ಮಂಡಕ್ಕಿ ಭಟ್ಟಿಯಲ್ಲಿ ಸಮಸ್ಯೆಗಳ ಸರಮಾಲೆ!

ಮೂಲ ಸೌಕರ್ಯಗಳ ಕೊರತೆ ನಡುವೆ ಬದುಕುತ್ತಿರುವ 200 ಜನ

Team Udayavani, Sep 7, 2019, 1:33 PM IST

7-September-19

ಸೊರಬ: ಪಟ್ಟಣದ ಅಂಬೇಡ್ಕರ್‌ ಬಡಾವಣೆ ವ್ಯಾಪ್ತಿಯ ಮಂಡಕ್ಕಿ ಬಟ್ಟಿಯಲ್ಲಿ ಕೊಳಚೆ ನೀರು ನಿಂತಿರುವುದು.

•ಎಚ್.ಕೆ.ಬಿ. ಸ್ವಾಮಿ
ಸೊರಬ:
ಸಾರ್ವಜನಿಕರಿಗೆ ಶುದ್ಧ ನೀರು, ಸಮರ್ಪಕ ಶೌಚಗೃಹ, ಉತ್ತಮ ರಸ್ತೆ, ಚರಂಡಿ ವ್ಯವಸ್ಥೆ ಸೇರಿ ಮೊದಲಾದ ಮೂಲ ಸೌಕರ್ಯಗಳನ್ನು ಕಲ್ಪಿಸುವುದು ಸ್ಥಳೀಯ ಆಡಳಿತದ ಕರ್ತವ್ಯ. ಆದರೆ, ಇಲ್ಲಿನ 11ನೇ ವಾರ್ಡ್‌ನ ಡಾ| ಬಿ.ಆರ್‌. ಅಂಬೇಡ್ಕರ್‌ ಬಡಾವಣೆಯ ಮಂಡಕ್ಕಿ ಬಟ್ಟಿ ಏರಿಯಾ (ಹಳೇ ಗೌರಿ ಶಂಕರ ಮಿಲ್ ಹಿಂಭಾಗ) ಒಂದು ಸುತ್ತು ಹಾಕಿದರೆ ಇಲ್ಲಿನ ನಿವಾಸಿಗಳ ಸಮಸ್ಯೆ ಗೋಚರಿಸುತ್ತದೆ.

800 ಮತದಾರರಿರುವ ವಾರ್ಡ್‌ನಲ್ಲಿ ಸುಮಾರು 200 ಮಂದಿ ಇದೇ ಕೊಳಚೆ ಪ್ರದೇಶದಲ್ಲಿಯೇ ಅನೇಕ ಮೂಲ ಸೌಕರ್ಯಗಳ ಕೊರತೆ ನಡುವೆಯೇ ಜೀವನ ಸಾಗಿಸುತ್ತಿದ್ದಾರೆ. ಗಾರೆ ಕೆಲಸಗಾರರು, ಗ್ಯಾರೇಜ್‌ನಲ್ಲಿ ಕೆಲಸ ಮಾಡುವವರು, ಕೂಲಿ ಕಾರ್ಮಿಕರೇ ವಾಸವಾಗಿರುವ ವಾರ್ಡ್‌ನಲ್ಲಿ ಈವರೆಗೂ ಯಾವುದೇ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಪಟ್ಟಣ ಪಂಚಾಯತ್‌ಗೆ ಸಾಧ್ಯವೇ ಆಗಿಲ್ಲ.

ಸರಾಗವಾಗಿ ಹರಿಯದ ಕೊಳಚೆ ನೀರು: ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೇ ಕೊಳಚೆ ನೀರು ನಿಂತಲ್ಲೇ ನಿಂತಿದೆ. ಹೀಗಾಗಿ ಇಲ್ಲಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗುತ್ತಿದೆ. ಜನತೆಗೆ ಸಾಂಕ್ರಾಮಿಕ ರೋಗಗಳ ಭಯದಲ್ಲಿಯೇ ಜೀವನ ಸಾಗಿಸುವಂತಾಗಿದೆ. ಮಳೆ ಬಂತೆಂದರೆ ಕೊಳಚೆ ನೀರು ಮನೆಗಳಿಗೆ ನುಗ್ಗುತ್ತದೆ. ಪಟ್ಟಣ ಪ್ರದೇಶದಲ್ಲಿ ಯಾವುದೇ ಸೌಲಭ್ಯಗಳಲ್ಲಿದೇ ಆದಿವಾಸಿಗಳಂತೆ ಜನತೆ ಜೀವನ ಸಾಗಿಸುತ್ತಿದ್ದಾರೆ ಎಂದರೆ ನಿಜಕ್ಕೂ ವಿಪರ್ಯಾಸದ ಸಂಗತಿ.

