ಅಧಿಕಾರಿಗಳ ವಿರುದ್ಧ ಸಚಿವರು ಗರಂ

ಕುಡಿಯುವ ನೀರು-ಯುಜಿಡಿ-ನಗರೋತ್ಥಾನ ರಸ್ತೆಗಳ ಕಾಮಗಾರಿ ವಿಳಂಬಕ್ಕೆ ಆಕ್ರೋಶ

Team Udayavani, May 18, 2019, 4:24 PM IST

18-May-26

ಸಿಂಧನೂರು: ನಗರಸಭೆ ಕಚೇರಿಯಲ್ಲಿ ಕುಡಿಯುವ ನೀರಿನ ಕುರಿತು ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಾವ್‌ ನಾಡಗೌಡ ಮಾತನಾಡಿದರು.

ಸಿಂಧನೂರು: ನಗರದಲ್ಲಿ ಕಳೆದ 7 ವರ್ಷದಿಂದ ಆರಂಭವಾದ 24×7 ಕುಡಿಯುವ ನೀರು, ಯುಜಿಡಿ ಹಾಗೂ ನಗರೋತ್ಥಾನ ರಸ್ತೆಗಳ ಕಾಮಗಾರಿಗಳು ಇಲ್ಲಿವರೆಗೂ ಪೂರ್ಣಗೊಂಡಿಲ್ಲ. ಅಧಿಕಾರಿಗಳು ಮಾಡುವ ಹಲ್ಕಾ ಕೆಲಸಕ್ಕೆ ನಮಗೆ ಮರ್ಯಾದೆ ಇಲ್ಲದಂತಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಾವ್‌ ನಾಡಗೌಡ ಹರಿಹಾಯ್ದರು

ನಗರದ ನಗರಸಭೆ ಕಚೇರಿಯಲ್ಲಿ ಶುಕ್ರವಾರ ನಡೆದ 24×7 ಕುಡಿಯುವ ಕಾಮಗಾರಿ ಹಾಗೂ ನಗರೋತ್ಥಾನ ಯುಜಿಡಿ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ನಾನು ಹಿಂದೆ ಶಾಸಕನಾಗಿದ್ದಾಗ ಆರಂಭವಾದ ಕೆಲಸಗಳು ಇಲ್ಲಿವರೆಗೂ ಒಂದು ಪೂರ್ಣಗೊಂಡಿಲ್ಲ. ನಗರದಲ್ಲಿ ಸಾರ್ವಜನಿಕರಿಗೆ ಮುಖ ತೋರಿಸಲು ನಮ್ಮಿಂದ ಆಗುತ್ತಿಲ್ಲ. ಇದಕ್ಕೆ ಅಧಿಕಾರಿಗಳ ಬೇಜವಾಬ್ದಾರಿ ಹೆಚ್ಚು ಕಾಣುತ್ತಿದೆ. ಬೇಸಿಗೆ ಕಾಲದಲ್ಲೂ ಕುಡಿಯಲು ನೀರು ಸರಿಯಾಗಿ ಸಾರ್ವಜನಿಕರಿಗೆ ಕೊಡದೆ ಇದ್ದರೆ ಹೇಗೆ? ಕೆಲಸ ಮಾಡಲು ಇಷ್ಟ ಇಲ್ಲದಿದ್ದರೆ ಕೆಲಸ ಬಿಟ್ಟು ಹೋಗಿ. ಆ ಕೆಲಸಕ್ಕೆ ಬೇರೆಯವರನ್ನು ಹಾಕಿಸಿಕೊಂಡು ಬರುತ್ತೇನೆ ಎಂದು ಹೇಳಿದರು

ಜಿಲ್ಲೆಯ ಎಲ್ಲ ತಾಲೂಕು ಕೇಂದ್ರಗಳಲ್ಲಿ ಎರಡು ದಿನಕ್ಕೊಮ್ಮೆ ನೀರು ಬಿಡುವ ವ್ಯವಸ್ಥೆಯಿದೆ. ಸ್ವತಃ ನನ್ನ ಕ್ಷೇತ್ರದಲ್ಲಿ 6 ದಿನಕ್ಕೆ ಒಂದು ಸಲ ನೀರು ಪೂರೈಸಲಾಗುತ್ತಿದೆ. ಹೀಗಿದ್ದಾಗ ನನ್ನ ಮರ್ಯಾದೆ ಏನಾಗಬೇಕು ಎಂದು ಪ್ರಶ್ನಿಸಿದರು.

