ಮೇವು-ನೀರಿಲ್ಲದೆ ಜಿಂಕೆಗಳು ತತ್ತರ
Team Udayavani, May 19, 2019, 2:44 PM IST
ಸಿರುಗುಪ್ಪ: ಭೀಕರ ಬರ ಮತ್ತು ಬಿರುಬಿಸಿಲಿಗೆ ತಾಲೂಕಿನಲ್ಲಿರುವ ಜಿಂಕೆಗಳು ತತ್ತರಿಸಿ ಹೋಗಿವೆ.
ತಾಲೂಕಿನಲ್ಲಿ ಜೀವನಾಡಿಯಾದ ತುಂಗಭದ್ರಾ ಮತ್ತು ವೇದಾವತಿ ಹಗರಿ ನದಿ, ಗರ್ಜಿಹಳ್ಳದಲ್ಲಿ ಸದಾ ನೀರು ಹರಿಯುತ್ತಿದ್ದರಿಂದ ರೈತರ ಜಿಮೀನುಗಳಲ್ಲಿ ಹಸಿರು ಕಂಗೊಳಿಸುತ್ತಿದ್ದು, ಜಿಂಕೆಗಳಿಗೆ ತಿನ್ನಲು ಹುಲ್ಲು ಮತ್ತು ಕುಡಿಯಲು ನೀರು ಯಥೇಚ್ಚವಾಗಿ ಸಿಗುತ್ತಿತ್ತು. ಆದರೆ ಕಳೆದ 4ವರ್ಷಗಳಿಂದ ಸಮರ್ಪಕವಾಗಿ ಮಳೆಯಾಗದೆ ತುಂಗಭದ್ರಾ ಮತ್ತು ವೇದಾವತಿ ಹಗರಿ ನದಿಗಳು ಬೇಸಿಗೆ ಬರುವ ಮುನ್ನವೇ ಬತ್ತಿ ಹೋಗುತ್ತಿರುವುದರಿಂದ ರೈತರು ತಮ್ಮ ಜಮೀನುಗಳಲ್ಲಿ ಯಾವುದೇ ಬೆಳೆ ಬೆಳೆಯಲಾಗದೆ ಕೈಚೆಲ್ಲಿ ಕುಳಿತಿದ್ದರಿಂದ ಜಿಂಕೆಗಳಿಗೆ ಮೇವು ಮತ್ತು ನೀರಿನ ಕೊರತೆ ಉಂಟಾಗಿದೆ.
ತಾಲೂಕಿನ ಹಚ್ಚೊಳ್ಳಿ ಹೋಬಳಿಯಲ್ಲಿರುವ ನಾಡಂಗ ಅಲಗನೂರು, ಬೀರಳ್ಳಿ, ವತ್ತುಮುರುಣಿ, ಭೈರಗಾಮದಿನ್ನಿ, ಬಿ.ಎಂ.ಸೂಗೂರು, ಕುರುವಳ್ಳಿ, ಅಗಸನೂರು, ಬಸರಳ್ಳಿ, ರಾವಿಹಾಳ, ಮಿಟ್ಟೆಸೂಗೂರು, ಬೊಮ್ಮಲಾಪುರ, ಹಾಳುಮುರುಣಿ, ವೆಂಕಟಾಪುರ, ನಾಗರಹಾಳು, ಕುಡುದರಹಾಳು, ನಾಗಲಾಪುರ, ಚಿಕ್ಕಬಳ್ಳಾರಿ ಮುಂತಾದ ಗ್ರಾಮಗಳ ವ್ಯಾಪ್ತಿಯಲ್ಲಿ ಕಂಡು ಬರುತ್ತಿರುವ ಸಾವಿರಾರು ಜಿಂಕೆಗಳು ಬರದ ಭೀಕರಕ್ಕೆ ತತ್ತರಿಸಿ ಹೋಗಿವೆ.
ಈ ಭಾಗದಲ್ಲಿ ರೈತರು ನಿರ್ಮಿಸಿರುವ ಏಳು ನೂರಕ್ಕೂ ಹೆಚ್ಚು ಕೃಷಿ ಹೊಂಡಗಳೇ ಜಿಂಕೆಗಳಿಗೆ ಕುಡಿಯುವ ನೀರೊದಗಿಸುತ್ತಿದ್ದವು. ಆದರೆ ಈ ಬಾರಿ ಮಳೆ ಸಮರ್ಪಕವಾಗಿ ಬಾರದ ಕಾರಣ ಅಂತರ್ಜಲ ಮಟ್ಟ ಕುಸಿದಿದೆ. ಕುಡಿಯುವ ನೀರಿಗಾಗಿ ಕೃಷಿ ಹೊಂಡಗಳ ಬಳಿ ಬರುತ್ತಿದ್ದ ಸಾವಿರಾರು ಜಿಂಕೆಗಳು ಈಗ ಸೀಮಾಂಧ್ರದ ತುಂಗಭದ್ರಾ ಎಲ್.ಎಲ್.ಸಿ ಕಾಲುವೆಯತ್ತ ನೀರು ಕುಡಿಯಲು ತೆರಳುತ್ತಿವೆ.
ಮಾ.30ರ ನಂತರ ಎಲ್.ಎಲ್.ಸಿ ಕಾಲುವೆಯಲ್ಲಿಯೂ ನೀರು ಸ್ಥಗಿತಗೊಳ್ಳುವುದರಿಂದ ಜಿಂಕೆಗಳು ನೀರಿಗಾಗಿ ಮತ್ತಷ್ಟು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಲಿದೆ. ಇನ್ನಾದರೂ ಅರಣ್ಯಾಧಿಕಾರಿಗಳು ಜಿಂಕೆಗಳಿಗೆ ಮೇವು ಮತ್ತು ನೀರೊದಗಿಸುವ ಕೆಲಸ ಮಾಡಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
MUST WATCH
ಹೊಸ ಸೇರ್ಪಡೆ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…