ಸ್ವಂತ ಸೂರೂ ಇಲ್ಲ: ಸೌಲಭ್ಯವೂ ಇಲ್ಲ!

ಸ್ವಚ್ಛತೆ ಮರೀಚಿಕೆ ಇರುವ ಪುಸ್ತಕ ಜೋಡಿಸಲೂ ಸೂಕ್ತ ಸ್ಥಳವಿಲ್ಲ ಶೌಚಗೃಹದ ಸಮಸ್ಯೆ

Team Udayavani, Oct 31, 2019, 1:06 PM IST

31-October-12

ಸೊರಬ: ಎ.ಪಿ.ಜೆ. ಅಬ್ದುಲ್‌ ಕಲಾಂ ಹೇಳುವಂತೆ “ಒಂದು ಅತ್ಯುತ್ತಮ ಪುಸ್ತಕ ನೂರು ಉತ್ತಮ ಸ್ನೇಹಿತರಿಗೆ ಸಮ. ಒಬ್ಬ ಅತ್ಯುತ್ತಮ ಸ್ನೇಹಿತ ಒಂದು ಗ್ರಂಥಾಲಯಕ್ಕೆ ಸಮ’. ಹೌದು ಗ್ರಂಥಾಲಯಗಳು ಯಾವುದೇ ಬೇಧಭಾವವಿಲ್ಲದೇ ಪ್ರತಿಯೊಬ್ಬರಿಗೂ ಜ್ಞಾನ ಒದಗಿಸಿಕೊಡುವ ಕೇಂದ್ರಗಳು. ಆದರೆ ಸಾರ್ವಜನಿಕ ಗ್ರಂಥಾಲಯಗಳು ಹೆಚ್ಚಿದ್ದರೂ ಸ್ವಂತ ಕಟ್ಟಡಗಳ ಸಮಸ್ಯೆಯ ಜೊತೆಗೆ ಮೂಲ ಸಮಸ್ಯೆಗಳಿಂದ ಬಳಲುತ್ತಿವೆ.

ತಾಲೂಕು ಕೇಂದ್ರವಾದ ಸೊರಬ ಪಟ್ಟಣದ ರಾಘವೇಂದ್ರ ಬಡಾವಣೆಯಲ್ಲಿ 1988ರಲ್ಲಿ ಆರಂಭವಾದ ಸಾರ್ವಜನಿಕ ಗ್ರಂಥಾಲಯಕ್ಕೆ 31 ವರ್ಷಗಳು ಸವೆದಿವೆ. ಸುಮಾರು 25,762 ಪುಸ್ತಕಗಳಿದ್ದು, 1,192 ಸದಸ್ಯರಿದ್ದಾರೆ. ಆದರೆ, ನಿತ್ಯ ಗ್ರಂಥಾಲಯಕ್ಕೆ ಭೇಟಿ ಕೊಡುವವರ ಸಂಖ್ಯೆ ಸುಮಾರು 100 ಮಾತ್ರ! ಸ್ವಂತ ಕಟ್ಟಡ ಸೇರಿದಂತೆ ಸೂಕ್ತ ಸೌಲಭ್ಯಗಳ ಕೊರತೆ ಹಾಗೂ ಜನನಿಬಿಡ ಪ್ರದೇಶದಲ್ಲಿರದಿರುವುದೇ ಇದಕ್ಕೆ ಕಾರಣವಾಗಿದೆ.

ಪಟ್ಟಣ ಗ್ರಂಥಾಲಯಕ್ಕೆ 15 ಸಾವಿರ ಹೊಸ ಪುಸ್ತಕಗಳು ಸರ್ಕಾರದಿಂದ ಬಂದಿದ್ದರೂ ಪುಸ್ತಕ ಇಡಲು ಜಾಗವಿಲ್ಲ. ಜೊತೆಗೆ ಗ್ರಂಥಾಲಯದ ಪಕ್ಕದಲ್ಲಿಯೇ ಇರುವ ಹಾಳು ಬಿದ್ದಿರುವ ಜಾಗದಿಂದ ಇಲಿ, ಹೆಗ್ಗಣಗಳು ಬಂದು ಪುಸ್ತಕ ತಿನ್ನುವ ಭಯದಿಂದ ಜಿಲ್ಲಾ ಕೇಂದ್ರ ಗ್ರಂಥಾಲಯದಲ್ಲಿಯೇ ಇಡಲಾಗಿದೆ.