ಅಧಿಕಾರಿಗಳನ್ನು ನೋಡಿದರೆ ನಾಚಿಕೆಯಾಗುತ್ತದೆ. ಬೇಜಾಬ್ದಾರಿಯಿಂದ ಕೆಲಸ ನಿರ್ವಹಿಸಿದರೆ ಸಸ್ಪೆಂಡ್‌ ಮಾಡಲಾಗುತ್ತದೆ ಎಂದು ಎಚ್ಚರಿಸಿದರು. ರಾಯಚೂರು ನಗರದಲ್ಲಿ ಕುಡಿಯುವ ನೀರಿನ ಕೆಲಸ ಸರಿಯಾಗಿ ಮಾಡಿಲ್ಲ. ಇದೇ ರೀತಿ ಮುಂದುವರಿದರೆ ಇನ್ನುಳಿದ ಹಣ ಬಿಡುಗಡೆ ಮಾಡುವುದಿಲ್ಲ. ಇದನ್ನು ಸಿಎಂ ಗಮನಕ್ಕೆ ತರಲಾಗುತ್ತದೆ ಹಾಗೂ ಸಂಬಂಧಿಸಿದ ಸಚಿವರಿಗೂ ತಿಳಿಸಲಾಗುವುದು ಎಂದು ಹೇಳಿದರು.

2011ರಲ್ಲಿ ಎಲ್ಲ ಕೆಲಸಗಳು ಪ್ರಾರಂಭವಾಗಿವೆ. ಅದರಲ್ಲೂ 4 ಸಲ ಸಮಯ ಹೆಚ್ಚಿಗೆ ತೆಗೆದುಕೊಂಡಿದ್ದರೂ ಯಾವುದೊಂದು ಕೆಲಸವೂ ಪೂರ್ಣಗೊಂಡಿಲ್ಲ. ನೀರಿನ ವಿಷಯಕ್ಕೆ ಸಂಬಂಧಿಸಿದಂತೆ ಅನೇಕ ಬಾರಿ ಸಭೆ ಆಯೋಜಿಸಿದ್ದರು ಗೈರಾಗುತ್ತಾರೆ. ಈ ಬಾರಿ ಕೊನೆ ಅವಧಿ ನೀಡುತ್ತೇವೆ. ಶೀಘ್ರದಲ್ಲಿ ಕೆಲಸ ಮುಗಿಸದೇ ಹೋದರೆ ಎಲ್ಲರನ್ನೂ ಸಸ್ಪೆಂಡ್‌ ಮಾಡಲಾಗುತ್ತದೆ ಎಂದು ಎಚ್ಚರಿಸಿದರು.

ನಗರಸಭೆ ಪೌರಾಯುಕ್ತ ವಿರೂಪಾಕ್ಷ‌ ಮೂರ್ತಿ ಮಾತನಾಡಿ, ನಗರದಲ್ಲಿ ಒಟ್ಟು 13,944 ನಳಗಳಿವೆ. ಆದರೂ 24×7 ಕಾಮಗಾರಿ ನನೆಗುದಿಗೆ ಬಿದ್ದಿದೆ. ಸಾರ್ವಜನಿಕರಿಗೆ ಸರಿಯಾಗಿ ನೀರು ಮುಟ್ಟಿಸಲು ಆಗುತ್ತಿಲ್ಲ ಹಾಗೂ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ಬೇಜವಾಬ್ದಾರಿತನದಿಂದ ಕೆಲಸಗಳು ಆಗುತ್ತಿಲ್ಲ. ಇದೇ ರೀತಿ ಮುಂದುವರಿದರೆ ನಗರಸಭೆಗೆ ಸಾರ್ವಜನಿಕರು ಮುತ್ತಿಗೆ ಹಾಕುವುದರಲ್ಲಿ ಯಾವುದೇ ಅನುಮಾನವಿಲ್ಲ. ಕೂಡಲೇ ಕೆಲಸ ಸರಿಪಡಿಸಬೇಕು ಎಂದು ಹೇಳಿದರು.

