ಸೊರಬ ತಾಲೂಕಲ್ಲಿ 15.67 ಕೋಟಿ ರೂ. ನಷ್ಟ

•ಕಳಪೆ ಕಾಮಗಾರಿ ಮುಚ್ಚಿ ಹಾಕಲು ಅಧಿಕಾರಿಗಳಿಗೆ ಅನುಕೂಲ: ಸಾರ್ವಜನಿಕರ ಆರೋಪ

Team Udayavani, Aug 21, 2019, 12:40 PM IST

21-Agust-14

ಸೊರಬ: ನೆರೆ ಹಾನಿಯಲ್ಲಿ ಸೇರ್ಪಡೆಯಾಗಿರುವ ಸೊರಬ ಪಟ್ಟಣದ ಬಿಎಸ್‌ಎನ್‌ಎಲ್ ಕಚೇರಿಯ ಹಿಂಬದಿಯ ಸುಸಜ್ಜಿತ ಕಾಂಕ್ರೀಟ್ ರಸ್ತೆ.

ಸೊರಬ: ತಾಲೂಕಿನಲ್ಲಿ ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ರೈತರ ಬೆಳೆ ಹಾಗೂ ಸಾರ್ವಜನಿಕ ಆಸ್ತಿ-ಪಾಸ್ತಿ ಹಾನಿಗೊಳಗಾಗಿದೆ. ಪಟ್ಟಣ ವ್ಯಾಪ್ತಿಯಲ್ಲಿ 15.67 ಕೋಟಿ ರೂ. ನೆರೆ ಹಾವಳಿಯಿಂದ ನಷ್ಟ ಉಂಟಾಗಿದೆ ಎಂದು ಪಪಂ ಅಧಿಕಾರಿಗಳು ತಾಲೂಕು ಆಡಳಿತಕ್ಕೆ ವರದಿ ಸಲ್ಲಿಸಿರುವುದು ಸಾರ್ವಜನಿಕರಲ್ಲಿ ಅಚ್ಚರಿ ಮೂಡಿಸಿ, ಚರ್ಚೆಗೆ ಗ್ರಾಸವಾಗಿದೆ.

ಕೃಷಿ ಇಲಾಖೆ, ತಾಪಂ, ಪಿಡಬ್ಲ್ಯುಡಿ ಇಲಾಖೆ, ಮೆಸ್ಕಾಂ ಇಲಾಖೆಗಳು ಸೇರಿ ವಿವಿಧ ಇಲಾಖೆಗಳು ವರದಿ ತಯಾರಿಸಿದ್ದು, ಇಲಾಖೆವಾರು ತಾಲೂಕು ಆಡಳಿತದಿಂದ ಪ್ರಸಕ್ತ ಸಾಲಿನ ಪ್ರಕೃತಿ ನೆರೆ ಹಾವಳಿಯಿಂದ ಉಂಟಾದ ಆಸ್ತಿ-ಪಾಸ್ತಿ ಹಾನಿಯಾದ ಕ್ರೋಢೀಕೃತ ಮಾಹಿತಿ ಸಲ್ಲಿಸಲಾಗಿದೆ. ವರದಿಯಲ್ಲಿ ಸುಮಾರು 1 ನೂರು ಕೋಟಿ ರೂ.ಗಳಿಗೂ ಅಧಿಕ ಪ್ರಮಾಣದಲ್ಲಿ ನಷ್ಟ ಉಂಟಾಗಿದೆ ಎಂದು ಪ್ರಾಥಮಿಕ ವರದಿ ಸಲ್ಲಿಸಲಾಗಿದೆ. ಇಲ್ಲಿನ ಪಪಂನಿಂದ ತಾಲೂಕು ಆಡಳಿತಕ್ಕೆ ನೀಡಿದ ವರದಿಯಲ್ಲಿ 15.67 ಕೋಟಿ ರೂ., ನೆರೆ ಹಾವಳಿಯಿಂದ ನಷ್ಟವಾಗಿದೆ ಎಂದು ತಿಳಿಸಿರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ.

ಕಳಪೆ ಕಾಮಗಾರಿಗೆ ಶುಕ್ರದೆಸೆ: ಪಟ್ಟಣದ ಕೆಲ ವಾರ್ಡ್‌ಗಳಲ್ಲಿ ವಿವಿಧ ಯೋಜನೆಗಳಡಿ ಕೆಲ ವರ್ಷಗಳ ಹಿಂದೆ ಡಾಂಬಾರು ರಸ್ತೆ, ಸಿಸಿ ರಸ್ತೆ, ಚರಂಡಿ ಮತ್ತಿತರರ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲಾಗಿತ್ತು. ಅಂದು ಕೆಲ ವಾರ್ಡ್‌ಗಳಲ್ಲಿ ಕಳಪೆ ಕಾಮಗಾರಿಯಾಗುತ್ತಿದೆ, ಗುಣಮಟ್ಟದ ಕಾಮಗಾರಿ ಕೈಗೆತ್ತಿಕೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ ಸಾಕಷ್ಟು ನಿದರ್ಶನಗಳಿದ್ದವು. ಪಪಂ ವತಿಯಿಂದ ನೆಡಸಿದ ಕಾಮಗಾರಿಗಳಲ್ಲಿ ಬಹುತೇಕ ಕಳಪೆಯಾಗಿದ್ದರೂ, ಸಂಬಂಧಪಟ್ಟ ಗುತ್ತಿಗೆದಾರರಿಗೆ ಬಿಲ್ ಪಾವತಿಸಿ ವರುಷಗಳೇ ಉರುಳಿದೆ. ಇಂತಹ ಕೆಲ ಕಾಮಗಾರಿಗಳು ನೆಲಕಚ್ಚಿ ಹೋಗಿರುವುದು ನೆರೆ ಹಾವಳಿಯಿಂದಲೇ ಹಾನಿಯಾಗಿದೆ ಎಂದು ಪಪಂ ಸಲ್ಲಿಸಿದ ವರದಿ ದೋಷಪೂರಿತವಾಗಿದೆ. ಕಳಪೆ ಕಾಮಗಾರಿಗಳನ್ನು ಮುಚ್ಚಿಹಾಕಲು ತಾಲೂಕಿನಲ್ಲಿ ಸುರಿದ ಮಳೆ ಅಧಿಕಾರಿಗಳಿಗೆ ಶುಕ್ರದೆಸೆ ತಂದಿದೆ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಹರಿದಾಡುತ್ತಿದೆ.