ಯುವಕರ ಸೆಳೆಯಬೇಕಿದೆ: ಯುವಜನತೆ ಮೊಬೈಲ್‌, ಇಂಟರ್‌ನೆಟ್‌ಗಳ ಅಗಾಧ ಬಳಕೆಯಿಂದ ಪುಸ್ತಕಗಳತ್ತ ಮುಖ ಮಾಡುವುದೇ ಕಡಿಮೆಯಾಗಿದೆ. ಸುಮಾರು 390 ಹಳ್ಳಿಗಳನೊಳ್ಳಗೊಂಡ ತಾಲೂಕಿನಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸರ್ಕಾರಿ ಪಪೂ ಕಾಲೇಜು ಹಾಗೂ ಸರ್ಕಾರಿ ಪಾಲಿಟೆಕ್ನಿಕ್‌, ಐಟಿಐ ಕಾಲೇಜುಗಳಲ್ಲಿ ಸಾವಿರಾರು ಬಡ ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದಾರೆ.

ಅನೇಕರು ಈಗಾಗಲೇ ಸ್ಪರ್ಧಾತ್ಮಕ ಪರೀಕ್ಷೆಯ ತಯಾರಿ ಕೈಗೊಂಡಿದ್ದಾರೆ. ಗ್ರಂಥಾಲಯವನ್ನು ಪಟ್ಟಣದ ಕೇಂದ್ರದಲ್ಲಿ ಸ್ಥಾಪಿಸಿದರೆ ವಿದ್ಯಾರ್ಥಿಗಳು ಹಾಗೂ ಯುವ ಜನತೆಯನ್ನು ಓದಿನಡೆಗೆ ಸೆಳೆಯಬಹುದು.

ಸ್ವಂತ ಕಟ್ಟಡಗಳ ಕೊರತೆ: ತಾಲೂಕಿನಲ್ಲಿ 39 ಸಾರ್ವಜನಿಕ ಗ್ರಂಥಾಲಯಗಳಿದ್ದು, ಚಂದ್ರಗುತ್ತಿ, ತವನಂದಿ, ಕುಪ್ಪಗಡ್ಡೆ ಗ್ರಾಮಗಳಲ್ಲಿ ಮಾತ್ರ ಸ್ವಂತ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿವೆ. ಉಳಿದಂತೆ ಪಂಚಾಯತ್‌ ಕಟ್ಟಡ, ಖಾಸಗಿ ಕಟ್ಟಡಗಳಲ್ಲಿ ಗ್ರಂಥಾಲಯಗಳನ್ನು ತೆರೆಯಲಾಗಿದೆ. ಈ ನಿಟ್ಟಿನಲ್ಲಿ ಗ್ರಂಥಾಲಯಗಳಿಗೆ ಸ್ವಂತ ಕಟ್ಟಡಗಳ ನಿರ್ಮಾಣಕ್ಕೆ ಸರ್ಕಾರ ಆದ್ಯತೆ ನೀಡಬೇಕು. ಮೂಲ ಸೌಲಭ್ಯಗಳನ್ನು ಕಲ್ಪಿಸಬೇಕು ಎಂಬ ಕೂಗು ಓದುಗ ಬಳಗದಿಂದ ವ್ಯಕ್ತವಾಗುತ್ತಿದೆ.

ಶೌಚಗೃಹ ಸಮಸ್ಯೆ: ಪಟ್ಟಣದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರಂಥಾಲಯದಲ್ಲಿ ಶೌಚಗೃಹದ ಸಮಸ್ಯೆ ಓದುಗರನ್ನು ಕಾಡುತ್ತಿದೆ. ಕಟ್ಟಡದ ಪಕ್ಕದಲ್ಲಿಯೇ ಪಪಂಗೆ ಸೇರಿದ ಸಾರ್ವಜನಿಕ ಶೌಚಗೃಹವಿದ್ದರೂ, ಬಳಕೆಗೆ ಯೋಗ್ಯವಾಗಿಲ್ಲ.

ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಡುತ್ತಿದೆ. ಗ್ರಂಥಾಲಯದಲ್ಲಿ ಮೂಗು ಮುಚ್ಚಿಕೊಂಡೇ ಓದುವ ಸ್ಥಿತಿ ಇದ್ದು, ಇನ್ನು ಮಹಿಳಾ ಓದುಗರಂತೂ ಇತ್ತ ಕಡೆ ಮುಖವನ್ನೇ ಮಾಡದಂತಾಗಿದೆ. ಪಟ್ಟಣದ ಹಳೇ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಜಾಗದಲ್ಲಿ ನೂತನ ಕಟ್ಟಡವನ್ನು ನಿರ್ಮಾಣ ಮಾಡುವ ಯೋಜನೆ ಇದ್ದು, ಇದಕ್ಕೆ 50 ಲಕ್ಷ ರೂ. ಅನುದಾನ ಬಿಡುಗಡೆಯಾಗಿದ್ದರೂ ಈವರೆಗೂ ಯಾವುದೇ ಪ್ರಕ್ರಿಯೆ ಪ್ರಾರಂಭವಾಗಿಲ್ಲ.

ಟಾಪ್ ನ್ಯೂಸ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.