ಕನ್ನಡ-ಮರಾಠಿ ನಡುವೆ ಅನುವಾದ ಕಮ್ಮಟ ಸಂಪರ್ಕ ಸೇತುವೆ

ಕೃತಿಕಾರ ಸೃಷ್ಟಿರ್ಕತನಾದರೆ ಅನುವಾದಕ ಮರು ಸೃಷ್ಟಿಕರ್ತ

Team Udayavani, Jun 23, 2019, 10:39 AM IST

23–June-8

ಸೊಲ್ಲಾಪುರ: ಅಕ್ಕಲಕೋಟದಲ್ಲಿ ನಡೆದ ಕನ್ನಡದಿಂದ ಮರಾಠಿಗೆ ಸಣ್ಣ ಕಥೆಗಳ ಅನುವಾದ ಕಮ್ಮಟವನ್ನು ಸುಶೀಲಾ ಪುನೀತ್‌ ಸಸಿಗೆ ನೀರುಣಿಸಿ ಉದ್ಘಾಟಿಸಿದರು.

ಸೊಲ್ಲಾಪುರ: ಕನ್ನಡದಿಂದ ಮರಾಠಿಗೆ, ಮರಾಠಿಯಿಂದ ಕನ್ನಡಕ್ಕೆ ಅನುವಾದ ಮಾಡುವ ಮೂಲಕ ಎರಡು ಭಾಷೆಗಳ ಮಧ್ಯೆ ಭಾಷಾ ಬಾಂಧವ್ಯ ಬೆಳೆಸುವುದರ ಜೊತೆಗೆ ಅನುವಾದ ಕಮ್ಮಟ ಸಂಪರ್ಕದ ಸೇತುವೆಯಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅರವಿಂದ ಮಾಲಗತ್ತಿ ಹೇಳಿದರು.

ಅಕ್ಕಲಕೋಟ ನಗರದ ಲೋಕಾಪುರೆ ಸಭಾಗೃಹದಲ್ಲಿ ಹಮ್ಮಿಕೊಂಡಿದ್ದ ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು ಹಾಗೂ ಆದರ್ಶ ಕನ್ನಡ ಬಳಗ ಮಹಾರಾಷ್ಟ್ರ ಸಹಯೋಗದಲ್ಲಿ ನಡೆದ ಕನ್ನಡದಿಂದ ಮರಾಠಿಗೆ ಸಣ್ಣ ಕಥೆಗಳ ಅನುವಾದ ಕಮ್ಮಟದಲ್ಲಿ ಅವರು ಮಾತನಾಡಿದರು.

ನಮ್ಮ ಬಹು ಭಾಷಾ ರಾಷ್ಟ್ರಕ್ಕೆ ಅನುವಾದಕರೇ ಸಾರಥಿಗಳು. ಕೃತಿಕಾರ ಸೃಷ್ಟಿರ್ಕತನಾದರೆ ಅನುವಾದಕ ಮರು ಸೃಷ್ಟಿಕರ್ತ. ಹೀಗಾಗಿ ಅವನು ದೇವರ ದೇವ. ಅನುವಾದಕರು ಜಾತಿ-ಧರ್ಮ, ಭೇದ-ಭಾವ ಮರೆತು ರಾಷ್ಟ್ರ ಕಟ್ಟುವ ಕಾರ್ಯವನ್ನು ಮಾಡುತ್ತಿದ್ದಾರೆ. ಎರಡು ಭಾಷೆಗಳ ಹೃದಯ ಸಮ್ಮೇಲನದಿಂದ ಅನುವಾದವಾಗುತ್ತದೆ. ವಿವಿಧ ಭಾಷೆಗಳ ಮೇಲೆ ಪ್ರಭುತ್ವ ಉಳ್ಳವರು ಮಾತ್ರ ಅನುವಾದಕರಾಗಲು ಸಾಧ್ಯ ಎಂದರು.