ಬರೋಬ್ಬರಿ 15 ಕೋಟಿ ಹಾನಿ!: ಪಟ್ಟಣ ಪಂಚಾಯತ್‌ ವ್ಯಾಪ್ತಿಯ ಡಾಂಬಾರು ರಸ್ತೆ 2.85 ಕೋಟಿ ರೂ, ಕಾಂಕ್ರೀಟ್ ರಸ್ತೆ 76 ಲಕ್ಷ ರೂ., ಮಣ್ಣಿನ ಚರಂಡಿ 3.20 ಕೋಟಿ ರೂ., ಕಾಂಕ್ರೀಟ್ ತಡೆಗೋಡೆ 50 ಲಕ್ಷ ರೂ., ಜಲ್ಲಿ ರಸ್ತೆ 3.69 ಕೋಟಿ ರೂ., ಹಾಗೂ ಗಂಧದ ಕಾಂಪ್ಲೆಕ್ಸ್‌ ಸಮೀಪದಲ್ಲಿ ಡಾಂಬರ್‌ ರಸ್ತೆ ಹಾಗೂ ಚಪ್ಪಡಿ ಚರಂಡಿ ಹಾಳಾಗಿದ್ದು ಸುಮಾರು 60 ಲಕ್ಷ ರೂ., ಹಾನಿಯಾಗಿದೆ. ಉಳಿದಂತೆ ಪಪಂ ಆಡಳಿತಕ್ಕೊಳಪಡುವ ಹೊಳೆ ಜೋಳದಗುಡ್ಡೆ ಜಾಕ್‌ವೆಲ್ ಬಳಿಯ ಪುಟ್ ಬಿಡ್ಜ್ ಹಾನಿಯಾಗಿದ್ದು ಸುಮಾರು 80 ಲಕ್ಷ ರೂ., ನಷ್ಟವಾಗಿದೆ ಎಂದು ವರದಿ ಸಲ್ಲಿಸಲಾಗಿದೆ.

ತಜ್ಞರ ವರದಿಯೇ ಸಂಶಯ?: ನೆರೆ ಹಾಗೂ ಮಳೆಯಿಂದ ಹಾನಿಯಾದ ವರದಿ ತಯಾರಿಕೆಯನ್ನು ಸಂಬಂಧಪಟ್ಟ ತಜ್ಞ ಅಭಿಯಂತರರು ಸಿದ್ಧಪಡಿಸಿದ್ದಾರೆಯೇ ಎಂಬ ಅನುಮಾನ ವ್ಯಕ್ತವಾಗುತ್ತಿದೆ. ಕಳೆದ ನಾಲ್ಕೈದು ವರ್ಷಗಳಿಂದ ದುರಸ್ತಿಯನ್ನು ಎದುರು ನೋಡುತ್ತಿದ್ದ ರಸ್ತೆ-ಚರಂಡಿಗಳು ವರದಿಯಲ್ಲಿ ಸೇರ್ಪಡೆಯಾಗಿರುವುದರ ಹಿಂದೆ ಭ್ರಷ್ಟಾಚಾರದ ವಾಸನೆ ಬಡಿಯುತ್ತಿದೆ. ಪಟ್ಟಣದ ಸಾಗರ ರಸ್ತೆಯ ಎರಡು ಭಾಗದ ರಾಜಕಾಲುವೆ ಮಳೆಯಿಂದ ಹಾನಿಯಾಗಿದ್ದು, 80 ಲಕ್ಷ ರೂ., ನಷ್ಟವಾಗಿದೆ ಹಾಗೂ ಬೀದಿ ದೀಪ ಮತ್ತು ವಿದ್ಯುತ್‌ ಲೈನ್‌ಗೆ ಸುಮಾರು 20 ಲಕ್ಷ ರೂ. ನಷ್ಟವಾಗಿದೆ ಎಂದು ವರದಿ ಸಲ್ಲಿಸಲಾಗಿದೆ.

ಒಟ್ಟಾರೆ ಸ್ಥಳೀಯ ಪಪಂ ಸಲ್ಲಿಸಿದ ಮಳೆ ಹಾನಿ ವರದಿಯೂ ಅಭಿವೃದ್ಧಿಗೋ ಅಥವಾ ಕಳಪೆ ಕಾಮಗಾರಿಗಳನ್ನು ಮುಚ್ಚಿಹಾಕುವ ಪ್ರಯತ್ನವೇ?. ಅಥವಾ ಕಾಟಾಚಾರಕ್ಕೆ ಸಲ್ಲಿಸಿದ ವರದಿಯೇ ಎಂಬುದನ್ನು ಸಂಬಂಧಪಟ್ಟ ಇಲಾಖಾ ಮೇಲಧಿಕಾರಿಗಳು ಖುದ್ದು ಪರಿಶೀಲನೆ ನಡೆಸಿ, ಲೋಪಯುಕ್ತ ವರದಿ ತಯಾರಿಸಿದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.