ತಾಲೂಕಿನ 6 ಸರ್ಕಾರಿ ಶಾಲೆಯಲ್ಲಿ ಶಿಕ್ಷಕರೇ ಇಲ್ಲ!


Team Udayavani, Jul 29, 2019, 11:19 AM IST

29-July-14

ಸಿರುಗುಪ್ಪ: ತಾಲೂಕಿನ ತೆಕ್ಕಲಕೋಟೆಯ ಸಿಂಧೋಳ್ಳಿ ಕಾಲೋನಿಯಲ್ಲಿರುವ ಶಿಕ್ಷಕರೇ ಇಲ್ಲದ ಸ.ಕಿ. ಪ್ರಾಥಮಿಕ ಶಾಲೆ.

ಸಿರುಗುಪ್ಪ: ತಾಲೂಕಿನಲ್ಲಿ ಒಟ್ಟು 171 ಸರ್ಕಾರಿ ಶಾಲೆಗಳಿದ್ದು, ಇದರಲ್ಲಿ 6 ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ. 29 ಏಕೋಪಾಧ್ಯಾಯ ಶಾಲೆಗಳಿವೆ. 576 ಶಿಕ್ಷಕರಿದ್ದು, 472 ಶಿಕ್ಷಕರ ಕೊರತೆ ಇದೆ. ಬಹುತೇಕ ಶಾಲೆಗಳಲ್ಲಿ ಶಿಕ್ಷಕರ ಕೊರತೆಯಿಂದ ಮಕ್ಕಳ ವಿದ್ಯಾಭ್ಯಾಸದ ಮೇಲೆ ತೀವ್ರ ಪರಿಣಾಮ ಬೀರುತ್ತಿದೆ.

ಕಡ್ಡಾಯ ಶಿಕ್ಷಣದ ಮೂಲಕ ಮಕ್ಕಳನ್ನು ಶಾಲೆಗೆ ಕರೆತರಲು ಶಿಕ್ಷಕರು ಸರ್ಕಾರದ ಯೋಜನೆಗಳನ್ನು ಪಾಲಕರಿಗೆ ತಿಳಿಸಿ ಮಕ್ಕಳನ್ನು ಶಾಲೆಗೆ ದಾಖಲಿಸಿಕೊಳ್ಳುತ್ತಿದ್ದಾರೆ. ವಿದ್ಯಾರ್ಥಿಗಳ ದಾಖಲಾತಿಗೆ ಅನುಗುಣವಾಗಿ ಸರ್ಕಾರ ಮಾತ್ರ ಶಿಕ್ಷಕರನ್ನು ನೇಮಿಸುತ್ತಿಲ್ಲ, ನಿಯಮಾನುಸಾರವಾಗಿ ಕನಿಷ್ಠ 30 ವಿದ್ಯಾರ್ಥಿಗಳಿಗೆ ಒಬ್ಬ ಶಿಕ್ಷಕರಿರಬೇಕು. ಆದರೆ ಕೆಲವು ಶಾಲೆಗಳಲ್ಲಿ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಒಬ್ಬ ಶಿಕ್ಷಕರಿದ್ದಾರೆ. ಇಂಥ ಶಾಲೆಗಳಲ್ಲಿ ಶಿಕ್ಷಕರು ವಿದ್ಯಾರ್ಥಿಗಳಿಗೆ ಪಾಠಮಾಡುವುದಾದರೂ ಹೇಗೆ? ಪಾಠದೊಂದಿಗೆ ಬಿಸಿಯೂಟದ ಬಗ್ಗೆ ಗಮನಹರಿಸಬೇಕು, ಹಾಲು ಕೊಡಬೇಕು, ದಾಖಲಾತಿ ನೋಡಿಕೊಳ್ಳಬೇಕು, ಪ್ರತಿದಿನ ಹಾಜರಾತಿಯನ್ನೂ ಹಾಕಬೇಕು. ಈ ಕೆಲಸದ ಜತೆಗೆ ಕಚೇರಿ ಕೆಲಸವನ್ನು ನೋಡಿಕೊಳ್ಳಬೇಕು. ಇಷ್ಟೆಲ್ಲವನ್ನು ಒಬ್ಬ ಶಿಕ್ಷಕರು ಮಾಡಬಹುದು ಹೇಗೆ ಎನ್ನುವುದರ ಬಗ್ಗೆ ಸರ್ಕಾರದ ಗಮನ ಹರಿಸದಿರುವುದು ಮಾತ್ರ ವಿಷಾದ.

ಕನಿಷ್ಠ ಪಕ್ಷ ಸರ್ಕಾರ ಶಿಕ್ಷಕರ ಕೊರತೆ ನೀಗಿಸಲು ಶೈಕ್ಷಣಿಕ ವರ್ಷ ಪ್ರಾರಂಭದ ದಿನಗಳಲ್ಲಿಯೇ ಅತಿಥಿ ಶಿಕ್ಷಕರನ್ನಾದರೂ ನೇಮಿಸಿದರೆ ವಿದ್ಯಾರ್ಥಿಗಳಿಗೆ ಪಾಠಮಾಡಲು ಅನುಕೂಲವಾಗುತ್ತದೆ. ಸರ್ಕಾರಿ ಶಾಲೆ ವಿದ್ಯಾರ್ಥಿಗಳು ಇತರೆ ಖಾಸಗಿ ಶಾಲೆಗಳ ವಿದ್ಯಾರ್ಥಿಗಳಂತೆ ವಿದ್ಯಾಭ್ಯಾಸದಲ್ಲಿ ಮುಂದುವರೆಯಲು ಸಾಧ್ಯವಾಗುತ್ತದೆ.

ಅತಿಥಿ ಶಿಕ್ಷಕರ ನೇಮಕಕ್ಕೆ ಆದೇಶ
ಈಗಾಗಲೆ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳುವ ಪ್ರಕ್ರಿಯೆ ಪ್ರಾರಂಭವಾಗಿದ್ದು, ನಮ್ಮ ತಾಲೂಕಿಗೆ 370 ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ಸರ್ಕಾರ ಆದೇಶ ನೀಡಿದೆ. ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಒಬ್ಬ ಶಿಕ್ಷಕರನ್ನು ನಿಯೋಜನೆ ಮಾಡಿದ್ದು, ಒಬ್ಬ ಅತಿಥಿ ಶಿಕ್ಷಕರನ್ನು ನೇಮಿಸಲಾಗುವುದು.
ಪಿ.ಡಿ.ಭಜಂತ್ರಿ, ಕ್ಷೇತ್ರ ಶಿಕ್ಷಣಾಧಿಕಾರಿ

ಶಿಕ್ಷಕರ ನೇಮಿಸಿ
ಸರ್ಕಾರ ಕೇವಲ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ, ಬಟ್ಟೆ, ಶೂ, ಹಾಲು ನೀಡುವುದು ಮುಖ್ಯವಲ್ಲ. ಶಿಕ್ಷಕರ ಕೊರತೆ ಇಲ್ಲದಂತೆ ಮಾಡಬೇಕು. ಪ್ರತಿ ಶಾಲೆಯಲ್ಲಿ ಮಕ್ಕಳ ದಾಖಲಾತಿಗೆ ತಕ್ಕಂತೆ ಶಿಕ್ಷಕರನ್ನು ನೇಮಿಸಬೇಕು.
ಎನ್‌.ನಾಗರಾಜ, ವಕೀಲ, ತೆಕ್ಕಲಕೋಟೆ

ಟಾಪ್ ನ್ಯೂಸ್

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.