ಶ್ರೀರಂಗಪಟ್ಟಣ ದಸರಾ ಅದ್ಧೂರಿ ಆಚರಣೆಗೆ ಸಹಕರಿಸಿ

ಅಧಿಕಾರಿಗಳು ಜವಬ್ದಾರಿಯಾಗಿ ಕೆಲಸ ನಿರ್ವಹಿಸಿ: ರವೀಂದ್ರ ಶ್ರೀಕಂಠಯ್ಯ , ಡೀಸಿ ಡಾ.ವೆಂಕಟೇಶ್‌ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ

Team Udayavani, Sep 12, 2019, 7:07 PM IST

12-Sepctember-25

ಶ್ರೀರಂಗಪಟ್ಟಣ ದಸರಾ ಮಹೋತ್ಸವ 2019ರ ಪೂರ್ವಭಾವಿ ಸಭೆಯಲ್ಲಿ ಶಾಸಕ ಎ.ಎಸ್‌ ರವೀಂದ್ರ ಶ್ರೀಕಂಠಯ್ಯ ಮಾತನಾಡಿದರು. ಜಿಲ್ಲಾಧಿಕಾರಿ ಡಾ.ವೆಂಕಟೇಶ್‌, ಸಿಇಒ ಯಾಲಕ್ಕಿಗೌಡ, ಉಪ ವಿಭಾಗಾಧಿಕಾರಿ ಶೈಲಜಾ ಇತರರಿದ್ದರು.

ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣ ದಸರಾ ಆಚರಣೆಗೆ ಎಲ್ಲಾ ಇಲಾಖೆ ಅಧಿಕಾರಿಗಳು ಶ್ರದ್ಧಾಸಕ್ತಿಯಿಂದ ಕಾರ್ಯ ನಿರ್ವಹಿಸಿ ಅದ್ದೂರಿಯಾಗಿ ಆಚರಣೆಗೆ ಸಹಕರಿಸಬೇಕು ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ ಹೇಳಿದರು.

ಪಟ್ಟಣದಲ್ಲಿ ಜಿಲ್ಲಾಧಿಕಾರಿ ಡಾ.ವೆಂಕಟೇಶ್‌ ಅಧ್ಯಕ್ಷತೆಯಲ್ಲಿ ನಡೆದ ದಸರಾ ಮಹೋತ್ಸವ 2019ರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಶ್ರೀರಂಗಪಟ್ಟಣ ದಸರಾ ಆಚರಣೆ ಸಂಬಂಧ ಈಗಾಗಲೇ ಮುಖ್ಯಮಂತ್ರಿ ಯಡಿಯೂರಪ್ಪ ಜೊತೆ ಚರ್ಚಿಸಿ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ 2 ಕೋಟಿ ರೂ. ಹಣ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದು, ಅದಕ್ಕೆ ಅವರೂ ಒಪ್ಪಿಗೆ ಸೂಚಿಸಿದ್ದಾರೆ. ಈ ಬಾರಿ ಮೂರನೇ ದಿನ ದಸರಾ ಆಚರಿಸಲಾಗುವುದು. ಈ ಬಾರಿ ದಸರಾ ಉತ್ಸವದಲ್ಲಿ ಪ್ರತಿ ಇಲಾಖೆಯೂ ಮಾಹಿತಿಯುಳ್ಳ ಅತ್ಯುತ್ತಮ ಸ್ತಬ್ಧ ಚಿತ್ರಗಳನ್ನು ತಯಾರಿಸಿ ಮೆರವಣಿಗೆಯಲ್ಲಿ ಪ್ರದರ್ಶಿಸಬೇಕು ಎಂದು ಹೇಳಿದರು.