ಬಯಲು ಶೌಚವೇ ಗತಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಸ್ವಚ್ಛ ಭಾರತ ಅಭಿಯಾನ ಇಲ್ಲಿ ಎಳ್ಳಷ್ಟೂ ಜಾರಿಯಾಗಿಲ್ಲ. ಸುಮಾರು 68 ಮನೆಗಳಿರುವ ವಾರ್ಡ್‌ನಲ್ಲಿ ಕೆಲವರು ಸ್ವಂತ ಖರ್ಚಿನಲ್ಲಿ ಶೌಚಗೃಹ ನಿರ್ಮಿಸಿಕೊಂಡಿದ್ದಾರೆ. ಉಳಿದಂತೆ ಬಹುತೇಕರಿಗೆ ಬಯಲು ಶೌಚವೇ ಗತಿಯಾಗಿದೆ. ಕೇವಲ ಪ್ರಚಾರಕ್ಕಾಗಿ ಮಾತ್ರ ಅಭಿಯಾನ ಕೈಗೊಳ್ಳಲಾಗಿದೆಯೇ ಎಂಬ ಆರೋಪ ಸಾರ್ವಜನಿಕರದ್ದು, ಇಲ್ಲಿನ ನಿವಾಸಿಗಳಿಗೆ ಶೌಚಗೃಹ ನಿರ್ಮಿಸಿಕೊಳ್ಳಲು ತಾಂತ್ರಿಕ ಸಮಸ್ಯೆಗಳಿದ್ದರೆ, ಸಮುದಾಯ ಶೌಚಗೃಹವನ್ನಾದರೂ ಕಲ್ಪಿಸಬಹುದಾಗಿತ್ತು.

ನಿವೇಶನದ ಮಾಲೀಕತ್ವಕ್ಕಾಗಿ ಕಸರತ್ತು: ಬಹುತೇಕ ಅಲ್ಪಸಂಖ್ಯಾತರು, ದಲಿತರು ಸೇರಿದಂತೆ ಹಿಂದುಳಿದ ಸಮು ದಾಯದವರೇ ಹೆಚ್ಚಿರುವ ಇಲ್ಲಿನ ಪ್ರದೇಶದಲ್ಲಿ ಜನತೆ ನಿವೇಶನದ ಮಾಲೀಕತ್ವಕ್ಕಾಗಿ ಕಳೆದ ಮೂರು ದಶಕಗಳಿಂದ ಹೋರಾಟ ನಡೆಸುತ್ತಲೇ ಬಂದಿದ್ದಾರೆ. ಸುತ್ತಲೂ ಖಾಸಗಿ ಮಾಲೀಕತ್ವದ ಭೂಮಿ ಇದೆ. ಪಶ್ಚಿಮ ಭಾಗಕ್ಕೆ ಗೌರಿ ಶಂಕರ ಮಿಲ್ನವರು ಕಾಂಪೌಂಡ್‌ ಹಾಕಿದ್ದಾರೆ. ಪೂರ್ವ, ದಕ್ಷಿಣ ಮತ್ತು ಉತ್ತರ ಭಾಗಕ್ಕೆ ಖಾಸಗಿಯವರ ಭೂಮಿ ಇದ್ದು, ಇಲ್ಲಿನ ಜನತೆಗೆ ರಸ್ತೆ ಸಂಪರ್ಕವೂ ಇಲ್ಲ ಎಂಬುದು ಸೋಜಿಗದ ಸಂಗತಿ ಎನ್ನಬಹದು.

