ಸತತ ಪರಿಶ್ರಮದಿಂದ ಗೆಲುವು ನಿಶ್ಚಿತ: ಸ್ವಾಮೀಜಿ

ಗಯಾನಾ ದೇಶದ ರಾಯಭಾರಿ ಡಾ| ಕೆ.ಜೆ. ಶ್ರೀನಿವಾಸ್‌ಗೆ ಅಭಿನಂದನೆ•ಯುವಜನರಿಗೆ ಮಾದರಿ

Team Udayavani, Aug 3, 2019, 5:13 PM IST

3-Agust-45

ಸಿರಿಗೆರೆ: ಸತತವಾಗಿ ಕಠಿಣ ಪರಿಶ್ರಮದಿಂದ ಸಾಧಿಸುವ ಎಲ್ಲಾ ಸಾಧನೆಗಳು ಗೆಲುವು ಕಂಡುಕೊಳ್ಳುತ್ತವೆ. ಅಂತಹ ಸಾಧನೆ ಮಾಡಿರುವ ಡಾ. ಶ್ರೀನಿವಾಸ್‌ ಅವರು ಕಿರಿಯ ವಯಸ್ಸಿನಲ್ಲಿ ಭಾರತದ ರಾಯಭಾರಿಯಾಗಿ ಆಯ್ಕೆಯಾಗಿದ್ದಾರೆ. ಇದಕ್ಕೆ ಅವರ ಸತತ ಪ್ರಯತ್ನ, ಆತ್ಮಸ್ಥೈರ್ಯ ಮತ್ತು ಅವರಲ್ಲಿನ ಪ್ರತಿಭೆ ಕಾರಣ ಎಂದು ಶ್ರೀ ತರಳಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ತರಳಬಾಳು ಮಠದ ಗುರುಶಾಂತೇಶ್ವರ ದಾಸೋಹ ಮಂಟಪದಲ್ಲಿ ಗಯಾನ ದೇಶದ ರಾಯಭಾರಿ ಶ್ರೀ ಕೆ.ಜೆ. ಶ್ರೀನಿವಾಸ್‌ ಅವರಿಗೆ ಏರ್ಪಡಿಸಲಾಗಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿನ ಕುಗ್ರಾಮ ಹೊಳಲ್ಕೆರೆ ತಾಲೂಕಿನ ಕೋಟೆಹಾಳ್‌ನಲ್ಲಿ ಹುಟ್ಟಿದ ಪ್ರತಿಭೆ ಈಗ ಜಗದ್ವಿಖ್ಯಾತಿ ಗಳಿಸುತ್ತಿದೆ. ಗ್ರಾಮಾಂತರ ಪ್ರದೇಶದಲ್ಲಿರುವ ಮಕ್ಕಳಿಗೆ ಶ್ರೀನಿವಾಸ್‌ ಮಾದರಿಯಾಗಿದ್ದಾರೆ ಎಂದರು.

ಬೆಂಗಳೂರಿನ ಪ್ರಾದೇಶಿಕ ಪಾಸ್‌ಪೋರ್ಟ್‌ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವಾಗ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆ ಗಮನಿಸಿ ಭಾರತದಲ್ಲಿಯೇ ಪ್ರಪ್ರಥಮ ಪಾಸ್‌ಪೋರ್ಟ್‌ ಸೇವಾ ಕೇಂದ್ರವನ್ನು ಬೆಂಗಳೂರಿನಲ್ಲಿ ಪ್ರಾರಂಭಿಸಿ ಜನಸ್ನೇಹಿಯಾಗಿಸಿದ ಕೀರ್ತಿ ಇವರದ್ದಾಗಿತ್ತು ಎಂದರು. ಡಾ.ಶ್ರೀನಿವಾಸ್‌ ಮಾತನಾಡಿ, ಗ್ರಂಥಾಲಯ, ಶಾಲೆ ಹಾಗೂ ನನ್ನ ಮನೆ ಮೊದಲ ಪಾಠಶಾಲೆಯಾಗಿತ್ತು. ಬಾಲ್ಯದಿಂದಲೂ ಆಟ-ಪಾಠಗಳಲ್ಲಿ ಸದಾ ಮುಂಚೂಣಿಯಲ್ಲಿದ್ದೆ. ನನಗೆ ಕ್ರೀಡೆ, ಕಲೆ, ಸಾಹಿತ್ಯ, ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಆಸಕ್ತಿ ಇತ್ತು. ವಿದ್ಯಾರ್ಥಿಗಳಾದ ನೀವೂ ಸಹ ದೃತಿಗೆಡದೆ ಧೈರ್ಯದಿಂದ ಅಭ್ಯಾಸದಲ್ಲಿ ತೊಡಗಿಕೊಂಡು ಮುನ್ನುಗ್ಗಿ ಎಂದರು.

