ಚೆಕ್‌ ಡ್ಯಾಂ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ

ಕಿರು ಅಂತರ್ಜಲ ಅಣೆಕಟ್ಟಿನಿಂದ ರೈತರಿಗೆ ಅನುಕೂಲ•50 ಕೋಟಿ ರೂ. ವೆಚ್ಚದ ಯೋಜನೆ

Team Udayavani, May 7, 2019, 1:00 PM IST

7-mAY-17

ಸಿರುಗುಪ್ಪ: ತಾಲೂಕಿನ ವೇದಾವತಿ ಹಗರಿ ನದಿಯಲ್ಲಿ ಹಗರಿ ನದಿಗೆ ಚೆಕ್‌ ಡ್ಯಾಂ ನಿರ್ಮಾಣದ ನೀಲಿ ನಕ್ಷೆಯನ್ನು ಜಲತಜ್ಞರು ಮತ್ತು ರೈತ ಸಂಘದ ಪದಾಧಿಕಾರಿಗಳು ಪರಿಶೀಲಿಸಿದರು

ಸಿರುಗುಪ್ಪ: ತಾಲೂಕಿನಲ್ಲಿ ಹರಿಯುತ್ತಿರುವ ವೇದಾವತಿ ಹಗರಿ ನದಿ ನೀರನ್ನು ಅಲ್ಲಲ್ಲಿ ತಡೆ ಹಿಡಿದು 30 ಸಾವಿರಕ್ಕೂ ಅಧಿಕ ಎಕರೆ ಜಮೀನು ಬೇಸಾಯಕ್ಕೆ ಅನುಕೂಲ ಮಾಡಿಕೊಡಲು ಹಗರಿ ನದಿಗೆ ಸಬ್‌ ಸರ್ಫೇಸ್‌ ಚೆಕ್‌ ಡ್ಯಾಂ ನಿರ್ಮಿಸಲು ತಾಲೂಕಿನಲ್ಲಿ ಹರಿಯುವ ವೇದಾವತಿ ಹಗರಿ ನದಿಯಲ್ಲಿ ಕುರುವಳ್ಳಿ, ಬಗ್ಗೂರು, ಬಲಕುಂದಿ, ಉತ್ತನೂರು ಮತ್ತು ಬಳ್ಳಾರಿ ತಾಲೂಕಿನ ಹಡ್ಲಿಗಿ ಹತ್ತಿರ ಅಂತರ್ಜಲ ಆಣೆಕಟ್ಟು ನಿರ್ಮಾಣಕ್ಕೆ ಸ್ಥಳ ಗುರುತಿಸಿದೆ.

ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ (ಪ್ರೊ. ನಂಜುಂಡಸ್ವಾಮಿ ಬಣ)ಯ ಪದಾಧಿಕಾರಿಗಳು ಮತ್ತು ಜಲತಜ್ಞ ವೆಂಕಟರೆಡ್ಡಿ, ಗಾಂಧಿವಾದಿ ವಿಠಲ ಮತ್ತವರ ತಂಡ ಸ್ಥಳದಲ್ಲಿ ಹಾಜರಾಗಿತ್ತು.

ಬರೀ ಮರಳು ಕಂಡುಬರುವ ತಾಲೂಕಿನ ಪೂರ್ವ ಗಡಿ ಪ್ರದೇಶದಲ್ಲಿ ಭೂಮಿಯ ಮೇಲ್ಮಟ್ಟಕ್ಕಿಂತ 20ಅಡಿ ಆಳದಲ್ಲಿ ಮರಳಿನ ರಾಶಿಯ ಹಗರಿ ನದಿ ಹರಿಯುತ್ತಿದೆ. ಈ ಮರಳಿನ ರಾಶಿಯ ಅಡಿಯಲ್ಲಿ ಗಟ್ಟಿ ಪದರ ಬರುವವರೆಗೆ ಅಂತರ್ಜಲ ಕಿರು ಆಣೆಕಟ್ಟು ಅಥವಾ ಸಬ್‌ ಸರ್ಫೇಸ್‌ ಚೆಕ್‌ ಡ್ಯಾಂ ನಿರ್ಮಿಸಿ ಇಲ್ಲಿ ನೀರನ್ನು ತಡೆದು ಅಲ್ಲಿಂದ ಏತ ನೀರಾವರಿ ಮೂಲಕ ಅನುಕೂಲ ಮಾಡಿಕೊಡುವ ಉದ್ದೇಶದಿಂದ ರೈತರ ಸಂಘದ ಪದಾಧಿಕಾರಿಗಳು ಮತ್ತು ನಿವೃತ್ತ ಇಂಜಿನಿಯರ್‌ಗಳ ತಂಡ ಯೋಜನೆ ರೂಪಿಸಿದೆ.

