ಅಕ್ಕಲಕೋಟದಲ್ಲಿ ಕನ್ನಡ ಕಲರವ

ಮಾತೃಭಾಷೆ ಜೊತೆ ಅನ್ಯ ಭಾಷೆ ಕಲಿಕೆಯಿಂದ ಉತ್ತುಂಗ ಜೀವನ

Team Udayavani, Dec 22, 2019, 10:45 AM IST

22-Decemebrer-1

ಸೊಲ್ಲಾಪುರ: ಪ್ರತಿಯೊಬ್ಬರೂ ಮಾತೃಭಾಷೆ ಜತೆ ಅನ್ಯಭಾಷೆಯನ್ನೂ ಕಲಿತರೆ ಉತ್ತುಂಗದ ಜೀವನ ಸಾಗಿಸಲು ಸಾಧ್ಯವಾಗುತ್ತದೆ ಎಂದು ವಿಜಯಪುರ ಜ್ಞಾನಯೋಗಾಶ್ರಮದ ಪೂಜ್ಯ ಸಿದ್ದೇಶ್ವರ ಸ್ವಾಮೀಜಿ ನುಡಿದರು.

ಮಹಾರಾಷ್ಟ್ರದ ಆದರ್ಶ ಕನ್ನಡ ಬಳಗ, ಅಕ್ಕಲಕೋಟದ ಸ್ವಾಮಿ ಸಮರ್ಥ ಅನ್ನಛತ್ರ ಮಂಡಳ, ಕನ್ನಡ ಸಂಘಗಳ ಸಹಕಾರದೊಂದಿಗೆ ಧಾರವಾಡ ಕರ್ನಾಟಕ ವಿದ್ಯಾವರ್ಧಕ ಸಂಘವು ನಾಡೋಜ ಪಾಟೀಲ ಪುಟ್ಟಪ್ಪ ನೇತೃತ್ವದಲ್ಲಿ ಅಕ್ಕಲಕೋಟದ ಅನ್ನಛತ್ರ ಮಂಡಳ ಆವರಣದಲ್ಲಿ ಹಮ್ಮಿಕೊಂಡಿದ್ದ ಅಖೀಲ ಭಾರತ ಹೊರನಾಡು ಕನ್ನಡ ಸಂಘಗಳ ಎಂಟನೇ ಮಹಾಮೇಳದ ಉದ್ಘಾಟನಾ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.

ಬೇರೆ-ಬೇರೆ ರಾಜ್ಯದ ಜನರು ಮಾತೃಭಾಷೆಗಳಿಗೆ ಮಾತ್ರ ಸೀಮಿತವಾಗಿದ್ದರೆ, ಕನ್ನಡಿಗರು ಹಲವಾರು ಭಾಷೆಗಳನ್ನು ಸಮರ್ಥವಾಗಿ ಮಾತನಾಡುವುದರೊಂದಿಗೆ ಎಲ್ಲೆಡೆ-ಎಲ್ಲದರಲ್ಲೂ ಜಯಶಾಲಿಗಳಾಗಿ ಬರುತ್ತಾರೆ. ಅಕ್ಕಲಕೋಟ ಜನರು ಮರಾಠಿ ಜತೆಯಲ್ಲಿ ಕನ್ನಡವನ್ನು ಪೂಜಿಸುತ್ತ, ರಕ್ಷಿಸಿ-ಪೋಷಿಸುವ ಕಾರ್ಯ ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದರು.

ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ನಾಡೋಜ ಡಾ|ಪಾಟೀಲ ಪುಟ್ಟಪ್ಪ ಮಾತನಾಡಿ, ಕನ್ನಡ ಮಾತನಾಡಬೇಕಾದರೆ ಅಕ್ಕಲಕೋಟಕ್ಕೆ ಬರಬೇಕು. ಬಂದವರು ಯಾರೂ ಹಾಗೆ ಹೋಗಲ್ಲ. ಕನ್ನಡದೊಂದಿಗೆ ಕನ್ನಡಿಗರಾಗಿ ಹೋಗುತ್ತಾರೆ. ಇಂತಹ ಅಕ್ಕಲಕೋಟದಲ್ಲಿ ಮಹಾಮೇಳ ನಡೆಯುತ್ತಿರುವುದು ತುಂಬಾ ಸಂತೋಷ ತಂದಿದೆ ಎಂದರು.

ನರಗುಂದದ ಭೈರನಹಟ್ಟಿ ದೊರೆಸ್ವಾಮಿ ಮಠದ ಶ್ರೀ ಶಾಂತಲಿಂಗ ಸ್ವಾಮೀಜಿ, ಅಕ್ಕಲಕೋಟದ ಬಸವಲಿಂಗ ಸ್ವಾಮೀಜಿ, ನಾಗಣಸೂರಿನ ಅಭಿನವ ಬಸವಲಿಂಗ ಸ್ವಾಮೀಜಿ, ತೋಳನೂರಿನ ಚೆನ್ನಮಲ್ಲ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಸ್ವಾಮಿ ಸಮರ್ಥ ಅನ್ನಛತ್ರ ಮಂಡಳದ ಮುಖ್ಯ ಕಾರ್ಯಕಾರಿ ವಿಶ್ವಸ್ಥ ಅಮೋಲರಾಜೆ ಭೋಸಲೆ ಸಮಾರಂಭ ಉದ್ಘಾಟಿಸಿದರು.

