ಗೂಡ್ಸ್‌ ವಾಹನದಲ್ಲೇ ಜನರ ಸಾಗಾಟ!

• ಗ್ರಾಮೀಣ ಭಾಗಕ್ಕಿಲ್ಲ ಸಮರ್ಪಕ ಸಾರಿಗೆ ಬಸ್‌ ಸೌಲಭ್ಯ • ಸರಕು ವಾಹನದಲ್ಲೇ ಗ್ರಾಮೀಣ ಕಾರ್ಮಿಕರು-ವಿದ್ಯಾರ್ಥಿಗಳ ಓಡಾಟ

Team Udayavani, Sep 1, 2019, 11:04 AM IST

1-September-10

ಸಿರವಾರ: ಕೂಲಿ ಕಾರ್ಮಿಕರನ್ನು ಕೃಷಿ ಕೆಲಸಕ್ಕೆ ಸಾಗಿಸುತ್ತಿರುವ ಸರಕು ಸಾಗಾಟ ವಾಹನಗಳು.

ಸಿರವಾರ: ಸರಕು ವಾಹನಗಳಲ್ಲಿ ಪ್ರಯಾಣಿಕರನ್ನು ಸಾಗಿಸಬಾರದೆಂದು ಸರ್ಕಾರ ನಿಯಮ ರೂಪಿಸಿ ಜಾರಿಗೆ ತಂದಿದೆ. ಈ ಕುರಿತು ಚಾಲಕರಲ್ಲಿ ಜಾಗೃತಿ ಮೂಡಿಸಿದ್ದರೂ ಕೂಡ ವಾಹನಗಳ ಚಾಲಕರು, ಮಾಲಿಕರು ನಿಯಮಗಳನ್ನು ಮೀರಿ ಸರಕು ವಾಹನಗಳಲ್ಲಿ ಜನರನ್ನು ಸಾಗಿಸುತ್ತಿದ್ದಾರೆ.

ಗೂಡ್ಸ್‌ ವಾಹನಗಳಲ್ಲಿ ಚಾಲಕ ಮತ್ತು ಕ್ಲೀನರ್‌ ಹೊರತುಪಡಿಸಿ ಜನರ ಸಂಚಾರವನ್ನು ಸುಪ್ರೀಂಕೋರ್ಟ್‌ ಆದೇಶದ ಪ್ರಕಾರ ಸರ್ಕಾರ ನಿಷೇಧಿಸಿದೆ. ಆದರೆ ತಾಲೂಕಿನಾದ್ಯಂತ ಕೂಲಿ ಕಾರ್ಮಿಕರು, ಶಾಲಾ ಮಕ್ಕಳನ್ನು ಸರಕು ವಾಹನಗಳಲ್ಲೇ ಸಾಗಿಸಲಾಗುತ್ತಿದೆ. ಸರಕು ವಾಹನಗಳ ಚಾಲಕರು ಅತೀ ವೇಗವಾಗಿ ವಾಹನ ಚಲಾಯಿಸುತ್ತಿರುವುದರಿಂದ ಅಪಘಾತಗಳು ಹೆಚ್ಚುತ್ತಿವೆ. ಜನರ ಪಾಲಿಗೆ ಯಮಧೂತವಾಗುತ್ತಿವೆ. ಇತ್ತೀಚೆಗೆ ಪಟ್ಟಣದ ಕಿತ್ತೂರು ಚೆನ್ನಮ್ಮ ವಸತಿ ಶಾಲೆ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಪಾಲ್ಗೊಂಡು ಮರಳಿ ಸರಕು ವಾಹನದಲ್ಲಿ ಆಗಮಿಸುತ್ತಿರುವಾಗ ವಾಹನ ಪಲ್ಟಿಯಾಗಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡ ಘಟನೆಯೇ ಇದಕ್ಕೆ ಸಾಕ್ಷಿ.

ಕೂಲಿ ಕಾರ್ಮಿಕರ ಸಾಗಾಟ: ಸರಕು ವಾಹನಗಳಲ್ಲಿ ಜನರ ಸಾಗಾಟ ನಿಷೇಧಿಸಿದ್ದರೂ ದಿನನಿತ್ಯ ತಾಲೂಕಿನ ಸುತ್ತಲಿನ ಗ್ರಾಮಗಳ ಕೂಲಿಕಾರರನ್ನು ಸರಕು ವಾಹನಗಳಲ್ಲೇ ಕರೆದೊಯ್ಯಲಾಗುತ್ತಿದೆ. ನವಲಕಲ್ಲು, ಕಡದಿನ್ನಿ, ಮಲ್ಲಟ, ಗಣದಿನ್ನಿ ಸೇರಿದಂತೆ ಅನೇಕ ಹಳ್ಳಿಗಳ ಕೂಲಿ ಕಾರ್ಮಿಕರನ್ನು ಸರಕು ಸಾಗಿಸುವ ವಾಹನಗಳಲ್ಲೇ ದೇವದುರ್ಗ ತಾಲೂಕಿನ ಗಬ್ಬೂರು, ಗೂಗಲ್ ಸೇರಿ ವಿವಿಧ ಗ್ರಾಮಗಳಿಗೆ ಭತ್ತ ನಾಟಿ ಮಾಡುವುದಕ್ಕೆ ಕರೆದೊಯ್ಯಲಾಗುತ್ತಿದೆ. ಯುವಕರು, ಮಹಿಳೆಯರು ತಮ್ಮ ಜೀವದ ಹಂಗು ತೊರೆದು ಟಾಪ್‌ ಮೇಲೆ ಕುಳಿತು ಪ್ರಯಾಣ ಮಾಡುತ್ತಾರೆ. ಪೊಲೀಸರೆದುರೇ ಇಂತಹ ವಾಹನಗಳು ಓಡಾಡುತ್ತಿದ್ದರೂ ಅವರು ಕೂಡ ಮೂಕ ಪ್ರೇಕ್ಷಕರಾಗಿದ್ದಾರೆ.

