ಅಪೂರ್ಣ ತಾಲೂಕು ಕ್ರೀಡಾಂಗಣ,ಒಳಚರಂಡಿ ದುರ್ವಾಸ‌ನೆಗೆ ಜನ ತತ್ತರ

4 (ಶಾಂತಿನಗರ), 5ನೇ (ಹಳೆಗೇಟು) ವಾರ್ಡ್‌: ದಶಕದ ಸವಾಲುಗಳು

Team Udayavani, May 19, 2019, 10:24 AM IST

19-May-3

ಶಾಂತಿನಗರ ಕ್ರೀಡಾಂಗಣದ ಕಟ್ಟಡಗಳು.

ಸುಳ್ಯ: ನ.ಪಂ.ನ 4 (ಶಾಂತಿನಗರ), 5ನೇ (ಹಳೆಗೇಟು) ವಾರ್ಡ್‌ಗಳು ನಗರ ಮತ್ತು ತಾಲೂಕಿಗೆ ಸಂಬಂಧಿಸಿದ ಎರಡು ಪ್ರಮುಖ ಸಮಸ್ಯೆ ಹೊತ್ತುಕೊಂಡು ದಶ ವರ್ಷಗಳೇ ಕಳೆದಿದೆ.

ಒಂದೆಡೆ ನಗರದ ಒಳಚರಂಡಿ ಘಟಕದ ದುರ್ವಾಸನೆ, ಇನ್ನೊಂದೆಡೆ ಪಾಳುಬಿದ್ದಿರುವ ತಾಲೂಕು ಕ್ರೀಡಾಂಗಣ. ಹತ್ತಾರು ವರ್ಷದಿಂದ ಇವೆರೆಡು ಸಮಸ್ಯೆ ಬಗೆಹರಿದಿಲ್ಲ. ನಗರಾಡಳಿತದ ಮೂಲಕ ಸರಕಾರದ ಹಂತದಲ್ಲಿ ಒತ್ತಡ ತಂದು ಇದಕ್ಕೂಂದು ಪರಿಹಾರ ಕಂಡುಕೊಳ್ಳಬೇಕು ಎನ್ನುವುದು ವಾರ್ಡ್‌ನ ಮತದಾರರ ಬೇಡಿಕೆ. ಆ ನಿರೀಕ್ಷೆಯಲ್ಲಿ ಹಕ್ಕು ಚಲಾಯಿಸುತ್ತೇವೆ ಅನ್ನುವುದು ಸ್ಥಳೀಯರ ಅಭಿಮತ.

ಪ್ರಯೋಜನಕ್ಕಿಲ್ಲ ಒಳಚರಂಡಿ ಘಟಕ
ಹಳಗೇಟು ವಾರ್ಡ್‌-5ಕ್ಕೆ ಸೇರಿರುವ ಹೊಸಗದ್ದೆ ಪ್ರದೇಶದಲ್ಲಿ ಒಳ ಚರಂಡಿ ಘಟಕವಿದೆ. ನಗರದಿಂದ ಹರಿದು ಬರುವ ತ್ಯಾಜ್ಯ ನೀರನ್ನು ಮರು ಬಳಕೆ ಮಾಡಿಕೊಳ್ಳುವ ಉದ್ದೇಶದಿಂದ 2.87 ಕೋಟಿ ರೂ. ಒಳಚರಂಡಿ ಘಟಕ ಕ್ರಿಯಾಯೋಜನೆಗೆ ಸರಕಾರವು 2001ರ ಜುಲೈ ತಿಂಗಳಲ್ಲಿ ಒಪ್ಪಿಗೆ ನೀಡಿತ್ತು. 2001ರ ನವೆಂಬರ್‌ನಲ್ಲಿ ತಾಂತ್ರಿಕ ಮಂಜೂರಾತಿ ದೊರೆಯಿತು. ಒಳಚರಂಡಿಯಲ್ಲಿ ಹರಿದು ಬರುವ ತ್ಯಾಜ್ಯ ನೀರಿನ ಸಂಸ್ಕರಣೆಗೆ ಹಳೆಗೇಟು ವಾರ್ಡ್‌ನ ಹೊಸಗದ್ದೆ ಬಳಿ ತ್ಯಾಜ್ಯ ಶುದ್ಧೀಕರಣ ಘಟಕ ಸಾಪಿಸುವ ವಿಚಾರಕ್ಕೆ ಸ್ಥಳೀಯ ಪರಿಸರದ 300ಕ್ಕೂ ಅಧಿಕ ಮನೆ ಮಂದಿ ತೀವ್ರ ವಿರೋಧ ವ್ಯಕ್ತಪಡಿಸಿದರು. ಆದರೆ ಪ್ರತಿಭಟನೆ ಲೆಕ್ಕಿಸದೆ ಅಲ್ಲಿ ಘಟಕ ನಿರ್ಮಿಸಲಾಗಿತ್ತು.