ವೀರಶೈವ ಸಂಘದ ಅಧ್ಯಕ್ಷ ಕೆ.ಆರ್‌.ಜಯದೇವಪ್ಪ ಮಾತನಾಡಿ, ಶ್ರೀನಿವಾಸ್‌ ಅವರು ಬಾಲ್ಯದಿಂದಲೂ ಆಟ-ಪಾಠಗಳಲ್ಲಿ ಸದಾ ಮುಂಚೂಣಿಯಲ್ಲಿದ್ದರು. ಇವರು ಕ್ರೀಡೆ, ಕಲೆ, ಸಾಹಿತ್ಯ, ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆಯುತ್ತಿದ್ದುದನ್ನು ಸ್ಮರಿಸಬಹುದು. ಅಪಾರ ದೇಶಭಕ್ತಿ, ಸಾಮಾಜಿಕ ಕಳಕಳಿ, ಸೇವಾ ಮನೋಭಾವ ಹೊಂದಿರುವ ಇವರು ಇಂದಿನ ವಿದ್ಯಾರ್ಥಿಗಳಿಗೆ ಆದರ್ಶಪ್ರಾಯವಾಗಿದ್ದಾರೆ ಎಂದರು.

ಜಿಲ್ಲಾ ರಕ್ಷಣಾಧಿಕಾರಿ ಡಾ.ಕೆ.ಅರುಣ್‌ ಮಾತನಾಡಿ, ಶ್ರೀನಿವಾಸ್‌ ಅವರಲ್ಲಿ ಪಾರದರ್ಶಕತೆ, ಸರಳತೆ, ದಕ್ಷತೆ, ಅವರ ಸೇವಾ ತತ್ಪರತೆ, ಆದರ್ಶ ವ್ಯಕ್ತಿತ್ವವು ಇಂದಿನ ಯುವಜನರಿಗೆ ಮಾದರಿಯಾಗಿದೆ ಎಂದರು. ಕಿರಿಯ ವಯಸ್ಸಿನಲ್ಲಿ ಹಿರಿದಾದ ಸೇವೆ ಗುರುತಿಸಿ ಮತ್ತೆ ಇಂದು ಸಿರಿಗೆರೆಯಲ್ಲಿ ಅಭಿನಂದಿಸಲಾಗುತ್ತಿರುವುದು ಶ್ಲಾಘನೀಯ ಎಂದರು.

ಡಾ.ಶ್ರೀನಿವಾಸ ಅವರ ಪತ್ನಿ ಜಿ.ಎಸ್‌. ಅಶ್ವಿ‌ನಿ, ತಂದೆ ಕೋಟೆಹಾಳ್‌ ಜಯದೇವಪ್ಪ, ತಾಯಿ ಚಂದ್ರಮ್ಮ, ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ಎಸ್‌.ಬಿ. ರಂಗನಾಥ್‌, ವಿಶೇಷಾಧಿಕಾರಿ ಡಾ.ಎಚ್.ವಿ. ವಾಮದೇವಪ್ಪ ಚನ್ನಗಿರಿ ತುಮ್‌ಕೋಸ್‌ನ ಅಧ್ಯಕ್ಷ ಶಿವಕುಮಾರ್‌, ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು, ನೌಕರು ಭಾಗವಹಿಸಿದ್ದರು. ಬಳಿಕ ಸಂವಾಎ ಕಾರ್ಯಕ್ರಮ ನಡೆಯಿತು. ಅಧ್ಯಾಪಕಿ ಎಂ. ಪ್ರಮೀಳಾ ನಿರೂಪಿಸಿದರು. ಕಾಲೇಜು ಪ್ರಾಚಾರ್ಯ ಐ.ಜಿ. ಚಂದ್ರಶೇಖರಯ್ಯ ಸ್ವಾಗತಿಸಿದರು. ಮುಖ್ಯೋಪಾಧ್ಯಾಯಿನಿ ಎಂ.ಎನ್‌. ಶಾಂತಾ ವಂದಿಸಿದರು.

ಟಾಪ್ ನ್ಯೂಸ್

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.