸರುವಾಸಿಯಾಗಿದ್ದರು. ರಂಗಭೂಮಿ ಹಿನ್ನೆಲೆಯ ಕುಟುಂಬದಲ್ಲಿ ಜನಿಸಿದ ಉಸ್ಮಾನ್‌ಸಾಬ್‌ ಓದಿದ್ದು ಕೇವಲ ಪಿಯುಸಿ. 1ರಿಂದ 10ನೇ ತರಗತಿವರೆಗೆ ಅಲಬನೂರಿನ ಸರ್ಕಾರಿ ಶಾಲೆಯಲ್ಲಿ ಅಭ್ಯಾಸ ಮಾಡಿದ ಇವರು, ನಂತರ ಗದಗ ತಾಲೂಕಿನಲ್ಲಿ ಪಿಯುಸಿ ಶಿಕ್ಷಣ ಪಡೆದಿದ್ದಾರೆ. 7 ಜನ ಮಕ್ಕಳಿದ್ದು, ಅದರಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಉಳಿದ ಮೂವರು ಪುತ್ರಿಯರಿದ್ದಾರೆ.

ಬೆಂಗಳೂರಿನಲ್ಲಿ ನೆಲೆ: ಉಸ್ಮಾನಸಾಬ್‌ ಹೊಟ್ಟೆಪಾಡಿಗಾಗಿ ಬೆಂಗಳೂರಿನ ಯಲಹಂಕಕ್ಕೆ ತೆರಳಿ ಅಲ್ಲಿಯೇ ಒಂದು ಡಿಟಿಪಿ ಹಾಗೂ ಝೆರಾಕ್ಸ್‌ ಸೆಂಟರ್‌ ಆರಂಭಿಸಿದ್ದಾರೆ. ಉಳಿದ ಸಮಯದಲ್ಲಿ ರಾಜ್ಯದ ಮೂಲೆ-ಮೂಲೆಗಳಲ್ಲಿ ಸಂಚರಿಸಿ ಜನಪದ ಸಂಗೀತ ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ.

ವಿಶೇಷವಾಗಿ ಇವರು ಶರಣರ ವಚನಗಳು, ದಾಸರ ಪದಗಳು, ತತ್ವಪದಗಳು, ಶ್ರೀಕೃಷ್ಣ ಹರಿಹರನ ಪದಗಳು, ಜನಪದ ಲೋಕದ ಜೀವನ ಸೊಗಡು, ಅಣ್ಣ -ತಂಗಿ ಬಾಂಧವ್ಯ, ಅಕ್ಕ-ತಂಗಿ ಮಮತೆಯ ಪದಗಳು ರಚನೆ ಮಾಡಿ ಹಾಡುತ್ತಾರೆ. ಭಾಗ್ಯದ ಬಳೆಗಾರ, ಸೋಭಾನೆ ಪದಗಳನ್ನು ಸುಶ್ರಾವ್ಯವಾಗಿ ಹಾಡುವುದನ್ನು ರೂಢಿಸಿಕೊಂಡಿರುವ ಉಸ್ಮಾನಸಾಬ್‌ಗ ನಾಡಿನ ಖ್ಯಾತ ಮಠ-ಮಾನ್ಯಗಳಿಂದ ಹಾಗೂ ಸಂಘ ಸಂಸ್ಥೆಗಳಿಂದ ಕೆಂಪೇಗೌಡ ಪ್ರಶಸ್ತಿ, ಕನ್ನಡ ಸೇವಾರತ್ನ ಪ್ರಶಸ್ತಿ, ಕನ್ನಡದ ಪರಿಚಾರಕ ಪ್ರಶಸ್ತಿ, ಕನ್ನಡ ಜಂಗಮ ಪ್ರಶಸ್ತಿ ಹೀಗೆ ನಾನಾ ಪ್ರಶಸ್ತಿಗಳು ಅರಸಿ ಬಂದಿವೆ.

ನಮ್ಮ ಅಜ್ಜಿ ಊರಾದ ಮಾನ್ವಿ ತಾಲೂಕಿನ ಮಾಡಿಗೇರಿಯಲ್ಲಿ ಅಜ್ಜಿ ಚಾಂದಬಿಯೊಂದಿಗೆ ಚಿಕ್ಕ ವಯಸ್ಸಿನಲ್ಲಿಯೇ ಜಾನಪದ ಗೀತೆಗಳಲ್ಲಿ ಆಸಕ್ತಿ ತೋರಿ ಹಾಡುತ್ತಾ ಬಂದಿದ್ದೇನೆ. ಮುಂದೆ ಅನೇಕರ ಸಹಾಯ ಸಹಕಾರದಿಂದ ಬೆಳೆಯಲು ಸಾಧ್ಯವಾಗಿದೆ. ನನಗೆ ರಾಜ್ಯೋತ್ಸವ ಪ್ರಶಸ್ತಿ ಸಿಕ್ಕಿರುವುದು ಅತ್ಯಂತ ಸಂತಸ ತಂದಿದೆ. ಈ ಪ್ರಶಸ್ತಿಯನ್ನು ಈಚೆಗೆ ರಾಜ್ಯಾದ್ಯಂತ ನೆರೆ ಹಾಗೂ ಮಳೆಯಿಂದಾಗಿ ಜಲ ಸಂಕಷ್ಟಕ್ಕೀಡಾಗಿ ಮೃತಪಟ್ಟ ಬಂಧುಗಳಿಗೆ ಅರ್ಪಿಸುತ್ತೇನೆ.
ಉಸ್ಮಾನ್‌ಸಾಬ್‌ ಅಲಬನೂರು,
ಜನಪದ ಕಲಾವಿದ

ಟಾಪ್ ನ್ಯೂಸ್

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.