ಮಠ ಅಭಿವೃದ್ಧಿಗೆ ಸಹಕಾರ ಅಗತ್ಯ

ಸಾಮಾಜಿಕ-ಧಾರ್ಮಿಕ ಕಾರ್ಯಗಳಿಗೆ ಸಮುದಾಯ ಭವನ ಬಳಕೆ ಆಗಲಿ: ಸ್ವಾಮೀಜಿ

Team Udayavani, Jun 6, 2019, 3:23 PM IST

06-June-30

ಸಿರವಾರ: ನವಲಕಲ್ ಬೃಹನ್ಮಠ ಉದ್ಘಾಟನೆ ಮತ್ತು ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ವಿವಿಧ ಮಠಾಧೀಶರು ಚಾಲನೆ ನೀಡಿದರು.

ಸಿರವಾರ: ಸಮೀಪದ ನವಲಕಲ್ ಬೃಹನ್ಮಠದಲ್ಲಿ ನಿರ್ಮಿಸಿದ ಸಮುದಾಯ ಭವನದ ಉದ್ಘಾಟನೆ ಹಾಗೂ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಬುಧವಾರ ನಡೆಯಿತು.

ರಾಯಚೂರು ಕಿಲ್ಲೆ ಬೃಹನ್ಮಠದ ಶ್ರೀ ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಸಮುದಾಯ ಭವನಗಳಿಂದ ಬಡವರಿಗೆ ಮದುವೆ ಹಾಗೂ ಇನ್ನಿತರೆ ಧಾರ್ಮಿಕ ಕಾರ್ಯಕ್ರಮಗಳಿಗೆ ಅನುಕೂಲವಾಗಲಿದೆ. ಮಠ ಮಾನ್ಯಗಳಲ್ಲಿ ದಿನನಿತ್ಯ ವಿವಿಧ ಸಾಮಾಜಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ನೆರವೇರುತ್ತವೆ. ಇದಕ್ಕೆ ಸಮುದಾಯ ಭವನ ಅಗತ್ಯ ಇದೆ. ಮಠದ ಅಭಿವೃದ್ಧಿಗೆ ಭಕ್ತರ ಸಹಕಾರವೂ ಅಗತ್ಯ. ಈ ನಿಟ್ಟಿನಲ್ಲಿ ಈ ಕಟ್ಟಡಕ್ಕೆ ಅನುದಾನ ನೀಡಿದ ಎಂ.ಎಲ್.ಸಿ ಬೋಸರಾಜ್‌ ಅವರ ಕಾರ್ಯ ಶ್ಲಾಘನೀಯ ಎಂದರು.

ವಿಧಾನ ಪರಿಷತ್‌ ಸದಸ್ಯ ಎನ್‌.ಎಸ್‌.ಬೋಸರಾಜ್‌ ಮಾತನಾಡಿ, ರಾಜ್ಯ ಸರ್ಕಾರವು ಬಡವರ ಅನುಕೂಲಕ್ಕಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಪ್ರತಿಯೊಂದು ಗ್ರಾಮಗಳಲ್ಲಿ ಸಮುದಾಯ ಭವನಗಳನ್ನು ನಿರ್ಮಿಸುತ್ತಿದೆ. ಮಠಗಳಲ್ಲಿ ಧಾರ್ಮಿಕ ಕಾರ್ಯಕ್ರಮಗಳಿಗಾಗಿ ಕೆಬಿಜೆಎನ್‌ಎಲ್ ಯೋಜನೆಯಡಿ ಸಮುದಾಯ ಭವನ ನಿರ್ಮಾಣ ಮಾಡಲಾಗಿದೆ. ಜನತೆ ಇದರ ಪ್ರಯೋಜನ ಪಡೆಯಬೇಕು ಎಂದರು.

ನೀಲಗಲ್ನ ಡಾ| ಪಂಚಾಕ್ಷರಿ ಶಿವಾಚಾರ್ಯ ಸ್ವಾಮೀಜಿ, ಗಬ್ಬೂರಿನ ಬೂದಿಬಸವ ಶಿವಾಚಾರ್ಯ ಸ್ವಾಮೀಜಿ, ಕಾರ್ಜೋಹಳ್ಳಿಯ ಶ್ರೀ ಶಂಭುಲಿಂಗ ಸ್ವಾಮೀಜಿ, ದೇವಾಪುರದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ನೀಲಗಲ್ ಬೃಹನ್ಮಠದ ರೇಣುಕಾ ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ, ವೀರಘೋಟದ ಅಡವಿಲಿಂಗ ಮಹಾರಾಜ ಸ್ವಾಮೀಜಿ, ಬಸವರಾಜಯ್ಯ ಸ್ವಾಮಿ ಬಲ್ಲಟಗಿ, ಮಾಜಿ ಶಾಸಕ ಹಂಪಯ್ಯ ನಾಯಕ, ಜಿಪಂ ಸದಸ್ಯ ಕಿರಿಲಿಂಗಪ್ಪ, ಮಲ್ಲಟ ತಾಪಂ ಸದಸ್ಯ ಮಲ್ಲಕಾರ್ಜುನ ನಾಯಕ, ಮುಖಂಡರಾದ ಆರ್‌.ಕೆ.ಚನ್ನಬಸವ, ಚುಕ್ಕಿ ಸೂಗಪ್ಪ, ಅಸ್ಲಾಂಪಾಷಾ, ಜಿ.ಲೋಕರೆಡ್ಡಿ, ದಾನನಗೌಡ, ಶರಣಯ್ಯ ಗುಡದಿನ್ನಿ, ನಿರ್ಮಲ ಬೆಣ್ಣಿ ಸೇರಿದಂತೆ ಅನೇಕರು ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.