ಅಕ್ಕ ಲಕೋಟನಲ್ಲಿ ತ್ರಿಕೋನ ಸ್ಪರ್ಧೆ

ದುಧನಿ-ಮೈಂದುರ್ಗಿ-ಅಕ್ಕಲಕೋಟ ಬಿಜೆಪಿಗೆ ಅನುಕೂಲ ಗೆಲುವಿನ ವಿಶ್ವಾಸದಲ್ಲಿ ಸಚಿನ್‌ ಕಲ್ಯಾಣಶೆಟ್ಟಿ

Team Udayavani, Oct 9, 2019, 11:04 AM IST

Udayavani Kannada Newspaper

„ಸೋಮಶೇಖರ ಜಮಶೆಟ್ಟಿ
ಸೊಲ್ಲಾಪುರ: ಮಹಾರಾಷ್ಟ್ರ ಮತ್ತು ಕರ್ನಾಟಕ ಗಡಿ ಭಾಗದ ಅಕ್ಕಲಕೋಟ ವಿಧಾನಸಭಾ ಮತಕ್ಷೇತ್ರದಿಂದ ಸುಮಾರು 11 ಅಭ್ಯರ್ಥಿಗಳು ಚುನಾವಣೆ ಕಣದಲ್ಲಿದ್ದರೂ, ಕಾಂಗ್ರೆಸ್‌-ಬಿಜೆಪಿ ಮತ್ತು ವಂಚಿತ ಬಹುಜನ ಪಕ್ಷದ ನಡುವೆ ಭಾರಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.

ಕಳೆದ 2009ರ ವಿಧಾನಸಭೆ ಚುನಾವಣೆಯಲ್ಲಿ ಅಕ್ಕಲಕೋಟ ತಾಲೂಕಿನ ಸೇಗಾಂವ ಗ್ರಾಮದಲ್ಲಿ ನಡೆದ ಶೂಟೌಟ್‌ ಪ್ರಕರಣ ಇಡೀ ರಾಜ್ಯದ ಗಮನ ಸೆಳೆದಿತ್ತು. ಆದ್ದರಿಂದ ಈ ಬಾರಿ ಕಟ್ಟೆಚ್ಚರ ವಹಿಸಲಾಗಿದೆ. ಜತೆಗೆ ಅತಿ ಸೂಕ್ಷ್ಮ ಮತಕ್ಷೇತ್ರವಾಗಿ ಪರಿವರ್ತನೆ ಆಗಿದೆ. ಹೀಗಾಗಿ ಚುನಾವಣೆ ಆಯೋಗ ಅಕ್ಕಲಕೋಟ ಮತಕ್ಷೇತ್ರದ 138 ಗ್ರಾಮಗಳ ಮೇಲೆ ತೀವ್ರ ನಿಗಾ ಇಟ್ಟಿದೆ.

ಪಕ್ಷದ ಅಭ್ಯರ್ಥಿಗಳು: ಸಚಿನ್‌ ಕಲ್ಯಾಣಶೆಟ್ಟಿ (ಬಿಜೆಪಿ), ಸಿದ್ಧರಾಮ ಮ್ಹೇತ್ರೆ (ಕಾಂಗ್ರೆಸ್‌), ನಾಗಮೂರ್ತಿ ಕುರಣೆ (ಬಿಎಸ್‌ಪಿ), ಮಧುಕರ ಜಾಧವ (ಮನಸೇ), ಧರ್ಮರಾಜ ರಾಠೊಡ (ವಂಚಿತ ಬಹುಜನ), ಸುರೇಖಾ ಕ್ಷೀರಸಾಗರ (ಅಖೀಲ ಭಾರತ ಹಿಂದು ಮಹಾಸಭಾ), ಅಮೋಲ ಹರಣಾಳಕರ (ಪಕ್ಷೇತರ), ದೀಪಕ ಮಹಾಸ್ವಾಮಿಜಿ (ಪಕ್ಷೇತರ), ಲಕ್ಷ್ಮಣ ಮೇತ್ರೆ (ಪಕ್ಷೇತರ) ಸುಜಾತಾ ಬಾಬಾನಗರೆ (ಪಕ್ಷೇತರ), ಸಂತೋಷ ಗಜದಾನೆ (ಬಹುಜನ್‌ ಮುಕ್ತಿ ಪಾರ್ಟಿ) ಪಕ್ಷದ ಅಭ್ಯರ್ಥಿಗಳಾಗಿದ್ದಾರೆ.