ಹಿರಿಯ ಅನುವಾದಕ ಚಂದ್ರಕಾಂತ ಪೋಕಳೆ ಮಾತನಾಡಿ, ಭಾರತ ದೇಶದಲ್ಲಿ ಹೆಜ್ಜೆ-ಹೆಜ್ಜೆಗೂ ಬೇರೆ-ಬೇರೆ ಭಾಷೆಗಳಿವೆ. ಅವರದ್ದೇ ಆದ ಸಾಹಿತ್ಯ, ಸಂಸ್ಕೃತಿಗಳಿವೆ. ಎರಡು ಭಾಷೆಗಳ ಸಾಹಿತ್ಯವನ್ನು ಪರಸ್ಪರ ಕೊಡು ಕೊಳ್ಳುವಿಕೆಯಿಂದ ಭಾಷಾ ಮನೋಭಾವ ಹೆಚ್ಚಾಗುತ್ತದೆ. ಹೀಗಾಗಿ ಕನ್ನಡದ ಭಾಷಾ ಸಾಹಿತ್ಯವನ್ನು ಬೇರೆ-ಬೇರೆ ಭಾಷೆಗಳಿಗೆ ಅನುವಾದಿಸುವ ಮೂಲಕ ಕನ್ನಡ ಸಾಹಿತ್ಯವನ್ನು ರಾಷ್ಟ್ರ ಮಟ್ಟದಲ್ಲಿ ಬಲಪಡಿಸಬೇಕು ಎಂದರು.

ಅನುವಾದಕಿ ಸುಶೀಲ ಪುನೀತ್‌ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಅನುವಾದಕನು ಎರಡು ಭಾಷೆಗಳ ಮೇಲೆ ಪ್ರಭುತ್ವ ಉಳ್ಳವನಾಗಿದ್ದು ಸೃಜನಶೀಲ ಸಾಹಿತಿಯಷ್ಟೇ ಅನುವಾದಕ ಸೃಜನಶೀಲನಾಗಿರುತ್ತಾನೆ. ಹೀಗಾಗಿ ಅನುವಾದ ದ್ವಿತೀಯ ದರ್ಜೆ ಕೆಲಸವಲ್ಲ. ಕನ್ನಡಿಗರ ಮನಸ್ಸು ವಿಶಾಲವಾಗಿದೆ. ಆದ್ದರಿಂದ ಕನ್ನಡದ ಸಾಹಿತ್ಯವನ್ನು ಮರಾಠಿ ಭಾಷೆಗೆ ಅನುವಾದಿಸುವ ಮೂಲಕ ಕನ್ನಡ ಭಾಷೆ ಇನ್ನಷ್ಟು ಶ್ರೀಮಂತಗೊಳಿಸುವ ಕಾರ್ಯವನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿ ಮಾಡುತ್ತಿದೆ ಎಂದರು.

ಯುವ ಸಾಹಿತಿ ಹಾಗೂ ಕಮ್ಮಟ ನಿರ್ದೇಶಕ ಗಿರೀಶ ಜಕಾಪುರೆ ಪ್ರಾಸ್ತವಿಕ ಮಾತನಾಡಿದ ಅವರು, ಹೊರನಾಡ ಕನ್ನಡಿಗರಾದ ನಾವು ನಮ್ಮ ದೇಹ ಮಹಾರಾಷ್ಟ್ರದಲ್ಲಿದ್ದರೂ ಮನಸ್ಸು ಮಾತ್ರ ಕರ್ನಾಟಕದಲ್ಲಿದೆ. ಕರ್ನಾಟಕ ಸರ್ಕಾರ ನಮ್ಮನ್ನು ಕೈ ಬಿಟ್ಟರೂ ನಾವು ಮಾತ್ರ ಕನ್ನಡ ಬಿಟ್ಟಿಲ್ಲ. ಹೀಗಾಗಿ ಕನ್ನಡದಿಂದ ಮರಾಠಿಗೆ, ಮರಾಠಿಯಿಂದ ಕನ್ನಡಕ್ಕೆ ಅನುವಾದ ಮಾಡುವ ಮೂಲಕ ಎರಡು ಭಾಷೆಗಳ ನಡುವೆ ಸೇತುವೆಯಾಗಿ ಕಾರ್ಯ ನಿರ್ವಹಿಸುತ್ತಿದ್ದೇವೆ ಎಂದು ಹೇಳಿದರು.

