ಸಿರವಾರ ಗ್ರಂಥಾಲಯಕ್ಕಿಲ್ಲಸ್ವಂತ ಕಟ್ಟಡ

ರಸ್ತೆ ಅಗಲೀಕರಣ ಸಂದರ್ಭ ಗ್ರಂಥಾಲಯ ಕಟ್ಟಡ ನೆಲಸಮ ನಿವೇಶನಕ್ಕೆ ಹುಡುಕಾಟ

Team Udayavani, Oct 26, 2019, 4:26 PM IST

26-October-17

ಸಿರವಾರ: ಪಟ್ಟಣದಲ್ಲಿ ಅನೇಕ ವರ್ಷಗಳಿಂದ ಸೂಕ್ತ ಗ್ರಂಥಾಲಯ ವ್ಯವಸ್ಥೆ ಇಲ್ಲದಿರುವುದರಿಂದ ಸಾರ್ವಜನಿಕರ ಜ್ಞಾನಾರ್ಜನೆಗೆ ತೊಂದರೆಯಾಗುತ್ತಿದೆ. ರಾಜ್ಯ ಸರ್ಕಾರ ಸಾರ್ವಜನಿಕರು, ವಿದ್ಯಾರ್ಥಿಗಳಿಗೆ ಓದಲು ಸುಸಜ್ಜಿತ ಗ್ರಂಥಾಲಯ ನಿರ್ಮಿಸಲು ಕೋಟ್ಯಂತರ ಅನುದಾನ ಬಿಡುಗಡೆ ಮಾಡುತ್ತಿದೆ. ಆದರೆ ಪಟ್ಟಣ ಗ್ರಾಪಂಯಿಂದ ಪಟ್ಟಣ ಪಂಚಾಯತಿಯಾಗಿದೆ. ಮಾತ್ರವಲ್ಲದೇ ನೂತನ ತಾಲೂಕಾಗಿ ಘೋಷಣೆಯಾದರು ಅನೇಕ ವರ್ಷಗಳಿಂದ ಗ್ರಂಥಾಲಯ ವ್ಯವಸ್ಥೆ ಇಲ್ಲದಿರುವುದು ಓದುಗರಿಗೆ ನಿರಾಶೆಯಾಗಿದೆ.

ಕಟ್ಟಡ ಕೊರತೆ: ಪಟ್ಟಣದ ಅಂಚೆ ಕಚೇರಿ ಹತ್ತಿರವಿದ್ದ ಗ್ರಂಥಾಲಯವನ್ನು ಕಳೆದ 4 ತಿಂಗಳ ಹಿಂದೆ ರಸ್ತೆ ಅಗಲೀಕರಣ ಸಂದರ್ಭದಲ್ಲಿ ನೆಲಸಮಗೊಳಿಸಲಾಗಿತು. ನಂತರ ವಿದ್ಯಾನಗರ ಶಾಲೆ ಕೊಠಡಿಗೆ ಗ್ರಂಥಾಲಯ ಸ್ಥಳಾಂತರಿಸಲಾಗಿದೆ. ಆದರೆ ಸೂಕ್ತ ಕಟ್ಟಡದ ವ್ಯವಸ್ಥೆ ಇಲ್ಲದಂತಾಗಿದೆ.

ನಿವೇಶನ ಕೊರತೆ: ಪ್ರಸ್ತುತ ನೂತನ ಗ್ರಂಥಾಲಯದ ಕಟ್ಟಡಕ್ಕೆ ಎಸ್‌ ಸಿಪಿಟಿಎಸ್‌ಪಿ ಯೋಜನೆಯಡಿ 30 ಲಕ್ಷ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಆದರೆ ಕಟ್ಟಡಕ್ಕೆ ಸೂಕ್ತ ನಿವೇಶನ ಸಿಗದಂತಾಗಿದೆ. ಈ ಕುರಿತು ಪಟ್ಟಣ ಪಂಚಾಯತಿಗೆ ಮನವಿ ಸಲ್ಲಿಸಿದರೂ ಅಧಿಕಾರಿಗಳು ಇನ್ನೂ ನಿವೇಶನ ಹುಡುಕುತ್ತಲೇ ಇದ್ದಾರೆ.

ಸೌಕರ್ಯ ಸಮಸ್ಯೆ: ಗ್ರಂಥಾಲಯದ ಮೇಲ್ಛಾವಣೆ ಬಿರುಕು ಬಿಟ್ಟಿದ್ದು, ಮಳೆ ಬಂದರೆ ಸೋರುತ್ತದೆ. ಅದರಲ್ಲಿಯೂ ಸರಿಯಾದ ಗಾಳಿ, ಬೆಳಕಿನ ವ್ಯವಸ್ಥೆಯಿಲ್ಲದೆ ಓದುಗರಿಗೆ ಪೂರಕ ವಾತವರಣವಿಲ್ಲದಂತಾಗಿ ಓದುಗರ ಸಂಖ್ಯೆ ನೆಲಕ್ಕೆ ಕುಸಿದಿದೆ.

ಪುಸ್ತಕ-ಸಾಮಗ್ರಿ ಮೂಲೆಗುಂಪು: ಪ್ರಸ್ತುತ ಕಟ್ಟಡದಲ್ಲಿ ಸ್ಥಳದ ಅಭಾವವಿದೆ. ಹಾಗಾಗಿ ಗಂಥಾಲಯಕ್ಕೆ ನೀಡಿದ ಸಾವಿರಾರೂ ಪುಸ್ತಕಗಳು, ಝರಾಕ್ಸ್‌ ಬಳಕೆಯಾಗದೇ ಮೂಲೆಗುಂಪಾಗಿವೆ. ಇದರಿಂದಾಗಿ ಓದುಗರಿಗೆ ಬೇಕಾದ ಪುಸ್ತಕಗಳು ಸಿಗದಂತಾಗಿ ನಿರುಪಯುಕ್ತವಾಗಿವೆ.

ವೇತನಕ್ಕೆ ಮನವಿ: ಗ್ರಂಥಾಲಯ ಪ್ರಾರಂಭವಾದಾಗ ಗ್ರಂಥಪಾಲಕರಿಗೆ ಮೊದಲು 300 ರೂ. ವೇತನ ನೀಡಲಾಗುತ್ತಿತ್ತು. ಪ್ರಸ್ತುತ 7000 ರೂ. ಸಂಬಳ ನೀಡಲಾಗುತ್ತಿದೆ. ಅದು ಪ್ರತಿ ತಿಂಗಳ ಸರಿಯಾಗಿ ಬರುವುದಿಲ್ಲ. ಇದರಿಂದಾಗಿ ಕುಟುಂಬ ನಿರ್ವಹಣೆಗೆ ಸಮಸ್ಯೆಯಾಗುತ್ತಿದೆ. ಸರ್ಕಾರ
ತಿಂಗಳಿಗೆ 13,300 ರೂ. ವೇತನ ನೀಡಲು ಆದೇಶ ಹೊರಡಿಸಿದೆ. ಅದು ಇನ್ನು ನ್ಯಾಯಲಯದಲ್ಲಿದೆ. ಹಾಗಾಗಿ ಗ್ರಂಥಾಪಾಲಕರು ಹೆಚ್ಚಿನ ವೇತನಕ್ಕಾಗಿ ಪರಿತಪ್ಪಿಸುವಂತಾಗಿದೆ.

ಟಾಪ್ ನ್ಯೂಸ್

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqwewq

Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

5-uv-fusion

Yugadi: ವರುಷದ ಆದಿ ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.