ಪರಿಸರ ರಕ್ಷಣೆ ನಮ್ಮಲ್ಲರ ಹೊಣೆ
ನಮ್ಮ ನಂಬಿಕೆ ಪ್ರಕೃತಿ ಮೇಲಿರಲಿ •ಗಿಡ ಬೆಳೆಸಲು ಮತ್ತೂಬ್ಬರಿಗೆ ಪ್ರೇರಣೆ ನೀಡಿ
Team Udayavani, Jun 15, 2019, 5:12 PM IST
ಸಿರವಾರ: ಬಲ್ಲಟಗಿಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ನೀಲಗಲ್ಲು ಬೃಹನ್ಮಠದ ಬಾಲಯೋಗಿ ರೇಣುಕಾ ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ ಮಾತನಾಡಿದರು.
ಸಿರವಾರ: ಸಸಿಗಳಿಗೆ ನೀರು ಹಾಕಿ ಬೆಳಸಿದರೆ ಪ್ರಕೃತಿ ತಾನಾಗಿಯೇ ನಮಗೆ ಮಳೆ ನೀಡುತ್ತದೆ. ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ ಎಂದು ನೀಲಗಲ್ಲು ಬೃಹನ್ಮಠದ ಬಾಲಯೋಗಿ ರೇಣುಕಾ ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ತಾಲೂಕಿನ ಬಲ್ಲಟಗಿ ಗ್ರಾಮದಲ್ಲಿ ಬಲ್ಲಟಗಿಯ ಲಿಂಗೈಕ್ಯ ವೇದಮೂರ್ತಿ ಬಸವಲಿಂಗ ತಾತನವರ ದೇವಸ್ಥಾನ ಸೇವಾ ಸಮಿತಿ, ಮಲ್ಲದಗುಡ್ಡದ ಶ್ರಮಜೀವಿ ಗ್ರಾಮೀಣ ಮತ್ತು ನಗರಾಭಿವೃದ್ಧಿ ಸಂಸ್ಥೆ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಸಸಿ ನೆಟ್ಟು ಸ್ವಾಮೀಜಿ ಮಾತನಾಡಿದರು.
ನಂಬಿಕೆಗಿಂತ ಮಿಗಿಲಾಗಿದ್ದು ಯಾವುದು ಇಲ್ಲ. ನಮ್ಮ ನಂಬಿಕೆ ಪ್ರಕೃತಿ ಮೇಲಿರಲಿ. ನಾವು ಪರಿಸರ ಬೆಳಸಿದರೆ ಅದು ನಮಗೆ ಜೀವನ ನೀಡುತ್ತದೆ. ಗಿಡಮರಗಳನ್ನು ಬೆಳೆಸುವುದರಿಂದ ಸಮಯಕ್ಕೆ ಸರಿಯಾಗಿ ಮಳೆ ಬೆಳೆಯಾಗುತ್ತದೆ. ಅದಕ್ಕಾಗಿ ಪ್ರತಿಯೊಬ್ಬರೂ ಒಂದಾದರೂ ಸಸಿ ನೆಟ್ಟು ಪೋಷಿಸಬೇಕು ಎಂದು ಹೇಳಿದರು.
ಡಾ| ಶರಣಪ್ಪ ಬಲ್ಲಟಗಿ ಮಾತನಾಡಿ, ಇಂದಿನ ಅನಾರೋಗ್ಯ, ಬಿಸಿಲಿನ ತಾಪಮಾನ ಹೆಚ್ಚಳ, ನೀರಿನ ಕೊರತೆ ಪ್ರತಿಯೊಂದಕ್ಕೂ ಮಳೆ ಅಭಾವೊಂದೇ ಕಾರಣ. ನಮ್ಮ ಇಂದಿನ ದುಸ್ಥಿತಿ ಕೊನೆಗಾಣಲು ಪರಿಸರ ಬೆಳೆಸಿ ಪೋಷಣೆಯೊಂದೆ ಪರಿಹಾರ ಮಾರ್ಗ. ಹಾಗಾಗಿ ಪ್ರತಿಯೊಬ್ಬರು ಒಂದೊಂದು ಗಿಡ ನೆಟ್ಟು ಬೆಳೆಸಬೇಕು ಎಂದು ಹೇಳಿದರು.
ಮಲ್ಲದಗುಡ್ಡದ ಶ್ರಮಜೀವಿ ಗ್ರಾಮೀಣ ಮತ್ತು ನಗರಾಭಿವೃದ್ಧಿ ಸಂಸ್ಥೆಯಿಂದ ಸಾವಿರ ಸಸಿಗಳನ್ನು ವಿತರಿಸಲಾಯಿತು.
ಬಲ್ಲಟಗಿಯ ಬಸವರಾಜಯ್ಯ ಸ್ವಾಮಿ ಹಿರೇಮಠ, ಮರಿಸ್ವಾಮಿ ಸಗರಮಠ, ಶ್ರಮಜೀವಿ ಸಂಸ್ಥೆಯ ಮಲ್ಲಯ್ಯ ಗೋರ್ಕಲ್, ಮಲ್ಲಣ್ಣ ಸಾಹುಕಾರ, ವೈ. ಬಸವನಗೌಡ, ಮುದ್ದಪ್ಪ ಸಾಹುಕಾರ, ಬಿ. ಬಸವರಾಜ, ಅಮರೇಶಗೌಡ ಸಜ್ಜನ, ಆದೇಶ ಸಗರಮಠ, ಬಸವಲಿಂಗ ಹೂಗಾರ, ಮೌನೇಶ ಗ್ರಾಮಸ್ಥರು, ಶಾಲಾ ವಿದ್ಯಾರ್ಥಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…