ಆಡಂಬರದ ಮದುವೆ ನಿರಾಕರಿಸಿ
ವಿದ್ಯಾವಂತ ವರ್ಗ ಸರಳ ಮದುವೆಯತ್ತ ಯೋಚನೆ ಮಾಡಲಿ: ತರಳಬಾಳು ಶ್ರೀ
Team Udayavani, Dec 13, 2019, 5:05 PM IST
ಸಿರಿಗೆರೆ: ಆಡಂಬರದ ಮದುವೆ ಮಾಡುವ ಸಂಭ್ರಮದಲ್ಲಿ ಸಾಲ ಮಾಡಿ ಸಂಕಷ್ಟಕ್ಕೆ ಸಿಲುಕುವವರೇ ಹೆಚ್ಚು. ಸಾಲ ಹಾಗೂ ಬಡ್ಡಿಯನ್ನೂ ತೀರಿಸಲಾಗದೆ ಒದ್ದಾಡುವಂತಹ ಪರಿಸ್ಥಿತಿ ತಂದುಕೊಳ್ಳದೆ ಸರಳವಾಗಿ ಮದುವೆ ಮಾಡಿಕೊಂಡು ಸಂತೋಷವಾಗಿ ಜೀವನ ಸಾಗಿಸಬೇಕು ಎಂದು ತರಳಬಾಳು ಜಗದ್ಗುರು ಡಾ| ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಕರೆ ನೀಡಿದರು.
ಇಲ್ಲಿನ ತರಳಬಾಳು ಬೃಹನ್ಮಠದಲ್ಲಿ ಮಾದಾರ ಚನ್ನಯ್ಯ ಹಾಗೂ ತೆಲಗುಬಾಳು ಸಿದ್ಧೇಶ್ವರ ಜಯಂತಿ ಅಂಗವಾಗಿ ಆಯೋಜಿಸಿದ್ದ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ಶ್ರೀಗಳು ಆಶೀರ್ವಚನ ನೀಡಿದರು.
ವಿದ್ಯಾವಂತ ವರ್ಗ ಸರಳ ಮದುವೆಯತ್ತ ಯೋಚನೆ ಮಾಡಬೇಕು. ಸಮಾಜದಲ್ಲಿ ಶಿಕ್ಷಿತರಾದವರು ಅದ್ಧೂರಿ ಮದುವೆ ಮಾಡಿಕೊಳ್ಳುವ ಧಾವಂತದಲ್ಲಿ ಕಲ್ಯಾಣಮಂಟಪಗಳು ಮತ್ತು ಅಡೆತಡೆ ಇಲ್ಲದ ಖರ್ಚುಗಳತ್ತ ಹೋಗುತ್ತಿದ್ದಾರೆ. ಹಳ್ಳಿಗಳಲ್ಲಿ ಬದುಕುತ್ತಿರುವ ಜನಸಾಮಾನ್ಯರು ಮತ್ತು ರೈತರು ಸರಳವಾಗಿ ಮದುವೆ ಮಾಡಿಕೊಳ್ಳುವ ಅಪೇಕ್ಷೆ ಹೊಂದಿ ಸಾಮಾಹಿಕ ಮದುವೆಯಾಗಲು ಮನಸ್ಸು ಮಾಡುತ್ತಿದ್ದಾರೆ ಎಂದರು.
ಮದುವೆ ಎರಡು ಜೀವಗಳ ಅನುಬಂಧ. ಹೀಗಿರುವಾಗ ಒಬ್ಬರಿಗೊಬ್ಬರು ಹೊಂದಾಣಿಕೆ ಮಾಡಿಕೊಂಡು ಸತಿ ಪತಿಗಳಾಗಿ ಜೀವನವನ್ನು ಸಂತೋಷಮಯವಾಗಿ ಬಾಳಬೇಕು. ವಿದ್ಯಾವಂತರಾದವರು ಬದುಕನ್ನು ಅರ್ಥ ಮಾಡಿಕೊಳ್ಳದೆ ಮದುವೆಯಾದ ಕೆಲವು ದಿನಗಳಲ್ಲಿಯೇ ವಿಚ್ಛೇದನ ಪಡೆದುಕೊಳ್ಳುವಂತಹ ಹಂತಕ್ಕೆ ಹೋಗುತ್ತಿದ್ದಾರೆ. ಇದಕ್ಕೆ ಪರಸ್ಪರರ ಮಧ್ಯೆ ಹೊಂದಾಣಿಕೆಯ ಕೊರತೆಯೇ ಕಾರಣ ಎಂದು ವಿಷಾದಿಸಿದರು.
ಅಣ್ಣನ ಬಳಗದ ಅಧ್ಯಕ್ಷ ಬಿ.ಎಸ್. ಮರುಳಸಿದ್ದಯ್ಯ ಉಪಸ್ಥಿತರಿದ್ದರು. ಪ್ರಾಚಾರ್ಯ ಐ.ಜಿ. ಚಂದ್ರಶೇಖರಯ್ಯ 7 ಜೋಡಿ ವಧು-ವರರಿಗೆ ಇಷ್ಟಲಿಂಗ ದೀಕ್ಷೆ ನೀಡಿ ಮಾಂಗಲ್ಯ ಧಾರಣೆಯ ಪೌರೋಹಿತ್ಯ ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