ಗೊಣ್ಣೆ ಹುಳು ನಿಯಂತ್ರಣಕ್ಕೆ ಶಿಲೀಂಧ್ರ ಕೀಟನಾಶಕ ಬಳಸಿ

ಕಡಲೆ ಬೆಳೆಯಲ್ಲಿ ಕಂಡುಬರುವ ಹುಳುವಿನ ನಿಯಂತ್ರಣದ ಬಗ್ಗೆ ರೈತರಿಗೆ ಮಾಹಿತಿ

Team Udayavani, Nov 18, 2019, 5:45 PM IST

18-November-40

ಸಿರುಗುಪ್ಪ: ತಾಲೂಕಿನ ತೆಕ್ಕಲಕೋಟೆ ಸಮೀಪದ ಬಂಗಾರರಾಜು ಕ್ಯಾಂಪ್‌ನ ಸುತ್ತಮುತ್ತಲಿನ ಜಮೀನುಗಳಲ್ಲಿ ರೈತರು ಬೆಳೆದಿರುವ ಕಡಲೆ ಬೆಳೆ ಕ್ಷೇತ್ರಕ್ಕೆ ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಜೈವಿಕ ವಿಭಾಗದ ಸಂಶೋಧನಾ ವಿದ್ಯಾರ್ಥಿಗಳ ತಂಡ ಭೇಟಿನೀಡಿ ಕಡಲೆ ಬೆಳೆಯಲ್ಲಿ ಕಂಡುಬಂದಿರುವ ಗೊಣ್ಣೆ ಹುಳುವಿನ ನಿಯಂತ್ರಣದ ಬಗ್ಗೆ ರೈತರಿಗೆ ಮಾಹಿತಿ ನೀಡಿದರು.

ರಾಯಚೂರು ಕೃಷಿ ವಿಜ್ಞಾನಗಳ ವಿ.ವಿ. ಜೈವಿಕ ವಿಭಾಗದ ಸಂಶೋಧನಾ ಕೇಂದ್ರದಲ್ಲಿ ಗೊಣ್ಣೆ ಹುಳುವಿನ ನಿಯಂತ್ರಣಕ್ಕೆ ಕಂಡು ಹಿಡಿದಿರುವ ಮೆಟರೈಝಿಯಂ ಅನಿಸೋಪ್ಲಿಯೆ ಜೈವಿಕ ಶಿಲೀಂಧ್ರ ಕೀಟನಾಶಕವನ್ನು ಕಡಲೆ ಬೆಳೆಗೆ ಸಿಂಪಡಿಸುವ ಮೂಲಕ ಗೊಣ್ಣೆ ಹುಳುವಿನ ಮೇಲೆ ಪ್ರಾಯೋಗಿಕ ಪರೀಕ್ಷೆ ನಡೆಸಲಾಯಿತು.

ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯವು ಜೈವಿಕ ವಿಭಾಗದಲ್ಲಿ ಪರಿಸರಕ್ಕೆ ಹಾನಿ ಉಂಟು ಮಾಡದ ಹಾಗೂ ರೈತರೇ ಸ್ವಂತ ತಯಾರಿಸಿಕೊಳ್ಳುವ ಅತ್ಯಂತ ಕಡಿಮೆ ಬೆಲೆಯಲ್ಲಿ ಕೀಟಗಳನ್ನು ನಿಯಂತ್ರಿಸುವ ಜೈವಿಕ ಶಿಲೀಂಧ್ರ ಕೀಟನಾಶಕಗಳನ್ನು ಅಭಿವೃದ್ಧಿಪಡಿಸಿ ರೈತರಿಗೆ ಪ್ರಾಯೋಗಿಕವಾಗಿ ನೀಡುತ್ತಿದೆ. ಸಂಶೋಧನಾ ವಿದ್ಯಾರ್ಥಿನಿ ಸೌಮ್ಯ ಮಾತನಾಡಿ, ಗೊಣ್ಣೆ ಹುಳುವಿನ ಮೇಲೆ ಮೆಟರೈಝಿಯಂ ಅನಿಸೋಪ್ಲಿಯೆ ಜೈವಿಕ ಶಿಲೀಂಧ್ರ ಕೀಟನಾಶಕವು ಅತ್ಯಂತ ಪರಿಣಾಮಕಾರಿಯಾಗಿ ಕೆಲಸಮಾಡುತ್ತಿದೆ. ಈ ಜೀವಾಣುಗಳ ಸಂಪರ್ಕಕ್ಕೆ ಬರುವ ಗೊಣ್ಣೆ ಹುಳುಗಳು ರೋಗಗಳಿಗೆ ತುತ್ತಾಗಿ ಸಾಯುತ್ತವೆ. ಈ ಜೀವಾಣುಗಳು ವಾತಾವರಣದಲ್ಲಿ ಬಿಡುಗಡೆಗೊಂಡು ನೈಸರ್ಗಿಕವಾಗಿ ಪುನರ್‌ ಉತ್ಪತ್ತಿ ಯಾಗುವುದರಿಂದ ಪದೇ ಪದೇ ಸಿಂಪರಣೆಯ ಅಗತ್ಯವಿಲ್ಲ.

