ಹಿರೇಹಳ್ಳ ಫುಟ್ಪಾತ್ ರಸ್ತೆ ದುರಸ್ತಿ ಆರಂಭ
Team Udayavani, Dec 26, 2019, 6:24 PM IST
ಸಿಂಧನೂರು: ರಾಯಚೂರು ರಸ್ತೆಯಲ್ಲಿನ ಹಿರೇಹಳ್ಳದ ಫುಟ್ಪಾತ್ ಕುಸಿದು ಸಾರ್ವಜನಿಕರ ಸಂಚಾರಕ್ಕೆ ತೊಂದರೆ ಆಗಿತ್ತು. ಕೊನೆಗೂ ಅಧಿಕಾರಿಗಳು ಸೇತುವೆಯ ಫುಟ್ಪಾತ್ ದುರಸ್ತಿಗೆ ಮುಂದಾಗಿದ್ದಾರೆ.
ಉದಯವಾಣಿ ಫಲಶ್ರುತಿ: ಈ ಕುರಿತು ಉದಯವಾಣಿ ಡಿ.13ರ ಸಂಚಿಕೆಯಲ್ಲಿ “ಹಳ್ಳ ಹಿಡಿದ ಹಿರೇಹಳ್ಳ ಸೇತುವೆ ಫುಟ್ಪಾತ್’ ಶೀರ್ಷಿಕೆಯಡಿ ಸಚಿತ್ರ ವರದಿ ಪ್ರಕಟಿಸಿತ್ತು. ಇದನ್ನು ಗಮನಿಸಿದ ಅಧಿಕಾರಿಗಳು, ಶಾಸಕರು ಎಚ್ಚೆತ್ತು ಸೇತುವೆ ದುರಸ್ತಿಗೆ ಮುಂದಾಗಿದ್ದಾರೆ.
ಶಾಸಕರ ಸೂಚನೆ ಮೇರೆಗೆ ರಾಜ್ಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಕೆಎಸ್ಐಪಿ ಯೋಜನೆ ಅನುದಾನದಲ್ಲಿ ರಸ್ತೆ ಕಾಮಗಾರಿ ಮಾಡುವ ವೇಳೆ ಹಿರೇಹಳ್ಳದ ಸೇತುವೆ ಫುಟ್ಪಾತ್ನ್ನು ದುರಸ್ತಿಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿದ್ದಾರೆ. ಅಲ್ಲದೇ ಹಳ್ಳದ ದಂಡೆಯಲ್ಲಿದ್ದ ತ್ಯಾಜ್ಯ ತೆರವುಗೊಳಿಸಿ ಜನ ಮೆಚ್ಚುಗೆ ಗಳಿಸಿದ್ದಾರೆ.
ಪಾದಚಾರಿಗಳಿಗೆ ಯಾವುದೆ ರೀತಿಯಲ್ಲಿ ತೊಂದರೆಯಾಗದಂತೆ
ಹಿರೇಹಳ್ಳ ಸೇತುವೆ ಫುಟ್ಪಾತ್ ದುರಸ್ತಿಗೊಳಿಸಲಾಗಿದೆ ಎಂದು ರಾಜ್ಯ ಹೆದ್ದಾರಿ ಪ್ರಾಧಿಕಾರ ಅಧಿಕಾರಿ ವಿಜಯ ಪಾಟೀಲ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