ಬಾಗಿಲು ಮುಚ್ಚಬೇಕು
ಶುದ್ಧಿಕರಣಕ್ಕೆಂದು 6ಕ್ಕಿಂತ ಅಧಿಕ ಬೃಹತ್‌ ಹೊಂಡ ನಿರ್ಮಿಸಲಾಗಿದೆ. ಯೋಜನೆ ಪ್ರಕಾರ ನಗರದ ಎರಡು ವಲಯಗಳಿಂದ ಬರುವ ತ್ಯಾಜ್ಯ ಹೊಂಡದಲ್ಲಿ ಶೇಖರಣೆಯಾಗಿ ಬೇರೆ ಬೇರೆ ಹೊಂಡಕ್ಕೆ ಹರಿದು, ಹಂತ ಹಂತವಾಗಿ ಶುದ್ಧೀಕರಣಗೊಂಡು, ಕೃಷಿ ಚಟುವಟಿಕೆಗೆ ಮರು ಬಳಸುವ ಉದ್ದೇಶವಿತ್ತು. ಆದರೆ ಒಳಚರಂಡಿ ಸಂಪರ್ಕ ಲೋಪದ ಪರಿಣಾಮ ಯಶಸ್ಸು ಕಾಣಲಿಲ್ಲ. ಎರಡು ವಲಯದ ಪೈಕಿ ಕೆಲವೆಡೆ ಸಂಪರ್ಕ ನೀಡಲಾಗಿದೆ. ಆ ತ್ಯಾಜ್ಯದ ಬಹುಪಾಲು ನಗರದೊಳಗೆ ಸೋರಿಕೆ ಆಗುತ್ತಿದೆ.

ಅಲ್ಪ ಪ್ರಮಾಣದ ತ್ಯಾಜ್ಯ ನೀರು ಘಟಕದ ಒಂದು ಹೊಂಡಕ್ಕೆ ಬಂದು ಬೀಳುತ್ತಿದೆ. ನಿಯಮಾನುಸಾರ ಆ ತ್ಯಾಜ್ಯ ನೀರನ್ನು ಸಂಸ್ಕರಿಸಬೇಕು. ಆ ವ್ಯವಸ್ಥೆ ಇಲ್ಲದ ಕಾರಣ ದುರ್ವಾಸನೆ ಹಬ್ಬಿ ಮನೆ ಬಾಗಿಲು ಮುಚ್ಚಿಕೊಂಡೇ ದಿನ ಕಳೆಯಬೇಕು ಎನ್ನುತ್ತಾರೆ ಈ ವಾರ್ಡ್‌ ನಿವಾಸಿಗರು.

ಅಪೂರ್ಣ ತಾಲೂಕು ಕ್ರೀಡಾಂಗಣ
ಶಾಂತಿನಗರ 4ನೇ ಮತ್ತು ಹಳೆಗೇಟು 5ನೇ ವಾರ್ಡ್‌ ವ್ಯಾಪ್ತಿಯ ಶಾಂತಿನಗರದಲ್ಲಿ ಹದಿಮೂರು ವರ್ಷದ ಹಿಂದೆ 5.85 ಎಕ್ರೆ ಪ್ರದೇಶದಲ್ಲಿ 60 ಲಕ್ಷ ರೂ. ವ್ಯಯಿಸಿ ನಿರ್ಮಿಸಲು ಉದ್ದೇಶಿಸಿದ್ದ ತಾಲೂಕು ಕ್ರೀಡಾಂಗಣ ಪಾಳು ಬಿದ್ದಿದೆ. 60 ಲಕ್ಷ ರೂ. ಖರ್ಚಾದ ಅನಂತರ ಕಾಮಗಾರಿ ಮುಂದುವರಿಯಲಿಲ್ಲ. ಇದಕ್ಕೆ ಕಾರಣ, ಅನುದಾನದ ಕೊರತೆ. ಹಾಗಾಗಿ ಪ್ರಥಮ ಹಂತದ ಕಾಮಗಾರಿಯಲ್ಲಿ ಸುಸ್ತಾದ ಈ ಕ್ರೀಡಾಂಗಣ ಅಕ್ಷರಶಃ ಪಾಳು ಬಿದ್ದಿದೆ. ಪರಿಣಾಮ ಲಕ್ಷಾಂತರ ರೂ. ತೆರಿಗೆ ಹಣ ಪೋಲಾಗಿದೆ. ಎರಡು ಕಟ್ಟಡಗಳು ಪಾಳು ಬಿದ್ದಿದ್ದು, ಕಿಟಕಿ ಗಾಜು ಒಡೆದು ಹೋಗಿವೆ. ಶೌಚಾಲಯದ ಬಾಗಿಲು ಸಾಮಗ್ರಿಗಳು ಒಡೆದು ಹೋಗಿವೆ. ಸೂಕ್ತ ರಕ್ಷಣೆ ಇಲ್ಲದ ಕಾರಣ ರಾತ್ರಿ ವೇಳೆ ಇಲ್ಲಿ ಅನೈತಿಕ ವ್ಯವಹಾರಗಳು ನಡೆಯುತ್ತಿವೆ ಎನ್ನುವುದು ಸ್ಥಳೀಯರ ಆರೋಪವಾಗಿದೆ. ಉಳಿದಂತೆ ಈ ಎರಡು ವಾರ್ಡ್‌ಗಳಲ್ಲಿ ರಸ್ತೆ, ನೀರು, ತಂಗುದಾಣ, ತ್ಯಾಜ್ಯ ಮೊದಲಾದ ಸಮಸ್ಯೆಗಳು ಇವೆ. ಇದನ್ನು ಬಗೆಹರಿಸುವುದು ಕಷ್ಟವೇನೂ ಅಲ್ಲ.

ಟಾಪ್ ನ್ಯೂಸ್

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.