ಶಾಲಾ ವಾಹನಗಳ ದರ್ಬಾರ್‌: ಪಟ್ಟಣದ ಕೆಲ ಪಾಲಕರು ತಮ್ಮ ಮಕ್ಕಳನ್ನು ಆಟೋಗಳಲ್ಲಿ ಶಾಲೆಗೆ ಕಳುಹಿಸುತ್ತಾರೆ. ಆದರೆ ಆಟೋಗಳ ಮಾಲೀಕರು ಮಕ್ಕಳನ್ನು ಕುರಿ ಹಿಂಡಿನಂತೆ ತುಂಬಿಕೊಂಡು ಹೋಗುತ್ತಾರೆ. ಹಳ್ಳಿ, ದೊಡ್ಡಿ, ತಾಂಡಾಗಳಿಗೆ ಸರಿಯಾದ ಬಸ್‌ ವ್ಯವಸ್ಥೆ ಇಲ್ಲದ ಕಾರಣ ದಿನನಿತ್ಯ ನೂರಾರು ವಿದ್ಯಾರ್ಥಿಗಳು ಪಟ್ಟಣ ಪ್ರದೇಶಗಳಿಗೆ ಗೂಡ್ಸ್‌ ವಾಹನಗಳಲ್ಲಿ ಸಂಚರಿಸುವುದು ಅನಿವಾರ್ಯವಾಗಿದೆ.

ರಾಜಕೀಯ ಒತ್ತಡ : ಗೂಡ್ಸ್‌ ವಾಹನಗಳು ಪಟ್ಟಣದಲ್ಲಿ ಸಂಚರಿಸುವಾಗ ಪೊಲೀಸ್‌ ಇಲಾಖೆಯವರು ಹಿಡಿದರೆ, ಚಾಲಕರು, ಮಾಲಿಕರು ರಾಜಕೀಯ ನಾಯಕರ ಮೇಲೆ ಒತ್ತಡ ತಂದು ವಾಹನವನ್ನು ಬಿಡಿಸಿಕೊಳ್ಳುತ್ತಾರೆ. ಹೀಗಾಗಿ ಪೊಲೀಸರು ನಿಸ್ಸಹಾಯಕರಾಗಿ ವಾಹನಗಳನ್ನು ಬಿಡಬೇಕಾದ ಪರಿಸ್ಥಿತಿ ಇದೆ.

ಆಗ್ರಹ: ಸರ್ಕಾರ ಸರಕು ಸಾಗಿಸುವ ವಾಹನಗಳಲ್ಲಿ ಪ್ರಯಾಣಿಕರ ಸಂಚಾರ ನಿಷೇಧಿಸಿದ್ದು ಸ್ವಾಗತಾರ್ಹ. ಆದರೆ ಗ್ರಾಮೀಣ ಭಾಗಕ್ಕೆ ಸಮರ್ಪಕ ಬಸ್‌ ಸೌಲಭ್ಯ ಕಲ್ಪಿಸದ್ದರಿಂದ ಗ್ರಾಮೀಣ ಜನತೆ, ವಿದ್ಯಾರ್ಥಿಗಳು ಅನಿವಾರ್ಯವಾಗಿ ಸರಕು ವಾಹನಗಳಲ್ಲಿ ಸಂಚರಿಸುತ್ತಿದ್ದಾರೆ. ಸಾರಿಗೆ ಇಲಾಖೆ ಗ್ರಾಮೀಣ ಭಾಗಕ್ಕೆ, ತಾಂಡಾ, ದೊಡ್ಡಿಗಳಿಗೆ ಸಮರ್ಪಕ ಬಸ್‌ ಸೇವೆ ಕಲ್ಪಿಸಬೇಕೆಂಬುದು ಪ್ರಜ್ಞಾವಂತರ ಅಭಿಪ್ರಾಯವಾಗಿದೆ. ಇನ್ನಾದರೂ ಅಧಿಕಾರಿಗಳು ಸರಕು ವಾಹನಗಳಲ್ಲಿ ಸಾರ್ವಜನಿಕರ ಸಂಚಾರ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಜತೆಗೆ ಸಮರ್ಪಕ ಬಸ್‌ ಸೌಲಭ್ಯ ಕಲ್ಪಿಸಬೇಕಿದೆ.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.