ಹೊಲದಲ್ಲಿ ಹುಲಿ ಫ್ಲೆಕ್ಸ್‌-ನಾಯಿ ಬೊಗಳೋ ಸ್ಪೀಕರ್‌


Team Udayavani, Nov 28, 2019, 3:28 PM IST

28-November-15

„ಎಚ್‌.ಕೆ.ಬಿ. ಸ್ವಾಮಿ
ಸೊರಬ:
ಕಾಡಂಚಿನಲ್ಲಿರುವ ಜಮೀನುಗಳಲ್ಲಿ ಬೆಳೆ ರಕ್ಷಿಸಿಕೊಳ್ಳುವುದೇ ರೈತರಿಗೆ ದೊಡ್ಡ ಸವಾಲು. ಅದರಲ್ಲೂ ಗ್ರಾಮೀಣ ಪ್ರದೇಶಗಳಲ್ಲಿ ಮಂಗಗಳ ಕಾಟದಿಂದ ಬೆಳೆ ಕಾಪಾಡಿಕೊಳ್ಳೋದು ಸುಲಭದ ಮಾತಲ್ಲ. ಹೀಗಾಗಿ ತಾಲೂಕಿನ ಕಕ್ಕರಸಿ ಗ್ರಾಮದ ರೈತರೊಬ್ಬರು ಈಗ ಫ್ಲೆಕ್ಸ್‌ ಮತ್ತು ಸ್ಪೀಕರ್‌ (ಧ್ವನಿ ವರ್ಧಕ) ಮೊರೆ ಹೋಗಿದ್ದಾರೆ.

ಕಳೆದ ಮೂರು ವರ್ಷಗಳಲ್ಲಿ ಮಂಗಗಳ ಹಾವಳಿಯಿಂದ ಕೊಂಚವೂ ಬೆಳೆ ಲಭಿಸದೇ ಅಪಾರ ಪ್ರಮಾಣದಲ್ಲಿ ನಷ್ಟ ಅನುಭವಿಸಿದ್ದರು. ಇದಕ್ಕೆ ಹೊಸ ಮಾರ್ಗ ಕಂಡುಕೊಂಡ ಮೂಲತಃ ಜೇಡಗೇರಿ ಗ್ರಾಮದ ಜೆ.ಎಸ್‌. ಚಿದಾನಂದ ಗೌಡ, ಸ್ಪೀಕರ್‌ಗಳ ಮೊರೆ ಹೋಗಿ ಸುಮಾರು 4ಎಕರೆ ಭೂ ಪ್ರದೇಶದಲ್ಲಿ ಬೆಳೆದ ಬೆಳೆಗಳನ್ನು ರಕ್ಷಣೆ ಮಾಡಿಕೊಂಡಿರುವ ಜತೆಗೆ ನೆರೆಯ ಜಮೀನುಗಳು ಮಂಗಗಳ ಹಾವಳಿಯಿಂದ ವಿಮುಕ್ತಿ ಹೊಂದಿವೆ.

ಬೆಳೆ ರಕ್ಷಣೆಗೆ ಸ್ಪೀಕರ್‌ ಮೊರೆ: ನೀರಾವರಿ ಸೌಲಭ್ಯವಿಲ್ಲದೇ ಮಳೆಯನ್ನೇ ನಂಬಿ ಕಷ್ಟಪಟ್ಟು ಬೆಳೆದ ಜೋಳದ ಬೆಳೆ ಮಂಗಗಳ ಪಾಲಾಗುತ್ತಿತ್ತು. ಮಂಗಗಳು ಜಮೀನಿಗೆ ಲಗ್ಗೆ ಇಡುವುದನ್ನು ತಪ್ಪಿಸಲು ಸ್ಪೀಕರ್‌ ಜೋಡಿಸಿದರೇ ಹೇಗೆ ಎಂಬ ಉಪಾಯ ಹೊಳೆದಿದ್ದೇ ಸರಿ. ತಾವೇ ಸ್ಪತಃ ಕೂಗುವ ಮತ್ತು ನಾಯಿಗಳು ಬೊಗಳುವ ಶಬ್ದವನ್ನು ಮೊಬೈಲ್‌ನಲ್ಲಿ ಧ್ವನಿ ಮುದ್ರಿಸಿಕೊಂಡು, ಮೈಕ್ರೋ ಚಿಪ್‌ ಮೂಲಕ ಸ್ಪೀಕರ್‌ಗಳಿಗೆ ಅಳವಡಿಸಿ, ಜೋಳದ ಸಾಲಿನಲ್ಲಿ ಮರೆಮಾಚಿದಂತೆ ಅಳವಡಿಸಲಾಗಿದೆ. ಜತೆಗೆ ಜಮೀನಿನ ಸುತ್ತ ನಾಯಿ, ಹುಲಿಯ ಫ್ಲೆಕ್ಸ್‌ಗಳನ್ನು ಹಾಕಿದ್ದಾರೆ. ಇತ್ತ ನಾಯಿ ಕೂಗುವ ಶಬ್ದ ಕೇಳಿದ್ದೇ ತಡ ಮಂಗಗಳು ಕಾಲ್ಕಿತ್ತು, ಪುನಃ ಕಾಡು ಸೇರುತ್ತಿದ್ದು, ಇದರಿಂದ ಬೆಳೆ ರಕ್ಷಣೆ ಸಾಧ್ಯವಾಗಿದೆ ಎನ್ನುತ್ತಾರೆ ರೈತ ಚಿದಾನಂದ ಗೌಡ.