ಒಂದು ಕಿರು ಅಂತರ್ಜಲ ಆಣೆಕಟ್ಟು ನಿರ್ಮಿಸಲು ಅಂದಾಜು 8 ರಿಂದ 10ಕೋಟಿ ರೂ. ವೆಚ್ಚವಾಗಬಹುದು. ಪ್ರತಿ 2 ರಿಂದ 5 ಕಿ.ಮೀ ದೂರಕ್ಕೆ ಒಂದರಂತೆ ಕಿರು ಅಂತರ್ಜಲ ಆಣೆಕಟ್ಟಿನ ನಿರ್ಮಾಣವಾದರೆ ನದಿಯ 2 ಭಾಗದಲ್ಲಿರುವ ರೈತರಿಗೆ ಕೃಷಿಗೆ ಬೇಕಾದ ನೀರು ದೊರೆಯಲು ಸಾಧ್ಯ. ಯೋಜನೆಗೆ 50ಕೋಟಿ ರೂ. ವೆಚ್ಚವಾಗಬಹುದೆಂದು ಅಂದಾಜಿಸಲಾಗಿದೆ. ತಾಲೂಕಿನ ಕರೂರು ಹೋಬಳಿಯ ತಾಳೂರು, ಊಳೂರು, ಉತ್ತನೂರು, ಕರೂರು, ಮಾಟಸೂಗೂರು, ಬೂದುಗುಪ್ಪ, ಮೈಲಾಪುರ, ಬಲಕುಂದಿ, ಕೆ.ಬೆಳಗಲ್, ಮುದೇನೂರು, ಕೆ.ಸೂಗೂರು, ಅರಳಿಗನೂರು, ಬಗ್ಗೂರು, ರಾರಾವಿ ಚಾಣಕನೂರು, ಕುರುವಳ್ಳಿ, ನಾಗಲಾಪುರ, ಕುಡುದರಹಾಳು, ಶ್ರೀಧರಗಡ್ಡೆ ಮುಂತಾದ ಗ್ರಾಮಗಳ ಸುಮಾರು 70ಸಾವಿರಕ್ಕೂ ಹೆಚ್ಚು ಜಮೀನಿಗೆ ಈ ಕಿರು ಆಣೆಕಟ್ಟು ನಿರ್ಮಿಸಿದರೆ ಬೆಳೆ ಬೆಳೆಯಲು ಅನುಕೂಲವಾಗುತ್ತದೆ. ಇದರಿಂದ ಸುಮಾರು 5 ರಿಂದ 6 ಟಿ.ಎಂ.ಸಿ ನೀರು ಸಂಗ್ರಹವಾಗುತ್ತದೆ.

ತುಂಗಭದ್ರಾ ಕಾಲುವೆಯಲ್ಲಿ ನೀರು ಹರಿಯುವುದು ಪ್ರಾರಂಭವಾದ ನಂತರ ಕೃಷಿಗೆ ಹಗರಿ ನದಿಯ ನೀರು ಬಳಕೆ ಕಡಿಮೆಯಾಗಿ ಅಕ್ರಮ ಮರಳು ಗಣಿಗಾರಿಕೆ ಪ್ರಾರಂಭವಾಯಿತು. ಇಲ್ಲಿ ಮತ್ತೆ ಕೃಷಿಗೆ ಹಗರಿ ನದಿ ನೀರನ್ನು ಬಳಸಲು ಆರಂಭವಾದರೆ ಅಕ್ರಮ ಮರಳು ಗಣಿಗಾರಿಕೆ ಸ್ಥಗಿತಗೊಳ್ಳಲಿದೆ ಎನ್ನುವುದು ರೈತರ ಅಭಿಪ್ರಾಯವಾಗಿದೆ.

ತಾಲೂಕಿನ ವೇದಾವತಿ ಹಗರಿ ನದಿ ದಂಡೆಯಲ್ಲಿರುವ ರೈತರ ಒಣ ಬೇಸಾಯಕ್ಕೆ ಶಾಶ್ವತ ಪರಿಹಾರ ದೊರೆಯಬೇಕಾದರೆ ಹಗರಿ ನದಿಯ ನೀರಿನ ಸದ್ಬಳಕೆಗೆ ಯೋಜಿಸಲಾಗುತ್ತಿರುವ ಸಬ್‌ ಸರ್ಫೇಸ್‌ ಚೆಕ್‌ ಡ್ಯಾಂ ನಿರ್ಮಿಸಲು ರಾಜ್ಯ ಸರ್ಕಾರ ಹಣಕಾಸಿನ ನೆರವು ನೀಡಬೇಕು ಎಂದು ರೈತ ಹೋರಾಟಗಾರ ಚಾಗನೂರು ಮಲ್ಲಿಕಾರ್ಜುನರೆಡ್ಡಿ ತಿಳಿಸಿದ್ದಾರೆ.

ತಾಲೂಕಿನ ನಾಲ್ಕು ಕಡೆ ಬಳ್ಳಾರಿ ತಾಲೂಕಿನ ಒಂದು ಕಡೆ ಸಬ್‌ ಸರ್ಫೇಸ್‌ ಚೆಕ್‌ ಡ್ಯಾಂ ನಿರ್ಮಿಸಲು ಸ್ಥಳ ಗುರುತಿಸಲಾಗಿದ್ದು, ಸರ್ಕಾರ ಈ ಯೋಜನೆಗೆ ಬೇಕಾದ ಅಂದಾಜು 50ಕೋಟಿ ರೂ.ಗಳ ಅನುದಾನವನ್ನು ನೀಡಿದರೆ ರೈತರಿಗೆ ನಿರಂತರವಾಗಿ ಬೆಳೆ ತೆಗೆಯಲು ಬೇಕಾದ ನೀರಿನ ಸಮಸ್ಯೆ ಉಂಟಾಗುವುದಿಲ್ಲ ಎಂದು ರಾಜ್ಯ ರೈತರ ಸಂಘ ಮತ್ತು ಹಸಿರುಸೇನೆ (ಪ್ರೊ.ನಂಜುಂಡಸ್ವಾಮಿ ಬಣ)ಯ ರಾಜ್ಯ ಕಾರ್ಯಾಧ್ಯಕ್ಷ ಆರ್‌.ಮಾಧವರೆಡ್ಡಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.