ಜನತೆಗೆ ನಿತ್ಯ ಧೂಳಿನ ಮಜ್ಜನ

ರಸ್ತೆ ಅಗಲೀಕರಣಕ್ಕೆ ಕಟ್ಟಡ ತೆರವುಗೊಳಿಸಿ 8 ತಿಂಗಳಾದರೂ ಆರಂಭವಾಗಿಲ್ಲ ರಸ್ತೆ ಕಾಮಗಾರಿ

Team Udayavani, Jul 7, 2019, 10:41 AM IST

07-July-9

ಸಿರವಾರ: ಬಯಲು ಆಂಜನೇಯ ದೇವಸ್ಥಾನದಿಂದ ಮಾರೆಮ್ಮ ಗುಡಿಗೆ ಹೋಗುವ ರಸ್ತೆಯಲ್ಲಿನ ಕಟ್ಟಡಗಳನ್ನು ತೆರವುಗೊಳಿಸಲಾಗಿದೆ.

ಮಹೇಶ ಪಾಟೀಲ
ಸಿರವಾರ:
ಪಟ್ಟಣದ ಬಯಲು ಆಂಜನೇಯ ದೇವಸ್ಥಾನದಿಂದ ಮಾರೆಮ್ಮ ದೇವಸ್ಥಾನದವರೆಗೆ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನೆಲೆಯಲ್ಲಿ ಕಟ್ಟಡಗಳನ್ನು ತೆರವುಗೊಳಿಸಿ 8 ತಿಂಗಳಾದರೂ ರಸ್ತೆ ಕಾಮಗಾರಿ ಆರಂಭಿಸದ್ದರಿಂದ ನಿತ್ಯ ಜನ ಧೂಳಿನಲ್ಲೇ ಸಂಚರಿಸುವಂತಾಗಿದೆ.

ನಗರೋತ್ಥಾನ ಯೋಜನೆಯಡಿ ಪಟ್ಟಣದ ಬಯಲು ಆಂಜನೇಯ ದೇವಸ್ಥಾನದಿಂದ ಮಾರೆಮ್ಮ ದೇವಸ್ಥಾನದವರೆಗೆ ರಸ್ತೆ ಅಗಲೀಕರಣ ಮಾಡಿ ಸಿಸಿ ರಸ್ತೆ ನಿರ್ಮಾಣಕ್ಕಾಗಿ ಲಕ್ಷಾಂತರ ರೂ. ಅನುದಾನ ಬಿಡುಗಡೆ ಆಗಿದೆ. ಗುತ್ತಿಗೆಯನ್ನೂ ನೀಡಲಾಗಿದೆ. ಕಟ್ಟಡಗಳ ತೆರವಿಗೆ ತೋರಿದ ಆತುರವನ್ನು ರಸ್ತೆ ಕಾಮಗಾರಿ ಆರಂಭಿಸಲು ತೋರುತ್ತಿಲ್ಲ. 8 ತಿಂಗಳಾದರೂ ಕಾಮಗಾರಿ ಆರಂಭವಾಗಿಲ್ಲ. ಹೀಗಾಗಿ ಸಂಚಾರಕ್ಕೆ ತೊಂದರೆ ಆಗಿದೆ.

ಸಂಚಾರಕ್ಕೆ ತೊಂದರೆ: ರಸ್ತೆ ಅಗಲೀಕರಣಕ್ಕಾಗಿ ಕಟ್ಟಡಗಳನ್ನು ತೆರವುಗೊಳಿಸಿದ ನಂತರ ಎಲ್ಲೆಂದರಲ್ಲಿ ತಗ್ಗುಗಳು ಬಿದ್ದಿವೆ. ವಾಹನ ಸವಾರರು ಸ್ಥಳೀಯ ಆಡಳಿತಕ್ಕೆ ಹಿಡಿಶಾಪ ಹಾಕುತ್ತ ಸಂಚರಿಸುತ್ತಿದ್ದಾರೆ.

ಧೂಳಿನ ಸಮಸ್ಯೆ: ರಸ್ತೆ ಅಗಲೀಕರಣದ ನಂತರ ರಸ್ತೆಯಲ್ಲಿ ಕಟ್ಟಡಗಳ ಮಣ್ಣು ಬಿದ್ದು, ಮೊದಲಿಗಿಂತಲೂ ಧೂಳಿನ ಸಮಸ್ಯೆ ಹೆಚ್ಚಾಗಿದೆ. ಇದರಿಂದಾಗಿ ರಸ್ತೆ ಪಕ್ದ ಮನೆ, ಅಂಗಡಿಗಳು ಧೂಳು ಮಯವಾಗುತ್ತಿವೆ. ಧೂಳಿನಿಂದಾಗಿ ಕೆಲವರು ಕೆಮ್ಮು, ಶೀತದಿಂದ ಬಳಲುವಂತಾಗಿದೆ.

ಬಗೆಹರಿಯದ ರಸ್ತೆ ತೆರವು: ಪಟ್ಟಣ ಪಂಚಾಯಿತಿ ಸರ್ಕಾರದ ನಿರ್ದೇಶನದಂತೆ ಎರಡು ಬದಿ ಸೇರಿ 26 ಅಡಿ ರಸ್ತೆ ಅಗಲೀಕರಣಕ್ಕೆ ಯೋಜನೆ ರೂಪಿಸಿತ್ತು. ಇದರಿಂದ ಮಾರ್ಗದ ಅನೇಕ ಮನೆಗಳಿಗೆ ತೊಂದರೆ ಉಂಟಾಗುತ್ತದೆ. ಕಡಿಮೆ ಮಾಡುವಂತೆ ಸ್ಥಳೀಯರ ಮನವಿ ಮೇರೆಗೆ 22ಅಡಿಗೆ ನಿಗದಿಪಡಿಸಲಾಗಿದೆ. ಮನೆಯವರು ಸ್ವಯಂಪ್ರೇರಿತವಾಗಿ ಕಟ್ಟಡಗಳನ್ನು ತೆರವುಗೊಳಿಸಿದರು. ನಂತರ ಪಟ್ಟಣದ ವಿವಿಧ ಸಂಘಟನೆಗಳು ಮೊದಲಿನ ಯೋಜನೆಯಂತೆ 26 ಅಡಿಗೆ ರಸ್ತೆ ಅಗಲೀಕರಣ ಮಾಡಬೇಕು. ಇದರಿಂದಾಗಿ ಸಂಚಾರಕ್ಕೆ ಅನುಕೂಲ ವಾಗುತ್ತದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಕಾಮಗಾರಿಯನ್ನು ಪ್ರಾರಂಭಿಸದೆ ಪಟ್ಟಣ ಪಂಚಾಯಿತಿ ಕಾಮಗಾರಿಗೆ ತಡೆ ನೀಡಿದೆ ಎನ್ನಲಾಗಿದೆ.

ಪಟ್ಟಣ ತಾಲೂಕು ಕೇಂದ್ರವಾಗಿದ್ದರೂ ಕೂಡ ಸಮಸ್ಯೆ ಗಳಿಗೆ ಮುಕ್ತಿ ಸಿಗುತ್ತಿಲ್ಲ. ಅಧಿಕಾರಿಗಳು ಇತ್ತ ಗಮನಹರಿಸಿ ಸಮಸ್ಯೆಗೆ ಪರಿಹಾರ ನೀಡಬೇಕಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.