ಗಬ್ಬೆದ್ದ ಹೈಟೆಕ್‌ ಬಸ್‌ ನಿಲ್ದಾಣ

ಸಿಂಧನೂರು ಬಸ್‌ ನಿಲ್ದಾಣ ಆವರಣದಲ್ಲೇ ಮಲ-ಮೂತ್ರ ವಿಸರ್ಜನೆ

Team Udayavani, Dec 8, 2019, 12:07 PM IST

8-December-7

„ಚಂದ್ರಶೇಖರ ಯರದಿಹಾಳ
ಸಿಂಧನೂರು:
ಕಲ್ಯಾಣ ಕರ್ನಾಟಕದಲ್ಲೇ ದೊಡ್ಡ ತಾಲೂಕು ಎಂಬ ಹೆಗ್ಗಳಿಕೆಗೆ ಪಾತ್ರವಾದ ಸಿಂಧನೂರು ನಗರದ ಹೈಟೆಕ್‌ ಬಸ್‌ ನಿಲ್ದಾಣ ಮೇಲೆಲ್ಲ, ಥಳಕು, ಒಳಗೆಲ್ಲ ಕೊಳಕು ಎಂಬಂತಿದೆ. ನಿಲ್ದಾಣದಲ್ಲಿ ಸೌಲಭ್ಯಗಳ ಕೊರತೆಯಿಂದ ಗಬ್ಬೆದ್ದು ಹೋಗಿದ್ದರೆ, ಪ್ರಯಾಣಿಕರು ನಿತ್ಯ ಪರದಾಡುವಂತಾಗಿದೆ.

2013-14ರಲ್ಲಿ ಶಾಸಕ ಹಂಪನಗೌಡ ಬಾದರ್ಲಿ ಅವರ ಆಡಳಿತಾವಧಿಯಲ್ಲಿ ಸುಮಾರು 6.50 ಕೋಟಿ ವೆಚ್ಚದಲ್ಲಿ ಸಿಂಧನೂರು ನಗರದ ಹೃದಯ ಭಾಗದಲ್ಲಿ ಹೈಟೆಕ್‌ ಬಸ್‌ ನಿಲ್ದಾಣ ನಿರ್ಮಿಸಲಾಗಿದೆ. ಆಗ ಸಾರಿಗೆ ಸಚಿವರಾಗಿದ್ದ ರಾಮಲಿಂಗಾರೆಡ್ಡಿ ಹಾಗೂ ಲೋಕೋಪಯೋಗಿ ಇಲಾಖೆ ಸಚಿವ ಎಚ್‌.ಸಿ ಮಹಾದೇವಪ್ಪ ಈ ಹೈಟೆಕ್‌ ಬಸ್‌ ನಿಲ್ದಾಣ ಉದ್ಘಾಟಿಸಿದ್ದಾರೆ.

ಸಿಂಧನೂರು ನಗರ ಬಸ್‌ ನಿಲ್ದಾಣದಿಂದ ನಿತ್ಯ 8ರಿಂದ 10 ಸಾವಿರ ಪ್ರಯಾಣಿಕರು ರಾಜ್ಯ, ನೆರೆ ರಾಜ್ಯಗಳಿಗೆ ಪ್ರಯಾಣ ಬೆಳೆಸುತ್ತಾರೆ. ಸುತ್ತಲಿನ ಗ್ರಾಮ ಮತ್ತು ನೆರೆ ತಾಲೂಕುಗಳಿಂದ ಸಾವಿರಾರು ವಿದ್ಯಾರ್ಥಿಗಳು ಶಾಲಾ-ಕಾಲೇಜಿಗೆ ನಗರಕ್ಕೆ ಬರುತ್ತಾರೆ. ಆದರೆ ನಿಲ್ದಾಣದಲ್ಲಿ ಸೌಲಭ್ಯ ಕೊರತೆ ಇದೆ.

ಸೌಲಭ್ಯಗಳಿಲ್ಲ: ಸಿಂಧನೂರು ಬಸ್‌ ನಿಲ್ದಾಣ ಹೆಸರಿಗೆ ಮಾತ್ರ ಹೈಟೆಕ್‌ ಬಸ್‌ ನಿಲ್ದಾಣವಾಗಿದೆ. ಆದರೆ ಪ್ರಯಾಣಿಕರಿಗೆ ಯಾವುದೇ ಸೌಲಭ್ಯಗಳಿಲ್ಲ. ಕುಡಿಯುವ ನೀರಿನ ಸೌಲಭ್ಯವಿಲ್ಲ, ಪ್ರಯಾಣಿಕರಿಗೆ ಕೂಡ್ರಲು ಆಸನಗಳಿಲ್ಲ. ಶೌಚಾಲಯ ಸರಿಯಾಗಿ ನಿರ್ವಹಣೆ ಇಲ್ಲದ್ದೇ ಗಬ್ಬೆದ್ದು ಹೋಗಿವೆ, ಹಾಳಾಗಿವೆ. ಹೀಗಾಗಿ ಪ್ರಯಾಣಿಕರು ಬಸ್‌ ನಿಲ್ದಾಣ ಆವರಣದಲ್ಲೇ ಪುರುಷರು, ಮಹಿಳೆಯರು ಮಲ, ಮೂತ್ರ ವಿಸರ್ಜಿಸುವುದು ಸಾಮಾನ್ಯವಾಗಿದೆ.ನಿಲ್ದಾಣದ ಆವರಣದಲ್ಲಿ ಕಸದ ರಾಶಿ ತುಂಬಿದೆ. ಸ್ವಚ್ಛತೆ ಕೂಡ ಮಾಯವಾಗಿದೆ. ಪ್ರಯಾಣಿಕರು ನಿಲ್ದಾಣದಲ್ಲಿ ಮೂಗು ಮುಚ್ಚಿಕೊಂಡೇ ಇರುವಂತಾಗಿದೆ.