ಗೊಣ್ಣೆ ಹುಳುಗಳು ಮಣ್ಣಿನಲ್ಲಿ ಅಡಗಿದ್ದು, ರಾತ್ರಿವೇಳೆ ಹೊರಬಂದು ಬೆಳೆಯ ಬೇರುಗಳನ್ನು ತಿಂದು ನಾಶಮಾಡುವುದರಿಂದ ಬೆಳೆಗೆ ಭೂಮಿಯಿಂದ ಬೇರುಗಳ ಮೂಲಕ ಪೋಷಕಾಂಶ ನೀರು ದೊರೆಯದೇ ಸಸ್ಯವೆಲ್ಲವು ಒಣಗಿ ಸುಟ್ಟಂತಾಗುತ್ತವೆ. ಒಂದು ಜಮೀನಿನಿಂದ ಇನ್ನೊಂದು ಜಮೀನಿಗೆ ಸಾಗುವುದರಿಂದ ಈ ಕೀಟವು ಹೆಚ್ಚಿನ ಪ್ರದೇಶದಲ್ಲಿ ಹಾನಿಯನ್ನುಂಟುಮಾಡುತ್ತವೆ. ರೈತರು ಗೊಣ್ಣೆಹುಳುವಿನ ನಿಯಂತ್ರಣಕ್ಕೆ 200ಲೀಟರ್‌ ನೀರಿಗೆ 2ಕೆಜಿ ಮೆಟರೈಝಿಯಂ ಅನಿಸೋಪ್ಲಿಯೆ ಜೈವಿಕ ಶಿಲೀಂಧ್ರ ಕೀಟನಾಶಕ, 2 ಕೆಜಿ ಕಡ್ಲೆಬೇಳೆ ಹಿಟ್ಟು, 2ಕೆಜಿ ಬೆಲ್ಲ ಬೆರಸಿ 8ದಿನಗಳ ಕಾಲ ಕೊಳೆಯಲು ಬಿಟ್ಟು ನಂತರ ಒಂದು ಲೀಟರ್‌ಗೆ
ಸಿದ್ಧಗೊಂಡ ದ್ರಾವಣವನ್ನು 2ಎಂಎಲ್‌ನಂತೆ ಬೆರೆಸಿ ಒಂದು ಎಕರೆಗೆ 400ಲೀಟರ್‌ ದ್ರಾವಣವನ್ನು ಗಿಡದ ಬೇರು ತೊಯ್ಯುವಂತೆ ಪಂಪಿನ ನಾಜಲನ್ನು ಪರಿವರ್ತಿಸಿಕೊಂಡು ಸಿಂಪರಣೆ ಮಾಡಬೇಕು.

ಗೊಣ್ಣೆಹುಳು ಮೇ, ಜೂನ್‌ ತಿಂಗಳಲ್ಲಿ ಮಳೆ ಬಂದಾಗ ತಂಪಾದ ವಾತಾವರಣದಲ್ಲಿ ಭೂಮಿಯಲ್ಲಿ 500ಕ್ಕೂ ಹೆಚ್ಚು ಮೊಟ್ಟೆಯಿಟ್ಟು, ಜುಲೈ ತಿಂಗಳಿಂದ ನವೆಂಬರ್‌ವರೆಗೆ ಮೊಟ್ಟೆಗಳಿಂದ ಹೊರಬರುವ ಮರಿಹುಳುಗಳು ಸಸ್ಯಗಳ ಬೇರುಗಳನ್ನು ತಿಂದು ಹಾನಿ ಉಂಟುಮಾಡುತ್ತವೆ. ಅಕ್ಟೋಬರ್‌ನಿಂದ, ಮೇವರೆಗೆ ಮಣ್ಣಿನಲ್ಲಿ ಕೋಶಾವಾಸ್ಥೆಯಲ್ಲಿ ನಿದ್ರಾಸ್ಥಿತಿಯಲ್ಲಿ ತೆರಳಿ ನಂತರ ದುಂಬಿಗಳಾಗಿ ಪರಿವರ್ತನೆಯಾಗಿ ಗಂಡು ಮತ್ತು ಹೆಣ್ಣು ದುಂಬಿಗಳು ಸಮ್ಮಿಲನಗೊಂಡು ಮೊಟ್ಟೆ ಇಡುತ್ತವೆ. ಆದ್ದರಿಂದ ರೈತರು ಮುಂಜಾಗ್ರತೆ ಕ್ರಮವಾಗಿ ಈ ಜೈವಿಕ ಶಿಲೀಂಧ್ರ ಕೀಟನಾಶಕ ಬಳಸಬೇಕೆಂದು ತಿಳಿಸಿದರು.  ಕೃಷಿ ವಿಜ್ಞಾನಿ ಎಂ.ಎ. ಬಸವಣ್ಣೆಪ್ಪ, ಸಂಶೋಧನಾ ವಿದ್ಯಾರ್ಥಿಗಳು ಮತ್ತು ರೈತರು ಇದ್ದರು.

ಟಾಪ್ ನ್ಯೂಸ್

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.