ಕೊಚ್ಚಿ ಹೋದ ಬೆಳೆ: ಅನ್ನದಾತ ಕಂಗಾಲು
ಮಳೆಗೆ ನೂರಾ ರು ಎಕರೆ ಭತ್ತದ ಗದ್ದೆ ನಷ್ಟಬೆಳೆ ಹಾನಿ ಪರಿಹಾರಕ್ಕೆ ಒತ್ತಾಯ
Team Udayavani, Sep 29, 2019, 5:25 PM IST
ಸಿರುಗುಪ್ಪ: ತಾಲೂಕಿನಲ್ಲಿ ಕಳೆದ ಕೆಲ ದಿನಗಳಿಂದ ಸುರಿದ ಭಾರಿ ಮಳೆಯಿಂದ ರೈತರ ಹೊಲಗಳಿಗೆ ನೀರು ನುಗ್ಗಿ ನೂರಾರು ಎಕರೆ ಭತ್ತದ ಗದ್ದೆಗಳು ಮುಚ್ಚಿಹೋಗಿವೆ. ಮತ್ತೂಂದು ಕಡೆ ಹೊಲದ ಬದುಗಳು ಒಡೆದುಹೋಗಿ ಅಪಾರ ಪ್ರಮಾಣದ ಮಣ್ಣು ಕೊಚ್ಚಿಹೋಗಿ ಹಳ್ಳಕೊಳ್ಳ ಸೇರಿದೆ. ಮಳೆ ನೀರಿನೊಂದಿಗೆ ಕೆಲ ಕಡೆ ಮರಳು ಭತ್ತದ ಗದ್ದೆಗಳಿಗೆ ಹರಿದು ಬಂದಿದ್ದರಿಂದ ಭತ್ತದ ಗದ್ದೆಯು ಮರಳಿನಲ್ಲಿ ಹೂತುಹೋಗಿದೆ. ರೈತರು ಗದ್ದೆಯಲ್ಲಿರುವ ಮರಳು ತೆಗೆದುಹಾಕುವ ಕಾರ್ಯದಲ್ಲಿ ತೊಡಗಿದ್ದಾರೆ.
ದೊಡ್ಡಹಳ್ಳ, ಕೆಂಚಿಹಳ್ಳ, ವೇದಾವತಿ ಹಗರಿ ನದಿಯ ದಂಡೆಯಲ್ಲಿ ನಾಟಿ ಮಾಡಿದ ಭತ್ತದ ಬೆಳೆಯು ಹೂತುಹೋಗಿ ರೈತರನ್ನು ಕಂಗಾಲಾಗಿಸಿದೆ. ರೈತರು ಹೊಲದಲ್ಲಿ ಭತ್ತ ನಾಟಿ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಆದರೆ ಮಳೆನೀರಿನ ಪ್ರವಾಹದಿಂದ ರೈತರು ನಷ್ಟ ಅನುಭವಿಸುತ್ತಿದ್ದಾರೆ. ತಾಲೂಕು ಆಡಳಿತ ಬೆಳೆನಷ್ಟದ ಬಗ್ಗೆ ಶೀಘ್ರವಾಗಿ ಸರ್ವೆಕಾರ್ಯ ಮಾಡಿ ನಷ್ಟವಾಗಿರುವ ಬೆಳೆಗೆ ಸೂಕ್ತ ಪರಿಹಾರ ನೀಡಬೇಕೆಂದು ತಾಲೂಕಿನ ಹಾಗಲೂರು ಗ್ರಾಮಕ್ಕೆ ಬಂದಿದ್ದ ಜಿಲ್ಲಾ ಜಂಟಿ ಕೃಷಿ ಉಪನಿರ್ದೇಶಕ ಚಂದ್ರಶೇಖರರನ್ನು ರೈತರು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