ಭೋಸಲೆಗೆ ಓಂ ಜೈ ಶಂಕರ ಪ್ರಶಸ್ತಿ

ಸಮಾಜಕ್ಕೆ ಅನ್ನಛತ್ರ ಕೊಡುಗೆ ಅಪಾರ•ಪ್ರತಿನಿತ್ಯ 20 ಸಾವಿರ ಜನರಿಗೆ ಮಹಾಪ್ರಸಾದ

Team Udayavani, Aug 3, 2019, 12:39 PM IST

3-Agust-22

ಸೊಲ್ಲಾಪುರ: ಅನ್ನಛತ್ರ ಮಂಡಳದ ಸಂಸ್ಥಾಪಕ ಅಧ್ಯಕ್ಷ ಜನ್ಮೇಜಯರಾಜೆ ಭೋಸಲೆ ಅವರಿಗೆ ರಾಜ್ಯ ಮಟ್ಟದ 'ಓಂ ಜೈ ಶಂಕರ್‌' ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸೊಲ್ಲಾಪುರ: ತೀರ್ಥಕ್ಷೇತ್ರ ಅಕ್ಕಲಕೋಟ ನಗರದ ಶ್ರೀ ಸ್ವಾಮಿ ಸಮರ್ಥ ಅನ್ನಛತ್ರ ಮಂಡಳ ಸಂಸ್ಥಾಪಕ ಅಧ್ಯಕ್ಷ ಜನ್ಮೇಜಯರಾಜೆ ಭೋಸಲೆ ಅವರಿಗೆ ರಾಜ್ಯದ ಧಾರ್ಮಿಕ ಕ್ಷೇತ್ರದಲ್ಲಿ ಅತ್ಯುತ್ತಮವಾದ ಪುಣೆಯ ‘ಓಂ ಜೈ ಶಂಕರ ಪ್ರತಿಷ್ಠಾನ’ ವತಿಯಿಂದ ರಾಜ್ಯ ಮಟ್ಟದ ‘ಓಂ ಜೈ ಶಂಕರ’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಅನ್ನಛತ್ರ ಮಂಡಳದ ಹಳೆಯ ಮಹಾಪ್ರಸಾದ ಗೃಹದಲ್ಲಿ ಶ್ರೀ ಶಂಕರ ಮಹಾರಾಜ ಭಕ್ತರ 4ನೇ ಸ್ನೇಹ ಸಮಾವೇಶದಲ್ಲಿ ನಾಸೀಕ್‌ನ ಮಾಧವನಾಥ ಮಹಾರಾಜರ ಹಸ್ತದಿಂದ ಮಂಡಳ ಸಂಸ್ಥಾಪಕ ಅಧ್ಯಕ್ಷ ಜನ್ಮೆಜಯರಾಜೆ ಭೋಸಲೆ ಅವರಿಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.