ಹಾಲಿ ಶಾಸಕ ಸಿದ್ಧರಾಮ ಮ್ಹೇತ್ರೆ, ಬಿಜೆಪಿ ಅಭ್ಯರ್ಥಿ ಸಚಿನ್‌ ಕಲ್ಯಾಣಶೆಟ್ಟಿ ನಡುವೆ ಬಾರಿ ಪೈಪೋಟಿ ನಡೆದಿದೆ. ರ್ಯಾಲಿ, ಕಾರ್ನರ್‌ ಸಭೆ, ಬಹಿರಂಗ ಸಭೆಗಳ ಮೂಲಕ ಮತದಾರರನ್ನು ಒಲಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಅಕ್ಕಲಕೋಟ ತಾಲೂಕಿನಲ್ಲಿ ದುಧನಿ, ಮೈಂದರ್ಗಿ ಮತ್ತು ಅಕ್ಕಲಕೋಟ ಹೀಗೆ ಒಟ್ಟು ಮೂರು ನಗರ ಪರಿಷತ್‌ಗಳಿವೆ. ಅಕ್ಕಲಕೋಟ ಮತ್ತು ದುಧನಿ ಇವೆರಡು ನಗರ ಪರಿಷತ್‌ಗಳು ಬಿಜೆಪಿ ಅಧಿಕಾರದಲ್ಲಿದೆ. ಇದು ಬಿಜೆಪಿ ಅಭ್ಯರ್ಥಿಗೆ ಅನುಕೂಲವಾಗಲಿದೆ ಎಂದು ಹೇಳಲಾಗುತ್ತಿದೆ.

ಪ್ರಧಾನಿ ನರೇಂದ್ರ ಮೋದಿ ಅಲೆಯಿಂದ ಬಿಜೆಪಿ ಅಭ್ಯರ್ಥಿ ಸಚಿನ್‌ ಕಲ್ಯಾಣಶೆಟ್ಟಿ ಗೆಲುವು ತಮ್ಮದೇ ಎನ್ನುವ ವಿಶ್ವಾಸದಲ್ಲಿದ್ದಾರೆ. ಅಕ್ಕಲಕೋಟ ವಿಧಾನಸಭಾ ಮತಕ್ಷೇತ್ರದಲ್ಲಿ ಲಿಂಗಾಯತ ಸಮಾಜದ ಪ್ರಭಾವ ಹೆಚ್ಚಾಗಿದ್ದರಿಂದ ಗೆಲುವಿಗೆ ಅನುಕೂಲ ಆಗಬಹುದು. ಈ ಕ್ಷೇತ್ರದಲ್ಲಿ ಸುಮಾರು 1 ಲಕ್ಷ 15 ಸಾವಿರ ಲಿಂಗಾಯತ ಸಮಾಜದವರು ಇದ್ದಾರೆ. ಆದ್ದರಿಂದ ಸಚಿನ್‌ ಕಲ್ಯಾಣಶೆಟ್ಟಿಗೆ ಗೆಲುವು ನಿಶ್ಚಿತವೆಂದು ಹೇಳಲಾಗುತ್ತಿದೆ. ಅದರಂತೆ 70 ಸಾವಿರ ಮುಸ್ಲಿಂರು, 35 ಸಾವಿರ ದಲಿತರು, 30 ಸಾವಿರ ಲಂಬಾಣಿ, 25 ಸಾವಿರ ಕುರುಬರು ಮತ್ತು ಕೋಳಿ, ಮಾಳಿ, ತೇಲಿ, ಮರಾಠಾ ಸೇರಿದಂತೆ 45 ಸಾವಿರ ಸಮಾಜದವರು ಇದ್ದಾರೆ. ಆದರೆ ಈ ಚುನಾವಣೆಯಲ್ಲಿ ಯಾರು ಗೆಲ್ಲಬಹುದು ಎನ್ನುವ ಲೆಕ್ಕಾಚಾರ ಆರಂಭವಾಗಿದೆ. ಅಕ್ಟೋಬರ್‌ 21 ರಂದು ಮತದಾನ ನಡೆಯಲಿದ್ದು, 24 ರಂದು ಫಲಿತಾಂಶ ಪ್ರಕಟವಾಗಲಿದೆ.

ಟಾಪ್ ನ್ಯೂಸ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.