ಕಡ್ದಾಯ ಮತದಾನ ಜಾರಿಯಾಗಲಿ: ತರಳಬಾಳು ಶ್ರೀ
Team Udayavani, Apr 19, 2019, 4:43 PM IST
ಸಿರಿಗೆರೆ: ಚಿತ್ರದುರ್ಗ ಜಿಲ್ಲೆ ಸಿರಿಗೆರೆಯಲ್ಲಿ ತರಳಬಾಳು ಜಗದ್ಗುರು ಡಾ| ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಗುರುವಾರ ಮತ
ಚಲಾಯಿಸಿದರು.
ಸಿರಿಗೆರೆಯ ಮತಗಟ್ಟೆ ಸಂಖ್ಯೆ 70 ರಲ್ಲಿ ಮತ ಚಲಾಯಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, ದೇಶದಲ್ಲಿ ಕಡ್ಡಾಯ
ಮತದಾನ ಪದ್ಧತಿ ಜಾರಿಯಾಗಬೇಕು. ಆಗ ಮಾತ್ರ ಪ್ರಜಾಪ್ರಭುತ್ವ ಯಶಸ್ವಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು. ಮತದಾನ ಮಾಡದ ಮತದಾರರಿಗೆ ದೇಶದಲ್ಲಿ ದೊರೆಯುವ ಸೌಲಭ್ಯಗಳನ್ನು ನಿರಾಕರಿಸಬೇಕು. ವಿವಿಧ ಇಲಾಖೆ ಗಳಲ್ಲಿ ಕೆಲಸ ನಿರ್ವಹಿಸುವ ನೌಕರರಿಗೆ ಭಡ್ತಿ ಮತ್ತಿತರ ಸೌಕರ್ಯ ನಿಲ್ಲಿಸಬೇಕು.
ಹಾಗೆಯೇ ಸಾಮಾನ್ಯ ಮತದಾರರಿಗೆ ಲಭ್ಯವಿರುವ ಪಡಿತರ, ಅಡುಗೆ ಅನಿಲ ಮುಂತಾದ ಸೌಲಭ್ಯಗಳನ್ನು ತಡೆ ಹಿಡಿಯಬೇಕು.
ಆಗ ಮಾತ್ರ ಎಲ್ಲರೂ ಮತದಾನ ವ್ಯವಸ್ಥೆಯಲ್ಲಿ ಭಾಗಿಯಾಗುತ್ತಾರೆ ಎಂದು ಪ್ರತಿಪಾದಿಸಿದರು. ನಾಗರಿಕರೆಲ್ಲರೂ ಮತದಾನ ಮಾಡ ಬೇಕು.
ಮತದಾನ ಮಾಡುವವರು ನಾಗರಿಕರು, ಮತದಾನ ಮಾಡದವರು ಅನಾಗರಿಕರು. ಗ್ರಾಮೀಣ ಪ್ರದೇಶದ ಮತದಾರರ ಮನವೊಲಿಸಿ ಶೇ. 100 ರಷ್ಟು ಮತದಾನ ಆಗುವಂತೆ ನೋಡಿಕೊಳ್ಳಬೇಕು. ಓಟು ಮಾಡುವ ಸಂದರ್ಭದಲ್ಲಿ ಬೆರಳಿಗೆ ಹಚ್ಚುವ ಕಪ್ಪು ಮಸಿ ಮೈಗೆ
ಹತ್ತದಂತೆ ನೋಡಿಕೊಳ್ಳಬೇಕು ಎಂದು ಮಾರ್ಮಿಕವಾಗಿ ನುಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