ಕರೂರಿನಲ್ಲಿ ಬೇಟೆಗಾರರ ಹಾವಳಿಗೆ ನಲುಗಿದ ಜಿಂಕೆಗಳು

ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಗ್ರಾಮಸ್ಥರ ಒತ್ತಾಯ

Team Udayavani, May 13, 2019, 3:02 PM IST

13-MAY-22

ಸಿರುಗುಪ್ಪ: ಜಿಂಕೆಗಳು ನೀರು ಕುಡಿಯಲು ಬರುವ ಕೃಷಿ ಹೊಂಡ.

ಸಿರುಗುಪ್ಪ: ತಾಲೂಕಿನ ಕರೂರು ಭಾಗದಲ್ಲಿರುವ ಜಿಂಕೆಗಳನ್ನು ರಾತ್ರಿ ವೇಳೆ ಬೇಟೆಗಾರರು ಬೇಟೆಯಾಡಲು ಬರುತ್ತಿದ್ದು, ಇಲ್ಲಿರುವ ಜಿಂಕೆಗಳು ಬೇಟೆಗಾರರಿಂದ ತಪ್ಪಿಸಿಕೊಳ್ಳಲು ಪರದಾಡುತ್ತಿವೆ.

ಇಲ್ಲಿ ನೂರಾರು ಸಂಖ್ಯೆಯಲ್ಲಿ ಜಿಂಕೆಗಳು ಗುಂಪು ಗುಂಪಾಗಿ ವಾಸ ಮಾಡುತ್ತಿದ್ದು, ಬೆಳಗಿನ ಜಾವ ಮೇವಿಗಾಗಿ ಪರದಾಡುತ್ತಿದ್ದು, ರಾತ್ರಿ ವೇಳೆ ಬೇಟೆಗಾರರಿಂದ ತಪ್ಪಿಸಿಕೊಳ್ಳಲು ಜಿಂಕೆಗಳು ಹೆಣಗಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ಭಾಗದಲ್ಲಿರುವ ಕೃಷಿ ಹೊಂಡಗಳಿಗೆ ಕೂರಿಗನೂರು ಕಾಲುವೆಯಿಂದ ನೀರನ್ನು ತುಂಬಿಸಲಾಗಿದೆ. ಸಮೀಪದಲ್ಲಿರುವ ವೇದಾವತಿ ಹಗರಿ ನದಿಯಲ್ಲಿ ಅಲ್ಪಸ್ವಲ್ಪ ನೀರಿದೆ. ಇದರಿಂದಾಗಿ ಜಿಂಕೆಗಳು ಈ ಭಾಗದಲ್ಲಿ ವಾಸಮಾಡಲು ಕಾರಣವಾಗಿದೆ.

ಸದ್ಯ ಜಿಂಕೆಗಳಿಗೆ ತಿನ್ನಲು ಬೇಕಾದ ಹಸಿರು ಮೇವಿನ ಕೊರತೆ ಇದ್ದರೂ ಕುಡಿಯಲು ಕೃಷಿ ಹೊಂಡಗಳಲ್ಲಿ ನೀರು ಸಂಗ್ರಹವಾಗಿರುವುದರಿಂದ ಜಿಂಕೆಗಳು ಇಲ್ಲಿಯೇ ವಾಸ ಮಾಡುತ್ತಿದ್ದು, ಬೆಳಗಿನ ಜಾವ ತಿನ್ನುವ ಮೇವಿಗಾಗಿ ಬಿಸಿಲಿನಲ್ಲಿ ಪರದಾಡಿದರೆ, ರಾತ್ರಿ ವೇಳೆ ಬೇಟೆಗಾರರಿಂದ ತಪ್ಪಿಸಿಕೊಳ್ಳಲು ಮತ್ತೂಂದು ರೀತಿಯಲ್ಲಿ ತೊಂದರೆ ಅನುಭವಿಸುತ್ತಿವೆ.

ಈ ಭಾಗವು ಸೀಮಾಂದ್ರ ಪ್ರದೇಶಕ್ಕೆ ಹತ್ತಿರದಲ್ಲಿರುವುದರಿಂದ ಸೀಮಾಂದ್ರ ಪ್ರದೇಶದ ಕೆಲವು ಬೇಟೆಗಾರರು ರಾತ್ರಿ ವೇಳೆ ಜಿಂಕೆಗಳನ್ನು ಬೇಟೆಯಾಡಲು ಬರುತ್ತಿದ್ದು, ಬೇಟೆಗಾರರಿಂದ ತಪ್ಪಿಸಿಕೊಳ್ಳಲು ಜಿಂಕೆಗಳು ಹರಸಾಹಸ ಪಡುತ್ತಿವೆ. ಗುಂಪಿನಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಬೇಟೆಗಾರರ ಗುರಿಗೆ ಬಲಿಯಾಗುತ್ತಿವೆ.

ಹೊಲದಲ್ಲಿರುವ ಕೃಷಿ ಹೊಂಡದಲ್ಲಿ ನೀರು ತುಂಬಿದ್ದು, ಇಲ್ಲಿಗೆ ಇಳಿ ಸಂಜೆ ಹೊತ್ತಿನಲ್ಲಿ ನೀರು ಕುಡಿಯಲು ಬರುವ ಜಿಂಕೆ ಬೇಟೆಯಾಡಲು ಬಲೆಯನ್ನು ಬೇಟೆಗಾರರು ಬಳಸುತ್ತಿದ್ದಾರೆ. ಜಿಂಕೆ ಬೇಟೆಯಾಡುವವರನ್ನು ಅರಣ್ಯ ಇಲಾಖೆಯ ಸಿಬ್ಬಂದಿ ಹಿಡಿದು ಜಿಂಕೆ ಸಂರಕ್ಷಿಸಲು ಕ್ರಮ ಕೈಗೊಳ್ಳಬೇಕು.
ವೈ.ಕೃಷ್ಣಾರೆಡ್ಡಿ,
ಕರೂರು ಗ್ರಾಮದ ರೈತರು.

ಕರೂರು ಭಾಗದಲ್ಲಿ ಜಿಂಕೆಗಳನ್ನು ಬೇಟೆಯಾಡಲು ಸೀಮಾಂಧ್ರ ಪ್ರದೇಶದಿಂದ ಕೆಲವರು ಬರುತ್ತಾರೆನ್ನುವ ಖಚಿತ ಮಾಹಿತಿ ಮೇರೆಗೆ ಸಿಬ್ಬಂದಿ ಈ ಭಾಗದಲ್ಲಿ ರಾತ್ರಿವೇಳೆ ಗಸ್ತು ತಿರುಗುತ್ತಿದ್ದಾರೆ. ಈಗಾಗಲೇ ಜಿಂಕೆ ಬೇಟೆಯಾಡುವ ಮೂವರನ್ನು ಬಂಧಿಸಲಾಗಿದೆ.
ಪಂಪಾಪತಿ ನಾಯ್ಕ,
ವಲಯ ಅರಣ್ಯಾಧಿಕಾರಿ.

ಟಾಪ್ ನ್ಯೂಸ್

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.