ಜನ್ಮೇಜಯರಾಜೆ ಭೋಸಲೆ ನೇತೃತ್ವದಲ್ಲಿ ಶ್ರೀ ಸ್ವಾಮಿ ಸಮರ್ಥ ಅನ್ನಛತ್ರ ಮಂಡಳವನ್ನು 1988ರಲ್ಲಿ ಶ್ರೀ ಗುರುಪೂರ್ಣಿಮೆಯಂದು ಸ್ಥಾಪಿಸಲಾಗಿತ್ತು. ಈಗ ಪ್ರತಿನಿತ್ಯ ಸುಮಾರು 15 ರಿಂದ 20 ಸಾವಿರ ಭಕ್ತರು ಮಹಾಪ್ರಸಾದ ಸ್ವೀಕರಿಸಿ ತೃಪ್ತರಾಗುತ್ತಾರೆ. ಅಲ್ಲದೇ ಅನ್ನದಾಸೋಹದೊಂದಿಗೆ ಮಂಡಳದ ವತಿಯಿಂದ ಸಮಾಜಸೇವೆ ಕಾರ್ಯ ಮಾಡಲಾಗುತ್ತಿದೆ. ಶ್ರೀ ಕ್ಷೇತ್ರದ ಅಭಿವೃದ್ಧಿಗೆ ಮಂಡಳದ ಕೊಡುಗೆ ಅಫಾರವಾಗಿದೆ. ಮಂಡಳದ ನಿಯೋಜಿತ ಮಹಾಪ್ರಸಾದ ಗೃಹ ಐದು ಅಂತಸ್ತಿನ ಕಟ್ಟಡದ ಕಾರ್ಯ ಕೆಲವೇ ದಿನಗಳಲ್ಲಿ ಪ್ರಾರಂಭವಾಗಲಿದೆ. ಅನ್ನಛತ್ರದಲ್ಲಿ ಸ್ವಚ್ಛತೆಗೆ ಮಹತ್ವ ನೀಡಲಾಗಿದೆ. ಆದ್ದರಿಂದ ಜನ್ಮೇಜಯರಾಜೆ ಭೋಸಲೆ ಅವರ ಕಾರ್ಯವನ್ನು ಗುರುತಿಸಿದ ಪುಣೆಯ ಓಂ ಜೈ ಶಂಕರ ಪ್ರತಿಷ್ಠಾನ ರಾಜ್ಯ ಮಟ್ಟದ ಪ್ರಶಸ್ತಿ ನೀಡಿ ಗೌರವಿಸಿದೆ. ಶ್ರೀ ವಿಶ್ವೇಶ್ವರ ಸ್ವಾಮಿ ಮಹಾರಾಜ ಮಂಗಲ್ ಭಕ್ತ ಸೇವಾ ಮಂಡಳದ ಅಧ್ಯಕ್ಷ ರಾರಾಭಾವು ಕೊಠಾರಿ, ಶ್ರೀ ಶಂಕರ ಸೇವಾ ಮತ್ತು ಶ್ರೀಪಾದ ಶ್ರೀವಲ್ಲಭ ಚರಿತ್ರಾಮೃತ ಡಚ್ ರಚನೆಕಾರ ಡಾ| ಜಾನ್‌ ಡೂಯಿಂಗ್‌ ಹೇಗ್‌ ಜರ್ಮನಿ, ಸುರೇಖಾ ಪುರಾಣಿಕ್‌, ಸದ್ಗುರು ಶ್ರೀ ಪಿಟಲ್ ಮಹಾರಾಜ, ಹಿರಿಯ ಲೇಖಕ ಡಾ| ಯಶ್ವಂತ್ರಾವ ಪಾಟೀಲ, ಡಾ| ರಾಧಿಕಾ ಪಾರಾಸನಿಸ್‌, ಹಿರಿಯ ಚಿಂತಕ ಆನಂದ ಜೋಗದಂಡ, ಬಾಲರೋಗ ತಜ್ಞ ಡಾ| ಶಾಮಾ ಕುಲಕರ್ಣಿ ನಾಸಿಕ್‌, ಎಚ್.ಪಿ. ಮಾಧವನಾಥ ಮಹಾರಾಜ ಪಾಥರ್ಡಿ, ಶ್ರೀ ಪೇಂಟರ್‌ ಕಾಕಾ ಕಡ್ಲಾಸ್ಕರ್‌, ಬಾರ್ವೇಕಾಕಾ ನಾಸಿಕ್‌, ಸುರೇಂದ್ರ ಭಾನೋಸೆ, ಬ್ರಿಜೇಶ್‌ ಅಯ್ಯರ್‌ (ಪುಣೆ), ಮಿಲಿಂದ್‌ ಮಗರ್‌ (ನಾಸಿಕ್‌), ವಿಜಯ್‌ ಕೇದಾರಿ ಮಹಾರಾಜ, ಅನಿಲ ದಿಕ್ಸಿತ್‌ ಮಹಾರಾಜ (ಪುಣೆ), ಡಾ. ರಾಜೇಂದ್ರ ಮುಲೆ (ನಾಸಿಕ್‌), ಘೋಟ್ವಾಡೆಕರ್‌ ಮಹಾರಾಜ್‌ (ಪುಣೆ), ಗೋಪಾಲ್ ದಾಲ್ವಿ, ಅಜಿತ್‌ ದೇಶಮುಖ, ಅಂಜಲಿ ಮರೋಡ ಹಾಗೂ ಇನ್ನಿತರರು ಹಾಜರಿದ್ದರು. ಓಂ ಜೈ ಶಂಕರ ಪ್ರತಿಷ್ಠಾನದ ಅಧ್ಯಕ್ಷ ಪಪ್ಪಾ ಪುರಾಣಿಕ್‌, ಬಾಲಕಿಸಾನ್‌ ರಾಠಿ, ಗಜಾನನ ಪತ್ಕಿ, ರಮೇಶ್‌ ಅನ್ನಾ ಉಮರಗೆ, ಡಾ| ಅಮಿತ್‌ ಶೇಷ, ವಿಜಯ ಸರಾಫ್‌, ಧನಶ್ರೀ ಘೋರ್ಪಡೆ, ಶ್ರೀಮತಿ ವಿವೇಕಾ ಟಕಲೆ, ದೀಪಕ್‌ ಸೋನಾರ್‌, ವೈಭವ್‌ ಪಾಂಡೆ, ಶ್ರೀಪಾದ ಪುರಾಣಿಕ್‌, ಅಜಿತ್‌ ಕ್ಷೀರಸಾಗರ್‌ ಮತ್ತಿತರರು ಕಾರ್ಯಕ್ರಮ ಯಶಸ್ಸಿಗೆ ಶ್ರಮಿಸಿದರು.

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.