ನಗರಸೇವಕ ಮಿಲನ ಕಲ್ಯಾಣಶೆಟ್ಟಿ, ರಾಜಕುಮಾರ ಜಿಂಗಾಡೆ, ಗಿರೀಶ ಪಟ್ಟೇದ ಹಾಜರಿದ್ದರು. ನಾಡು ನುಡಿಗಾಗಿ ಶ್ರಮಿಸಿದ ಶಿವಶರಣ ಮಾಡ್ಯಾಳ, ಡಾ|ಮಧುಮಾಲಾ ಲಿಗಾಡೆ, ಧರ್ಮರಾಜ ಕಾಡಾದಿ, ಸುಭಾಸ ಬೆಳ್ಳುಬ್ಬಿ, ಎಸ್‌.ಕೆ. ಬಿರಾದಾರ, ಮಲ್ಲಿಕಾರ್ಜುನ ಮಡ್ಡೆ, ಆರ್‌.ಕೆ. ಪಾಟೀಲ, ಡಾ| ಮಹಮ್ಮದ್‌ ಆಜಂ, ಪ್ರಕಾಶ ವಿಭೂತಿ, ಸಿದ್ರಾಮಪ್ಪ ಮುಂಡೋಡಗಿ ಅವರಿಗೆ ಗೌರವ ಸಮರ್ಪಣೆ ಸಲ್ಲಿಸಲಾಯಿತು.

ಅನೀಲ ಮೇತ್ರಿ, ಮಹಾನಂದಾ ಗೋಸಾವಿ ತಂಡದವರು ವಂದೇಮಾತರಂ, ನಾಡಗೀತೆ, ಉದಯವಾಗಲಿ ಚೆಲುವ ಕನ್ನಡನಾಡು ಗೀತೆ ಪ್ರಸ್ತುತಪಡಿಸಿದರು. ಕಾರ್ಯಕಾರಿ ಸಮಿತಿ ಸದಸ್ಯೆ ವಿಶ್ವೇಶ್ವರಿ ಹಿರೇಮಠ ನಿರೂಪಿಸಿದರು. ಸಂಘದ ಪ್ರಧಾನ ಕಾರ್ಯದರ್ಶಿ ಪ್ರಕಾಶ ಎಸ್‌. ಉಡಕೇರಿ ಪ್ರಾಸ್ತಾವಿಕ ಮಾತನಾಡಿದರು.

ಬಸವರಾಜ ಧನಶೆಟ್ಟಿ ವಂದಿಸಿದರು. ಸಂಘದ ಪದಾಧಿಕಾರಿಗಳಾದ ಶಿವಣ್ಣ ಬೆಲ್ಲದ, ನಿಂಗಣ್ಣ ಕುಂಟಿ, ಸದಾನಂದ ಶಿವಳ್ಳಿ, ಸತೀಶ ತುಮರಿ, ಶಾಂತೇಶ ಗಾಮನಗಟ್ಟಿ, ಶಂಕರ ಕುಂಬಿ, ಮನೋಜ ಪಾಟೀಲ, ಬಸವಪ್ರಭು ಹೊಸಕೇರಿ, ಶಿವಾನಂದ ಭಾವಿಕಟ್ಟಿ, ಮಾಜಿ ಶಾಸಕರಾದ ಚಂದ್ರಕಾಂತ ಬೆಲ್ಲದ, ಶಿವಾನಂದ ಅಂಬಡಗಟ್ಟಿ, ಗುರುರಾಜ ಹುಣಸಿಮರದ, ಡಾ|ಲಿಂಗರಾಜ ಅಂಗಡಿ, ಮಾಜಿ ಸಂಸದ ಡಾ|ಐ.ಜಿ. ಸನದಿ, ಮಲಿಕಜಾನ್‌ ಶೇಖ್‌, ಗಿರೀಶ ಜಕಾಪುರೆ, ಸೋಮಶೇಖರ ಜಮಶೆಟ್ಟಿ, ಚಿದಾನಂದ ಮಠಪತಿ, ಅಪ್ಪು ಉಮರಾಣಿಕರ್‌, ಬಸವರಾಜ ಗುರವ, ಭೀಮಾಶಂಕರ ಪಾಟೀಲ, ಶರಣು ಕೋಳಿ, ಬಸವರಾಜ ಮಸೂತಿ ಇದ್ದರು.

ಟಾಪ್ ನ್ಯೂಸ್

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.