ಸಾಲ ಮನ್ನಾ ಹಣ ಸರ್ಕಾರಕ್ಕೆ ವಾಪಸ್‌!

ಚಿತ್ರದುರ್ಗದ ಖಾಸಗಿ ಬ್ಯಾಂಕ್‌ನಿಂದ ಪ್ರಮಾದ •ಬ್ಯಾಂಕ್‌ ವಿರುದ್ಧ ರೈತನಿಂದ ಜಿಲ್ಲಾಧಿಕಾರಿಗೆ ದೂರು

Team Udayavani, Jun 30, 2019, 10:00 AM IST

30-June-4

ಸಿರಿಗೆರೆ: ಚಿಕ್ಕಬೆನ್ನೂರಿನ ರೈತ ಕೆ.ಬಿ. ಮಂಜುನಾಥ್‌ ಬ್ಯಾಂಕ್‌ ಖಾತೆಗೆ ಸಾಲ ಮನ್ನಾ ಹಣ ಜಮಾ ಆಗಿರುವುದು ಮತ್ತು ಖಾತೆಯಿಂದ 99,999 ರೂ.ಗಳನ್ನು ವಾಪಸ್‌ ಪಡೆದಿರುವುದು

ಸಿರಿಗೆರೆ: ರಾಜ್ಯ ಸಮ್ಮಿಶ್ರ ಸರ್ಕಾರದ ಸಾಲ ಮನ್ನಾ ಯೋಜನೆಯಡಿ ರೈತರೊಬ್ಬರ ಬ್ಯಾಂಕ್‌ ಖಾತೆಗೆ ಜಮಾ ಆಗಿದ್ದ ಒಂದು ಲಕ್ಷ ರೂ. ಗಳನ್ನು ಚಿತ್ರದುರ್ಗದ ಖಾಸಗಿ ಬ್ಯಾಂಕೊಂದು ಸರ್ಕಾರಕ್ಕೆ ವಾಪಸ್‌ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.

ಸಿರಿಗೆರೆ ಸಮೀಪದ ಚಿಕ್ಕಬೆನ್ನೂರಿನ ರೈತ ಕೆ.ಬಿ. ಮಂಜುನಾಥ್‌ ಎಂಬುವವರಿಗೆ ಮಂಜೂರಾಗಿದ್ದ ಸಾಲ ಮನ್ನಾ ಹಣ ಈಗ ಸರ್ಕಾರಕ್ಕೆ ವಾಪಸ್‌ ಹೋಗಿದೆ.

ಮಂಜುನಾಥ್‌ ಅವರು ಚಿತ್ರದುರ್ಗದ ಖಾಸಗಿ ಬ್ಯಾಂಕ್‌ನಲ್ಲಿ ಕೃಷಿ ಸಾಲ ಖಾತೆ (917030047243550) ಹೊಂದಿದ್ದು, 2017-18ನೇ ಸಾಲಿನಲ್ಲಿ ಬ್ಯಾಂಕ್‌ನಿಂದ ಕೃಷಿ ಸಾಲವಾಗಿ 3,75,000 ರೂ. ಪಡೆದಿದ್ದರು. ಅದಕ್ಕೆ 2018ರ ಏಪ್ರಿಲ್ 30 ರಂದು 37,126 ರೂ. ಹಾಗೂ 2019ರ ಏಪ್ರಿಲ್ 30 ರಂದು 48,000 ರೂ. ಬಡ್ಡಿಯನ್ನೂ ಪಾವತಿಸಿದ್ದರು.

ಈ ಹಿಂದಿನ ಕಾಂಗ್ರೆಸ್‌ ಸರಕಾರವಿದ್ದಾಗ ಘೋಷಿಸಿದ್ದ ಸಾಲ ಮನ್ನಾದ 50 ಸಾವಿರ ರೂ. ಮಂಜುನಾಥ್‌ಗೆ ಸಿಕ್ಕಿತ್ತು. ಈಗಿನ ಮೈತ್ರಿ ಸರಕಾರ ಘೋಷಿಸಿದ್ದ ರೈತರ 2 ಲಕ್ಷ ರೂ.ವರೆಗಿನ ಸಾಲ ಮನ್ನಾ ಯೋಜನೆಯಡಿ ಮಂಜುನಾಥ್‌ ಅವರ ಬ್ಯಾಂಕ್‌ ಖಾತೆಗೆ 2019ರ ಏಪ್ರಿಲ್ 14 ರಂದು 50,000 ರೂ. ಹಾಗೂ ಜೂನ್‌ 20 ರಂದು 49,999 ರೂ. ಜಮಾ ಆಗಿತ್ತು. ಈ ಬಗ್ಗೆ ಮಂಜುನಾಥ್‌ ಅವರ ಮೊಬೈಲ್ಗೆ ಸಂದೇಶ ಕೂಡ ಬಂದಿತ್ತು. ಆದರೂ ಬ್ಯಾಂಕ್‌ ಅಧಿಕಾರಿಗಳ ಬಳಿ ಹೋಗಿ ವಿಚಾರಿಸಿ ಸಾಲಮನ್ನಾ ಹಣ ಜಮಾ ಆಗಿರುವುದನ್ನು ಖಾತ್ರಿ ಪಡಿಸಿಕೊಂಡಿದ್ದರು. ಮಂಜುನಾಥ್‌ಗೆ ಇನ್ನೂ ಒಂದು ಲಕ್ಷ ರೂ. ಸಾಲ ಮನ್ನಾ ಹಣ ಬರಬೇಕಿತ್ತು. ಆದರೆ ಈಗಾಗಲೇ ಜಮಾ ಮಾಡಿದ್ದ ಒಂದು ಲಕ್ಷ ರೂ. ಅನ್ನು ಸಾಲದ ಖಾತೆಯಿಂದ ಹಿಂದೆ ಪಡೆದ ಬ್ಯಾಂಕ್‌, ಸರ್ಕಾರಕ್ಕೆ ವಾಪಸ್‌ ಕಟ್ಟಿದೆ.

ಇದರಿಂದ ಕಂಗಾಲಾಗಿರುವ ರೈತ ಮಂಜುನಾಥ್‌, ತಮ್ಮ ಅನುಮತಿ ಇಲ್ಲದೆ ಖಾತೆಯಿಂದ ಬ್ಯಾಂಕ್‌ ಅಧಿಕಾರಿಗಳು ಅನಧಿಕೃತವಾಗಿ ವ್ಯವಹರಿಸಿದ್ದಾರೆ. ಸರ್ಕಾರದಿಂದ ನನಗೆ ಸಾಲ ಮನ್ನಾ ರೂಪದಲ್ಲಿ ಎರಡು ಲಕ್ಷ ರೂ. ಬರಬೇಕಿತ್ತು. ಆದರೆ ಜಮಾ ಆಗಿದ್ದ ಒಂದು ಲಕ್ಷ ರೂ. ಅನ್ನು ಬ್ಯಾಂಕ್‌ನವರು ಈಗ ಹಿಂದಕ್ಕೆ ಪಡೆದಿದ್ದಾರೆ. ಈ ಬಗ್ಗೆ ತನಿಖೆ ನಡೆಸಬೇಕೆಂದು ಆಗ್ರಹಿಸಿ ರಾಷ್ಟ್ರೀಯ ಕಿಸಾನ್‌ ಸಂಘದ ಮೂಲಕ ಡಿಸಿಗೆ ಮನವಿ ಸಲ್ಲಿಸಿದ್ದಾರೆ.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.