ಕಳ್ಳತನ ಹೆಚ್ಚಳ: ಇನ್ನು ಸಿಂಧನೂರು ಹೈಟೆಕ್‌ ಬಸ್‌ ನಿಲ್ದಾಣದಲ್ಲಿ ಪ್ರಯಾಣಿಕರು ಮತ್ತು ಅವರ ವಸ್ತುಗಳಿಗೆ ಸುರಕ್ಷತೆ ಇಲ್ಲದಾಗಿದೆ. ಪದೇ ಪದೇ ಕಳ್ಳತನ ಪ್ರಕರಣಗಳು ಹೆಚ್ಚುತ್ತಿವೆ. ಅನೇಕರ ಹಣ, ಬೆಲೆ ಬಾಳುವ ವಸ್ತುಗಳನ್ನು ಕಳ್ಳರು ದೋಚಿ ಪರಾರಿಯಾಗಿದ್ದಾರೆ. ಇಷ್ಟಾದರೂ ನಿಲ್ದಾಣದ ಅಧಿಕಾರಿಗಳು, ಪೊಲೀಸರು ಪ್ರಯಾಣಿಕರ ಸುರಕ್ಷತೆಗೆ ಕ್ರಮ ವಹಿಸುತ್ತಿಲ್ಲ.

ಕೆಟ್ಟ ಸಿಸಿ ಕ್ಯಾಮೆರಾ: ಬಸ್‌ ನಿಲ್ದಾಣದಲ್ಲಿ ಕಾನೂನುಬಾಹಿರ ಚಟುವಟಿಕೆ ತಡೆಗೆ ಹಲವೆಡೆ ಸಿಸಿ ಕ್ಯಾಮೆರಾ ಹಾಕಲಾಗಿದೆ. ಆದರೆ ಇವು ಕಾರ್ಯ ನಿರ್ವಹಿಸುತ್ತಿಲ್ಲ. ಸಿಸಿ ಕ್ಯಾಮೆರಾ ಇದ್ದೂ ಇಲ್ಲದಂತಾಗಿದೆ.

ರಸ್ತೆಗೆ ಹರಿದ ಶೌಚಾಲಯ ಕೊಳಚೆ: ಕಳೆದ ಮೂರ್‍ನಾಲ್ಕು ತಿಂಗಳ ಹಿಂದೆ ಬಸ್‌ ನಿಲ್ದಾಣದ ಶೌಚಾಲಯದ ಗುಂಡಿಯ ಪೈಪ್‌ ಒಡೆದು ಕೊಳಚೆ ನೀರು ಬಸ್‌ ನಿಲ್ದಾಣದ ಪಕ್ಕದ ಮನೆ-ಅಂಗಡಿಗಳ ಮುಂದೇ ಹರಿದಿತ್ತು. ನಿವಾಸಿಗಳು, ಪ್ರಯಾಣಿಕರು ಬಸ್‌ ನಿಲ್ದಾಣಕ್ಕೆ ಮುತ್ತಿಗೆ ಹಾಕಿ ಪ್ರತಿಭಟಿಸಿದ್ದರು. ಆದರೂ ನಿಲ್ದಾಣದಲ್ಲಿ ಯಾವುದೇ ಸುಧಾರಣೆ ಕಂಡುಬಂದಿಲ್ಲ. ಇನ್ನಾದರೂ ಬಸ್‌ ನಿಲ್ದಾಣದ ಅಧಿಕಾರಿಗಳು ಪ್ರಯಾಣಿಕರಿಗೆ ಅಗತ್ಯ ಸೌಲಭ್ಯ ಕಲ್ಪಿಸುವ ಜೊತೆಗೆ ಶೌಚಾಲಯದಲ್ಲಿ ಸ್ವಚ್ಛತೆಗೆ ಗಮನಹರಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಬಸ್‌ ನಿಲ್ದಾಣದಲ್ಲಿ ಸ್ವಚ್ಛತೆಯತ್ತ ಗಮನ ಹರಿಸುವ ಕೆಲಸ ಮಾಡುತ್ತೇವೆ. ಶೌಚಾಲಯದ ಬಗ್ಗೆ ಮೇಲಿನ ಅಧಿಕಾರಿಗಳಿಗೆ ಮನವಿ ಮಾಡಿಕೊಳ್ಳಲಾಗಿದೆ. ಶೀಘ್ರದಲ್ಲೇ ಇನ್ನೆರಡು ಶೌಚಾಲಯ ನಿರ್ಮಿಸಲಾಗುವುದು.
ರವಿಶಂಕರ,
ಸಾರಿಗೆ ಘಟಕ ವ್ಯವಸ್ಥಾಪಕ

ಬಸ್‌ ನಿಲ್ದಾಣದಲ್ಲಿ ಮೂಲ ಸೌಲಭ್ಯ ಕಲ್ಪಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಬಸ್‌ ನಿಲ್ದಾಣದಲ್ಲಿ ಸೌಲಭ್ಯಗಳ ಕೊರತೆ ಬಗ್ಗೆ ಖುದ್ದಾಗಿ ಭೇಟಿ ನೀಡಿ ವೀಕ್ಷಿಸುವೆ.
ವೆಂಕಟರಾವ್‌ ನಾಡಗೌಡ,
ಶಾಸಕ

ಟಾಪ್ ನ್ಯೂಸ್

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.