ಮನರಂಜನೆಗೆ ಸೀಮಿತವಲ್ಲ: ಜಿಲ್ಲಾಧಿಕಾರಿ ಡಾ.ಎಂ..ವೆಂಕಟೇಶ್‌ ಮಾತನಾಡಿ, ದಸರಾ ಉತ್ಸವ ಕೇವಲ ಮನರಂಜನೆಗೆ ಮಾತ್ರ ಸೀಮಿತವಾಗಬಾರದು. ದಸರಾ ಆಚರಣೆ ಮಾಡುವುದರಿಂದ ಸ್ಥಳೀಯ ಕಲಾವಿದರು, ವ್ಯಾಪಾರಿಗಳಿಗೆ ಉದ್ಯೋಗ ಲಭಿಸಲಿದೆ. ಜೊತೆಗೆ ಸ್ಥಳೀಯ ಆರ್ಥಿಕ ಪರಿಸ್ಥಿತಿ ಅಭಿವೃದ್ಧಿಯಾಗಲಿದೆ. ಮುಂದಿನ ದಿನಗಳಲ್ಲಿ ಶ್ರೀರಂಗಪಟ್ಟಣ ಪ್ರವಾಸೋದ್ಯಮ ಕ್ಷೇತ್ರವಾಗಿ ಮತ್ತಷ್ಟು ಅಭಿವೃದ್ಧಿ ಹೊಂದಲಿದೆ. ಕೆಆರ್‌ಎಸ್‌ ಬೃಂದಾವನ, ದೇವಸ್ಥಾನಗಳು ಸೇರಿದಂತೆ ಪ್ರೇಕ್ಷಣೀಯ ಸ್ಥಳಗಳ ಬಗ್ಗೆ ಜನಜಾಗೃತಿ ಮೂಡಿಸಿ, ಶ್ರೀರಂಗಪಟ್ಟಣ ದಸರಾವನ್ನು ಅರ್ಥಪೂರ್ಣವಾಗಿ ಆಚರಿಸಲು ಸಹಕರಿಸುತ್ತೇವೆ ಎಂದು ಹೇಳಿದರು.

ಸಂಘಟನೆಗಳ ಸಲಹೆ: ವಿವಿಧ ಕನ್ನಡ ಪರ ಸಂಘಟನೆಗಳ ಮುಖಂಡರು, ದಸರಾ ಆಚರಣೆ ಕುರಿತು ಪತ್ರಿಕೆಗಳಲ್ಲಿ ಜಾಹಿರಾತು ಮೂಲಕ ಹೆಚ್ಚು ಪ್ರಚಾರ ನೀಡಬೇಕು. ಕಿರಂಗೂರು ಗ್ರಾಮದಿಂದ ಪಟ್ಟಣದವರೆಗೆ ಮುಖ್ಯರಸ್ತೆಯಲ್ಲಿ ಬೀದಿ ದೀಪಗಳಿಲ್ಲದೆ ಹೆದ್ದಾರಿ ಬಿಕೋ ಎನ್ನುತ್ತಿದೆ. ಮೊದಲು ಬೀದಿ ದೀಪಗಳನ್ನು ಸರಿಪಡಿಸಬೇಕು.. ಬೆಂಗಳೂರು-ಮೈಸೂರು ಹೆದ್ದಾರಿ ವೃತ್ತದಲ್ಲಿ ಸಿಗ್ನಲ್ ದೀಪ ಅಳವಡಿಸಬೇಕು. ಆಳ್ವಿಕೆ ನಡೆಸಿರುವ ರಾಜರ ಭಾವಚಿತ್ರಗಳ ಜೊತೆಗೆ ಅವರ ಕಿರುಪರಿಚಯ ಮಾಡಿಕೊಡು ಕೆಲಸ ಆಗಬೇಕು. ದಸರಾ ಉತ್ಸವದಲ್ಲಿ ದೇಸೀಯ ಕಲಾವಿದರಿಗೆ ಆದ್ಯತೆ ಕೊಡಬೇಕು. ಕಲಾವಿದರಿಗೆ ಊಟದ ವ್ಯವಸ್ಥೆ, ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು. ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವವರು ಹಾಗೂ ಪೌರಕಾರ್ಮಿಕರನ್ನು ಅಭಿನಂದಿಸಬೇಕು. ವಿಕಲಚೇತನರಿಗೆ ಪ್ರತ್ಯೇಕ ಆಸನ ವ್ಯವಸ್ಥೆ ಕಲ್ಪಿಸುವುದೂ ಇತ್ಯಾದಿ ಸಲಹೆ ನೀಡಿದರು.

ಸಭೆಯಲ್ಲಿ ಜೋತಿಷಿ ಡಾ.ಭಾನುಪ್ರಕಾಶ್‌ ಶರ್ಮಾ, ಜಿಪಂ ಸಿಇಒ ಯಾಲಕ್ಕಿಗೌಡ, ಉಪ ವಿಭಾಗಾಧಿಕಾರಿ ಶೈಲಜಾ, ತಹಶೀಲ್ದಾರ್‌ ನಾಗೇಶ್‌, ತಾಪಂ ಇಒ ಹಡಗಲಿ ಅರುಣ್‌ಕುಮಾರ್‌, ಪುರಸಭೆ ಮುಖ್ಯಾಧಿಕಾರಿ ಕೃಷ್ಣ, ಜಿಪಂ, ತಾಪಂ, ಪುರಸಭೆ ಸದಸ್ಯರು, ಜನಪ್ರತಿನಿಧಿಗಳು, ಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.