ಡಾ| ಜಯಸಿದ್ಧೇಶ್ವರಗೆ ನಮೋ

•ಸುಶೀಲಕುಮಾರ ಶಿಂಧೆ ವಿರುದ್ಧ ಸ್ವಾಮೀಜಿಗೆ ಭಾರಿ ಗೆಲುವು •ಸೊಲ್ಲಾಪುರದಲ್ಲಿ ಇತಿಹಾಸ ಸೃಷ್ಟಿ

Team Udayavani, May 24, 2019, 11:18 AM IST

24-May-10

ಸೊಲ್ಲಾಪುರ: ಡಾ| ಜಯಸಿದ್ಧೇಶ್ವರ ಸ್ವಾಮೀಜಿ ಹಾಗೂ ಸಹಕಾರ ಸಚಿವ ಸುಭಾಷ್‌ ದೇಶಮುಖ ಕಾರ್ಯಕರ್ತರೊಂದಿಗೆ ಸಂಭ್ರಮಾಚರಿಸಿದರು.

ಸೊಲ್ಲಾಪುರ: ಕಾಂಗ್ರೆಸ್‌ ಅಭ್ಯರ್ಥಿಯಾದ ಮಾಜಿ ಕೇಂದ್ರ ಗೃಹ ಸಚಿವ ಸುಶೀಲಕುಮಾರ ಶಿಂಧೆ ಅವರ ವಿರುದ್ಧ ಬಿಜೆಪಿ ಅಭ್ಯರ್ಥಿ ಡಾ| ಜಯಸಿದ್ಧೇಶ್ವರ ಶಿವಾಚಾರ್ಯ ಸ್ವಾಮಿಜಿ ಅವರು (1,50,138 ಮತಗಳ ಅಂತರ) ಗೆಲುವು ಸಾಧಿಸುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ.

ಸೊಲ್ಲಾಪುರ ಲೋಕಸಭೆ ಕ್ಷೇತ್ರದಲ್ಲಿ ಸುಶೀಲಕುಮಾರ ಶಿಂಧೆ, ಡಾ| ಜಯಸಿದ್ಧೇಶ್ವರ ಶಿವಾಚಾರ್ಯ ಸ್ವಾಮಿಗಳು ಹಾಗೂ ಡಾ| ಪ್ರಕಾಶ ಅಂಬೇಡಕರ್‌ ಸೇರಿದಂತೆ ಒಟ್ಟು 13 ಅಭ್ಯರ್ಥಿಗಳು ಚುನಾವಣೆ ಕಣದಲ್ಲಿದ್ದರು. ಸುಮಾರು ಒಂದು ತಿಂಗಳಿಂದಲೂ ಜಿಲ್ಲೆಯಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ಸೋಲು-ಗೆಲುವಿನ ಲೆಕ್ಕಾಚಾರ ನಡೆದಿತ್ತು.

ಗುರುವಾರ ನಡೆದ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ| ಜಯಸಿದ್ಧೇಶ್ವರ ಸ್ವಾಮಿಜಿ ಅವರು ಮೊದಲನೇ ಸುತ್ತಿನಿಂದಲೂ ಮುನ್ನಡೆ ಸಾಧಿಸಿದರು. ಕೊನೆಯ ಸುತ್ತಿನವರೆಗೂ ಹಿನ್ನೆಡೆ ಅನುಭವಿಸಿದ ಸುಶೀಲಕುಮಾರ ಶಿಂಧೆ ಅವರು 3,54,994 ಮತಗಳನ್ನು ಮಾತ್ರ ಪಡೆದರು. ಬಿಜೆಪಿಯ ಡಾ| ಜಯಸಿದ್ಧೇಶ್ವರ ಸ್ವಾಮಿಜಿ 5,05,132 ಮತಗಳನ್ನು ಪಡೆದು 1,50,138 ಮತಗಳ ಅಂತರದಿಂದ ಗೆಲುವು ಸಾಧಿಸಿದರು. ವಂಚಿತ ಬಹುಜನ ಆಘಾಡಿ ಪಕ್ಷದ ಅಭ್ಯರ್ಥಿ ಪ್ರಕಾಶ ಅಂಬೇಡಕರ್‌ 1,63,870 ಮತಗಳನ್ನು ಪಡೆದುಕೊಂಡಿದ್ದೇ ಸುಶೀಲಕುಮಾರ ಶಿಂಧೆ ಸೋಲು ಅನುಭವಿಸಲು ಕಾರಣ ಎಂದು ಹೇಳಲಾಗುತ್ತಿದೆ.