ಅರಣ್ಯ ಇಲಾಖೆಯಿಂದ ಪರಿಹಾರ: 2018ನೇ ಸಾಲಿನಲ್ಲಿ ಕಾಡುಕೋಣಗಳ ಹಾವಳಿಯಿಂದ 4 ಎಕರೆ ಜಮೀನಿನಲ್ಲಿ ಬೆಳೆದ ಜೋಳದ ಬೆಳೆ ಸಂಪೂರ್ಣವಾಗಿ ನಾಶವಾಗಿತ್ತು. ಈ ಸಂಬಂಧ ಅರಣ್ಯ ಇಲಾಖೆಗೆ ದೂರನ್ನು ಸಹ ಸಲ್ಲಿಸಲಾಗಿತ್ತು. ಸ್ಪಂದಿಸಿದ ಇಲಾಖಾ ಅಧಿಕಾರಿಗಳು ಸುಮಾರು 19 ಸಾವಿರ ರೂ., ಪರಿಹಾರ ದೊರಕಿಸಿಕೊಡುವಲ್ಲಿ ಯಶಸ್ವಿಯಾಗಿದ್ದರು ಎಂಬುದು ಗಮನಾರ್ಹ ಸಂಗತಿ.

ಕಡಿಮೆ ಖರ್ಚಿನಲ್ಲಿ ಯಶಸ್ಸು: ಬೆಳೆ ರಕ್ಷಣೆಗಾಗಿ ಅಳವಡಿಸಿದ ಸ್ಪೀಕರ್‌, ಮೈಕ್ರೋಚಿಪ್‌, ವೈರ್‌ ಸೇರಿ ಇತರೆ ಎಲೆಕ್ಟ್ರಾನಿಕ್‌ ವಸ್ತುಗಳಿಗೆ ತಗುಲಿದ ವೆಚ್ಚ ಕೇವಲ 2 ಸಾವಿರ ರೂ., ಗ್ರಾಮೀಣ ಭಾಗದಲ್ಲಿ ವಿದ್ಯುತ್‌ ಕಣ್ಣಾಮುಚ್ಚಾಲೆಯಾಟದಿಂದ ಕೆಲವೊಮ್ಮೆ ಸ್ಪೀಕರ್‌ ಕಾರ್ಯನಿರ್ವಹಿಸುವುದಿಲ್ಲ. ಆದ್ದರಿಂದ ಬ್ಯಾಟರಿಯನ್ನು ಸಹ ಅಳವಡಿಸಿದ್ದರಿಂದ ವಿದ್ಯುತ್‌ ಇಲ್ಲದ ಸಮಯದಲ್ಲೂ ಸ್ಪೀಕರ್‌ ಗಳು ಕಾರ್ಯನಿರ್ವಹಿಸುತ್ತಿವೆ. ಒಟ್ಟಾರೆಯಾಗಿ ಜಮೀನಿನಲ್ಲಿ ಸ್ಪೀಕರ್‌ ಅಳವಡಿಕೆಯಿಂದ ಮಂಗಗಳು ಸೇರಿ ಇತರೆ ಕಾಡು ಪ್ರಾಣಿಗಳಿಂದ ಬೆಳೆ ರಕ್ಷಣೆಯಾಗಿದೆ.

ಟಾಪ್ ನ್ಯೂಸ್

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8-muddebihala

Muddebihal: ನೇಹಾ ಕೊಲೆ ಖಂಡಿಸಿ ಪ್ರತಿಭಟನೆ: ಮುಸ್ಲಿಂ ಮುಖಂಡರು ಭಾಗಿ

signature

Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.