ಬೆಳಗ್ಗೆ ನಡೆದ ಮೊದಲ ಉಪನ್ಯಾಸದಲ್ಲಿ ಕನ್ನಡ ಮರಾಠಿ ಸಾಹಿತ್ಯಿಕ ಸಾಂಸ್ಕೃತಿಕ ಹಿನ್ನೆಲೆ ಕುರಿತು ಹಿರಿಯ ಸಾಹಿತಿ ಡಾ| ಬಿ.ಬಿ. ಪೂಜಾರಿ ಉಪನ್ಯಾಸ ನೀಡಿದರು. ಮಧ್ಯಾಹ್ನ ನಡೆದ ಎರಡನೇ ಉಪನ್ಯಾಸದಲ್ಲಿ ಅನುವಾದಕ್ಕೆ ವಸ್ತುವಿನ ಆಯ್ಕೆಯ ಆಯಾಮಗಳು ಕುರಿತು ಡಾ| ವಿಜಯಾ ತೆಲಂಗ ಉಮನ್ಯಾಸ ನೀಡಿದರು.

ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯ ಸಂಚಾಲಕ ಸಂಗಮೇಶ ಬಾದವಾಡಗಿ, ಆದರ್ಶ ಕನ್ನಡ ಬಳಗದ ಅಧ್ಯಕ್ಷ ಅಧ್ಯಕ್ಷ ಮಲಿಕಾಜಾನ್‌ ಶೇಖ್‌, ಅನುವಾದಕರಾದ ಡಾ| ಡಿ.ಎಸ್‌. ಚೌಗಲೆ, ಡಾ| ಸುಜಾತಾ ಶಾಸ್ತ್ರಿ, ರಾಮಕೃಷ್ಣ ಮರಾಠೆ, ಪ್ರಭಾಕರ ಸಾತಖೇಡ, ವಸುಂಧರಾ ಶರ್ಮಾ, ಚನ್ನವೀರ ಭದ್ರೇಶ್ವರಮಠ, ವಿಶ್ವೇಶ್ವರ ಮೇಟಿ, ಪ್ರಕಾಶ ಪ್ರಧಾನ, ಡಾ| ಗುರುಸಿದ್ದಯ್ಯ ಸ್ವಾಮಿ, ಉಜ್ವಲಾ ಮಹಿಶಿ, ಕಸ್ತೂರಿ ಕರೋಟಿ, ಪ್ರಕಾಶ ಅತನೂರೆ, ಎಸ್‌.ಎಂ. ಜಾಧವ ಸೇರಿದಂತೆ ಸುಮಾರು 50ಕ್ಕೂ ಹೆಚ್ಚು ಅನುವಾದಕರು ಪಾಲ್ಗೊಂಡಿದ್ದರು.

ಕರಿಯಪ್ಪ ಎನ್‌. ಸ್ವಾಗತಿಸಿದರು. ವಿದ್ಯಾಧರ ಗುರವ ನಿರೂಪಿಸಿದರು. ದಿನೇಶ ಚವ್ಹಾಣ ವಂದಿಸಿದರು. ಕಾರ್ಯಕ್ರಮ ಯಶಸ್ವಿಗಾಗಿ ಆದರ್ಶ ಕನ್ನಡ ಬಳಗದ ಶರಣಪ್ಪ ಫುಲಾರಿ, ಬಸವರಾಜ ಧನಶೆಟ್ಟಿ, ಶರಣು ಕೋಳಿ, ಶ್ರೀಶೈಲ ಮೇತ್ರೆ, ಗಣೇಶ ಜಕಾಪುರೆ, ಕಲ್ಮೇಶ ಅಡಳಟ್ಟಿ, ಸ್ವೀಟಿ ಪವಾರ, ವಿದ್ಯಾಶ್ರೀ ಬಸವನಕೇರಿ ಶ್ರಮಿಸಿದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.