ನ್ಯಾಯಾಲಯದ ಮೊರೆ: ನಿವೇಶನದ ಮಾಲೀಕತ್ವ ದೊರೆತರೆ ಸರ್ಕಾರದಿಂದ ಸೌಲಭ್ಯ ಪಡೆಯಬಹುದು. ಭವಿಷ್ಯಕ್ಕೊಂದು ಭದ್ರ ಬುನಾದಿ ಹಾಕಿಕೊಳ್ಳಬಹುದು. ಸ್ವಂತಕ್ಕೊಂದು ಸೂರು ಕಲ್ಪಿಸಿಕೊಳ್ಳಬಹುದು ಎಂಬ ಉದ್ದೇಶ ಇಲ್ಲಿನ ನಿವಾಸಿಗಳದ್ದಾಗಿದೆ.

ಮತ್ತೂಂದಡೆ ಇಲ್ಲಿನ ನಿವೇಶನದ ಮೂಲ ಮಾಲೀಕರ ಬಗ್ಗೆ ಕೆಲ ಗೊಂದಲವಿದೆ ಎನ್ನಲಾಗುತ್ತಿದ್ದು, ಒಂದಡೆ ಗೌರಿ ಶಂಕರ ಮಿಲ್ನವರು ತಮಗೆ ಸೇರಿದ್ದೆಂದು, ಮತ್ತೂಂದೆಡೆ ಮಠವೊಂದರ ಆಸ್ತಿ, ಪಪಂ ದಾಖಲೆಗಳು ಮತ್ತು ಕಂದಾಯ ಇಲಾಖೆಯ ಸರ್ವೆ ಇಲಾಖೆಯ ದಾಖಲೆಗಳು ಹೊಂದಾಣಿಕೆಯಾಗುತ್ತಿಲ್ಲ. ಇವೆಲ್ಲದರ ನಡುವೆ ಹಿರೇಶಕುನ ಕೆರೆಯ ಕೋಡಿ ಜಾಗವೂ ಇದೇ ಪ್ರದೇಶದಲ್ಲಿ ಹಾದು ಹೋಗಿದೆ. ನಿವೇಶನದ ಕುರಿತು ಇರುವ ಸಮಸ್ಯೆಗಳ ತೊಡಕನ್ನು ನಿವಾರಿಸಿಕೊಡುವಂತೆ ಕೆಲವರು ನ್ಯಾಯಾಲಯದ ಮೊರೆ ಹೋಗಿದ್ದಾರೆ ಎನ್ನಲಾಗುತ್ತಿದೆ.

ಚುನಾವಣೆಯ ಸರಕು..
ಸ್ಥಳೀಯ ಸಂಸ್ಥೆ ಚುನಾವಣೆಯಿಂದ ವಿಧಾನಸಭೆ, ಲೋಕಸಭೆ ಚುನಾವಣೆಗಳು ನಡೆದಾಗ ಇಲ್ಲಿನ ಜನರಿಗೆ ನಿವೇಶನ ಮಾಲೀಕತ್ವ ದೊರಕಿಸಿ ಕೊಡುವ ಭರವಸೆ ರಾಜಕೀಯ ಮುಖಂಡರಿಂದ ದೊರೆಯುತ್ತಿದೆ ವಿನಃ, ಕಾರ್ಯರೂಪಕ್ಕೆ ಬಂದಿಲ್ಲ. ಕೇವಲ ಮತಗಳಿಗೆ ಮಾತ್ರ ಇಲ್ಲಿನ ಜನತೆಯನ್ನು ಚುನಾವಣಾ ಸರಕುಗಳ ರೀತಿಯಲ್ಲಿ ಬಳಸಿಕೊಳ್ಳಲಾಗುತ್ತಿದೆ. ಇವರ ಪರವಾಗಿ ಧ್ವನಿ ಎತ್ತಲು ಯಾವುದೇ ಮುಖಂಡರು ಮುಂದಾಗಿಲ್ಲ ಎಂಬ ಆರೋಪ ಸಹ ಕೇಳಿಬರುತ್ತಿದೆ.

ಟಾಪ್ ನ್ಯೂಸ್

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.