ನಿರಂತರ ಕುಡಿಯುವ ನೀರಿನ ಯೋಜನೆ(24×7) ಅಧಿಕಾರಿ ವಿಶ್ವೇಶ್ವರಯ್ಯ ಮಾತನಾಡಿ, ಈಗಾಗಲೇ ಕೆಲ ವಾರ್ಡ್‌ಗಳಲ್ಲಿ ನಮ್ಮ ಕೆಲಸ ಪೂರ್ಣಗೊಂಡಿದೆ. ಇನ್ನುಳಿದ ವಾರ್ಡ್‌ಗಳಲ್ಲಿ ಕೆಲಸಗಳ ಬಗ್ಗೆ ನಮ್ಮ ಸಿಬ್ಬಂದಿಗೆ ಸೂಚಿಸಲಾಗಿದೆ. ಶೀಘ್ರದಲ್ಲಿ ನೀರು ಕೊಡುವ ವ್ಯವಸ್ಥೆ ಮಾಡುತ್ತೇವೆ. ನಗರದ 1, .23, 27, 22 ವಾರ್ಡ್‌ಗಳಲ್ಲಿ ಪೂರ್ಣ ಪ್ರಮಾಣದ ಕೆಲಸವಾಗಿದೆ ಹಾಗೂ ಜೂನ್‌ 6ರಂದು ಬರುವ ಎಲ್ಲ ವಾರ್ಡ್‌ಗಳಿಗೆ ನೀರು ಬಿಡುವ ವ್ಯವಸ್ಥೆ ಮಾಡುತ್ತೇವೆ. ನಮಗೆ ಆಗಸ್ಟ್‌ ವರೆಗೆ ಸಮಯ ಕೊಟ್ಟರೆ ಎಲ್ಲ ಕೆಲಸವನ್ನೂ ಪೂರ್ಣಗೊಳಿಸುತ್ತೇವೆ ಎಂದು ಹೇಳಿದರು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿ ವಿಜಯಕುಮಾರ ಪಾಟೀಲ, ನಿರತಂರ ಕುಡಿಯುವ ಯೋಜನೆ ಗುತ್ತೇದಾರ ದಿವಾಕರ, ಶರಣಬಸವ, ಜೆಇ ಶಾಂತಕುಮಾರ ಇದ್ದರು.

ಉದಯವಾಣಿ ವರದಿ ಪ್ರಸ್ತಾಪ
ನಗರದಲ್ಲಿ 24×7 ಹಾಗೂ ಯುಜಿಡಿ ನಗರೋತ್ಥಾನ ಕಾಮಗಾರಿಗಳ ಬಗ್ಗೆ ಸಿಂಧನೂರು ಜನರ ನರಕಯಾತನೆ ಮುಕ್ತಿ ಯಾವಾಗ? ಎಂಬ ವರದಿ ಉದಯವಾಣಿಯಲ್ಲಿ ಪ್ರಕಟವಾಗಿತ್ತು. ಸಭೆ ವರದಿ ಪ್ರಸ್ತಾಪಿಸಿದ ಸಚಿವರು ಪತ್ರಿಕೆಯಲ್ಲಿ ಪ್ರಕಟವಾಗಿದೆ. ಅಧಿಕಾರಿಗಳು ನಮ್ಮ ಮರ್ಯಾದೆ ಹಾಳು ಮಾಡುತ್ತಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

1-wqewqeqwe

Prajwal ಪೆನ್ ಡ್ರೈವ್ ಬಿಡುಗಡೆ ಮಾಡಿದ್ದ ದೇವರಾಜೇ ಗೌಡ ಅರೆಸ್ಟ್

1-qewqeqwe

I am back ; ಜೈಲಿನಿಂದ ಬಿಡುಗಡೆಗೊಂಡು ಚುನಾವಣ ಪ್ರಚಾರಕ್ಕೆ ಧುಮುಕಿದ ಕೇಜ್ರಿವಾಲ್

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Election Commission ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

MASOCON

MASOCON: ಕೆಎಂಸಿಯಲ್ಲಿ ಮಣಿಪಾಲ್ ಸರ್ಜಿಕಲ್ ಆಂಕೊಲಾಜಿ ಕಾನ್ಫರೆನ್ಸ್ 2024

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-wqewqeqwe

Prajwal ಪೆನ್ ಡ್ರೈವ್ ಬಿಡುಗಡೆ ಮಾಡಿದ್ದ ದೇವರಾಜೇ ಗೌಡ ಅರೆಸ್ಟ್

1-qewqeqwe

I am back ; ಜೈಲಿನಿಂದ ಬಿಡುಗಡೆಗೊಂಡು ಚುನಾವಣ ಪ್ರಚಾರಕ್ಕೆ ಧುಮುಕಿದ ಕೇಜ್ರಿವಾಲ್

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Election Commission ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.