ಎರಡನೇ ಬಾರಿಯೂ ಮಾಜಿ ಕೇಂದ್ರ ಗೃಹ ಸಚಿವ ಸುಶೀಲಕುಮಾರ ಶಿಂಧೆ ಹೀನಾಯ ಸೋಲು ಅನುಭವಿಸುವ ಮೂಲಕ ಸೊಲ್ಲಾಪುರ ಜಿಲ್ಲೆಯಲ್ಲಿ ಕಾಂಗ್ರೆಸ್‌ಗೆ ಭಾರಿ ಮುಖಭಂಗವಾಗಿದೆ. ಇನ್ನು ಬಿಜೆಪಿಯ ಡಾ| ಜಯಸಿದ್ಧೇಶ್ವರ ಸ್ವಾಮಿಜಿ ಗೆಲುವು ಸಾಧಿಸುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಜಿಲ್ಲಾದ್ಯಂತ ಸಿಹಿ ಹಂಚಿ, ಪಟಾಕಿ ಸಿಡಿಸುವ ಮೂಲಕ ಹರ್ಷ ವ್ಯಕ್ತಪಡಿಸಿದರು.

ಕಳೆದ 2014ರ ಲೋಕಸಭೆ ಚುನಾವಣೆಯಲ್ಲಿ ಸುಶೀಲಕುಮಾರ ಶಿಂಧೆ ಮತ್ತು ಬಿಜೆಪಿಯ ಶರದ ಬನಸೋಡೆ ನಡುವೆ ಪೈಪೋಟಿ ನಡೆದಿತ್ತು. ನರೇಂದ್ರ ಮೋದಿ ಅವರ ಅಲೆಯಿಂದ ಬಿಜೆಪಿ ಅಭ್ಯರ್ಥಿ ಶರದ ಬನಸೋಡೆ ಅವರು ಶಿಂಧೆಯವರನ್ನು ಸುಮಾರು 1.54 ಲಕ್ಷ ಮತಗಳ ಅಂತರದಿಂದ ಪರಾಭವಗೊಳಿಸಿದ್ದರು.

ಈ ಬಾರಿ ಹಾಲಿ ಸಂಸದ ಶರದ ಬನಸೋಡೆ ಅವರನ್ನು ಕೈಬಿಟ್ಟು ಗೌಡಗಾಂವ ಮಠದ ಡಾ| ಜಯಸಿದ್ಧೇಶ್ವರ ಶಿವಾಚಾರ್ಯ ಸ್ವಾಮಿಜಿಗೆ ಬಿಜೆಪಿ ಟಿಕೆಟ್ ನೀಡಿತ್ತು. ಬಿಜೆಪಿ, ಕಾಂಗ್ರೆಸ್‌ ಮತ್ತು ವಂಚಿತ ಬಹುಜನ ಆಘಾಡಿ ಪಕ್ಷದ ಮೂರು ಅಭ್ಯರ್ಥಿಗಳ ಮಧ್ಯೆ ಪೈಪೋಟಿ ಏರ್ಪಟ್ಟಿತ್ತು. ಜಾತಿ ಲೇಕ್ಕಾಚಾರದ ಮೇಲೆ ಚುನಾವಣೆ ರಂಗೇರಿತ್ತು. ಅಲ್ಲದೆ ಇದೇ ಮೊದಲ ಬಾರಿಗೆ ಸೊಲ್ಲಾಪುರ ಮತಕ್ಷೇತ್ರದಲ್ಲಿ ಬಿಜೆಯಿಂದ ಡಾ| ಜಯಸಿದ್ಧೇಶ್ವರ ಶಿವಾಚಾರ್ಯ ಸ್ವಾಮಿಗಳು ಹಾಗೂ ವಂಚಿತ ಬಹುಜನ ಆಘಾಡಿ ಪಕ್ಷದಿಂದ ಡಾ| ಪ್ರಕಾಶ ಅಂಬೇಡಕರ್‌ ಅವರು ಚುನಾವಣೆ ಸ್ಪರ್ಧಿಸಿದ್ದರಿಂದ ಕಾಂಗ್ರೆಸ್‌ ಅಭ್ಯರ್ಥಿ ಸುಶೀಲಕುಮಾರ ಶಿಂಧೆ ಅವರಿಗೆ ಭಾರಿ ತಲೆನೋವಾಗಿತ್ತು.

ದೇಶದಲ್ಲಿ ನರೇಂದ್ರ ಮೋದಿ ಅಲೆ ಇರುವುದರಿಂದ ಬಿಜೆಪಿಯ ಗೆಲುವು ನಿಶ್ಚಿತವೆಂದು ಹೇಳಲಾಗುತ್ತಿತ್ತು. ಅಂತೆಯೇ ನಮೋ ಬಿರುಗಾಳಿಗೆ ಕಾಂಗ್ರೆಸ್‌ ಧೂಳಿಪಟವಾಗಿದೆ.

ಸೋಮಶೇಖರ ಜಮಶೆಟ್ಟಿ

ಟಾಪ್ ನ್ಯೂಸ್

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.